ಒಟ್ಟು 129 ಕಡೆಗಳಲ್ಲಿ , 37 ದಾಸರು , 113 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಕ್ಕ ಕೇಳೆ ಪಾಪಮಾಡಿ ಲೆಕ್ಕವಿಲ್ಲದೆ ಯಮನ ಕೈಯ್ಯದುಃಖದಲ್ಲಿ ನರಕದೊಳಗೆ ಮುಳುಗುವವರ ಕಡೆ ಹಾಯ್ವುದೆಂತೋ ಪ ನೀರಗುಳ್ಳೆಯೆಂದು ತನುವ ನಿತ್ಯವಲ್ಲವೆಂದು ತಿಳಿಯರುಘೋರ ನೀಚತನವ ಮಾಡುವವರ ಕಡೆ ಹಾಯ್ವದೆಂತೋ1 ಹಿಂದೆ ಮುಂದೆ ನುಡಿಯುತಿಹರು ನಿಂದೆ ಮಾತನಾಡುತಿಹರುಸಂದೇಹಕ್ಕೆ ಒಳಗಾದವರು ಕಡೆ ಹಾಯ್ವದೆಂತೋ ಕೊಟ್ಟ ಸಾಲವನ್ನೇ ಕೊಡರು ಮತ್ತೆ ಆಣೆ ಎಂಬರಯ್ಯಹೆತ್ತ ಮಗನನು ದಾಟುವವರು ಕಡೆ ಹಾಯ್ವದೆಂತೋ 3 ತಂದೆ ತಾಯಿ ಹೊರಡಿಸುವರು ತಂದು ಒಳಗೊಳಗೇ ತಿನ್ನುವವರುಮಂದಿಗಳ ಬಯ್ಯುವವರು ಕಡೆ ಹಾಯ್ವದೆಂತೋ4 ವಿಧ ವಿಧದ ದೇವರನ್ನು ಮುದದಿ ಕಟ್ಟಿಕೊಂಡಿಹರುಚಿದಾನಂದ ಬಗಳೆಯ ಅರಿಯದವರು ಕಡೆ ಹಾಯ್ವದೆಂತೋ5
--------------
ಚಿದಾನಂದ ಅವಧೂತರು
ಎನ್ನ ಬಿನ್ನಪ ಕೇಳೊ ಘನ್ನ ಮಹಿಮನೆ ಭವ ಬನ್ನ ಬಡಿಸುತಲಿಹುದೋ ಸ್ವಾಮಿ ಪ ಇನ್ನು ನೀ ಪೊರೆಯೊ ಅಪನ್ನಜನರಾಪಾಲ ಮನ್ನಿಸಿ ಕಾಯೊ ಸ್ವಾಮೀ ಪ್ರೇಮೀ ಅ.ಪ ಆಗಾಮಿಸಂಚಿತಭೋಗಂಗಳು ಎನ್ನ ಯೋಗ ಮಾರ್ಗಕೆ ಪೋಗದಂತೆ ಹೇಗೆ ಮಾಡಿ ಙÁ್ಞನನೀಗೆ ನಿನ್ನಲಿ ಮನಸು ಯೋಗವನು ಮಾಡಗೊಡದೇ ಜಾಗುಮಾಡುತ ಪರಮಭಾಗವತರಲಿಸದಾ ಆಗಮಗಳ ತಿಳಿಯದೇ ಹೀಗಾಗಿ ನಾನು ಅಯೋಗ್ಯನೆನಿಸೀ ಜಗದಿ ಕಾಗಿಯಾಗಿ ತಿರುಗಿದೇ ಸ್ವಾಮಿ 1 ಹೆತ್ತ ಈ ಮೊದಲು ಮತ್ತಾರು ಜನರಿಲ್ಲ ಹೊತ್ತಿಗೇ ಕರೆದನ್ನವೀವರಿಲ್ಲಾ ಗೊತ್ತು ಸ್ಥಳಗಳು ಇಲ್ಲ ವೃತ್ತಿ ಸ್ವಾಸ್ಥ್ಯಗಳಿಲ್ಲ ಚಿÉತ್ತ ಶುದ್ಧಿಯು ಮೊದಲೆ ಇಲ್ಲಾ ಎತ್ತ ಪೋದರೆನ್ನ ಇತ್ತ ಬಾಯೆಂತೆಂದು ಹತ್ತಿರ ಕರೆವೊರಿಲ್ಲ ಎತ್ತ ಪೋದರೆನ್ನ ಮತ್ತೆ ಪಾಲಿಪರ್ಯಾರೊ ಉತ್ತಮನೆ ನೀನೆ ಕಾಯೋ ಸ್ವಾಮೀ 2 ಗರ್ಭವಾಸದಕಿಂತ ದುರ್ಭರಾಭವತಾಪ ನಿರ್ಭರಾವಾಗಿಹುದೋ ಅರ್ಭಕಾಮತಿಯಿಂದ ಅಭರ್Àಟಾ ಕಾರ್ಯವನು ನಿರ್ಭಯದಿ ಮಾಡಿದೆನೊ ಗರ್ಭ ನಾ ದೂತ ನೀ ನಿರ್ಭಯವ ಕೊಡದಿರಲು ಲಭ್ಯವೇ ಸರ್ವಕಾರ್ಯಾ ಲಭ್ಯ ಶ್ರೀಪತಿ ನೀನು ಲಭ್ಯನಾಗದಿರೆ ವೈ ದÀರ್ಭಿರಮಣಾ ಕಷ್ಟವೋ ಸ್ವಾಮಿ 3 ಉಡುವ ವಸ್ತ್ರಗಳಿಲ್ಲ ಒಡಲಿಗಶನವು ಇಲ್ಲ ಕೊಡುವ ಧನ ಮೊದಲೆ ಇಲ್ಲ ಪೊಡವಿಯೊಳು ನಾನತೀ ಬಡವನಲ್ಲದೆ ಮಹಾ ಕಡು ಪಾಪಿಯಾದೆನಲ್ಲೋ ತುಡುಗುತನದಲಿ ಪರರ ಮಡದಿಯರ ನಾ ಬಲು ದೃಢಮನಸಿನಿಂದ ಬಯಸಿ ಧೃಢ ಭಕುತಿಯಿಂದ ಅಡಿಗೆರಗದಲೆ ನಾನು ಪೊಡವಿಭಾರಾದೆನಲ್ಲೋ ಸ್ವಾಮೀ 4 ಓದಿ ಬರೆಯಾಲಿಲ್ಲ ವೇದ ಪಠಿಸಾಲಿಲ್ಲ ಮೋದತೀರ್ಥರ ಶಾಸ್ತ್ರ ತಿಳಿಯಲಿಲ್ಲಾ ವಾದಶಾಸ್ತ್ರಗಳಿಲ್ಲ ಭೇದಪಂಚಕವಿಲ್ಲ ಸಾಧನದ ಮಾರ್ಗವಿಲ್ಲ ಖೇದಗೊಳಿಸುವ ಭವದ ಹಾದಿ ತಿಳಿಯದೆ ನಾನು ಮೋದಕÀರವೆಂದು ಅಲ್ಲೀ ಸಾದರದಿ ಬಿದ್ದು ಆಮೋದಬಡುತಲಿ ದ್ವಿ ಪಾದಪಶು ನಾನಾದೆನಲ್ಲೋ ಸ್ವಾಮೀ 5 ಸತಿಸುತ ಮೊದಲಾದ ಅತಿಹಿತ ಜನರೆನ್ನ ಸತತ ಸಂತ್ಯಜಿಸಿಹರೋ ವಿತತವಾಗಿಹ ಮಹಾಪತಿತದಾರಿದ್ರ್ಯನ್ನ ಅತಿಬಾಧೆ ಬಡಿಸುತಿಹದೋ ಇತರ ಜನರೂ ಎನ್ನ ಅತಿದÀೂರದಲಿ ನೋಡಿ ಅತಿಹಾಸ್ಯ ಮಾಡುತಿಹರೋ ವ್ರತತಿಜಾಂಬಕÀ ನಿನ್ನ ನತಿಸಿ ಬೇಡಿಕೊಂಬೆ ಸತತ ನೀ ಪಾಲಿಸೆಂದೂ ಸ್ವಾಮೀ 6 ತಂದೆ ತಾಯಿಯೂ ನೀನೆ ಬಂಧು ಬಳಗವು ನೀನೆ ಇಂದು ಸಿಂಧು ಒಳಗೆ ಬಿದ್ದೆ ಮುಂದಕ್ಕೆ ಕರೆದು ಕಾಯೋ ಸುಂದರಾಂಗನೆ ಕೃಪಾಸಿಂಧು ನೀ ಬಿಡೆ ಎನ್ನ ನೊಂದದಲೆ ಸಲಹೊರ್ಯಾರೋ ಸ್ವಾಮಿ 7 ಹೊಟ್ಟೆಗಿಲ್ಲದೆ ನಾನು ಬಟ್ಟೆ ಹಾಸೀ ನರರಿ ಗ್ವಟ್ಟರಿಸಿ ಒದರುತಿಹೆನೋ ಪುಟ್ಟದಿರಲೂ ಅನ್ನ ಸಿಟ್ಟಿನಿಂದಾ ನಾಯಿ ಬೆಟ್ಟಕ್ಕೆ ಒದರಿ ತಾನೂ ಹೊಟ್ಟೆಯುಬ್ಬೀ ಕೊನೆಗೆ ಹೊರಳಿ ಹೊರಳಿ ತಾನು ಸುಟ್ಟ ಬೂದಿಲಿ ಬೀಳ್ವ ತೆರದೀ ಒಟ್ಟು ಮಾತಿದು ಕೃಪಾವಿಟ್ಟು ನೀ ಎನ್ನನು ಥsÀಟ್ಟನೇ ಕರಪಿಡಿದು ಕಾಯೋ ಸ್ವಾಮೀ 8 ನಿನ್ನ ದಾಸನು ಆಗಿ ಅನ್ಯರನ ಬೇಡಿದರೆ ಘನ್ನತೆಯು ನಿನಗುಂಟೇ ಘನ್ನ ಜನಪನ ತನುಜ ಇನ್ನು ದೈನ್ಯದಿ ತಾನೆ ಅನ್ಯರನು ಬೇಡುವುದು ಉಂಟೇ ಚೆನ್ನ ಸುಮನಸ ಧೇನು ಮುನ್ನ ಮನೆಯೊಳಿರೆ ಗೋ ವನ್ನು ಬಯಸುವರುಂಟೇ ಇನ್ನು ಪೇಳುವದೇನು ಎನ್ನಭವಣೇ ತಿಳಿದು ಇನ್ನು ಕಾಯಲಿ ಬೇಕೋ ಸ್ವಾಮೀ ಶುದ್ಧಮಾರ್ಗವ ಬಿಟ್ಟು ಬದ್ಧ ಭವಸಾಗರವೆ ಉದ್ಧಾರ ಮಾಳ್ಪದೆಂದೂ ಶಿದ್ಧಜನರಾ ಸೇವೆಗೆ ಬದ್ಧನಾಗದೆ ದುರಾ ರಾಧ್ಯ ಜನರನ್ನು ಭಜಿಸೀ ಉದ್ಧರಿಸುವೊ ಶ್ರೀ ಮಧ್ವಸಿದ್ಧಾಂತದ ಸೂ ಪದ್ಧತಿಯನ್ನೆ ಬಿಟ್ಟೂ ಸಿದ್ಧಮೂರುತಿ ಎನ್ನ ¥ದ್ಧಗಳ ಎಣಿಸದಲೆ ಉದ್ಧಾರಮಾಡೊ ಸ್ವಾಮೀ ಪ್ರೇಮೀ 10 ದಾತ ನೀನೇ ಎನ್ನ ಮಾತುಲಾಲಿಸಿ ಭವದ ರತಿಯನ್ನೇ ಬಿಡಿಸಿ ಕಾಯೋ ಪೊತನಲ್ಲವೆ ನಿನಗೆ ಆತುರದಿ ನಾನೀ ರೀತಿಯಿಂದಲಿ ಪೇಳಿದೆ ಯಾತರಾ ಮಾತೆಂದು ನೀ ಪ್ರೀತಮನಕೇ ತರದೆ ತಾತನೂಕೀ ಬಿಟ್ಟರೆನ್ನಾ ಸೋತುಬಂದಾ ನಿನಗೆ ಆತುರಾವ್ಯಾಕೆಂದು ನೀತವಾಗೀ ಕಾಯ್ವರಾರೋ ಸ್ವಾಮೀ 11 ಮಾತೆ ಮಕ್ಕಳಿಗೆ ವಿಷದಾತೆಯಾಗೇ ತಂದೆ ಪೋತರ ಮಾರಿದಾರೆ ದಾತನಾದಾ ರಾಜ ಆತುರಾದಿಂದಲಿ ನಿಜ ದೂತರರ್ಥಪಹಾರಮಾಡೆ ನೀತಸತಿಯು ತನ್ನ ನಾಥನಾಯು ತಾನೆ ಘಾತವನೆ ಮಾಡಿದಾರೆ ನೀತವೇ ನಿನಗಿದಕೆ ಯಾತರಾ ಚಿಂತೆ ಈ ಮಾತಿನಂತೆ ನಿನಗೆ ಪ್ರೀತೇ ಸ್ವಾಮೀ ಎಷ್ಟು ಪೇಳಲಿ ಎನ್ನ ಕಷ್ಟರಾಶಿಗಳೆಲ್ಲ ಶ್ರೇಷ್ಟವಾಗಿರುತಿಹವೊ ಸ್ವಾಮೀ ದುಷ್ಟನಾದರು vನ್ನ ಭ್ರಷ್ಟಮಗನನು ತಾಯಿ ಅಟ್ಟೀಸೂವಳೆ ಅಡವಿಗೆ ಎಷ್ಟು ಕೆಟ್ಟವ ನಾನಾರಿಷ್ಟನಾದರು ಕೃಪಾ ದೃಷ್ಟಿಯಿಂದಲಿ ನೋಳ್ಪಳೋ ನಷ್ಟದೈವ ನಾನರಿಷ್ಟ ಅಙÁ್ಞನಿ ಕರುಣಾ 13 ದೃಷ್ಟಿ ಯಿಂದಲಿ ನೋಡಿ ಸಲಹೋ ಸ್ವಾಮೀ ಕುಟಿಲ ಖಳಮತಿಯು ನಟಿನೆಮಾಡುತ ಭವಲಂ ಪಟದೊಳಗೆ ಬಿದ್ದಿಹೆನೂ ಸ್ವಾಮೀ ಶಠÀತರನು ನಾನತಿಕಠಿಣಮನಸೀನಿಂದ ಧಿಟಜ್ನಾನಿದ್ರೋಹಗೈದೆ ದಿಟರಿಲ್ಲ ಎನಗೆಂದು ನಟಿಸುತ್ತ ಸರ್ವದ ಅಟನೆಮಾಡಿದೆ ಸರ್ವರಲ್ಲಿ ಪಟುತರನು ನಾನೆಂದು ಧಿಟಗುರುಜಗನ್ನಾಥ ವಿಠಲ ದೇವಾ ನಿನ್ನ ಮರೆದೆ ಸ್ವಾಮೀ 14
--------------
ಗುರುಜಗನ್ನಾಥದಾಸರು
ಕಂಡೆ ಕಂಡೆ ಮುಚುಕುಂದವರದ ಮು- ಕುಂದ ಮೂಡಲಗಿರಿ ಗೋವಿಂದನ ಪ ಶರಧಿ ಬಿಟ್ಟು ಈ ಗಿರಿಯಲ್ಯಾಕೊ ನೀ ತೆರೆದ ಕಣ್ಣು ನಾರುವಮೈಗೆ ಬಿಳಿಯ ಕರ್ಪುರ ಪರಿಮಳದ ಸುವಾಸನೆಗೆ ಜರಿದು ಬಂದೆ ನಿನ್ನ ಪರಿಯ ನಾ ಬಲ್ಲೆ 1 ಛಲನ ಮೇಲೆ ನಿನ್ನ ಛಲವು ಯಾಕೊ ನೀ ಸುರರಸುರರ ಕೈಯಲಿ ಸಿಕ್ಕು ಭಾರ ತಿರುಗನುಪಕಾರ ಗಿರಿರಾಜನು ನಿನ್ನ ಸರಿಯೆಂದೆನಿಸುವ 2 ಬಲ್ಲೆ ಬಲ್ಲೆ ಕೋರ್ಹಲ್ಲುಗಳಿಂದ ಮೆಲ್ಲುತ ಬೇರನವಲ್ಯವನು ಎಲ್ಲ ನೀಗಿ ದಧ್ಯಾನ್ಯ ನೈವೇದ್ಯ ಚೆಲ್ವ ಧರಣಿಪತಿ ಬಲ್ಲಿದ ವರಾಹನ 3 ಕಂಬ ಒಡೆದು ಕರುಳ್ಹಾರವಲ್ಲದೆ ಕಂಡು ಅಜನ ಕಂಠಾಭರಣ ನೊಂದ ಮೈಗೆ ಪುನುಕಾಪು ಮಜ್ಜನ ತಾಂಬೂಲ ಮಂಚ ಸುಪ್ಪತ್ತಿಗೆಶಯನ 4 ದಾನ ಬೇಡಿದ ನೆಲ ಭೂಮಿಯ ಬಿಟ್ಟುರ- ಗಾದ್ರಿಯಲಿರುವುದು ಉಚಿತವಲ್ಲ ಸಾಧಿಸಿ ಬಲಿಯ ಪಾತಾಳಕೆ ಮೆಟ್ಟಿದ ಪಾದ ತೋರದಲಾಚ್ಛಾದನ ಮಾಡಿದಿ 5 ಪೊಡವಿದಾನ ನೆಲಬಿಡದೆ ಕೊಟ್ಟು ಅಡವಿ ಗುಡ್ಡದಲ್ಲಾವಾಸ ಕೊಡಲಿಪಿಡಿದು ತನ್ನ ಹಡೆದ ಮಾತೆಶಿರ ಕಡಿದ ಕೈ ಕೆಳಗೆ ಮಾಡ್ಹಿಡಿದಸುರನ 6 ಹೆತ್ತಜನಕ ಮನೆಬಿಟ್ಟು ಹೊರಡಿಸೆ ಉಟ್ಟ ನಾರ್ವಸÀ್ತ್ರ ಸಹಿತಾಗಿ ಲಕ್ಷ್ಮಿ ಲಕ್ಷಿಟ್ಟು ಬಂದ್ವಕ್ಷ ಸ್ಥಳದಲ್ಲಿರೆ ಅಷ್ಟಪದವಿಗಧಿಕಾರಿ ಎನಿಸಿದಿ 7 ಗೊಲ್ಲರೇಶ ಎಲ್ಲರಿಗುತ್ತಮನೆಂದು ಬಲ್ಲಿದಮುನಿ ಪಾದದ್ವೊದೆಯೆ ಕೊಲ್ಲಾಪುರ ಮನೆಮಾಡೆ ಮಹಾಲಕ್ಷುಮಿ ನಿಲ್ಲದೆ ಬಂದ್ವಾಲ್ಮೀಕವ ಸೇರಿದೆ 8 ಸಾರಿ ಹೇಳಿ ನೀ ನಿಗಮವ ನಿಂದ್ಯಮಾಡಿ ನಾರಿಯರ ವ್ರತವಳಿದು ಮಾರಜನಕ ಅಭಿಮಾನ ಬಿಟ್ಟರೆ ಅ- ಪಾರಮಹಿಮ ನಿನ್ನ ನೋಡಿ ನಗುವರೊ 9 ದೊರೆ ನಿನ್ನ ದರುಶನಕೆ ತ್ವರಿತದಿ ಜನರು ಮೂವತ್ತು ಗಾವುದ ಮೂರ್ಹೆಜ್ಜೆಯ ಮಾಡಿ ತುರಗನೇರ್ಹಾರಿಸಿ ಗಿರಿಯ ಬಿಟ್ಟೂ ್ಹೀದರೆ ವರದ ವೆಂಕಟನ್ಹಿಂದೆ ತಿರುಗುವರ್ಯಾರೊ 10 ನಿನ್ನ ನಾಮವ ತಂದೆನ್ನ ಜಿಹ್ವಕೆ ಚೆನ್ನವಾಗಿ ಬಂಧನ ಮಾಡೆ ಘನ್ನ ಮಹಿಮ ಭೀಮೇಶಕೃಷ್ಣ ಬಂದು ಕಣ್ಣಿಗೆ ಸುಳಿವ ಪ್ರಸನ್ನವೆಂಕಟನ 11
--------------
ಹರಪನಹಳ್ಳಿಭೀಮವ್ವ
ಅಧ್ಯಾಯ ಐದು ಲೋಕ ಮೋಹಕ: ಪಾತು ಮಾಧವ: ಧ್ವನಿ ರಾಗ:ಯರಕಲ ಕಾಂಬೋದಿ ಅಟತಾಳ ತಿರುಗಿ ವೇಂಕಟಗಿರಿ ಏರಲು ಪ ಪದ್ಮನಾಭನ ಸ್ಮರಿಸಿ ಬಿದ್ದಳು ಮೂರ್ಛಿತಳಾಗಿ ಸದ್ದು ಮಾಡಿದರಲ್ಲಿ ಇದ್ದ ಗೆಳತಿಯರೆಲ್ಲ ಮುದ್ದು ಮುಖದವಳೆ ನೀ ಎದ್ದು ಮಾತಾಡೆಂದರು ಪದ್ಮಿನಿಯು ತಾ ಕೇಳಿ ಎದ್ದು ನುಡಿಯದೆ ಇರಲು ಸಿದ್ಧಮಾಡಿ ಬೇಗೊಬ್ಬ ಬುದ್ಧಿವಂತೆಯ ಕಳುಹಿ ಗದ್ದಲಮಾಡದೆ ಅಂದಣವನು ತರಿಸಿ ಪದ್ಮ ಗಂಧಿಯ ಕೊಂಡು ಎದ್ದು ನಡೆದರು ಪುರಕೆ ಸುದ್ದಿ ಹರಡಿತು ಅಲ್ಲಿ ಗದ್ದಲಾಯಿತು ಬಹಳ 1 ಬಂದಳಲ್ಲಿಗೆ ತಾಯಿ ಅಂದಳೀಪರಿ ನೋಡಿ ಇಂದು ಎಲ್ಲಿಗೆ ಚಿಕ್ಕ ಕಂದಮ್ಮ ನೀ ಪೋಗಿದ್ದೆ ಇಂದು ಬಾಡಿಹುದೇಕೆ ಇಂದು ಮೈಯೊಳು ಜ್ವರ ಬಂದಿಹುದೇಕಮ್ಮಯ್ಯ ಮುಂದೆ ಮಾತಾಡದಿರಲು ತಂದೆ ಕೇಳಿದನಾಗ ಸುಂದರಿಯಳೆ ದಾರೇನಂದರಮ್ಮಯ್ಯ ನಿನಗೆ ಅಂದು ಅವರನು ಬಿಡದೆ ಕೊಂದು ಹಾಕುವೆ ಪೇಳು ಅಂದ ಮಾತಿಗೆ ತಾನು ಒಂದು ಮಾತಾಡಲೊಲ್ಲಳು 2 ತಿಳಿಯಲೊಲ್ಲದು ಎಂದು ಬಳಲಿ ಆಕಾಶರಾಜ ಕಳವಳಿಸುತ ಕರೆಕಳಿಸಿ ಬಲ್ಲವರನು ತಿಳಿಯಬಲ್ಲವರೆಲ್ಲ ತಿಳಿದು ಹೇಳಿರಿ ಎಂದ ಕೆಲವರೆಂದರು ಪಿತ್ತ ತಲೆಗೆ ಏರಿಹುದೆಂದು ಕೆಲವರೆಂದರು ಭೂತ ಬಲಿಯ ಚಲ್ಲಿರಿ ಎಂದು ಕೆಲವರೆಂದರು ಗ್ರಹಗಳ ಬಾಧೆ ಇರುವದು ಉಳಿದ ಮಂದಿಗೆ ಮತ್ತೆ ತಿಳಿಯಲಾಗದಾಯಿತು ಚಲುವನಂತಾದ್ರೀಶನ ಚಲುವಿಕೆಯನೆ ಕಂಡು 3 ವಚನ ಬಹುಶೋಕವನು ಮಾಡುತಲಿ ತಾ ಕರಿಸಿ ಕೇಳಿದನು ನಾಕೇಶಗುರು ಹೀಗೆ ತಾ ಕೇಳುತಲಿ ನುಡಿದ ಆಕಾಶನೃಪ ಚಿಂತೆಯಾಕೆ ಬ್ರಾಹ್ಮಣರ ಏಕಾದಶಾವರ್ತಿ ಏಕಚಿತ್ತದಲಿ 1 ಲೇಸಾಗಿ ತಿಳಿಯೆಂದು ಉರ್ವೀಶ ಭಕುತಿಯಂ ಆಸನಾದಿಗಳಿಂದ ಭೂಸುರರಿಗೆ ಅರ್ಪಿಸಿ ಸಂತೋಷವನು ಮಾಡಿರಿ ಎಂದು ಆಶು ಕಳುಹಿದನಗಸ್ತೇಶ್ವರನಾಲಯಕೆ 2 ಧ್ವನಿ ಕೇವಲ ಚಿಂತೆಯಿಂದಲೇ ದೇವಿಬಕುಲಾವತಿ ತಾನು1 ಪರಿವಾಣದಲ್ಲಿಟ್ಟುಕೊಂಡು ಇದ್ದಲ್ಲೆ ಗೋವಿನಂತೆ 2 ಆಲಯದಿ ಜಗತ್ಪಾಲಯ ಮಲಗಿದ್ದು ಕಂಡು ಬಾಲೆ ತಾಮಾತಾಡಿದಳು ಇಂದು 3 ಹೆಚ್ಚಿನ ವರಹ ಅಚ್ಯುತ ವಾಮನ ಏಳೊ 4 ಉದ್ಧರಿಸಿದಾತನೆ ಏಳೊ ಮುದ್ದು ಹಯವದನ ಏಳೋ 5 ಕೊಡದೆ ಸೃಷ್ಟಿಕರ್ತನು ಹರಿವಾಣ ಕೆಳಗಲ್ಲೆ ದಿಟ್ಟನಡೆದಳು ಬದಿಯಲಿ6 ಎನುತ ಮುಸುಕ ಕಂಡು ಅಂತ:ಕರಣದಿ ನುಡಿದಳು7 ಧ್ವನಿ ರಾಗ:ಕಾಪಿ ಅಟತಾಳ ಯಾಕೆ ಮಲಗಿದೆ ನೀ ಏಳೋ ಅಣ್ಣಯ್ಯಾ ವೇಂಕಟ ಯಾಕೆ ಮಲಗಿದೆ ಏಳೋ ಏನು ಚಿಂತೆಯು ಪೇಳೊ ಲೋಕ ಸಾಕುವ ದಯಾಳೋ ಅಣ್ಣಯ್ಯ ವೇಂಕಟಪ ಬಾಳ ಬಳಲಿದಿಯೊ ಹಸಿದು ಮಾತಾಡದಂಥ ಮೂಲ ಕಾರಣವೇನಿದು ಹಾಲುಸಕ್ಕರೆ ತುಪ್ಪಾಯಾಲಕ್ಕಿ ಪರಮಾನ್ನ ಬಾಲಯ್ಯ ನೀನು ಉಣಲೇಳೋ 1 ವಟದೊಳು ಹೆಬ್ಬುಲಿಯ ಕಂಡಂಜಿದಿಯೇನೊ ನೆಲೆಯು ತಿಳಿಯದು ನಿನ್ನ ಪ್ರಳಯ ಕಾಲಕ್ಕೆ ಆಲದೆಳೆಯೊಳು ಮಲಗಿದವನೋ2 ಹಗಲ್ಹೊತ್ತು ಮಲಗಿದ ದವನಲ್ಲೊ ಹೆತ್ತತಾಯಿ ಆಣೆ ಸತ್ಯವಾಣಿ ನೀಪೇಳೋ ಚಿತ್ತ ವ್ಯಾಕುಲವು ಯಾಕೆ3 ಕೊಂಬುವರೋಮುನ್ನ ಇಂದು ಮೋಹಿತನಾಗಿರುವಿ4 ಬಾಹುವದುಕಂಡು ಮರಳು ಮಾಡಿದಳೋ ನಿನ್ನ 5 ತಕ್ಕ ಉಪಾಯಾ ಅಕ್ಕರವಾಗುವದೆನಗೆ 6 ಎನ್ನ ಮುಂದೆ ನೀ ಸಂಶಯ ಬಿಡು ಚನ್ನಿಗನಂತಾದ್ರೀಶನೆ 7 ವಚನ ಕಣ್ಣೀರುವರಸುತಲೆದ್ದು ಕೀರವಾಣಿಯೇಕೇಳು ಘೋರು ದು:ಖವ ತನಗೆ ಆರಿಗುಸರಲಿ ನಾನು ಆರಿ ಹೇಳುವೆ ನಿನಗೆ ಸಾರಾಂಶ ಮಾತು 1 ನೀನೆ ಎನಗ್ಹಿರಿಯಣ್ಣ ನೀನೆಗಜರಾಜೇಂದ್ರ ವರಧ್ರುವರಾಯ ನೀನು ಸರ್ವವು ಅಭಿಮಾನ ರಕ್ಷಕಳು 2 ಎಂಬೋರನ್ಯಾರನು ನಾ ಎನ್ನ ಮನಸ್ಸಿನ ಅರಣ್ಯದೊಳು ರೂಪ ಲಾವಣ್ಯ ಮುಖವು ಹುಣ್ಣಿಮೆಯ ಚಂದ್ರ 3 ಕಣ್ಣಮೂಗಿಲೆ ಸಂಖ್ಯೆ ಜನ್ಮದಲಿ ಮಾಡಿದ್ದು ಅನ್ಯಾಯದಲಿ ಎನ್ನ ಪ್ರಾಣವನು ಬಿಟ್ಟಿತು ಉಳಿದೆ ಮುನ್ನವಳ ಹೊರತು ಮನ ಉಣ್ಣಲೊಲ್ಲದು ನಿದ್ರೆ ಕಣ್ಣಿಗಿನ್ನೆಲ್ಲಿ 4 ನೀನು ಎಂದದು ಮೋಹಿಸುವಂಥ ಜಾಣೆಯನು ಕಳೆದಂಥ ಮಾನಿನಿಯ ಇರಲುನಾನು ಬದುಕುವನಲ್ಲ ಖೂನ ಪೇಳುವೆನು 5 ಯಾನ ಬರುವದು ಹೆಚ್ಚು ಉಂಟು ಕ್ಷೋಣಿಯಲಿ ಕಟ್ಟಿ, ದಾನದೊಳು ಸಾಹಸ್ರದಾನ ಪಾತ್ರರಿಗೆ ತಿಳಿ ಒಂದು ಕಲ್ಯಾಣ ಕಟ್ಟಿದರೆ 6 ಧ್ವನಿ ರಾಗ:ಸಾರಂಗ ಭಿಲಂದಿತಾಳ ಬಕುಲಾದೇವಿ ತಾ ನುಡಿದಳು ಆ ಕಾಲಕ್ಕೆ ಹೀಗೆ ದೇವಾಧೀಶನೆ ನಿನ್ನ ಕೇವಲ ಮರುಳು ಈವತ್ತಿಗೆ ಮಾಡಿದಳು ಯಾವಕೆ ಅವಳು 1 ಪೂರ್ವಜನ್ಮದಲಾಕೆ ಯಾವಕೆ ಬಂದಿಹಳು ಆ ವಾರ್ತೆ ಪೇಳೊ 2 ಇಂಥ ಮಾತನು ಲಕ್ಷ್ಮಿಕಾಂತಾ ಚಿಂತಿಸಿ ನುಡಿದಾ 'ಶ್ರೀಮದನಂತಾದ್ರೀಶ’ 3 ವಚನ ತಾ ವನದರಲಿರುತಿರಲು ದೇವಿಯನು ಅಪಹರಿಸಿ ತಾ ಒಯ್ಯ ಬೇಕೆಂಬೋ ಭಾವದಲಿ ಬಂದಾ ಆ ವೇಳೆಯಲಿ ಅಗ್ನಿದೇವ ಪತ್ನಿಯಲ್ಲಿದ್ದ ಶ್ರೀ ವೇದವತಿಯನ್ನು ದೇವೇಂದ್ರನ ಸಹಿತ ಆವಾಹನ ಮಾಡಿ ತಾ ವಾಸಮಾಡಿದಳು ಕೈಲಾಸದಲ್ಲಿ1 ಮುಂದೆ ರಾಮನು
--------------
ಅನಂತಾದ್ರೀಶ - ಕಥನಕಾವ್ಯಗಳು
5. ವಿಶಿಷ್ಟ ಗೀತೆಗಳು ಭ್ರಮರಗೀತೆ 92 ಭೃಂಗಾ ನಿನ್ನಟ್ಟಿದನೇ ಶ್ರೀರಂಗ ಮಧುರೆಲಿ ನಿಂದುಅಂಗಜಲುಬ್ಧಕ ಪೂಗೋಲಂಗಳ ತಡೆಯನಿಕ್ಕಿಅಂಗನೇರೆಂಬೋ ಹುಲ್ಲೆ ಮೃಗಂಗಳಿಗೆ ಗುರಿಯೆಚ್ಚುಹಿಂಗಿಸುತೈಧಾನೆ ಅಸುವ ಹೇ ಕಿತವಾ ಪ ನಿನ್ನ ನೋಡೆ ನಮ್ಮ ಅಚ್ಯುತನ್ನ ಕಂಡಂತಾಯಿತಯ್ಯಚನ್ನಿಗರರಸ ಕುಶಲೋನ್ನತಿಯೊಳಹನೇನೋಚಿಣ್ಣತನ ಮೊದಲಾಗವನ್ನ ಕಿತವ ಬಲ್ಲೆವೋಗನ್ನಗಾರ ಚಿತ್ತ ಚೋರನ್ನ ಶ್ರೀ ಹರಿಯಾಮನ್ನಣೆಗೆ ಮೆಚ್ಚಿ ತನುವನ್ನೊಪ್ಪಿಸಿದ ಮುಗುದೆವೆಣ್ಣುಗಳ ವಿರಹಾಬ್ಧಿಯನ್ನೆ ದಾಟಿಸುವೆನೆಂದುತನ್ನ ನೇಹವೆಂಬೋ ನಾವೆಯನ್ನೇರಿಸಿ ಮೋಸದಿನಡುನೀರೊಳು ತೊರೆದ್ಹೋದನೆ ಹೇ ಕಿತವಾ 1 ತಮ್ಮ ನಂದಗೋಪ ಯಶೋದಮ್ಮನ ಕಂಡುಬಾರೆಂದುರಮ್ಮ್ಮೆಯ ರಮಣ ನಿನ್ನನೊಮ್ಮೆ ಕಳುಹಿದನೈಸೆಹಮ್ಮುಗೆಟ್ಟಾರಮ್ಮಣೇರಿಂದುಮ್ಮಳಿಸುವೆವೊ ವೃಥಾನಮ್ಮ ಹಂಬಲಿನ್ನೇನವಗೆ ಶ್ರೀ ಹರಿಗೆಹೊಮ್ಮೇಲಟ್ಟದಲಂಚೆಯಗಮ್ಮನೇರ ಕುಚದ ಕುಂ-ಕುಮ್ಮ ಕಸ್ತೂರಿಯ ಕರದಿಮ್ಮನದಿ ಸಿಲುಕಿದಂಗೆಕಮ್ಮಗೋಲನ ಬಾಣಂಗಳುಮ್ಮಳಿ ನೋಯಿಸುತಿವೆಸುಮ್ಮನೆ ಬಾಹೋದು ಸುಲಭವೆ ಹೇ ಕಿತವಾ2 ಮಧುವೈರಿ ಮೇದಿನಿ ನಿಟ್ಟಿಸಲಾಗಮೃದುವಾಕ್ಯದೊಳೆಮ್ಮಪ್ಪಿ ಅಧರಾಮೃತ ಭೋಜನಕ್ಕೊದಗುವ ಸತತ ಸನ್ನದ್ಧ ನಮ್ಮನಗಲಿ ಕಲ್ಲೆದೆಯಾದನೆಂತೋ ಕೃಪಾಳು ಹೇ ಕಿತವಾ 3 ಮಜ್ಜನ ಸಾಯುಜ್ಯ ಸುಖವತ್ತಲಿಪ್ಪುದೂ ಶ್ರೀ ಹರಿಯಅಬ್ಜಭವ ಮುನಿಜನ ಪೂಜ್ಯನಗಲಿದ ಮ್ಯಾಲೆನಿರ್ಜೀವಿಗಳಾಗಿ ಕಣ್ಣ ಕಜ್ಜಲ ಕಲಕಿಕೊಂಡುಲಜ್ಜೆಗೆಟ್ಟು ತನುಲತೆ ಜರ್ಝರಿತದಿ ಜೀವಿಸೆವಜ್ಜರೆದೆಯಲ್ಲವೆ ನಮ್ಮದು ಹೇ ಕಿತವಾ 4 ಕೌಸ್ತುಭ ವೈಜಯಂತಿ ಮಾಲೆಶ್ರೀ ತುಲಸಿ ಘಮಘಮಿಸುತ್ತಲಿಹ ವನಮಾಲೆರತುನ ಕಂಕಣ ಭುಜಕೀರ್ತಿಯಿಂದೊಪ್ಪುವ ಪುರುಷೋತ್ತಮನ್ನ ಬಣ್ಣಿಪರುಂಟೇ ಹೇ ಕಿತವಾ 5 ಉತ್ಪಲ ಶ್ಯಾಮಲ ಮುದವೆತ್ತ ಬಾವನ್ನವದೀಡಿಅತ್ಯಮಲ ಪೊನ್ನಂಬರ ಸುತ್ತಿದಮತ್ತಾ ನೂಪುರ ಝಣತ್ಕಾರದಿ ಮಿಂಚಿಯೆಮ್ಮಚಿತ್ತಶಿಖಿಗೆ ಪೀಯೂಷಸಿಕ್ತ ಮೇಘದಂತೆ ಒಪ್ಪುವ ಶ್ರೀಹರಿಯಹೆತ್ತ ತಾಯಿ ಆಪ್ತ ಬಂಧು ಗೋತ್ರ ಗತಿ ನೀನೆ ನಮ್ಮ ಚಿತ್ತವೆಂದು ನಂಬಿ ತನ್ನ ಹತ್ತಿಲಿ ಸಾರಿದವರಒತ್ತಿ ತಾಂ ರಥವನೇರಿ ಸತ್ವರ ಬರುವೆನೆಂದುಮತ್ತಕ್ರೂರನೊಡನೈದಿದ ಹೇ ಕಿತವಾ 6 ಲಕ್ಷುಮಿರಮಣನವ ಸೂಕ್ಷುಮ ಗೊಲ್ಲತೇರಾವುಕುಕ್ಷಿಯೊಳು ಬೊಮ್ಮಾಂಡವವಗೆ ಮಕ್ಷಿಕಗಳಂತಿಪ್ಪೆವುಮೋಕ್ಷದರಸನು ಅವ ಗೋಕ್ಷೀರದಿ ತೃಪ್ತರಾವುಲಕ್ಷಿಸುವದೆಂತೋ ಎಮ್ಮನು ಶ್ರೀ ಹರಿಯುರಕ್ಷಿಸಲುದಿಸಿ ಜನರಕ್ಷಣೆಗೆ ಪಾಲÉ್ಬಣ್ಣೆಯಭಕ್ಷಿಸಿ ನಿರುತ ನಮ್ಮ ಅಕ್ಷಿಗೆ ಹಬ್ಬವನುಣಿಸಿಈ ಕ್ಷೋಣಿ ಚರಾಚರ ದೀಕ್ಷಿಗೆ ನರರ ಸಾಮ್ಯವಕ್ಷ(ಮ)ಣರಾದೆವೊ ಮೂರ್ಖರೋ ಹೇ ಕಿತವಾ 7 ಸಿರಿ ಮಂದರೋದ್ಧರನಂಘ್ರಿಯಪೊಂದುವ ಭಾಗ್ಯಕ್ಕೆಣೆ ಉಂಟೆ ಶ್ರೀಹರಿಯಅಂದೆಮ್ಮೊಳು ರಾಸಕ್ರೀಡೆಯಿಂದ ಬಂದಪರಾಧವ-ನೊಂದನೆಣಿಸದೆ ಸಲಹೆಂದು ಬಿನ್ನೈಸಿ ಸಾಷ್ಟಾಂಗದಿಂದವಂದಿಪೆವೋ ಭಕ್ತ ಬಂಧುವಿಗೆ ನಮ್ಮ ಹೃದಯ ಮಂದಿರದೊಳೆಂದೆಂದಿರೆಂದು ಹೇ ಕಿತವಾ 8 ಹೆಂಗಳೇರೊಂದಾಗಿ ಅಂತರಂಗದರಸನಾಡಿದಮಂಗಳಚರಿತೆಯನ್ನು ಸಂಗೀತದಿಂ ಪೊಗಳುತ್ತಕಂಗಳಶ್ರುಗಳೆವುತ್ತ ಇಂಗಿತಜ್ಞ ದೇವ-ನಂಗಸಂಗದ ಸುಖವ ನೆನೆದು ಶ್ರೀಹರಿಯಮಂಗಳ ವೇದಸ್ತೇಯಾರಿ ಶೃಂಗಾರ ಕೂರವ ನಮ್ಮಪೊಂಗಣ್ಣನ ಸೀಳ್ದ ನರಸಿಂಗ ವಟು ಭಾರ್ಗವನೆಅಂಗದ ಪಾರ್ಥ ಕಂಬುತುರಂಗಪ ರಂಗವಿಠಲತುಂಗ ಮಹಿಮ ನಮೋ ಎಂಬೆವೋ ಹೇ ಕಿತವಾ 9
--------------
ಶ್ರೀಪಾದರಾಜರು
ಅಧ್ಯಾಯ ಎರಡು ಮೃಗ ಬ್ಯಾಟಯಲಿ ಹೊರಟ್ಹೋಗುವಾ ಯಕ್ಷಾನುಗರಿಂದ ತಾ ಮೃತನಾಗುವಾ ಮಗ ಬಾರಾನೆಂದು ತಾಯಿ ಮಿಡುಕುತಾ ರಾಜ್ಯ ಅಗಲಿ ಹೋಗ್ವಳು ತಾ ಹುಡುಕುತಾ 7 ಅಂತ:ಕರುಣ ತಾಪದಲಿ ಕಾಡಾಕಿಚ್ಚಿ ನಂತದೊಳಗೆ ಬೀಳೋಳು ಗಾಡಾ ಚಿಂತೆಯಾಕೆ ನೃಪಹೋಗಿನ್ನ ನಿ ಶ್ಚಿಂತೆಯಿಂದಲಿ ರಾಜ್ಯ ಮಾಡಿನ್ನ 8 ಎಂದು ಹಸ್ತವ ಶಿರದಲ್ಲಿಟ್ಟು ಆ ನಂದದಿಂದಲಿ ವರಗಳನು ಕೊಟ್ಟು ಮುಂದನಡೆದ ಪಕ್ಷಿವಾಹನನು ಜಗ ದ್ವಂದ್ಯ 'ಶ್ರೀ ಅನಂತದ್ರೀಶ' ನು 9 ಪದ ಆದಿ ಮೂರುತಿ ಶ್ರೀರಮೇಶಾ ತನ್ನ ಧಾಮಕ್ಕ್ಹೋದನು ಮೋದರಹಿತನಾಗಿ ಬಾಲದೀರ್ಘ ಉಸುರಗಳದನು ಪೋದನೆಂದು ದು:ಖದಿಂದ ತಿರುಗಿ ಪುರಕ ನಡದನು ಯಾದವೇಶ ಹಾ ಮುರಾರಿ ಎಂದು ಆಗ ನುಡದನು 1 ಪೂರ್ವ ಪುಣ್ಯದಿಂದ ನಿನ್ನ ರೂಪ ಯನಗ ತೋರಿದಿ ಶರ್ವಮಿತ್ರಯೆನ್ನಾ ವಿಷಯ ಮಡುವಿನೊಳಗ ಹಾಕಿದಿ ಸರ್ವಕಾರ್ಯ ಬಿಟ್ಟು ಕರುಣಾದಿಂದ ಆಗ ನೋಡಿದಿ ಗರ್ವಯುಕ್ತನಾಗಿ ಯನ್ನಬಿಟ್ಟು ಈಗವೋಡಿದಿ 2 ಸಿಕ್ಕಿದಂಥ ದಿವ್ಯಮಾಣಿಕ್ಯ ಕಳದಂತಾಯಿತು ಫಕ್ಕನೆದ್ದು ಕುಳಿತು ಕಂಡಾಕನಸಿನಂತಾಯಿತು ಮಿಕ್ಕ ವಿಷಯ ಭೋಗ ಬೇಡಿ ಜನ್ಮ ವ್ಯರ್ಥವಾಯಿತು ತಕ್ಕ ಮುಕ್ತಿ ಬೇಡಲಿಲ್ಲಾ ಯನ್ನ ಬುದ್ಧಿ ಹೋಯಿತು 3 ಕ್ಲೇಶ ಬಿಟ್ಟು ಈಗ ಬಹಳ ವಿಷ್ಯ ಸೌಖತು” ಏಸು ಜನ್ಮ ಪೂಜೆ ಮಾಡಿದಾರು ದೇವ ದೊರಕನು ಮಾಸ ಪಂಚದಿಂದ ಯನ್ನ ದೃಷ್ಟಿ ವಿಷಯ ನಾದನು 4 ಆಶಿಇಂದ ಆಗ ವಿಷಯ ಸËಖ್ಯವನು ದೈವಕೆ ಮಾಡಿಕೊಂಡು ಹೀಂಗ ಮನಸ್ಸಿನಲ್ಲಿ ಬಂದ ಪಟ್ಟಣಕೆ ಕೊಂಡ ಪುರಸಮೀಪಕೆ 5 ಶ್ಲೋಕ ಆಗ ನೋಡಿದ ಒಬ್ಬ ಧ್ರುವನ್ನಾ ವೇಗ ಪುಟ್ಟಿತು ಮನಸಿಗೆ ತನ್ನ ಬ್ಯಾಗ ಪೇಳಿದ ಅರಿಸಿನ ಮುಂದಾ ಬಾಗಿ ಬಿನ್ನಯಿಸಿ ತಾನಯ ದಿಂದಾ 1 ಪದ ರಾಜಭೂಪಾನೆ ನಿನ ಕಂದ ಬಂದಾ|| ಪೂಜಿಸಿ ದೇವೇಶನ ಛಂದದಿಂದ || ಪರಿಪರಿಯಿಂದಾ ಗುರುಕೃಪೆಯಿಂದಾ | ತಿರುಗಿ ಇಲ್ಲಿಗೆ ಕ್ಷೇಮದಿಂದಲಿಂದಾ 1 ಪುಣ್ಯಗಳಿಂದಾರಣ್ಯದಲಿಂದಾ ಸಣ್ಣಬಾಲನು ಭಾಳನಂದದಿಂದಾ 2 ಅನಂತರದಿಂದಾ ಅನಂತ ಸÉೀವಿಂದಾ 'ನಂತ್ರಾದೀಶನಾ’ ದಯದಿಂದ ಲಿಂದಾ 3 ಆರ್ಯಾ ಕಾಂಬೆನು ಯಂದಾ ಹುಟ್ಟಿತು ಆನಂದಾ1 ಪದ ರಾಗ :ಶಂಕರಾಭರಣ ಆದಿತಾಳ ಸುದ್ದಿ ಹೇಳಿದಾತಾಗೆ ಬೇಕಾದ್ದು ಕೊಟ್ಟು ಹರುಷದಿಂದ ಯದ್ದು ರಥವಾನೇರಿ ತಾ ಸನ್ನದ್ಧ ನಾದನು 1 ಇಬ್ಬರ ಹೆಂಡಿರ ಕೂಡಿ ಒಬ್ಬ ಪುತ್ರನಿಂದ ಕೂಡಿ ಅಬ್ಬರದಿಂದಲಿ ತಾ ಉಬ್ಬುಬ್ಬಿ ನಡದಾನು 2 ಮಂತ್ರಿಗಳು ವಿಪ್ರಾರು(ಗಳು) ಮಂತ್ರಜ್ಞಾರು ಮಾನವಾರು ಸಂತ್ರೋಧಾರ ನಡದಾರು ಬಜಂತ್ರಿ ಘೋಷಾದಿ 3 ಮೃದಂಗ ಘೋಷ ಸಾರಿಸಾರಿ ನುಡದಾವು ಅಬ್ಬಾರದಿಂದಲಿ 4 ತಂಬೂರಿಘೋಷಾ ಜಾಣೆ ರಾಮಂಜುಳಗೀತಾವಾಣಿ ಘೋಷಾವು 5 ಅಂಗಾನೇರು ಕುಂಕುಮಾದಿ ಮಂಗಲ ಭೂಷಾದಿಂದ ಶೃಂಗಾರಿಸಿ ಕೊಂಡಾರು ಕುರಂಗ ನೇತೆÀ್ರರು 6 ಧಟ್ಟಿ ಪೀತಾಂಬರನುಟ್ಟ ಬಟ್ಟಾ ಕುಚದಲ್ಯೊಪ್ಪುವಾ ಕಠ್ಠಾಣಿ ಮೋಹನ ಮಾಲೆನಿಟ್ಟು ಕೊರಳಿಗೆ 7 ರಂಬೇರು ವೀಳ್ಯವ ಮೆದ್ದು ತಾಂಬೂಲಗಲ್ಲಾದಲ್ಯೊತ್ತಿ ತುಂಬಿ ಹರುಷದಿಂದ ಚಂದ್ರ ಬಿಂಬ ಮುಖಿಯರು 8 ಮೀರಿದಾ ಸಂಭ್ರಮದಿ ಶೃಂಗಾರವನು ಮಾಡಿಕೊಂಡು ಥೋರಾಗನ್ನಡಿಲಿ ತಮ್ಮ ಮಾರಿ ನೋಡೋರು 9 ಕುಡಿಗಣ್ಣ ನೋಟಾದವರು ನಡಸಣ್ಣಾದಿ ಬಳಕುವರು ಮಂದ ನಡಗಿ ವಂತರು 10 ಪಟ್ಟಾಣದಿಂದಲಿ ವಳ್ಳೇ ಧಿಟ್ಟನಾರಿಯರು ಕಾಲಾ ಬಟ್ಟಿನಲಿ ಕಾಲುಂಗುರ ಮೆಟ್ಟಿ ನಡದಾರು11 ಪರಿಪರಿ ವಿಲಾಸದಿಂದ ಕರದಲ್ಲಿ ಕರತಳಾನಿಕ್ಕಿ ಕಿರಿನಗಿಯಿಂದಲ್ಲೆ ನಗುತಾ ಬರುವುತೀಹರು 12 ಹಿಂಡುಜನರಾಗಳ ಕೂಡಿಕೊಡು ರಾಜಾಬಂದು ಮಗನಾರಥವಾನಿಳುದು ಅಪ್ಪಿಕೊಂಡಾ ಹರುಷದಿ 13 ಮೂಸಿ ನೋಡಿತನ್ನ ಜಲಜಾ ಲೋಚನಗಳಿಂದ ಜಲವಾಧರಿಸಿದ 14 ಛಂದಾದಿ ಬಾಲಾನು ತನ್ನ ತಂದಿ ಪಾದಾದೊಳು ಯರಗಿ ಪಾದ ಬಂದು ಯರಗಿದ 15 (ತಾಯಿಯರ ಪಾದಗಳಿಗೆ ಪೋರ ಬಂದು ಯರಗಿದ) ಸಾಧುತಂದಿತಾಯಿ ಆಶೀರ್ವಾದ ಯುಕ್ತನಾಗಿ ತನ್ನ ಮೋದ ಬಟ್ಟಾಳು 16 ಏಳಯ್ಯಾ ಎಳಯ್ಯಾಯೆಂದು ಭಾಳಾನಂದಾದಿಂದ ಲ್ಯಪ್ಪಿ ಭಾಳಾಯುಷ್ಯಾವಂತನಾಗೊ ಬಾಲಾಯೆಂದಾಳು 17 ಉತ್ತಮ ಧ್ರುವನು ತಾತಾ ಗುಣೋತ್ತಮ ಇಬ್ಬರು ಕೂಡಿ ಅತ್ಯಂತ ಹರುಷಗೊಂಡಾರಂತ:ಕರುಣದಿ 18 ಇಂದಿಗೆ 'ಅನಂತಾದ್ರೀಶಾ’ ಹೊಂದಿಸಿದಾ ನಮ್ಮಿಬ್ಬರಾ ನೆಂದು ಮಾತನಾಡಿದರು ಕಂದರಿಬ್ಬಾರು 19 ಛಂದ ಹೆತ್ತ ತಾಯಿಗೆ ಚಿತ್ತಸಂಭ್ರಮಾ ಮತ್ತ ಜನರಿಗೆ ಚಿತ್ತ ವಿಭ್ರಮಾ ಪುತ್ರನಷ್ಟಿ ತಾ ಯೆತ್ತಿಕೊಂಡಳು ಸುತ್ತ ಚಿಂತಿಯಾ ಮರ್ತುಬಿಟ್ಟಳು 1 ಸುಂದರಾಂಗಿಯ ಆನಂದ ಬಾಷ್ಪದಾ ಬಿಂದು ಸ್ನಾನವು ಕಂದ ಮಾಡಿದಾ ಮುಂದ ರಥದಲ್ಲಿ ಬಂದು ಕುಳಿತನು ಮುಂದಿರುವ ಬಾಲನ ಒಲಿದು ನೋಡುತಾ ಮೊಲಿಯ ಪಾಲು ಚೆಮ್ಮಿ ತಲಿಯಲಿ ಹರುತಾ ಹಲವು ರಾಜ್ಯಕೆ ಮುಂದ ಸೂಚನಾ2 ಕುದರಿಸೈನ್ಯದಿಂದ ನಡದನು ಭಾಳ ಬಿರುದಿನಾ ಕಾಳಿ ಊದುತಾ ತಾಳ ವಾದ್ಯವು ಭಾಳ ನುಡುವುತಾ ಕೇಳಿಪುರದಲ್ಲಿ ಬಾಲಪುರುಷರು ಮಾಳಿಗಿಯಲಿ ಭಾಳ ನಿಂತರು 3 ಉತ್ತಮಾರ್ಯರು ಮತ್ತ ಸ್ತ್ರೀಯರು ಹತ್ತಿ ಮಾಳಿಗಿ ಸುತ್ತ ನಿಂತರು ಯೆತ್ತ ನೋಡಲು ರತ್ನ ಭೂಷಿತಾ ಉತ್ತುಮಾ ಪುರಿ ಭರ್ತ ಪಾಲಿತಾ 4 ಸಾಲು ಸಾಲಕೆ ವಿಶಾಲ ಮಂಟಪಾ ಸಾಲ ದೀಪದಿ ಭಾಳ ಶೋಭಿಪಾ ಸೆಲ (ಚೆಲ್ವ?) ಮುತ್ತಿನ ಸಾಲಯಳಿಗಳು ಮ್ಯಾಲ ಮಲ್ಲಗಿ ಮಾಲಕಿಗಳು 5 ಆರ್ಯಾ ಮಂದ ಮಾರುತಾನಿಂದ ಭಾಳಮಕರಂದ ಪುಷ್ಟದಾ ವಾಸನವು ಮುಂದ ಪತಾಕಿಗಳಿಂದ ಕಣ್ಣಿಗೆ ಛಂತ ತೋರಿಪಾ ಪಟ್ಟಣ್ಣವು 1 ವೇಗದಿಂದ ರಥ ಸಾಗಿಸಿ ಧ್ರುವ ಛಂ ದಾಗಿ ನಡೆದನು ಪುರದೊಳಗೆ ಬ್ಯಾಗ ಗೋಪುರದ ಬಾಗಿಲದಾಟಿ ಪೋಗಿ ಕುಳಿತನು ಸಭಿಯೊಳಗೆ 2 ಬಾಲನ ಕಂಡು ಭೂಪಾಲನು ಹಿಗ್ಗುತಾ ಭಾಳಪುಟ್ಟಿ ಮನದುದ್ರೇಕಾ ಕಾಲ ಮೂಹೂರ್ತದ ವ್ಯಾಳಯವು ಸಾಧಿಸಿ ಬಾಲಗ ಮಾಡಿದ ನಭಿಷೇಕಾ3 ಕೊಟ್ಟರಾಜ್ಯವನು ಪಟ್ಟಗಟ್ಟಿ ಮುಂ ದಿಟ್ಟ ಶಿಖಾ ಮುದ್ರಿಕಿಯನ್ನು ಅಷ್ಟ ವಿಭೂತಿಗ¼ಷ್ಟು ಕೊಟ್ಟು ಸಂ ತುಷ್ಟನಾದ ಭೂಪತಿ ತಾನು 4 ಛಂದದಿ ದೇವರಿಗೊಂದಿಸಿ ಧ್ರುವ ಆ ನಂದದಿ ಬ್ರಾಹ್ಮರಿಗೆರಗಿದನು ತಂದಿ ತಾಯಿಗಳಿಗೊಂದಿಸಿ ಬಹುತ್ವರ ದಿಂದ ಏರಿದಾ ಪೀಠವನು 5 ಸುಂದರ ಸಭಿಯಲಿ ಬಂದು ಕೂಡಲು ದೇ ವೇಂದ್ರನಂತೆ ಬಹು ಶೋಭಿಸಿದಾ ಬಂಧು ಜನರಿಗ್ಯಾನಂದವ ತೋರುತ ಚಂದ್ರಮನಂತೆ ಶೋಭಿಸಿದ 6 ಝಗಿಝಗಿ ತೋರುವ ಬಗಿಬಗಿ ಕುಪ್ಪುಸ ಬಿಗಿಬಿಗಿ ಇಂದಲಿ ತೊಟ್ಟವರು ಲಗು ಬಗೆಯಿಂದಲಿ ನಗಿನಗಿ ಮಾತಿನ ಸೊಗಸು ಗಾರಿಕೆ ಬಲ್ಲವರು 7 ಥೊರಮುತ್ತು ಜರತಾರ ಮಯದ ಉಡ ಗೊರಿ ತಂದರು ಆ ಜನರು ಸಾರ ಸಿಂಹಾಸನಯೇರಿದ ಧ್ರುವನಿಗೆ ಆರುತಿ ತಂದರು ನಾರಿಯರು 8 ಮುತ್ಹಚ್ಚಿದ ಹೊಸ ನತ್ತುಗಳಿಂದಲಿ ಮತ್ತಿಷ್ಟೊಪ್ಪುವ ಮುಖದವರು ಪುತ್ಥಳಿ ಸರಘುನ ಮುತ್ತಿನ ಸರಗಳು ಉಳ್ಳವರು9 ಹತ್ಹೊರಷುದ ಮ್ಯಾಲ್ಮತ್ತೆರಡೊರ್ಷದ ಉತ್ತಮ ಪ್ರಾಯದ ಬಾಲಿಯರು ಮತ್ತ ಕಾಲುಂಗರ ವತ್ತೊತ್ತಿ ನಡುವುತ ಗತ್ತಿನಿಂದಲೆ ನಡುವುವರು 10 ಪದ ತಂದ್ರು ಆರುತಿ ಚಂದ್ರ ಮುಖಿಯಾರು ತಂದ್ರು ಆರುತಿ ಬಹು ಸುಂದರ ಸುಗುಣೇರು ಪ ಚಂದುಟಿ ಕಚ್ಚುತ ನಿಂದ್ರದ ಮದದ ಗ ಜೇಂದ್ರ ಗಮನಿಯರು ಬಂದ್ರಾಗಲೇ ದೇ ವೇಂದ್ರನ ಸಮರಾಜೇಂದ್ರನÀ ಸುತಗೆ ಅ.ಪ ಬಣ್ಣಗಾರಿಕೆಯಲಿ ಸಣ್ಣಕುಂಕುಮನಿಟ್ಟ ಕಣ್ಣಕುಡಿ ಹುಬ್ಬು ಕುಣಿಕುಣಿಸ್ಯಾಡುತ ಹೆಣ್ಕೋಕಿಲ ಸ್ವರ ಸಣ್ಕಂಠದಿ ನುಡಿ ಸಣ್ಕದಿ ಪಾಡುತ 1 ಕೈ ಬೆರಳಿಗೊಪ್ಪುವ ಹರುಳಿನುಂಗುರ ಇಟ್ಟವರು ಯರಳಿಯಂತೆ ಹೊರಹೊರಳಿ ನೋಡಿ ಮುಂ ಗುರುಳ ಗೂದಲಾ ತೀಡುವರು ಜಾಣಕಾಂತಿಯರು 2 ಮೇಲ್ಮಾಟದ ಬಗಿಯುಲ್ಮಾತಾಡುತ ಬಲ್ಮೋಹದಿ ಬಹು ಮೆಲ್ಲಮೆಲ್ಲನೆ ಹೆಜ್ಜೆ ನೆಲ್ಲ ಮ್ಯಾಲಿಕ್ಕುತ ಸೊಲ್ಮುಡಿನೇವರಿಸಿ ಮ್ಯಾಲ್ಮಲ್ಲಿಗಿ ಸರಗಳ ಮುಡಿಯವರು 3 ಸದ್ರಸ ಕುಂಕುಮ ಮುದ್ರಾಂಕಿತ ಕುಚ ಘದ್ರಿಸುತಲಿ ಬಹು ಉದ್ರೇಕದಿ `ಅನಂತಾದ್ರೀಶನ ' ಮುದ್ರಿಕಿ ಪದಗಳು ಘದ್ರಿಸಿ ನುಡಿವುತಾ ಭದ್ರಾಂಗಿಯರು 4 ಪದ ಮಂಗಳ ಮೂರುತಿ ಬಾಲಾಗೆ ಶ್ರೀ ನೃಪಾಲಾಗೆ ಮಂಗಳ ಗುಣಶೀಲಾಗೆ ಮಂಗಳಮೂರುತಿ ಛಂದಾ ಬಗಿಯಿಂದಾ ಪ ಶುಭದಿಂದಾ ಆನಂದದಿಂದಾ ಅಂಬೂಧಿಯೊಳಗಾಡಿ ಗಂಭೀರಾಗಿರಿಪೊತ್ತಾ ಜಾಂಬುನದಾಕ್ಷಾರಿ ವರ ಪ್ರಿಯಾಗೆ ಗಂಭೀರಾ ನೃಸಿಂಹಾನ ನೆಂಬಿ ರಕ್ಷಿತ ನೀಗೆ ರಂಭೇರು ಕರುಣಾದಿ ನೋಡಿ ಒಡಗೂಡಿ ಕೊಂಡಾಡಿ ತ್ವರಗೂಡಿ ಪಾಡಿ 1
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಎರಡು ಸ್ವಾತ್ಮಾನಾಪಿ ವರಾಹೇಣ ದತ್ತಾವಾಸ ಸ್ಥಳೋsಚ್ಯುತಃ ಮಾಯಾವೀ ಬಕುಲಾಲಾಭ ತುಷ್ಟೋ ವ್ಯಾsದ್ವೇಂಕಟೇಶ್ವರ ಅರುಣೋದಯದಲೆದ್ದನು ಅಂದಿಗಲ್ಲೆ ಭೂ ವರಾಹನು ಬಂದು ಗರ್ಜನೆ ಮಾಡುತೆದುರಿಗೆ ಮುಂದಕಲ್ಲೆ ಅಡಗಿದನು ಭಯದಿಂದ ವೇಂಕಟನು 1 ಪಿಡಿದನು ಭೂವರಾಹನು ಮಂದ ಜನರನೆ ಮೋಹಿಸುತ ಹೀಗೆಂದ ವೇಂಕಟಗೆ ಇಂದು ನೀನ್ಯಾರೆಲೊ ಪೋಗುವಿಯೆಲ್ಲಿ ನೀ ಎನ್ನ ಮುಂದೆ ನುಡಿಬೇಗ 2 ಮಾತಾಡಿದನು ವೇಂಕಟನು ಆತುರನ ಪರಿಯ ಕೂತುಪೇಳಿದನಾಗ ತನ್ನ ಪುರಾತನ ಕಥೆಯಲ್ಲ ಆತಗೆ ಈ ತಲೆಯ ಔಷಧಕೆ ಬಂದೆನುನೀ ತಿಳಿಯೋ ಎಂದ 3 ಅಪ್ಪಿಕೊಂಡೀ ಮಾತಿಗವನಾ ಮುಪ್ಪಿನವ ತಾ ಕ್ರೋಢರೂಪಿಯು ತಪ್ಪದಲೇ ಅಪ್ಪಿಕೊಂಡಿಹ ಭೂವರಾಹನು ಹಾಲಿಗೆ ಹೆಪ್ಪು ಕೊಟ್ಟಂತೆ 4 ದುಃಖಗಳ ಪೇಳುತ ಸುಮ್ಮನಾಗದೆ ನಿಮ್ಮಾ ಭೆಟ್ಟಿ ಇದು ಸಂಭ್ರಮವು ರಮ್ಯಗಿರಿಯಲ್ಲಿ 5 ಮಾತಾಡಿದನುನಂದೊಂದು ಇಂದು ನಮ್ಮಿಬ್ಬರೊಳಗೆ ಒಂದು ಮಾತು ಉಳಿಯಲಿಲ್ಲಾ ನಿಂದೊಂದು ಮಾತೇನು ಪೇಳೊ ಶ್ರೀ ಲಕ್ಷ್ಮೀಕಾಂತಾ1 ಇರವೆ ಸ್ಥಳ ಒಂದಿಷ್ಟು ಸುದ್ದಿ ಒಂದು ಬಿಟ್ಟು ನಿನ್ನ ಬುದ್ಧಿ ಶ್ರೀ ಲಕ್ಷ್ಮೀಕಾಂತಾ2 ನಿನ್ನವನಾಗಿರುವೆÀ ಒಳ್ಳಿತು ನಿನ್ನಿಂದ ಫಲ ಪೇಳೊ ಶ್ರೀ ಲಕ್ಷ್ಮೀಕಾಂತಾ 3 ಮಡದಿಯ ಕಳೆದು ಮೇಲೆ ಕೊಡು ನೀ ಲಕ್ಷ್ಮೀಕಾಂತಾ 4 ಪದುಮಾವತಿಯ ಶ್ರೀಧರಣಿಕಾಂತಾ ಋಣಮುಕ್ತನಾಗಿ ಅದರಮೇಲೆ ಕೊಟ್ಟೀಯೇನೋ ಶ್ರೀ ಲಕ್ಷ್ಮೀಕಾಂತಾ 5 ಋಣಮುಕ್ತನಾನಾದಮೇಲೆ ಕ್ಷಣಮಾತ್ರ ಇಲ್ಲಿರುವವನಲ್ಲಾ ಒಣಮಾತೇನೋ ಸ್ಥಳ ಪೇಳೆನಗೆ ಶ್ರೀ ಧರಣಿಕಾಂತಾ ಗುಣಗಳುನಿನ್ನಲ್ಲೆ ಇಲ್ಲಹಣವು ಕೊಡಲಾಗುದು ಮತ್ತೆ ಒಣಸ್ನೇಹಕ್ಕೆ ಸ್ಥಳ ಬಂದೀತೆ ಲಕ್ಷ್ಮೀಕಾಂತಾ 6 ಇಲ್ಲೆ ಚಂಚಲ ನಾಗ ಬೇಡಾ ಶ್ರೀ ಧರಣಿಕಾಂತಾ ವಂಚಕ ನೀಸರಿಯೋ ಒಂದಕು ಕೊಡದ ಲೋಭಿ ಒಳ್ಳೆಹಂಚಿಕೆಯನೋ ನೀನು ಶ್ರೀ ಲಕ್ಷ್ಮೀಕಾಂತಾ7 ಕಡೆಗೆ ಚನ್ನಾಗಿ ಪೇಳೊ ನೀನು ಲಕ್ಷ್ಮೀಕಾಂತಾ8 ನಿನ್ನ ಅಭಿಷೇಕವು ಗೆಲಿಸುವಿಯೊ ಧನ್ಯ ಶ್ರೀ ಲಕ್ಷ್ಮೀಕಾಂತಾ 9 ಸ್ವಾಮಿ ಪುಷ್ಕರಣೆಯ ಮೂರು ಪಾದದಿಂದ ಪಾದಕಂತು ಎಷ್ಟೊ ಲಕ್ಷ್ಮೀಕಾಂತಾ 10 ಮತ್ಯಾಕೀಪರಿ ಮಾತಾಡುವಿ ಹೊತ್ತು ಬಹಳಾಯಿತು ಎನಗೆ ಪಥ್ಯಕ್ಕೆ ತಡವಾಯಿತೇಳೋ ಶ್ರೀಧರಣಿಕಾಂತಾ ಸತ್ಯ ನೂರುಪಾದ ಸ್ಥಳವ ಕ್ಲಿಪ್ತ ಮಾಡಿಕೊಟ್ಟೆ ನಿನಗೆ ಸ್ವಸ್ಥದಿಂದ ಇರುಹೋಗೋನೀ ಲಕ್ಷ್ಮೀಕಾಂತಾ 11 ಸ್ವಸ್ಥದಿಂದ ಇರುವೆನ್ಹ್ಯಾಂಗೆ ಪಥÀ್ಯದಡಿಗೆ ಮಾಡುವಂಥ ಹೆತ್ತತಾಯಿ ಇಲ್ಲವೋ ಎನಗೆ ಶ್ರೀ ಧರಣಿಕಾಂತಾ ಹೆತ್ತಾಯಿಯ ಪರಿಯಾಗಿ ನಿನಗೆ ಪಥÀ್ಯದಡಿಗೆ ಮಾಡುವದಕೆ ಮತ್ತ ಬಕುಲಾವತಿಯ ಕೊಡುವೆ ಶ್ರೀ ಲಕ್ಷ್ಮೀಕಾಂತಾ 12 ಇಂಥ ಘಾಯ ಮಾಯುವತನಕ ಜೇನ್ತುಪ್ಪಸಾಮೆಯ ಅನ್ನ ಸಂತತ ಬೇಕಲ್ಲಾ ಎನಗೆ ಶ್ರೀಧರಣಿಕಾಂತಾ ಚಿಂತಾಮಣಿಗೆ ಸರಿಯಾದಂಥ ನಂ ತಾದ್ರಿಯಲ್ಲಿದ್ದ ಮೇಲೆ ಚಿಂತೆಯಾಕೆ ಅದನು ಕೊಡುವೆ ಶ್ರೀ ಲಕ್ಷ್ಮೀಕಾಂತಾ 13 ವಚನ ಧರಣಿಯ ರಮಣ ಈ ಪರಿಯು ಬೇಡಿದ್ದುಕೊಟ್ಟು ತಿರುಗಿದನು ಸ್ವಾಮಿ ಪುಷ್ಕರಣೀಯ ತೀರಕ್ಕೆ ಸರಸದಲಿ ಮುಂದಲ್ಲೆ ಇರುವ ನಿತ್ಯದಲಿ ಪರಮ ಭಕುತಳು ಆಗಿ ಇರುವ ಬಕುಲಾವತಿಯ ಕರದಿಂದ ಪಥ್ಯ ಸ್ವೀಕರಿಸುತಲೇ ನಿತ್ಯದಲಿ ಸುರತಾನಂತಾಖ್ಯ ಗಿರಿಯಲ್ಲಿ ಇರುವವನ ಕರುಣದಲಿ ಮುಗಿಯಿತೆರಡು ಅಧ್ಯಾಯ1
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಮೂರು ಪದ್ಯ ಭಕ್ತರಭಿಮಾನಿ ಶಿವಶಕ್ತಿ ಎಂಬುವ ಸೂರ್ಯದೈತ್ಯವರ್ಯನು ಎಂಬೊ ಕತ್ತತಿಯ ಸಂಹರಿಸಿ ಮತ್ತು ದಿತನಾಗಿರಲು ಇತ್ತ ಅನುಭೂತಿಯಾಗುತ್ತಾದ ಮುಖಕಮಲ ಮತ್ತಳಿತಾಗೆ|| ಸತ್ಯವಂತಿಯು ದೇವಿ ಸತ್ಯದಿಂದನು ಭೂತಿಗಿತ್ತುತ ಬಾಯಂದು ಮತ್ತೆ ಮುಂದಕೆ ಕರೆದು ಹೆತ್ತ ತಾಯಿಯಂತೆ ಅತ್ಯಂತ ಸ್ನೇಹವ ಸುರಿಸಿ ಒತ್ತಿ ಮಾತಾಡಿದಳು ಮತ್ತೆ ಈ ಪರಿಯ|| 1 ಪದ ರಾಗ :ಶಂಕರಾಭರಣ ಅಟತಾಳ ಸ್ವರ ಷಡ್ಜ ಮತ್ತೇನು ಬೇಕು ನೀಬೇಡಮ್ಮ|| ನಿನ್ನ ಚಿತ್ತದೊಳು ಸಂಶಯ ಬೇಡಮ್ಮ|| ಪ ದೈತ್ಯನ ಸಂಹಾರ ಮಾಡಿದೆ| ನಾ ಮತ್ತೆ ಬಂದು ನಿನ್ನಕೂಡಿದೆ|| ಅಂತಃ ಕರುಣದಿಂದ ನೋಡಿದೆ || ನಿನ್ನೊಳತ್ಯಂತ ಸ್ನೇಹವಮಾಡಿದೆ|| 1 ದಾರು ಧನ್ಯರೆನಿಸಿ ಲೋಕಮಾನ್ಯರು|| 2 ಮಿತ್ರಾನಂತಾದ್ರೀಶಹ್ನಿಡುವವರು||3 ಆರ್ಯಾ ಪರಿ ಪರಿ ಅನುಭೂತಿ ತಿಳಿದಳು ಎಂಬುವರು ಸುಖಸಾರ|| 1 ಸಂಶಯ ಬಿಟ್ಟಾಡಿದಳು ಹೀಗೆಂದೂ||2 ಪದ ರಾಗ:ಕಾಪಿ ತಾಳಬಿಲಂದಿ ಸ್ವರ:ಪಂಚಮ ಇಂದು ತಾಯಿಯೆ|| ಇಂದು ಎಂದೆಂದೂ ದಯಾ ಒಂದೆ ಸಾಕು|| ಪ ದಾವ ಕಾಲಕು ದೇವಿ ನಿನ್ನ ಸೇವೆ ಇರಲಿ|| 1 ನತಿಯು ಮಾಡುವೆ|| ಮತಿಯು ಬೇಡುವೆ|| ಮತಿಯಿಂದಲೆ ಪತಿಯ ಸೇವಿಸಿ ಪತಿಯಿಂದಲೆ ಗತಿಯು ಆಗಲಿ|| 2 ಪ್ರಾತಗಾಣಿ ಸೆ || ಪಂಥಗೆಲ್ಲಿಸೆ || ಸಂತತಾನಂತಾ ಧ್ರೀಶನ ಅಂತರಂಗದಿ ಚಿಂತಿಸುವೆನು||3 ಆರ್ಯಾ ಅನುಭೂತಿಯ ಅನುಸರಿಸಿ || ಅನುಕೂಲ ಸ್ಥಾನ ಅನುದಿನ ಕರದ್ಹೇಳಿದಳು ಹೀಗೆಂದೂ|| ಪದ ರಾಗ:ಕಾನಡಾ ಆದಿತಾಳ ಸ್ವರ ಪಂಚಮ ಬಾರೋ ಬ್ಯಾಗನೆ ಭೈರವಾ|| ನೀ ಪೋಗೀ || ಬ್ಯಾ|| ಯಮುನಾ ತೀರಕೆಪೋಗಿ|| ಪ ದೊಡ್ಡದು|| ಶ್ಯಲವಾಗಿ ಈ ಕಾಲಕ ಅಲ್ಲೊಂದಾಲಯ ನಿರ್ಮಿಸಿಕಾಲಗಳ್ಹಿಯದೆ|| 1 ಬರುವೆನು|| ನಿಂದಿರಲೆ ತ್ವರದಿಂದಲೆ ಪೋಗುತ ಇಂದ ಈ ಕಾರ್ಯವ ಚಂದದಿ ಮಾಡಿ|| 2 ಯಮುನಾದ್ರಿಗೆ ಪೋಗಿ|| 3 ಆರ್ಯಾ ಆ ದೇವಿಯ ಆಜ್ಞಾವನೂ|| ಆದರದಿಂದಲೇ ಧರಿಸಿ ಹೋದಾತನು ಅಲ್ಲೇನಿಂತ ನಿತ್ಯದಲಿ|| 1 ಬರಲಿಲ್ಲಾಕೆಂತೆಂದು|| ತುಳುಜಾ ತಾನಾಗಿ ಅಲ್ಲಿಗೆ ಬಂದು || ಪರಮಾಜ್ಞಾಧಾರಕನಾ || ತ್ವರದಲಿ ನೋಡ್ಯಾಡಿದಳು ಈ ವಚನಾ|| 2 ಪದ ರಾಗ :ಶಂಕರಾಭರಣ ಅಟತಾಳ ಸ್ವರ ಪಂಚಮ ಕಾರ್ಯವಂತಯಂದು ನಿನ್ನ ಉಳಸಿದೆ|| 1 ಇಲ್ಲಿಗೆ ಬಂದ್ಯೋನಿ ಕಾರ್ಯಾರ್ಥಿ|| ಬರದೆ ಇಲ್ಲೇ ನಿಂತಿ ಪಡದಿ ನೀನು ಅಪಕೀರ್ತಿ||2 ಅನಂತಾದ್ರೀಶನ ಆಣೆ ನಿನಗುಂಟು|| 3 ಆರ್ಯಾ ಈ ರೀತಿಯ ನುಡಿ ಕೇಳಿ || ಹೇರಿದ ಅಪರಾಧ ಭಾರವನು ತಾಳಿ|| ಘೋರವು ಬಂತಿದು ಎಂದಾ|| ಭೈರವ ಮಾತಾಡಿದನು ಭಯದಿಂದಾ|| 1 ಪದ ರಾಗ:ಆನಂದ ಭೈರವಿ ಆದಿತಾಳ ಸ್ವರ ಪಂಚಮ ಎನ್ನ ಪರಾಧಾ ಹಿಡಿಬ್ಯಾಡಮ್ಮಾ|| ತಾಯಿಎನ್ನಾ ||ಅಂ|| ಬಹುಕಾಲ ನಿನ್ನವನಾದ ಮ್ಯಾಲೆ|| ಪ ಮದದಿಂದೆ|| ಈಗ ನನ್ನ ಅಪರಾಧದಿಂದ ನಾನೊಂದೆ || ನಿನ್ನ ಹೊರತು ಎನಗಿನ್ಯಾರ್ಹಿತಕರುಂಟು|| 1 ಮಂಗಳಾಂಗನೆ ನಾನು ಮಂಗನಂತಲಿ ನಿಂತೆ|| 2 ಅಚ್ಯುತಾನಂತಾದ್ರೀಶನಿಚೆÀ್ಛಗೆ ಬಂತಿದೆ|| 3 ಪದ್ಯ ಈ ರೀತಿ ನುಡಿಕೇಳಿ ಕಾರುಣ್ಯನಿಧಿ ದೇವಿ ತೋರಿಸ್ನೇಹವು ನಗುತ ಭೈರವನ ಶಿರದಲ್ಲಿ ಚಾರುಹಸ್ನದಿ ಹೊಡೆದಳ್ಹಾರ್ಯ ಭಾವದಲಿ ಆ ಭೈರವನು ಆ ಹಸ್ತಭಾರದಲಿ ವಟುಕಾದ ಉರ್ವಿಯಲಿ ತಾ ಡೋಳ್ಹಭೈರವನು ಎನಿಸಿ || ಪಾರ್ವತಿಯು ಚಾರು ಉರ್ವಿಯಲಿ ಜನರನುದ್ಧಾರ ಮಾಡುತ ಬಿಡದೆ ಸಾರಗಿರಿಯಲಿ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಹತ್ತು ತಾಕ್ರ್ಷಸ್ಕಂಧ ಸಮಾರೂಢಃ ಶ್ರೀ ಬ್ರಹ್ಮಾದಿಭಿರಾವ್ನತಃ | ಧ್ವನಿ ಪರಿ ಪರಿ ಪ ಗರುಡನೇರಿದ ಶ್ರೀನಿವಾಸನು ರಾಜ ವರ ಹಂಸವನೇರಿದ ಬ್ರಹ್ಮನು ತ್ವರ ನಂದಿಯೇರಿದ ರುದ್ರನು ಅ ವರ ನಡುಮಧ್ಯೆ ನಡೆದ ಶ್ರೀಹರಿ ತಾನು 1 ದೇವಿಯೇರಿದಳಾಗ ರಥದಲಿ ಬಕುಲಾ ದೇವಿ ಯೇರಿದಳೊಂದು ರಥದಲಿ ಕೇವಲ ತಮ್ಮ ತಮ್ಮ ರಥದಲಿ ಉಳಿದ ದೇವಿಯರೇರಿ ಕೊಂಡರು ಅಲ್ಲಿ 2 ಉತ್ತಮ ಮಂಗಳವಾದ್ಯವು ನË ಬತ್ತು ನಗಾರಿಗಳಾದವು ಮತ್ತೆ ಉಳಿದ ಎಲ್ಲ ವಾದ್ಯಗಳು ಬಹು ವತ್ತಿ ಶಬ್ದಮಾಡಿ ನುಡಿದವು 3 ನಡೆದರು ಋಷಿಗಂಧರ್ವರು ಬಹು ಸಡಗರದಿಂದಲ್ಲೆ ಅಪ್ಸರರು ಬಡವ ಬಗ್ಗರು ಉಳಿದ ಮನುಜರು ಬಹು ಗಡಿಬಿಡಿಯಿಂದಲ್ಲೆ ನಡೆದರು 4 ಕುಂಟರು ಕುರುಡರು ಕಲ್ಲು ಕಂಟಕ ಕಾಲಿಲೆ ತುಳಿವವರೂ ಗಂಟು ತಲಿಯಲಿಟ್ಟುನಡಿಯುವರು ತಪ್ಪ ಗಂಟಾಗಿ ಒದರುತಲಿಹರು 5 ಕೆಲವರು ಗಂಡನ ಒದರುವರು ಮತ್ತ ಕೆಲವರು ಮಕ್ಕಳನೊದರುವರು ಕೆಲವರು ಎಡವುತಲಿರುವರು ಮತ್ತು ಕೆಲವರು ಭರದಿಂದ ಬೀಳುವರು 6 ಕೆಲವರೆಳೆದು ಎಬ್ಬಿಸುವರು ಮತ್ತು ಕೆಲವರು ನೋಡುತ ನಗುವವರು ಬಾಲರಳುವ ಧ್ವನಿ ಆಯಿತು ಜಗತ್ ಪಾಲನಸೈನ್ಯ ನಡೆಯಿತು ಮೇಲಾದನಂ ತಾಂದ್ರೀ ಇಳಿಯಿತು ಭೂಪಾಲಪುರದ್ಹಾದಿ ಹಿಡಿಯಿತು7 ವಚನ ಶೈಲವನು ಹಿಡಿದು ಭೂಪಾಲನಪುರತನಕ ಸಾಲ್ಹಿಡಿದು ನಡೆವಂಥ ಕಾಲದಲಿ ಮತ್ತಲ್ಲಿಡುವದಕ್ಕೆ ಎಳ್ಳು ಕಾಳಷ್ಟು ಸ್ಥಳವಿಲ್ಲ ಶ್ರೀಲಲಾಮನು ಮಧ್ಯಸಾಲಿನ ಮಧ್ಯಾಹ್ನ ಕಾಲ ದಲಿ ಶುಕಮುನಿಯ ಆಲಯಕೆ ಬಂದು ಕಾಲಿಗೆರಗಿದನು ಆಕಾಲಕೆ ಮುನಿ ಬಂದು ಹೇಳಿಕೊಂಡೀ ಪರಿಯು ಶೈಲ ಭೋಜನವು ಎನ್ನ ಮೇಲೆ ಕರುಣಿಯಿಂದಾ 1 ಹೀಗೆಂದು ನುಡಿದ ಶುಕಯೋಗಿಯ ವಚನವ ಕೇಳಿ ಬಾಗಿ ತಾ ನಮಿಸುತಲೆ ಆಗ ಶ್ರೀಹರಿ ನುಡಿದ ಯೋಗಿಗಳು ನಾ ಸಂಸಾರಿ ಆಗಿ ಇರವೆ ಇಲ್ಲೆ ಉಂಡರೆ ಮಿತಿಯ ಇಲ್ಲದಲೆ ಪುರದಲ್ಲೆ ಪೋಗುವುದು 2 ಮುನಿ ಮಂಡಲೇಶನು ಕೇಳಿಕೊಂಡು ಹೀಗೆಂದು ಬ್ರಹ್ಮಾಂಡ ಪತಿಯೆ ಒಬ್ಬ ಉಂಡರೆ ಜಗವೆಲ್ಲ ಉಂಡಂತೆ ಆಗುವುದು ಪುಂಡರೀಕಾಕ್ಷಾ ಭಾಳ ಕೇಳುತಲೆ ಮುಂದೆ ಬಾಲಕನ ಮುಖನೊಡಿ ಬಾಲೆ ನುಡಿದಳು ಬಕುಲ ಮಾಲಿಕೆಯು ತಾನು3 ಧ್ವನಿ:ವಸಂತಭೈರವಿ ಆದಿತಾಳ ತರವೆ ಹರಿಯೆ ಈ ಪರಿಯ ಮಾಡುವದುಪ ಸುಖಕರವಾಗಿಹ ಶುಕಮುನಿ ವಚನವು || ಲಕ್ಷಿಸದೆ ಶುಭಕಾರ್ಯಕೆ ಪೋಗುವದೂ 1 ಬಲ್ಲಿದ ಶಕುನವು ಇಲ್ಲೆನಿನಗೆ ತಿಳಿ| ಊಟಕೆ ಒಲ್ಲೆನೆಂಬುವದೂ 2 ಶ್ರೀಶ ಅನಂತಾದ್ರೀಶ ಮಹಾತ್ಮರ|| ಭಾಷೆಯ ಕೇವಲುದಾಸೀನ ಮಾಳ್ಪುದು 3 ವಚನ ಹೆತ್ತಾಯಿ ಪರಿಯಾಗಿ ಹೊತ್ತು ಹೊತ್ತಿಗೆ ತನಗೆ ಅತ್ಯಂತ ಹಿತ ಮಾಡುತಿರ್ದ ಬಕುಲಾವತಿ ಸತ್ಯವಚನ ಹರಿಯು ಮತ್ತು ಶುಕಮುನಿಗೆ ಉತ್ತರವ ಕೇಳಿ ಮುನಿ ಉತ್ತರಣೆಯು ಬೀಜ ಒತ್ತಿಕೈಯಲಿ ಮಾಡಿ ವೃತ್ತಾದ ಗುಳ್ಳ ಫಲದುತ್ತಮೋತ್ತಮಶಾಕ ತಿಂತ್ರಿಣಿಯ ರಸಸಹಿತ ಪಾತ್ರದಲಿ ಬಡಿಸಿ ಸತ್ಪಾತ್ರನಾಗಿರುವ ಸರ್ವೋತ್ತಮಗೆ ಅರ್ಪಿಸಿದ ಭಕ್ತಿಯಿಂದ 1 ತೃಪ್ತನಾದನು ನಿತ್ಯತೃಪ್ತ ಹರಿ ತಾ ಉಂಡು ಮತ್ತೆ ಮುನಿಗಳು ಎದ್ದರತ್ಯಂತ ಕೋಪದಲಿ ಚಿತ್ತಜನ ಪಿತ ಅವರ ಚಿತ್ತವೃತ್ತಿ ಸತ್ಯದಲಿ ಎಲ್ಲರಿಗೂ ತೃಪ್ತಿಯಾಗಲಿ ಎಂದು ತಿಳಿದು ಪೂತ್ಕಾರ ಮಾಡಿದನು ತತ್ಕಾಲದಲ್ಲಿ ಉತ್ತಮಳು ಶ್ರೀರಮಾ ಮತ್ತೆ ಬ್ರಹ್ಮಾದಿಗಳು ಸುತ್ತಸನ ಶುಕ ಸತ್ವ ಶೀಲರು ಉಳಿದ ಸುತ್ತೆಲ್ಲ ಜನರು ಸಂತೃಪ್ತರಾದರು ಹರಿಯ ಫೂತ್ಕಾರದಿಂದ 2 ನಿದ್ರೆಯನು ಮಾಡಿ ಅಲ್ಲಿದ್ದು ಆ ರಾತ್ರಿಯಲಿ ಎದ್ದು ಮರು ಕೂಡಿ ವಾದ್ಯ ವೈಭವ ದಿಂದ, ಸಿದ್ಧಾಗಿ ಬಂದರು ವಿಯದ್ರಾಜನ ಪುರಕೆ ಶುದ್ಧ ಸಂಜೆಯಲಿ ಮುದ್ದು ವೇಂಕಟ ಬಂದ ಸುದ್ದಿಯನು ಕೇಳುತ ವಿಯದ್ರಾಜ ತಾ ಬಹಳ ಉದ್ರೇಕದಿಂದಲೆ ಇದ್ದ ಜನರನು ವೈಭವದಿಂದ ಸಿದ್ಧನಾಗಿ3 ಧ್ವನಿ:ಕಾಂಬೋಧಿ ಆದಿತಾಳ ಆಕಾಲದಲಿ ಕಂಡನು ಹರಿಯಮುಖ ಆಕಾಲದಲಿ ಕಂಡನು ಎಲ್ಲರ ಕೂಡ ಆಕಾಶ ರಾಜನು ತಾನು1 ಹರುಷದಿಂದಲಿ ಉಬ್ಬಿದ ಹರಿಯ ಕಂಡು ಹರುಷದಿಂದಲಿ ಎದರುಗೊಂಡು ವರಪೂಜೆಯನು ಮಾಡಿದ 2 ಅಳಿಯಗಾಭರಣವನು ವಸ್ತ್ರವ ಕೊಟ್ಟು ಅಳಿಯಗಾಭರಣವನು ಉತ್ಸವದಿಂದೆ ಕಳಿಸಿ ಮನೆಗೆ ಪೋದನು3 ಶ್ರೀನಾಥದೇವ ತಾನು ಆ ಕಾಲಕ್ಕೆ ಶ್ರೀನಾಥದೇವ ತಾನು ಕರೆದುತೊಂಡ ಮಾನರಾಜಗೆ ನುಡಿದನು 4 ಹಸಿದು ಬಂದೆವು ನಾವೆಲ್ಲ ಉಣ್ಣದೆ ಬಹಳ ಹಸಿದು ಬಂದೆವು ನಾವೆಲ್ಲ ಬೇಗನೆ ಪಾಕ ಹಸನಾಗಿ ಮಾಡಿಸೆಲ್ಲ5 ಅಕ್ಕರದಲಿ ರಾಜನು ಆನುಡಿ ಕೇಳಿ ಅಕ್ಕರದಲಿ ಮಾಡಿಸಿದನು ರುಕ್ಕೋತದಡಿಗೆಯನು 6 ಮಂಡಿಗೆ ಗುಳ್ಳೋರಿಗೆ ಶಾವಿಗೆ ಮೊದಲು ತೊಂಡಮಾನÀನು ಚಂದಾಗಿ 7 ಹರಿಗೆ ಅರ್ಪಣೆ ಮಾಡಿದ ಎಲ್ಲರ ಕೂಡಿ ಹರಿಯು ಭೋಜನ ಮಾಡಿದ 8 ಆನಂದದಿಂದಿದ್ದನು ಆ ರಾತ್ರಿಯೊಳ್ ಆನಂದದಿಂದಿದ್ದನು ಮಾಡಿದ ನಿದ್ರೆ `ಅನಂತಾದ್ರೀಶ' ತಾನು 9 ವಚನ ಶ್ರೀನಿವಾಸ ಎದ್ದು ತಾನು ಮರುದಿನದಲಿ ಮಾನಿತ ವಶಿಷ್ಠ ಲಕ್ಷ್ಮೀಸಹಿತ ನೀನು ಬ್ರಹ್ಮನು ಮತ್ತೆ ಮಾನಿತಳು ಎನ್ನತಾಯಿ ತಾನು ಐವರು ಅನ್ನಹೀನರಗಿರುವುದು ಖೂನದಲಿ ಕನ್ನಿಕೆಯ ದಾನ ಪರ್ಯಂತ ಮಾನಿತನು ಆರಾಜಮಾನಿನಿಯು ಮತ್ತೆ ವಸು ದಾನರಾಜನು ಅನ್ನರಹಿತರೈವರು ಅವರು ಖೂನದಲಿ ಕನ್ನಿಕೆಯ ದಾನಪರ್ಯಂತ 1 ಪೇಳು ಅರಸನಿಗೆಂದು ಹರಿಯು ಹೇಳಿದಂತಾ ಭೂಮಿಪಾಲ ಮಾಡಿದನು ಮುನಿಹೇಳಿದಂತೆ ಮೇಲೆ ಮುನ್ನ ಸಾಯಾಹ್ನಕಾಲದಲಿ ಚತುರಂಗ ಸಾಲ ಸೈನ್ಯವು ನಡೆಸಿ ಕಾಳಿ, ಕರ್ಣಿಯ ತೂರ್ಯ, ತಾಳಮದ್ದಲೆ ಮೊದಲು ಭಾಳವಾದ್ಯ ಗಳಿಂದ ಮೇಲಾದ ಗುರುಮುಂದೆ ಮೇಲೆ ತನ್ನವರಿಂದ ಕಾಲನಡುತಿಯಲೆ ಹರಿಯ ಆಲಯಕೆ ಬಂದ 2 ಈ ವ್ಯಾಳ್ಯದಲಿ ಧರಣಿದೇವಿ ತಾ ಲಜ್ಜೆಯಲಿ ದೇವ ಗುರು ಬ್ರಹಸ್ಪತಿಯ ಕೇವಲಾಜ್ಞದಿ ದೇವದೇವ ಎನಿಸುವ ಅಳಿಯ ಶಾವಿಗೆಯ ಪರಮಾನ್ನ ವಿಯದ್ರಾಜ ಮುಂದಾ ವೇಳೆಯಲಿ ಐರಾವತದ ಮೇಲೆ ದೇವನ ಕುಳ್ಳಿರಿಸಿ ಬಂದನು ಮನೆಗೆ ತೀವ್ರದಿಂದ 3 ಆಕಾಲದಲಿ ತೋಂಡ ಸತಿ ನಿವಾಳಿಸುವತ ಚಲ್ಲಿದಳು ಶೈಲದೊಡೆಯನು ಗಜದ ಮೇಲಿಂದ ಇಳಿದು ಆಮೇಲೆ ತಾ ಬಂದಾ ಸುವಿಶಾಲ ಮಂಟಪಕೆ ಮೇಲಾದ ಗದ್ದಿಗೆಯ ಮೇಲೆ ವೇಂಕಟರಮಣನು ಕಾಲಿಟ್ಟು ಕುಳಿತನಾಮೇಲೆ ಬ್ರಹ್ಮಾದಿ ಗಳು ಗಾಲವ, ವಶಿಷ್ಠಮುನಿ ವಾಲ್ಮೀಕಿ ಭೃಗು ಜಟಾಜಾಲ ಸಂಪನ್ನ, ಶುಕ, ದಾಲ್ಭ್ಯ ಮೊದಲಾದವರು ಸಾಲ್ಹಿಡಿದು ಕುಳಿತರಾ ಕಾಲಕ್ಕೆ ಎಲ್ಲಾ ಒದಗಿ ಬೇಗನೆ ವಿಷ್ಣು ಪದರಾಜ4 ತೊಳೆದು ಆ ಉದಿಕ ಮಧುಸೂದನನ ಪೂಜೆ ಮಧುಪರ್ಕದಿಂದ ಬುಧಜನರು ಪೇಳಿದಾಜ್ಞೆಯಲಿ ಗೃಹ ದೇವತಾಸನದಲಿ ಹರಿಯ ಧ್ಯಾನದಲಿ ಇರುತಿರುವ ಮದನ ಮೋಹನ ಸನ್ನಿಧಿಗೆ ಸಮ್ಮುಖವಾಗಿ ಮುದದಿ ಇರಿಸಿದನಾಗ ಬದಿಲಿದ್ದ ಬೃಹಸ್ಪತಿಯ ಒದಗಿ ವಧು ವರಗಳಿಗೆ ವಿಹಿತದ ಅಂತಃಪÀಟವ ಮುದದಿ ಮಧ್ಯದಲ್ಲಿ ಪಿಡಿದು ಒದರಿದನು ಈ ಪರಿಯು ಮದವೆಯ ಕಾಲಕ್ಕೆ ಮಧುರÉೂೀಕ್ತಿಯಿಂದ5 ಧ್ವನಿ:ಸೌರಾಷ್ಟ್ರ ಅಟತಾಳ ಸಾವಧಾನ ಧೇ ವಾಧೀಶನ ಲಗ್ನ ದಿವ್ಯ ವೇಳೆಯಲ್ಲಿ ಸಾವಧಾನ ಪ ಪದ್ಮನಾಭನೆ ನೀನು ಸಿದ್ಧಾಗಿ ಇರು ಕಂಡ್ಯ ಸಾವಧಾನ ಪದ್ಮಾವತಿಯೆ ನೀನು ಪದ್ಮನಾಭನ ಸ್ಮರಿಸು ಸಾವಧಾನ 1 ಫಲಕಾಲದಲಿ ಚಂಚಲರಾಗದಲೆ ನೀವು ಸಾವಧಾನ ಕುಲದೇವಿ ಸ್ಮರಣಿ ನಿರ್ಮಲವಾಗಿ ಮಾಡಿರಿ ಸಾವಧಾನ 2 ಶ್ರೇಷ್ಠಾದ ಅತಿ ವಶಿಷ್ಠ ಮುನಿಗಳೆಲ್ಲ ಸಾವಧಾನ ಸ್ಪಷ್ಟಾಗಿ ಶ್ರೀ ಮಂಗಳಾಷ್ಟಕ ಪಠಿಸಿರಿ ಸಾವಧಾನ 3 ಮಂಗಳ ಮೂರುತಿ ಮನದಿಂ ಸ್ಮರಿಸಿರಿ ಸಾವಧಾನ
--------------
ಅನಂತಾದ್ರೀಶ - ಕಥನಕಾವ್ಯಗಳು
ಅನುಭಾವದ ನಿಗೂಢ ಮುಂಡಿಗೆಗಳು ಎರಡು ಸಾವಿರದ ಜಿಹ್ವೆಯುರಗ ಪೊಗಳಿದ ಹರಿಯೆ ಪ ಪರಂಜ್ಯೋತಿ ಪರಬ್ರಹ್ಮ ಪರಮಪುರುಷ ಓಂ ಎಂದುಅ ಹುಟ್ಟು ಬಣ್ಣ ಒಂದರೊಳಗೆ ಕಟ್ಟು ಬಣ್ಣ ಒಂದು ಮಾಡಿಕಟ್ಟಿ ಕುಟ್ಟಿ ಕಾಸಿ ಕರಗಿ ಮೂರು ಬಣ್ಣವಮುಟ್ಟಿ ಮಾಡಿ ನಾಲ್ಕು ಬಣ್ಣ ಒಪ್ಪವಿಕ್ಕಿ ಅದರ ಮೇಲೆಗಟ್ಟಿಯಾಗಿ ನೆಲೆಗೆ ನಿಂತವೈದು ಬಣ್ಣವುಸೃಷ್ಟಿಯಾರೇಳು ಬಣ್ಣ ಎಂಟು ಒಂಬತ್ತರೊಳಗೆ ನೆಟ್ಟನೆ ಹತ್ತು ಹನ್ನೊಂದು ಹನ್ನೆರಡು ತೋರುವಘಟ್ಟಿ ಹದಿಮೂರು ಹದಿನಾಲ್ಕು ಹದಿನೈದರಿಂದಕಟ್ಟಕಡೆಗೆ ನಿಂದ ಹದಿನಾರು ಬಣ್ಣ ಓಂ ಎಂದು 1 ಭದ್ರಕಂಬ ಒಂದರೊಳಗೆ ಉದ್ದವಾದ ಕೊನೆಯ ಮೇಲೆಸಿದ್ಧಿಯಾದ ಚಿಗುರು ಹೂವು ಕಾಯಿ ಹಣ್ಣನುಮೆದ್ದು ಹೋದ ಪಕ್ಷಿ ಬಂದು ಹದ್ದು ಹಿಡಿದು ಉದ್ದಕೆತ್ತಿಬುದ್ಧೀ ಹೀನನಾಗಿ ಬೆಳೆದು ಧರೆಗೆ ಬಿದ್ದುದಕದ್ದು ಮತ್ತೊಬ್ದ ತರುತಿದ್ದ ದಾರಿಯನ್ನು ಕಟ್ಟಿಒದ್ದು ಹಿಡಿದು ಗುದ್ದಿ ನೂಕಿ ಸೆಳೆದುಕೊಂಡುದ ಸಾಧ್ಯವಾಯಿತೆಂದು ತನ್ನ ಮನೆಗೆ ತಂದು ಸತಿಗೆ ಕೊಡಲುಶುದ್ಧವಾಗಿ ಸುಟ್ಟು ಮಡಗಲೆದ್ದು ಹಾರಿ ಹೋಯಿತೆಂದು 2 ತಿಳಿಯುತಿಹುದು ತಿಳಿಯದಿಹುದು ಬೆಳೆಯುತಿಹುದು ಬೆಳೆಯದಿಹುದುಹೊಳೆಯುತಿಹುದು ಹೊಳೆಯದಿಹುದು ಸುಳಿಯದಿಹುದುತಿಳಿದು ನಾಲ್ಕು ದಿಕ್ಕಿನಲ್ಲಿ ಹೊಳೆದು ಎಂಟು ದಿಕ್ಕ ತೋರಿಬಳಸಿ ಸುತ್ತ ತಿರುಗುತಿಹುದು ಬಳಲಿ ಬಳಲದೆಒಳಗೆ ಹೊರಗೆ ತೋರುತಿಹುದು ಅಳಿದ ವಸ್ತು ಮುಟ್ಟದಿಹುದುಕಳವಳಂಗೆ ಎರಡು ಗುಣವ ತೋರಿ ಮೆರೆವುದುತಿಳಿದು ನೋಡೆ ಕೈಗೆ ಸಿಕ್ಕಿ ಒಳಗೆ ಬಯಲ ತೋರುತಿಹುದುಪ್ರಣವ ಒಂದು ಕೋಟಿ ನುಂಗಿ ಉಗುಳಿತಿಪ್ಪುದೋಂ ಎಂದು 3 ತತ್ತಿಯಾದ ಬ್ರಹ್ಮನೀಗೆ ದಿಕ್ಕು ಅಖಿಲಾಂಡವೆಲ್ಲಹೆತ್ತ ತಂದೆಗಾದವನೆ ನಿತ್ಯವುಳ್ಳವ ಸತ್ತು ಹುಟ್ಟಲಿಲ್ಲವೆಂದು ಅತ್ತ ನೋಡಿ ಇತ್ತ ತಿರುಗೆ ತತ್ತಿಯೊಳಗೆ ಬೆಳೆದವೆಲ್ಲ ಸತ್ತವೆನ್ನುತಸತ್ತು ಹೋದ ದೀಪದಂತೆ ಉತ್ಪತ್ತಿಯಾದವಗೆಸತ್ತು ಸತ್ತು ಹುಟ್ಟುವುದು ತಪ್ಪದೆನ್ನುತಎತ್ತಿ ಜಗವ ನುಂಗಿ ತನ್ನ ಹೊಟ್ಟೆಯೊಳಿಂಬಿಟ್ಠುಕೊಂಡುಕತ್ತಲೆಗೆ ಕರ್ತೃವೆಂಬ ಜಗವಸತ್ಯ ಕೇಳಿರೋ ಎಂದು | 4 ಪಂಕಜನ ತಾಯಿ ಸುತನ ಅಂಕದಲ್ಲಿ ಹುಟ್ಟಿ ಜಗವಮಂಕು ಮಾಡುತಿಪ್ಪ ಮಾಯೆ ಹತ್ತು ಶಂಕೆಯಶಂಕೆಕಾರ ಶತ್ರುಮಿತ್ರರಿಬ್ಬರಿಗಾಧಾರವೆಂದುಕುಂಕರದಿಪ್ಪತ್ತೊಂದು ಕೋಟಿ ಪಾಶವುಓಂಕಾರದೊಳಗೆ ಪುಟ್ಟಿ ಓಂಕಾರದೊಳಗೆ ಬೆಳೆದುಓಂಕಾರದೀ ಜಗವ ಎತ್ತಿ ಮೆರೆವುದೋ ಎಂದು 5 ಪ್ರಣವ ಒಂದರೊಳಗೆ ಒಂದು ಕೋಟಿಯನ್ನು ತೋರಿ ಪಡೆಯ (ಕಡೆಯ ?)ಕುಣಿಕೆಯೊಳಗೆ ಎಂಟು ಕೋಟಿಯನ್ನು ತೋರುತತೃಣವ ಹಿಡಿದು ಬರೆಯುತಿಪ್ಪ ಒಂದು ರೋಮ ಕೂಪದಲ್ಲಿಕುಣಿಕೆಯೊಳಗೆ ಜಗದ ಜೀವರಾಶಿ ಎಲ್ಲವಸುಳಿದ ವಿಷ್ಣು ಬ್ರಹ್ಮನೆಂಬ ಹಣೆಯ ಕಣ್ಣ ರುದ್ರನೆಂಬ ಮಣೆಯಗಾರರೆಪ್ಪತ್ತೇಳು ಕೋಟಿ ಸಂಖ್ಯೆಯುಹಣೆಯ ಕಾಣದವರ ಕೀಲಿನೆಣಿಕೆಯಲ್ಲಿ ಹೊಲಬುದಪ್ಪಿಪ್ರಣವ ಒಂದು ಕೇಳುತಿಪ್ಪ ಪರಬ್ರಹ್ಮ ಓಂ ಎಂದು 6 ಸುಳಿ ಕಮಲ ಪಾದ ಮೇಲೆ ಮಸ್ತಕವುತೊಳಲಿ ಕಾಣೆ ವೇದವೆಂದು ಬಳಲಿ ಬಳಲದೆಪ್ರಳಯ ಕೋಟಿ ಪ್ರಾಣಿಗಳಿಗೆ ಹೊಳವುಗಾಣಲೀಸದಂತೆಬೆಳೆದು ಹೋಗುವ ಗತಿಯೆಂಬುದಿತ್ತಲರಿಸುತಕಳವಿನವರು ಬಂದು ಇಳೆಯ ಮೇಲೆ ನಿಂದುಬಿಳಿಗಿರಿವಾಸ ತಿರುಮಲೇಶ ಆದಿಕೇಶವ ತಾನೆಯೆಂದು 7
--------------
ಕನಕದಾಸ
ಆರತಿಯನು ಎತ್ತಿರಮ್ಮ ವರ ಮಹಾಲಕ್ಷುಮಿಗೆ ಚಾರುಮತಿಗೆ ವರವನಿತ್ತಪಾರ ಕರುಣಾಂಬುಧಿಗೆ ಪ ಶ್ರಾವಣ ಶುಕ್ರವಾರದಲಿ ಸಾವಧಾನ ಮನದಿ ನಿತ್ಯ ಸೇವಿಸುವರಿಗೊಲಿದು ಭಾಗ್ಯವೀವ ಮಹಾಲಕ್ಷುಮಿಗೆ 1 ಹೆತ್ತತಾಯಿ ತನ್ನ ಶಿಶುವನರ್ಥಿಯಿಂದ ಸಲಹುವಂತೆ ಭೃತ್ಯವರ್ಗವನ್ನು ಪೊರೆದು ನಿತ್ಯಲೋಕ ಮಾತೆಗೀಗ 2 ಚಿಂತಿತಾರ್ಥನೀವ ಲಕ್ಷ್ಮೀಕಾಂತನುರ ಸ್ಥಳದಿ ನಿಂತು ದಂತಿವರದನನಂತ ಗುಣಗಳನಂತಗಾಣದಿರುವಳಿಗೆ 3
--------------
ಲಕ್ಷ್ಮೀನಾರಯಣರಾಯರು
ಆರೂ ಸಂಗಡ ಬಾಹೋರಿಲ್ಲ ಪ ನಾರಾಯಣ ನಾಮ ನೆರೆ ಬಾಹೋದಲ್ಲದೆ ಅ ಪರಿಯಂತ ಗರ್ಭದಲಿಹೆತ್ತು ಅತ್ಯಂತ ನೋವು ಬೇನೆಗಳಿಂದಲಿತುತ್ತು ವಸ್ತ್ರವನಿಕ್ಕಿ ಸಲಹಿದಾ ತಾಯ್ತಂದೆಹೊತ್ತುಗಳೆವರಲ್ಲದೆ ಬೆನ್‍ಹತ್ತಿ ಬಹರೆ 1 ಹರಣ ದಾರು ಗತಿಯೆಂದಳುವಳು2 ಮನೆ ಮಕ್ಕಳು ತಮ್ಮ ಧನಕೆ ಬಡಿದಾಡುವರುಧನಕಾಗಿ ನಿನ್ನನೆ ನಂಬಿದವರುಅನುಮಾನವೇಕೆ ಜೀವನು ತೊಲಗಿದಾಕ್ಷಣದಿಇನ್ನೊಂದು ಅರಗಳಿಗೆ ನಿಲ್ಲಗೊಡರು 3 ಸುತ್ತಲು ಕುಳ್ಳಿರ್ದ ಮಿತ್ರ ಬಾಂಧವರೆಲ್ಲಹೊತ್ತು ಹೋದೀತು ಹೊರಗೆ ಹಾಕೆನುವರುಹಿತ್ತಲಾ ಕಸಕಿಂತ ಅತ್ತತ್ತ ಈ ದೇಹಹೊತ್ತುಕೊಂಡೊಯ್ದು ಅಗ್ನಿಯಲಿ ಬಿಸುಡುವರು 4 ಹರಣ ಹಿಂಗದ ಮುನ್ನು ಹರಿಯ ಸೇವೆಯ ಮಾಡಿಪರಗತಿಗೆ ಸಾಧನವ ಮಾಡಿಕೊಳ್ಳೊಕರುಣನಿಧಿ ಕಾಗಿನೆಲೆಯಾದಿಕೇಶವರಾಯನನಿರುತದಲಿ ನೆನೆನೆನೆದು ಸುಖಿಯಾಗೊ ಮನುಜ5 * ಈ ಕೀರ್ತನೆ ಪುರಂದರಾಸರ ಅಂಕಿತದಲ್ಲೂ ಇದೆ.
--------------
ಕನಕದಾಸ
ಆರೇನು ಮಾಡುವರು ಅವನಿಯೊಳಗೆ | ಕರ್ಮ ಫಣಿಯಲ್ಲಿ ಬರೆದುದಕೆ ಪ ಮಾಡಿದಡಿಗಿಯು ಕೆಡಲು ಮನಿಯ ಗಂಡನು ಬಿಡಲು | ಸತಿ ತನ್ನ ಕುಣಿಸ್ಯಾಡಲು ನಿಜದಿ || ಗೋಡೆಗೆ ಬರೆದ ಹುಲಿ ಘಡಘಡನೆ ತಿನಬರಲು | ಆಡಿದ ಮತುಗಳು ಅಖಿಳಿರು ನಿಜವೆನಲು 1 ಹೊಲ ಬೇಲಿ ಮೆಯ್ದರೆ ಮೊಲ ಇರಿಯ ಬಂದರೆ | ತಲೆಗೆ ತನ್ನ ಕೈ ಪೆಟ್ಟು ತಾಕಿದರೆ || ಹೆರಳು ಹಾವಾದರೆ ಗೆಳೆಯ ರಿಪುವಾದರೆ | ಕಲಿಸಿದ ಅವಲಕ್ಕಿ ಕಲಪರಟಿ ನುಂಗಿದರೆ 2 ಹೆತ್ತ ತಾಯಿ ಹಿಡಿದು ಮಕ್ಕಳಿಗೆ ವಿಷ ಹಾಕಿದರೆ | ಪೆತ್ತ ತಂದೆಯು ಹೊರಗೆ ಮಾಡಿದರೆ || ತೊತ್ತು ಅರಸಿಗೆ ಪ್ರತ್ಯುತ್ತರವನಾಡಿದರೆ | ಕತ್ತಲೆ ಬೆನ್ನಟ್ಟಿ ಕರಡ್ಯಾಗಿ ಬಂದರೆ 3 ಕಣ್ಣವೊಳಗಿನ ಗೊಂಬಿ ಕಾದ ಬಂದರೆ | ಹೆಣ್ಣಿನ ಹರಟೆ ಹೆಚ್ಚಾದರೆ | ಅನ್ನವನು ಉಣ್ಣಲು ಅಜೀರ್ಣವಾದರೆ | ಪುಣ್ಯಕ್ಷೇತ್ರಗಳಲ್ಲಿ ಪಾಪ ಅಟ್ಟಿಸಿದರೆ 4 ಏರಿ ಕುಳಿತ ಕುಂಬಿ ಎರಡಾಗಿ ಮುರಿದರೆ | ವಾರಿಧಿಗಳು ಮೇರೆ ಮೀರಿದರೆ || ಆರಿದ ಇದ್ದಲಿಗಳು ಅಗ್ನಿಯಾದರೆ | ನಮ್ಮ ವಿಜಯವಿಠ್ಠಲನಿರುವ ತನಕ 5
--------------
ವಿಜಯದಾಸ
ಆವ ಜನುಮದ ಪಾಪ ವೊದಗಿತೋ ಎನಗಿಂದು | ದೇವ ಗಂಗೆಯ ನೋಡಿದೆ ಪ ದೇವಕೀಸುತ ಒಲಿದು ಕರೆತಂದು ಎನ್ನನು | ಪಾವನ್ನ ಮಾಡಿದನು ಇನ್ನೂ-ಮುನ್ನೂ ಅ.ಪ ಗುರುಗಳನು ವಹಿಸಿ ಭೂಸುರರಿಗೆ ಕಠಿಣ | ಉ- ತ್ತರ ಪೇಳಿಸಾಗಿದ್ದನೊ | ವರ ಬ್ರಾಹ್ಮಣರ ತಪ್ಪು ಬಲು ಇರಲು ಇಲ್ಲದೇ | ಸರಿಯೆಂದು ಸ್ಥಾಪಿಸಿದೆನೊ | ಮುರಿವ ಲಗ್ನಕೆ ಪೋಗಿ ಪುಸಿ ದ್ರವ್ಯವನೆ ಪೇಳಿ | ಮರಳಿ ಪೂರ್ತಿಸಿ ಇದ್ದೆನೊ | ವರ ವಿಪ್ರರಿಗೆ ವಧೆಯು ಬರಲು ಸಾಕ್ಷಿಯಾಗಿ | ಪರಿಹರಿಸಿ ಬಂದಿದ್ದನೋ ಏನೋ 1 ಘನ ತೀರ್ಥಯಾತ್ರೆಗೆ ಪೋಗುವಾಗ-ಲು | ವಂ ಕರ್ಮ ಮಾಡಿದ್ದೆನೊ | ಜನಪತಿಗಳ ಮಾತು ಕೇಳದೆ ಧರ್ಮಕ್ಕೆ | ಅನುಕೂಲನಾಗಿದ್ದೆನೊ | ಮನೆಗೆ ಬಂದತಿಥಿಗಳು ಜರಿದು ಪಿತ್ರಾದ್ಯರಿಗೆ | ಉಣಿಸಿ ಸುಖಪಡಿಸಿದ್ದೆನೊ | ವನಗಳನು ಕಡಿದು ದೇವಾಲಯವ ಕಟ್ಟಿಸಿ | ಕ್ಷಣ ಕ್ಷಣಕೆ ಅರ್ಚಿಸೆದೆನೋ ಏನೊ 2 ಉತ್ತಮನು ಮನೆಗೆ ಬಂದಾಗ ಮಾಡುವಂಥ | ಸತ್ಕರ್ಮ ತೊರೆದಿದ್ದೆನೋ | ಹೆತ್ತವರ ಬಾಂದವರ ಧನದಿಂದ ಕೆರೆ ಭಾವಿ | ಹತ್ತೆಂಟು ಕಟ್ಟಿಸಿದೆನೊ | ದತ್ತಾಪಹಾರವನು ಮಾಡಿ ಅದರಿಂದನಗ್ನಿ- ಹೋತ್ರವನು ಸಾಧಿಸೆದೆನೊ | ಇತ್ತ್ಯಧಿಕ ನಿರ್ಬೀಜ ಪಾಪಗಳನೆಸಗಿ | ಕೃ- ತಾರ್ಥನಾದೆನೊ ವಿಜಯವಿಠ್ಠಲನ್ನ ಕರುಣದಲಿ3
--------------
ವಿಜಯದಾಸ
ಇಂದಿರಾರಮಣನ ಮಂದಿರದಲ್ಲೆ ನಾ- ರಂದ ತಾ ಬರುತಿರಲು ಕಂಡು ಕೃಷ್ಣನು ಕರೆತಂದು ಮನ್ನಿಸಿ ಬಂದಕಾರಣವೇನೆಂದನು 1 ಕಾರಣವೇನುಂಟು ಕಾರಣಪುರುಷನ ಕಾಣಬೇಕೆಂದೆನುತ ಕಾಮಿಸಿಬಂದೆನೊ ಕೊರಳ ತುಳಸಿ ಮಾಲೆ ನೀಡೊ ನೀ ಎನಗೆಂದನು2 ಏನು ಬೇಡಿದರು ನಾ ಕÉೂಡುವೆನು ನಾರಂದ ಪ್ರಾಣಪದಕ ತುಳಸಿ ನೀಡಲಾರೆನೊ ಮುತ್ತಿನ್ಹಾರವ ಕೊಡುವೆ- ನೆಂದು ಹೇಳುತಿದ್ದನು ಹರಿಯು 3 ನೀಡದಿದ್ದರೆ ನಾನು ಬೇಡಿ ಬಿಡುವನಲ್ಲ ನೋಡಿಕೋಯೆಂದೆನುತ ಆಡಿದ ಮಾತು ತಪ್ಪುವರುಂಟೆ ಶ್ರೀಕೃಷ್ಣ ಹೋಗಿಬರುವೆನೆಂದನು 4 ಸತ್ಯಭಾಮೆಯ ಮನೆ ಹೊಕ್ಕನು ನಾರಂದ ಹೆತ್ತಮ್ಮ ಕೇಳೆನುತ ಸುತ್ತಿಬಂದೆನು ಸುರಲೋಕದ ವಾರ್ತೆಯ ವಿಸ್ತರಿಸ್ಹೇಳುವೆನು 5 ಇಂದ್ರಲೋಕದಲಿ ದೇವೇಂದ್ರ ಶಚಿಯ ಕೂಡ್ಯಾ ನಂದದಿ ಕುಳಿತಿದ್ದನೆ ಅ- ಲ್ಲಿಂದ ಕೈಲಾಸ ಮಾರುದ್ರ ಪಾರ್ವತಿದೇವಿ ಚೆಂದವನ್ವರಣಿಸಲೆ 6 ಸತ್ಯಲೋಕದಿ ಸರಸ್ವತಿ ಕೂಡಿ ಬ್ರಹ್ಮ ಭಾ ಳುತ್ಸವದಿಂದಿದ್ದನೆ ಹಸ್ತಿನಾವತಿಯ ಪಾಂಡವರು ದ್ರೌಪದಿದೇವಿ ಅರ್ಥಿಯ ನೋಡಿ ಬಂದೆ 7 ದ್ವಾರಾವತಿಗೆ ಬಂದೆ ದೇವಿ ನಿಮ್ಮರಸನು ನಾರಿ ರುಕ್ಮಿಣಿ ಸಹಿತ ಭಾಳ ಸಂಭ್ರಮದಿಂದ ಕುಳಿತಿದ್ದ ಕಣ್ಹಬ್ಬವಾಗಿ ನಾ ಬಂದೆನಿಲ್ಲೆ 8 ಕರೆದು ರುಕ್ಮಿಣಿ ಕರದಿಂದೆ ಆಲಂಗಿಸಿ ತೊಡೆಯಮ್ಯಾಲಿಟ್ಟಿದ್ದನೆ ಅರಳುಮಲ್ಲಿಗೆ ತುರುವಿ(ಬೀ) ನಲ್ಲಿಟ್ಟು ನಿನಗಿನ್ನು ಸರಿಯಿಲ್ಲವೆಂತೆಂಬನೆ 9 ಹಾರಪದಕ ಇಬ್ಬರಿಟ್ಟಾಭರಣ ಬ್ಯಾರೆ ಬ್ಯಾರಾಗಿ ತೋರವಲ್ಲೆ ಸೂರ್ಯಚಂದ್ರರು ಕೂಡಿದಂಥ ಮುಖವು ನೋಡಿ ನಾ ಬೆರಗಾಗಿದ್ದೆನೆ 10 ಸತ್ಯಭಾಮೆಯೆ ನಿನ್ನ ಹೆತ್ತ ತಾಯಿತಂದೆ ಮಿರ್ತಾಗಿದ್ದರೆ ನಿನಗೆ ಕೊಟ್ಟರೀ ಕಪಟನಾಟಕ ದಯಹೀನಗಿ- ನ್ನೆಷ್ಟು ನಾ ಸೈರಿಸಲೆ 11 ಒಂದೊಂದು ಗುಣಗಳ ವರಣಿಸಲಿಕ್ಕೆ ಹ ನ್ನೊಂದೊ (ದ್ವ?) ರುಷವು ಸಾಲದೆ ಕಂಡು ಬಂದ್ವಾರ್ತೆಯ ಖರೆಯ ನಾ ಹೇಳುವೆ ಸಂದೇಹ ಮಾಡದಿರೆ 12 ಕೇಳಿ ಸತ್ಯಭಾಮೆ ತಾಳಲಾರದೆ ಮುನಿ ಪಾದದ ಮ್ಯಾಲೆ ಬಿದ್ದು ಹೇಳಿ ಉಪಾಯ ಮುಂದಕೆ ಪೋಗೊ ಶ್ರೀ- ಕೃಷ್ಣ ತಾನೊಲಿದಿರುವಂದದಿ13 ದಾನವಾಂತಕÀನ ನೀ ದಾನವÀ ಮಾಡಲು ದಾವಜನ್ಮಕÀು ನಿನ್ನನು ತಾನಗಲದೆ ಮುಂದೆ ಸೇರಿಕೊಂಡಿರುವೊ ಉಪಾಯ ಹೇಳುವೆನೆಂದನು 14 ರಂಗರಾಯನ ಕರೆತಂದುಕೊಟ್ಟವರಿಗೆ ಹಿಂಗದೆ ಸೌಭಾಗ್ಯವ ಎಂದೆಂದಿಗವರ ರಕ್ಷಿಸುವೋನೆಂದೆನುತಲಿ ಅಂಗನೆಯರನಟ್ಟಿದಳು 15 ದೂತೇರ ಸಹಿತಾಗಿ ಬಂದು ತಾ ಭರದಿಂದೆ ಪ್ರೀತಿಲೆ ಸತ್ಯಭಾಮ ಮಾತುಳಾಂತಕ ನಮ್ಮ ಮನೆಗೆ ಬಾರೆನುತ ಶ್ರೀ- ನಾಥನೆಯೇಳೆಂದಳು16 ಮಡದಿ ರುಕ್ಮಿಣಿ ಭಾಮೆ ಮಂದಿರಕ್ಕೊ ್ಹೀಗುವೆ ಕಡುಕೋಪ ಮಾಡದಿರೆ ತಡೆಯದೆ ನಾಳೆ ಬರುವೆನೆಂದು ಶ್ರೀಕೃಷ್ಣ ಗ- ರುಡನ ಹೆಗಲೇರಿದ 17 ವಾರಕಾಂತೆಯರು ಬಾಜಾರ ಮಧ್ಯದಿ ಸೋಳಸಾವಿರ ಸತಿಯರನೆ ವಾರೆನೋಟದಿ ನೋಡಿ ನಗುತ ಸತ್ಯಭಾಮೆ ಬಾಗಿಲ ಮುಂದಿಳಿದ 18 ಎದುರಿಗೆ ನಿಂತು ತಾ ಚೆದುರೆ ಸತ್ಯಭಾಮೆ ಪದುಮ ಪಾದಕೆ ಎರಗಿ ಮುದದಿಂದ ಮುದ್ದು ಶ್ರೀಕೃಷ್ಣನ ಮುಂಗೈಯ್ಯ ಪಿಡಿದು ತಾ ನಡೆದಳಾಗ 19 ಕೃಷ್ಣರಾಯನೆ ನಿನ್ನ ಕೊಟ್ಟೇನು ದಾ ನವ ಬಿಟ್ಟೆನ್ನ ಅಗಲದಂತೆ ಸತ್ಯಭಾಮೆಯ ನೋಡಿ ನಗುತ ಈ ಕಾರ್ಯ ಅ- ಗತ್ಯಮಾಡೆಂದೆನುತ 20 ಎರೆದು ಪೀತಾಂಬರವುಡಿಸಿ ಮಾಣ Âಕ್ಯದ ಆ- ಭರಣವ ತಂದಿಟ್ಟಳು ತರಿಸಿ ತಾಂಬೂಲ ದಕ್ಷಿಣೆಯನ್ನು ಬ್ರಾಂಬರ ಕÀರೆಸಿದಳಾಕ್ಷಣದಿ 21 ಆಚಾರ್ಯ ನೀವ್ ಬನ್ನಿ ವಾಸುದೇವನ ದಾನ ಈ ಕ್ಷಣದಲ್ಲೆ ಕೊಡುವೆ ನಾಶರಹಿತ ನಮ್ಮ ಮನೆಯೊಳಗಿರಲಿಕ್ಕೆ ಗ್ರಾಚಾರವೇನೆಂದರು 22 ವಿದ್ಯಾರ್ಥಿಗಳು ಬನ್ನಿ ಮುದ್ದು ಶ್ರೀಕೃಷ್ಣನ ವಿಧ್ಯುಕ್ತದಲಿ ಕೊಡುವೆ ಮೂರ್ಜಗದೊಡೆಯ ತಾ ಮಂದಭಾಗ್ಯರ ಮನೇಲಿದ್ದಾನ್ಯಾತಕೆ ಎಂದಾರೆ 23 ಭಟ್ಟರೆ ನೀವ್ ಬನ್ನಿ ಸೃಷ್ಟಿಪತಿಯ ದಾನ ಕೊಟ್ಟು ಬಿಡುವೆನೆಂದಳು ಅಷ್ಟದರಿದ್ರರಿಗಾಲಕ್ಷ್ಮೀವಲ್ಲಭ ದಕ್ಕುವೋನಲ್ಲೆಂದರು 24 ಯತಿಗಳೆ ನೀವ್ ಬನ್ನಿ ಪೃಥಿವಿಗೊಡೆಯ (ನನು) ಹಿತದಿ ದಾನವ ಕೊಡುವೆ ಗತಿಯಿಲ್ಲ ನಮಗೆ ಶ್ರೀಪತಿ ಸಲಹÀಲು ನಿನ್ನ ಪತಿ ಬ್ಯಾಡ ನಮಗೆಂದರು&
--------------
ಹರಪನಹಳ್ಳಿಭೀಮವ್ವ