ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ಲೇಶ ಕಷ್ಟದಿ ಮುಳುಗಿ ಬಳಲಬೇಡ ಪ ಹಿಂದೆ ನಾನಾ ಯೋನಿಯಲ್ಲಿ ಹಡಿಕೆಯೊಳು ಜನಿಸಿ ಜನಿಸಿತಂದೆ ತಾಯಿ ಹೆಂಡಿರೇಸು ಲೆಕ್ಕವಾಯ್ತು ನೋಡಮುಂದೆ ಬಹ ದುಃಖಕೆ ಮುಳುಗಿ ಮುಳುಗಿ ಧೈರ್ಯ ಪಡೆದುಮಂದ ಮತಿಯಾಗಿ ಗುರುವ ಮರೆಯಲಿ ಬೇಡ 1 ದುರ್ಜನರ ಸಂಗ ಮಾಡಿ ದುಷ್ಟ ನಡತೆಯಲ್ಲಿ ನಡೆದುಸಜ್ಜನರ ಸಂಗ ನೀ ಮರೆಯಲಿ ಬೇಡಜಜ್ಜುಗಟ್ಟಿ ಪಾಪಕರ್ಮ ಜರಿದು ಜರಿದುಜೋಕೆಯಲ್ಲಿ ಸದ್ಗುರುನಾಥ ಸ್ಮರಣೆ ಮಾಡು2 ಮನೆಯು ಮಕ್ಕಳೆಂಬ ಧನವು ಪಶುಗಳಲ್ಲಿ ಆಸೆಯಿಟ್ಟುನೆನೆಸಿ ನೆನೆಸಿ ಬಿಕ್ಕಿ ಬಿಕ್ಕಿ ಅಳಲು ಬೇಡಚಿನ್ಮಯ ಚಿದಾನಂದಾವಧೂತನೊಳು ಬೆರೆತುಘನವನೈದಿ ಸದ್ಗುಣಾದಿ ತಿಳಿದು ನೋಡ 3
--------------
ಚಿದಾನಂದ ಅವಧೂತರು