ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಣಬಹುದಕೆ ಕನ್ನಡಿಯಾಕೆ ಭಿನ್ನವಿಲ್ಲದೆ ನೋಡಿ ತನ್ನೊಳು ಘನಬ್ರಹ್ಮವಿರಲಿಕ್ಕೆ ಅನುಮಾನವು ಬ್ಯಾಡಿಧ್ರುವ ಕುಂಭಿನಿಯೊಳು ಘನಹೊಳೆಯುತ ತುಂಬಿತುಳುಕುತಲ್ಯಾದೆ ಉಂಬವರಿಗಿದಿರಿಡುತ ಬಿಂಬಿಸುತಲ್ಯಾದೆ ಹಂಬಲಿಸಿದರೆ ತನ್ನೊಳಗೆ ತಾ ಗುಂಭಗುರುತವಾಗ್ಯಾದೆ ಇಂಬು ತಾನೆ ಆಗ್ಯಾದೆ 1 ಹೇಳುವ ಮಾತಿನ ಮಾತಿಲ್ಲ ಕೇಳಿರಯ್ಯಾ ಚೆನ್ನಾಗಿ ಒಳ ಹೊರಗಿದು ಭಾಸುತಿ ಹ್ಯ ದೆಲ್ಲಾ ಸುಳವು ಬಲ್ಲಾತ ಯೋಗಿ ಕಳೆಕಾಂತಿಗಳ ಅನುಭವವೆಲ್ಲಾನು ತಿಳಿಯಬಲ್ಲವ ಭೋಗಿ ಹೊಳೆವುತಿಹ್ಯದು ಸರ್ವಮಯವೆಲ್ಲಾ ಮೊಳೆಮಿಂಚು ತಾನಾಗಿ 2 ಇಲ್ಲೆವೆ ಎರಡು ಹಾದಿಯ ಕಟ್ಟಿಗುಲ್ಲುಮಾಡದೆ ನೋಡಿ ಗೋಲ್ಹಾಟ ಮಂಡಲವನು ದಾಟಿ ಅಲ್ಲಿಯೆ ಮಹಿಪತಿ ನೋಡಿ ಅಲ್ಲಿಯೆ ಮನ ತಾಂ ಮನಿಕಟ್ಟಿ ಫÀುಲ್ಲನಾಭನ ಕೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ರಾಮರಾಮ - ಸ್ವಾಮಿ | ರಾಮರಾಮ ಪ. ರಾಮ ರಾಮ - ಅಲ್ಲಿ ರಾಮ ರಾಮ 1 ರಾಮ ರಾಮ - ಅಲ್ಲಿ ಹಂಬಲಿಸಿದರೆ ಕೈ ಹಿಡಿವರ ನಾ ಕಾಣೆ ರಾಮ ರಾಮ 2
--------------
ಶಾಮಶರ್ಮರು
ಆರು ಬಿಟ್ಟರೂ ನಿನ್ನ ಬಿಡದೆ ನಾ ನಂಬಿದೆರಾಮರಾಮ - ಸ್ವಾಮಿ |ನೀ ಬಿಟ್ಟರಿನ್ನು ಅದಾರ ಸೇರಲು ಬೇಕೊ -ರಾಮರಾಮ ಪ.ತುಂಬಿದ ನದಿಯಲಿ ಹರಿಗೋಲು ಮುಳುಗಿತೊರಾಮ ರಾಮ - ಅಲ್ಲಿಅಂಬಿಗನಾಶೆಯುಅನುಗಾಲ ತಪ್ಪಿತೊ -ರಾಮ ರಾಮ 1ನಂಬಿ ಹಿಡಿದರೆ ಬಲು ಕೊಂಬೆಯು ಮುರಿಯಿತೊ -ರಾಮ ರಾಮ - ಅಲ್ಲಿಹಂಬಲಿಸಿದರೆ ಕೈ ಹಿಡಿವರ ನಾ ಕಾಣೆ ರಾಮ ರಾಮ 2
--------------
ಪುರಂದರದಾಸರು