ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀಡುವರು ಮತ್ಯಾರಿಲ್ಲ ಪ ಬೇಡದಿರುವ ಸಜ್ಜನರಡಿಗಳ ಕೊಂ- ಡಾಡುತಲಿರು ನೀ ಹಗಲೆಲ್ಲ ಅ.ಪ ಕಾಸಾದರು ಹಿಡಿಕಾಳಾದರು ಹರಿ- ದಾಸರಿಗೋಸುಗ ಕೊಡಲಿಲ್ಲ ಲೇಸು ದೊರೆವುದೆಂದ್ಹಾರಾಡಿದರಾ- ಯಾಸವಲ್ಲದೆ ಫಲವಿಲ್ಲ 1 ನಿನ್ನಂತೆಯೆ ಪರರನು ನೋಡಿ ದಯೆ- ಯನ್ನು ಅವರಲ್ಲಿ ಇಡಲಿಲ್ಲ ಮುನ್ನಿನ ಕರ್ಮವು ಬಿಡದಲ್ಲ 2 ತಿಳಿವಳಿಕೆಯು ಸ್ವಪ್ನದಲಿಲ್ಲ ನೆಲದೊಳು ಬಚ್ಚಿಟ್ಟಿರುತಿಹ ದ್ರವ್ಯವು ಎಲೊ ನಿನಗದು ಸ್ವಾಧೀನವಲ್ಲ 3 ವ್ಯಾಪ್ತವಾಗಿ ಹೆಚ್ಚುವದೆಲ್ಲ ಆಪ್ತರು ದಾರಾ ಪುತ್ರಾದ್ಯರು ನಿ- ನ್ನಾದರಿಸುವರೊಬ್ಬರು ಇಲ್ಲ 4 ಕಾಮಕ್ರೋಧದೊಳಗೆ ಮುಳುಗಿ ನೀ ಕಂಡ ಕಂಡದು ಕೋರುವೆಯಲ್ಲ ಕ್ಷಣವಾದರು ನೆನೆ ಭಯವಿಲ್ಲ 5
--------------
ಗುರುರಾಮವಿಠಲ
ಮಳೆಯ ದಯಮಾಡೊ ರಂಗಯ್ಯ ನಿಮ್ಮ ಕರುಣ ತಪ್ಪಿದರೆ ಉಳಿಯದೀ ಲೋಕ ಪ. ಪಶುಜಾತಿ ಹುಲ್ಲೆ ಸಾರಂಗ ಮೃಗಗಳು ಬಹಳ ಹಸಿದು ಬಾಯಾರಿ ಬತ್ತಿದ ಕೆÀರೆಗೆ ಬಂದು ತೃಷೆಯಡಗದೆ ತಲ್ಲಣಿಸಿ ಮೂರ್ಛೆಗೊಂಡು ದೆಸೆದೆಸೆಗೆ ಬಾಯಿ ಬಿಡುತಿಹವಯ್ಯ ಹರಿಯೆ 1 ಧಗೆಯಾಗಿ ದ್ರವಗುಂದಿ ಇರುವ ಬಾವಿಯ ನೀರ ಮೊಗೆ ಮೊಗೆದು ಪಾತ್ರೆಯಲಿ ನಾರಿಯರು ಹಗಲೆಲ್ಲ ತರುತಿಹರು ಯೋಚನೆಯ ಮಾಡುತ್ತ ಬೇಗದಿಂದಲಿ ತರಿಸೊ ವೃಷ್ಟಿಯನು ಹರಿಯೆ2 ಸಂದು ಹೋದವು ಜ್ಯೇಷ್ಠ ಆಷಾಢ ಶ್ರಾವಣ ಬಂದಿದೆ ಭಾದ್ರಪದ ಮಾಸವೀಗ ಇಂದು ಪುರಂದರಗೆ ಹೇಳಿ ವೃಷ್ಟಿಯ ತರಿಸೊ ಸಂದೇಹವಿನ್ಯಾಕೆ ಹೆಳವನಕಟ್ಟೆಯ ರಂಗ3
--------------
ಹೆಳವನಕಟ್ಟೆ ಗಿರಿಯಮ್ಮ
ಕೊಟ್ಟಸಾಲ ಕೊಡದೆ ಭಂಡಾಟ ಮಾಡುತಿಹನೆ |ಎಷ್ಟು ಕೇಳಿದರೆನಗೆ ಓಯೆನ್ನದಿಹನೆ ಪಭರದಿ ಕೇಳಲು ಜಲದಿ ಕಣ್ಣ ಬಿಡುತಿಹನೆ |ತರುಬಿ ಕೇಳಲು ಕಲ್ಲು ಹೊತ್ತು ನಿಂತಿಹನೆ ||ಮರಳಿ ಕೇಳಲು ಊರ ಅಡವಿ ಸೇರುವನೆ |ಇರುಳು ಹಗಲೆಲ್ಲ ಕಾಣಿಸಿಕೊಳ್ಳದಿಹನೆ 1ಕಂಡು ನಿಲ್ಲಿಸಲೊಂದು ಕಾಲಲಿ ನಿಲುವನೆ |ಕೊಂಡ ಸಾಲಕೆ ಕೊಡಲಿ ಪಿಡಿದು ನಿಲ್ಲುವನೆ ||ಉಂಡರಾಣಿಯೆಂದು ಉಪವಾಸವಿರುವನೆ |ಬಂಡನಂದದಿ ಠಕ್ಕುಟೌಳಿ ನಡಿಸುವನೆ 2ಕೆಟ್ಟ ಬಯಲುಲಜ್ಜೆಹೇವ ತೊರೆಯುವನೆ |ಕೊಟ್ಟು ಪೋಗೆನ್ನಲು ಕಲಿಯು ಆಗುವನೆ ||ಸೃಷ್ಟಿಗೊಡೆಯ ಶ್ರೀರಂಗಪಟ್ಟಣದಪುರಂದರ |ವಿಠಲೇಶನು ನಮ್ಮ ಪಶ್ಚಿಮರಂಗನಾಥನು 3
--------------
ಪುರಂದರದಾಸರು