ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಮ್ಮ ನೀ ಕರೆತಾರೆ ಅರವಿಂದನಯನ ಒಮ್ಯಾದರು ಬಾರ ನಮ್ಮನೆಗೆ ಬ್ರಹ್ಮನ ಪಡೆದನಗಮ್ಯಮಹಿಮನೆ ತಾ ಕಾಮ್ಯಾರ್ಥ ಕರೆವ ಶ್ರೀ ರಮ್ಮೆರಮಣನ ಪ ಘನ ಉದಕದಿ ನೋಡೆ ಗ್ರಂಥಚೋರನ ಕೊಂದು ವೇದವ ತಂದಜಗಿತ್ತು ಬರುವೊನೊ ಪಯಾಬ್ಧಿಯೊಳು ಸುಧೆ ಸುರಜನರಿಗೆ ನೀಡಿ ಮೇರುಮಂದರದಲಡಗಿಕೊಂಡಿಹನೊ 1 ಭೂಮಿ ಬಗಿದು ನೋಡ್ಹೇಮಾಕ್ಷನಂತಕನಾಗಿ ಕೋಡಿಂದಲಾ ಧರೆನೆತ್ತಿ ಬರುವೊನೊ ಉಗುರಿನಿಂದಲಿ ಉರಬಗಿದು ಕರುಳನ್ಹಾಕಿ ಮೃಗರೂಪ ಧರಿಸಿ ಕಂಬದಲಿ ಬರುವೊನೊ 2 ಗೊತ್ತನ್ಹೇಳುವೆ ಈ ಜಗತ್ತು ಸಾಲದಲ್ಹೋಗಿ ಒತ್ತಿ ಬಲಿಯ ಬಾಗಿಲ್ಹತ್ತಿಲಿರುವೊನೊ ಹೈಹಯ ಮೊದಲಾದ ಸರುವ ರಾಜರನೆಲ್ಲ ಗೆಲಿದು ಕಾಮಧೇನು ಕೊಂಡು ಬರುವನೊ3 ಒಬ್ಬ ಸತಿಯನಾಳಲಾರದೆ ಗರ್ಭಿಣಿಯ ದಬ್ಬಿ ಕಾನಡಿಗೊಬ್ಬೆ (ಕಾಡಿನಲ್ಲೊಬ್ಬೆ?) ಲ್ಲಿರುವೊನೊ ತೋಷ್ಟಪುತ್ರಿಯರು ಮೇಲಷ್ಟಭಾರ್ಯರು ಶತಪತ್ನೇರನಾಳದಿನ್ನೆತ್ತÀ ಪೋಗಿಹನೊ 4 ಬತ್ತಲೆ ತಿರುಗುವನಿತ್ತ ಬರುವನ್ಹ್ಯಾಗೆ ವಸ್ತ್ರವ ಕೊಟ್ಟು ನಮ್ಮ್ಹತ್ತಿಲೆ ಹರಿಯ ಖಡ್ಗ ಪಿಡಿದು ಕಲಿಗಳ ಕೊಲ್ಲಲ್ಹೋಗುವ ಬಿದ್ದು ಪಾದಾರವಿಂದಕ್ಕೆರಗಿ ಭೀಮೇಶಕೃಷ್ಣ(ನ) 5
--------------
ಹರಪನಹಳ್ಳಿಭೀಮವ್ವ
ಎಂದ ಮಾತು ಚಂದವಾಯಿತಿಂದು ಗೋಪಿ-ಮುನಿ-ಸಿಂದ ನಮ್ಮನಾಡಲೇಕೆ ನಂದಗೋಪಿ ಪ ಗೋಪಿ 1 ಕರಿಯ ಭಂಟ ಕಳ್ಳ ಕೃಷ್ಣ ಕಾಣೆ ಗೋಪಿ- ಹತ್ತಿಲಿರುವ ಹರಿಯು ಬಲು ತುಂಟ ಕಾಣೆ ಗೋಪಿ2 ಗೋಪಿ 3 ಅಪರಿಮಿತದಾಟಗಾರನಿವ ಗೋಪಿ-ಕೃಷ್ಣಕಪಟನಾಟಕ ಸೂತ್ರಧಾರ ಗೋಪಿ4 ಗೋಪಿ 5 ದಾತ ಗೋಪಿ 6 ಗೋಪಿ 7
--------------
ವ್ಯಾಸರಾಯರು
ನಿನ್ನ ನಂಬಿದ ನರಗೆ ಅನ್ಯರಾಶ್ರಯವೇಕೋಚನ್ನ ಗುರು ವಿಜಯರಾಯ ||ಬನ್ನ ಬಡುವೆನೊ ಜೀಯ ಘನ್ನ ಭವದೊಳು ಶಿಲ್ಕಿಇನ್ನು ಕಡೆಗ್ಹಾಕೋ ಬ್ಯಾಗ ಈಗ ಪ ಸುರನದಿ ನರನ ಸುತ್ತ ಪರಿಯಲು ನೀರಿಗಾರ್ತನಾಗುವುದುಚಿತವೆ ||ಮತ್ತೆ ಸುರಧೇನುವಿನ ಹತ್ತಿಲಿರುವ ಯಿನ್ನುಹಸ್ತು ಬಳಲುವುದುಚಿತವೆ ||ನಿತ್ಯ ಸುಖದಾರಿ ವಿಚಿತ್ರ ನೀ ತೋರೆ ನಾಹಸ್ತ ನರಗೊಡ್ಡುವುದು ಯತ್ನ ಉಚಿತವೆ ಗುರುವೆ 1 ಕ್ಷೀರವಾರಿಧಿ ಸೇರಿ ನೀರ ಮಜ್ಜಿಗೆಗಾಗಿಚೀರಿ ವರಲುವುದುಚಿತವೆ ||ನೂರಾರು ವಸನದ ಹೇರು ಮನೆಯೊಳಗಿರಲುಕೋರಿ ವುಡುವುದು ವುಚಿತವೆ ||*ವಾರವಾರಕೆ ಹರಿಯ ತೋರುವರನ ಬಿಟ್ಟುಕ್ರೂರ ವನ ಸೇವಿಸುವ ದಾರಿಗುಚಿತವೊ ಗುರುವೆ 2 ಸಾಕಿ ಸಲಹೆಂದು ಅತಿ ವ್ಯಾಕುಲದಿ ಬಂದವನನೂಕಿ ಬಿಡುವುದುಚಿತವೆ ||ಬೇಕಾದ ವರವು ನೀ ಲೋಕರಿಗೆ ಕೊಡುವೆನ್ನಕಾಕುಗೊಳಿಸವುದುಚಿತವೆ ||ಏಕ ಬುದ್ಧಿಯಿನಿತ್ತು ಜೋಕೆ ಮಾಡೆ ಮನ-ನೇಕ ಮಾಡುವದುಚಿತವೆ ||ಶ್ರೀಕಾಂತ ವೇಣುಗೋಪಾಲ ವಿಠಲ ನಿನ್ನವಾಕು ಮನ್ನಿಸಲು ನಾ ಕೆಡುವದುಚಿತವೆ ಗುರುವೆ 3
--------------
ವೇಣುಗೋಪಾಲದಾಸರು