ಒಟ್ಟು 95 ಕಡೆಗಳಲ್ಲಿ , 36 ದಾಸರು , 92 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಅನುಭವ ಬಾರಾಮಾಸ ) ಏನೆಂದು ಹೇಳಲಿ ಶಾಂತಳೇ ಬುದ್ಧಿವಂತಳೇ | ವರ್ತ ಣೂಕದೆನ್ನ ಮಾತಾ | ಶ್ರೀನಾಥ ನಂಘ್ರಿಯ ನೋಡದೇ ಒಮ್ಮೆ ಮಾನವ ಜನು ಮದಿ ಬಂದೆನು ಹೊಂದಿ ನಿಂದೆನು | ಮೆರೆದೆನು ಸ್ವಹಿತಾ | ನಾನಾ ಹಂಬಲ ದೊಳು ಶಿಲುಕಿದ ಬಲು ಬಳಲಿದ | ದೊರಯದು ಪರಮಾರ್ಥ | ಶ್ಲೋಕ 1 ಭರತ ಖಂಡದಿ ಬಂದ ನೃದೇಹವಾ | ಮರೆದು ಮಾಡಲಿಬಾರದು ಹೇಯವಾ | ತ್ವರಿತ ನಂಬುದು ಶ್ರೀ ಹರಿ ಪಾದವಾ | ಗುರು ಮಹಿಪತಿ ಸಾರಿದ ಬೋಧವಾ | ಪದ ಮುಕುತಿ ಸಾಧನ ಮಾರ್ಗಶೀರ್ಷ ಮಾಸಾ ವಿಶೇಷಾ | ಧರಿಯೊಳು ಇದರಿಂದಾ | ಯುಕುತೊಲು ಹೋಗಿ ನಿರಂತರಾ ಸಾಧು ಸಂತರಾ | ಅವರ ಚರಣಾರವಿಂದಾ | ಭಕುತಿಲಿ ಮುಟ್ಟಿವಂದಿಸಲಿಲ್ಲಾ ಹೊಂದಿಸಲಿಲ್ಲಾ | ಅಖಿಳ ದೊಳಾರಿಗೆ ಬಾಗದೇ ದಿನನೀಗದೇ | ಮೋಟ ಮರ ನಿಲುಲುಂದಾ | ಶ್ಲೋಕ 2 ಮೆರೆವ ಅವಯವದೊಳು ಉತ್ತು ಮಂಗದಿ ನಿಂದು | ಹೊರಿಯ ಲುದರ ಕಾಗೀ ಬಾಗುವೀ ನೀಚಗಿಂದು | ಹರಿ ಶರಣರ ಕಂಡು ವಾಕ್ಯ ನಮನವೇನು | ಗುರು ಮಹಿಪತಿ ಸ್ವಾಮಿ ವಲಿಯನೆಂದಿಗೆ ತಾನು | ಪದ ಮಾಸ ಶೂನ್ಯವೇ ನೋಡು ಶ್ರವಣವೇ | ಮಾಡಿ ಸ್ಥಿರ ಮನುಚಿತಾ | ಸವಿ ಸವಿಯಲಿ ನಿತ್ಯ ನೂತನಾ ತೋರದನುಮಾನಾ | ಶ್ರೀ ಗೋವಿಂದ ಚರಿತಾ | ಹವಣದಿ ಸಂತರ ಮುಖದಿಂದಾ ಅನುಸರಣಿಂದಾ | ಕೇಳಲಿಲ್ಲನರತಾ | ಅವನಿಲಿ ದುಷ್ಟಪ ಕೀರ್ತಿಯಾ ಅನ್ಯ ವಾರ್ತರಿಯಾ | ಆಲಿಸಿದೇ ಸುಖ ಬಡುತಾ | ಶ್ಲೋಕ 3 ಕುಂಡಲ ವಿಟ್ಟಿಹಾ | ಹರಿ ಕಥಾಮೃತ ಕೇಳುದು ಬಿಟ್ಟಿಹಾ | ಗಿರಿಯ ಗುಹ್ಯವೋ ಕರ್ಣವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ನೋಟ ಉನ್ಮನಿ ನದಿ ಮಾಘವೇ ಮಹಾಯೋಗವೇ | ಲಯ ಲಕ್ಷಿಯ ಲಿಂದು | ನೀಟದಿ ಹರಿಯಾವತಾರದಾ ಮೂರ್ತಿ ಧ್ಯಾನಕ ತಂದು | ಧಾಟಿಲಿ ಸಮ ದೃಷ್ಟಿ ಬಲಿಯದೇ ಅಲ್ಲ ಚಲಿಸದೇ | ನಾನಾ ಬಯಕೆಯ ವಿಡಿದು ತ್ರೋಟಕ ದೈವ ನೋಡಿದ ಮತ ಕೂಡಿದ | ನೀಚ ವೃತ್ತಿಗೆ ಬಿದ್ದು | ಶ್ಲೋಕ 4 ಅಂಗನೆಯರ ಶೃಂಗಾರ ನೋಡುವಾ | ರಂಗನಾಕೃತಿ ನೋಡಲಿ ಬಾಡುವಾ | ಕಂಗಳೋಸಿ ಖಿಗಿಲಿಗಳೋ ಮಂದನಾ | ಇಂಗಿತ್ಹೇಳಿದ ಮಹಿಪತಿ ನಂದನಾ | ಪದ ಪುಣ್ಯ ಫಲಗುಣ ಮಾಸವೇ ವಬಿಗಿಯೇರ ಸನವೇ | ಸನ್ನುತ ಶ್ರೀಹರಿ ನಾಮವಾ ವಿಡಿದು ಪ್ರೇಮನಾ | ಪದ ಪದ್ಯಲೀಗ | ಚೆನ್ನಾಗಿ ಕೀರ್ತನೆ ಮಾಡದೇ ಗತಿಬೇಡದೇ | ಪಾತಕಕೆ ಗುರಿಯಾಗೆ | ಅನ್ಯರ ನಿಹಪರ ಸ್ತುತಿಗಳಾ ಹುಸಿನುಡಿಗಳಾ | ಆಡಿಬರಡಾದೆ ನೆಲಿಗೆ | ಶ್ಲೋಕ 5 ಸಿರಿಕಾಂತಾ ನತಶಮಿತ ದುರಿತಧ್ವಾಂತ ಯನುತಾ | ಹರಿನಾಮಾ ಪ್ರೇಮ ವಿಡಿದು ಸ್ಮರಿಸಾದಿಪ್ಪವನುತಾ | ನರಾಧಮಾನೇ ಮಾವನ ಮುಖವೋ ನೃಪಮಾಯ ಮುಖವೋ | ಅರುಹಿದಾ ಬೋಧಾ ಗುರು ಮಹಿಪತಿ ಸ್ವಾಮಿ ಸುಖವೋ ಪದ ದೋಷನಾಶಕ ಪ್ರಣವಧ ಕ್ಷೇತ್ರಾ ಮಾಸವೀ ಚಿತ್ರಾ | ಪವನನಾ ನೆಲೆಗೊಳಿಸಿ | ಮೀಸಲ ರೇಚಕ ಪೂರ್ವಕಾ ಧೃಡ ಕುಂಭಕಾ | ದಿಂದ ಮಂತ್ರವ ಜಪಿಸಿ | ವಸುದೇವನ ಪಾದ ನಿರ್ಮಾಲ್ಯ ಆಘ್ರಾಣಿ ಸಲಿಲ್ಲಾ | ಭೋಗ ದ್ರವ್ಯವ ಬಯಸಿ | ಲೇಸಾದ ಪರಿಮಳವನೇ ತಂದು ವಾಸಿಸುತ ನಿಂದು | ಮೈಯ್ಯ ಮರ್ತೆನು ಚಲಿಸಿ ಶ್ಲೋಕ 6 ಪರಿಮಳಂಗಳ ವಾಸನೆಗ್ಹಿಗ್ಗುಯವಾಸಿರಿ | ತುಳಸಿಯ ತೋರಲು ಸಗ್ಗುವಾ | ಇರುವ ನಾಶಿಕೋತಿತ್ತಿಯೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ತನುವೆಂಬೋ ವೃಕ್ಷ ಕಿವೇ ಶಾಖಾ ಹಸ್ತಾ ಮೌಲಿಕಾ | ದೇವ ಪೂಜದರಿಂದ | ಘನವಾದಾ ತುಳಸಿ ಪುಷ್ಪಗಳನು ತಂದು ಹಲವನು | ಸಹಸ್ರ ನಾಮಗಳಿಂದಾ | ಅನುವಾಗಿ ಹರಿಗೆ ಏರಿಸಲಿಲ್ಲಾ ಅರ್ಪಿಸಲಿಲ್ಲಾ ಮರಹು ಆಲಸ್ಯದಿಂದಾ | ವನಿಯೊಳು ಪಗಡಿ ಪಂಚಿಗಳನು ಆಡಿ ದಿನವನು | ನೂಕಿದನು ಇದರಿಂದಾ | (ತನಗಿಂದ ದೀನದುರ್ಬಲರನು ಕಂಡು ಹೊಡೆವನು | ಹೋಗಾಡಿದ ನಿಜಾನಂದ ) ಶ್ಲೋಕ 7 ಹರಿಯ ಸೇವೆಯ ಮಾಡಲು ಬೀಳುವಾ | ಮೆರೆವ ಕಂಕಣ ಮುದ್ರಿಕೆ ತಾಳುವಾ | ಕರವೋ ಮದನಾ ಕೈಯ್ಯವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ಸರ್ವ ವಿಷಯವತಿ ಜೇಷ್ಠವೇ ಬಲಿ ದಿಷ್ಟವೇ | ಮೃದು ಕಠಿಣ ವೆನ್ನದೇ | ಹರಿಯಂಗಣದಿ ಲೋಟಾಂಗಣವನು ಹಾಕುತಲಿ ತಾನು | ದೇವ ರೂಳಿಗದಿಂದೇ | ನೆರೆ ಹಡಪಿಗ ಪಾದುಕೆಯ ವಾ ಯಂಬನಾಮವಾ | ತಾಳಿ ಕರಸಿ ಕೊಳ್ಳದೇ | ತರಳೆ ತ್ಯಾಡಿಸುತಲಿ ತನ್ನಾ ಕಳೆ ದನುದಿನಾ | ಇದು ಯಾತರ ಛಂದಾ | ಶ್ಲೋಕ 8 ಪರೋಪಕಾರ ವಂಚನೆ ಮಾಡುವಾ | ಸುರಭಿ ಚಂದನ ಮಿಂಚಿಲೆ ತೀಡುವಾ | ಶರೀರೋ ಬೆಚ್ಚಿನ ಮಾಟವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ ಪದ ಆಷಾಡ ಗೇಯಲಿ ಹಸಿವೆಯ ಬಲು ತೃಷಿವಿಯು | ಸಕಲನು ಕೂಲದಿಂದಾ | ಲೇಸಾಗಿ ನೈವೇದ್ಯ ವದಗಿಸಿ ಹರಿಗರ್ಪಿಸಿ | ನಿಜ ತೀರ್ಥ ಪ್ರಸಾದಾ | ಭೂಷಣದಲಿ ನಾನು ಕೊಳಲಿಲ್ಲಾÀ ಸುಖ ಬಡಲಿಲ್ಲಾ | ದೋಷದನ್ನವ ಉಂಡು ವಡಲನು ನಾನು ಹೊರೆದನು ಬಯಸುತ ಜಿವ್ಹ ಸ್ವಾದಾ ಶ್ಲೋಕ 9 ವಿದತವಾದ ರಸ್ನಾವ ಉಂಬನು | ಮುದದಿ ತತ್ವದ ವಿದ್ಯವ ತುಂಬನು | ಉದರೋಶಾಲ್ಮಲಿ ಫಲವೋ ಮಂದನಾ | ಇದನು ಸಾರಿದ ಮಹಿಪತಿ ನಂದನಾ | ಪದ ಮನ ವಿಶ್ರಾವಣ ಸುಖ ಬೆರತಿದೇ ನೋಡು ನಿಂದಿದೇ | ಗುರು ಬೋಧಿಸಿದನು | ಮನನ ಮಾಡುತ ನಿಜಧ್ಯಾಸಾ | ಹಚ್ಚಿ ವಿಶೇಷಾ | ಪಡೆದು ಸಾಕ್ಷಾತ್ಕಾರವನು | ಚಿನುಮಯಾನಂದ ನೋಲಾಡದೇ ತಾಂ ಪೀಡಾಡದೇ | ಅಲ್ಲಿ ತೊಳಲಿದ | ಹರಿ ವಲುಮೆ ಇಲ್ಲದೇನು | ಶ್ಲೋಕ 10 ವಿಷಯ ಚಿಂತನೆ ಮಾಡಲು ಸಂಭ್ರಮಾ | ಕುಸುಮ ನಾಭನ ನೆನಿಯೆ ವಿಭ್ರಮಾ | ಕುಶಲ ಮಾನಸೋ ಪಶುವೋ ಮಂದನಾ | ಸ್ವಸುಖ ಸಾರಿದ ಮಹಿಪತಿ ನಂದನಾ ಪದ ಸುಕೃತ ಇದೇವೇ ಭಾದ್ರಪದವೇ | ನಡೆದ್ಹೋಗಿದ ರಿಂದಾ ಒಲಿದ ಪುಣ್ಯ ಕ್ಷೇತ್ರವಾಗಿಹಾ ಸಂತರಾಲಯಾ | ಪುಗುವುದೇ ಯಾತ್ರೆ ಛಂದಾ | ಜಲಜಾಂಬಕನ ಮಹಿಮೆ ಗಳುಂಟು ಅಲ್ಲಿ ಸುಖವುಂಟು | ತೊರೆದನು ಪುರವಿಂದಾ | ಸತಿ ಉದರದ ದಾವತಿಗಾಗಿ ತಿರುತಿರುಗೀ | ಜನುಮ ಶ್ಲೋಕ 11 ಧನದ ಆಶೆಗೆ ನಡೆಡತಾಕುವಾ | ಘನ ಪ್ರದಕ್ಷಿಣೆ ಮಾಡಲು ಬಳುಕುವಾ | ಮನುಜಪಾದವೋ ಪಾದವೋಮಂದನಾ | ಅನುವ ಸಾರಿದ ಪದ ಪ್ರತಿ ಪದಾಶಿವಿಜಯಂಬುದೇ ಗುರು ಭಕ್ತಿಂದೇ | ಶೃತಿ ಯಥಾದೇವೇ ತಥಾಗುರೌ ಎಂದು ನುಡಿವುದು ಅರ್ಥ ತಿಳಿದು | ನಂಬಿ ಭಜಿಸದೆವೆ | ಕ್ಷಿತಿಯೊಳು ನರರೆಂದು ಬಗೆದೆವು ಹಿತ ಮರದೆವು | ಬಾಹ್ಯ ದೃಷ್ಟಿ ಶ್ಲೋಕ 12 ಸಕಲ ವೃತ ತಪ ತಿರ್ಥಾ ಶಾಸ್ತ್ರ ಪೌರಾಣ ಬಲ್ಲಾ | ಅಖಳದಿ ಫಲವೇನು ಶ್ರೀ ಗುರು ಭಕ್ತನಲ್ಲಾ | ನಿಖಿಳಾ ಭರಣಗಳಿದ್ದು ವ್ಯರ್ಥ ಮಾಂಗಲ್ಯವಿಲ್ಲಾ | ಪಿಂತಿನ ತಪ್ಪವ ನೋಡದೇ ತಡ ಮಾಡದೇ | ಸಿರದಲ್ಲಾ ಭಯ ನೀಡಿ | ಅಂತರಂಗದ ಸುಖದೆಚ್ಚರಾ ಕೊಟ್ಟ ಸಾರಥಿ | ನಾಮ ಬಿಡದೆ ಕೊಂಡಾಡಿ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
373ಶಿವನು ನೀನಾದರೆ ಶಿವನ ರಾಣಿ ನಿನಗೇನೊ ಅವಿವೇಕ ಮನುಜ ಈ ಮಾತು | ಈ ಮಾತು ಕೇಳಿದರೆ ಕವಿಜನರು ನಗರೆ ಕೈ ಹೊಡೆದು 1 374ಎಲ್ಲ ಬಂದೇ ಎಂಬ ಖುಲ್ಲ ಮಾನವ ನಿನ್ನ ವಲ್ಲಭೆಯ ಬೆರೆದು ಸಂತಾನ | ಸಂತಾನ ಪಡೆವೇಕೆ ಇಲ್ಲವೇ ಜನನಿ ಭಗಿನೇರು 2 375ಬಿಂಬವೊಂದೆ ಪ್ರತಿಬಿಂಬ ವೊಂದೆಂಬಿ ಈಶು ದ್ಧಾಂಬರದ ನೆರಳು ಕಪ್ಪಾಗೆ | ಕಪ್ಪಾದ ಬಳಿಕ ನೀ ನೆಂಬೊ ಈ ಮಾತು ಪುಸಿಯಲ್ಲಿ 3 376 ಎಲ್ಲ ಒಂದೆ ಎಂಬ ಸೊಲ್ಲು ಖರೆಯೆಂತೆನಲು ಖರೆಯೆಂಬ ಮಾತುಗಳು ಸುಳ್ಳೆನ್ನರೇನೊ ಸುಜನಾರು 4 377 ನಿಮ್ಮ ನಾ ಬೈದರೆ ನಮ್ಮ ನೀವ್ ಬೈದರೆ ಅದ್ವೈತ ಸುಮ್ಮನಿರಬೇಕು ಎಲೊ ಭ್ರಾಂತ 5 378 ಶುದ್ಧ ಬ್ರಹ್ಮನ ಸುಂಗುಣವ ಕದ್ದ ಪ್ರಯುಕ್ತ ಪ್ರ ಸಿದ್ಧ ಚೋರತ್ವ ನಿನ್ನಲ್ಲಿ | ನಿನ್ನಲ್ಲಿ ಪೊದ್ದಿತೊ ಉದ್ಧಾರವೆಲ್ಲೊ ಭವದಿಂದ 6 379 ಮಾಯವಾದಿಯ ಮತವು ಹೇಯವೆಂಬುದು ಸಿದ್ದ ತಾಯಿತಂದೆಗಳು ಸತಿಪುತ್ರ | ಸತಿಪುತ್ರರಗಲಿದರೆ ಬಾಯಿ ಬಿಟ್ಯಾಕೊ ಆಳುತಿದ್ದಿ 7 380 ಸುಳ್ಳಿಗಿಂತಧಿಕ ಮತ್ತಿಲ್ಲವೋ ಮಹಪಾಪ ಸುಳ್ಳು ಕಳ್ಳತನವು ನಿನ್ನಲ್ಲಿ | ನಿನ್ನಲ್ಲಿ ಉಂಟಾಯಿ ತಲ್ಲೊ ಜಾರತ್ವ ಇದರಂತೆ 8 381ಮೇ ಮಾತೆ ವಂಧ್ಯೆಯೆಂಬ ಈ ಮಾತಿನಂತೆ ಮು ಅಪುಸಿಯಿಂಬೀ ಮಾತುಗಳು ಭ್ರಾಮಕವೆ ಖರೆಯೊ ನಿಜವಲ್ಲ 9 382 ಶಶವಿಷಾಣಗಳೆಂದು ಒಪ್ಪುವರೆ ಬಲ್ಲವರು ಮೊಲೆಹಾಲು ಉಂಡಿತೋ ರಿಸೊ ಮಿಥ್ಯೆ ಸತ್ಯವಹುದೇನೊ 10 383ಸತ್ಯವೆಂದರೆ ಖರೆಯು ಮಿಥ್ಯೆಯೆಂದರೆ ಸುಳ್ಳು ನ್ಮತ್ತ ಈ ಮಾತು ನಿಜವೆಲ್ಲಿ 11 384ಭೀತಿ ನಿರ್ಭೀತಿ ಶೀತತಾಪಗಳೊತ್ತಟ್ಟು ನೀತವಾಗಿಹವೆ ಜಗದೊಳು |ಜಗದೊಳಿದ್ದರೆ ತೋರು ಜಾತಿ ಭೇದಗಳು ಇರಲಾಗಿ 12 385 ಜೀವೇಶರೊಂದೆಂಬ ಈ ಮಾತು ಕೇಳ್ವರಿಗೆ ಕೇವಲ ಶ್ರಾವ್ಯವೆಂದೆಂದು | ಎಂದೆಂದು ಬುಧರು ಪಶು ಗಾವಿ ನೀನೆಂದು ಕರೆಯಾರೆ 13 386 ಗುಣವಂತನೆಂಬ ಈ ಮಾತನು ಕೇಳಿ ಸುಖಿಸದವ ಮನುಜ ಪಶುಸಿದ್ಧ ಪುಸಿಯಲ್ಲ | ಪುಸಿಯಲ್ಲ ನಿನ್ನ ಮತ ಗಣನೆ ಮಾಡದಲೆ ಬಯ್ವೋರ 14 387ಮಲದ ಗರ್ತಕೆ ಶುದ್ಧ ಜಲಧಿ ಸಮಯವೆಂತೆಂಬಿ ಕಲುಷವರ್ಜಿತಕೆ ತೃಣಜೀವ | ತೃಣಜೀವ ಸರಿಯೆ ಸಿಂ ಬಳಕ ಗೋಘೃತವು ಸಮವಹುದೆ 15 388 ಐರಾವತಕೆ ಸರಿಯೆ ಕೂರಿಹೇನಿನ ಮರಿಯು ತೋರಿತೊ ನಿನ್ನ ಅಜ್ಞಾನ 16 389 ದ್ವಾಸುಪರ್ಣಾ ಎಂಬ ಈ ಶ್ರುತಿಗಳಲ್ಲಿ ವಿ ಶ್ವಾಸ ಮಾಡದಲೆ ಜೀವೇಶ | ಜೀವೇಶಕೈಕ್ಯೋಪ ದೇಶ ಮಾಡಿದವ ಚಂಡಾಲ 17 390ಅಜರಾಮರಣ ಬ್ರಹ್ಮ ಭುಜಗಭೂಷಣ ಪೂಜ್ಯ ತ್ರಿಜಗ ದೇವೇಶ ಹರಿಯೆತ್ತ | ಹರಿಯೆತ್ತ ನೀನೆತ್ತ ಅಜಗಜನ್ಯಾಯ ಪುಸಿಯಲ್ಲ 18 391 ಪಾಲುಗಡಲೊಳಗಿಪ್ಪ ಶ್ರೀ ಲೋಲ ಹರಿಯೆಲ್ಲಿ ಹೇಲುಚ್ಚೆವೊಳಗೆ ಹೊರಳುವ | ಹೊರಳಾಡಿ ಬಳಲುವ ಖೂಳ ಮಾನವನೆ ನೀನೆಲ್ಲಿ 19 392 ಕ್ಷೀರಾಂಬುಧಿಗೆ ಸರಿಯೆ ಕಾರಿಕೆಯ ಶ್ಲೇಷ್ಮ ಭಾ ಗೀರಥಿಗೆ ಸಮವೆ ಖರಮೂತ್ರ | ಖರಮೂತ್ರ ಜೀವ ಲ ಕ್ಷ್ಮೀರಮಣಗೆಣೆಯೆ ಜಗದೊಳು 20 393ಗುಣಪೂರ್ಣ ಸರ್ವಜ್ಞ ಅಣುಮಹದ್ಗತನ ನಿ ರ್ಗುಣ ಅಲ್ಪನೆನುತಿದ್ದಿ | ಎನುತಿದ್ದಿ ಹರಿಗೆ ದೂ ಷಣೆಯು ಬೇರುಂಟೆ ಇದಕಿಂತ 21 394 ಈಶ ನಾನೆನಲು ಕೀನಾಶನಿಂದಲಿ ದಣಿಪ ದಾಸನೆಂಬುವಗೆ ದಯದಿಂದ | ದಯದಿಂದ ತನ್ನಯಾ ವಾಸದೊಳಿಟ್ಟು ಸಲಹೂವ 22 395ಈಶತ್ವ ವೆಂಬುದು ಲಕುಮೀಶಗಲ್ಲದೆ ಜೀವ ರಾಶಿಗಳಿಗುಂಟೆ ಈ ಶಕ್ತಿ | ಈ ಶಕ್ತಿ ಸತ್ವಗುಣ ಈಶ ಬಿಟ್ಟಿಹನೆ ಜಗದೊಳು 23 396 ಉದ್ಗೀಥಶ್ರೀ ಪ್ರಾಣ ಹೃದ್ಗತನು ಜಗದೇಕ ಸದ್ಗುರುವರೇಣ್ಯನೆನುತಿಪ್ಪ | ಎನುತಿಪ್ಪರಿಗೆ ಯಮ ಗದ್ಗದನೆ ನಡುಗಿ ನಮಿಸುವ 24 397 ಸ್ವಾಮಿ ಭೃತ್ಯನ್ಯಾಯ ಈ ಮಾತಿನೊಳಗುಂಟು ಗ್ರಾಮಧಾಮಗಳು ಇದರಂತೆ | ಇದರಂತೆ ನೋಡಿಕೊ ನೀ ಮಾತ್ರ ನುಡಿಯೆ ಸಾಕೆಂಬೆ 25 398ಈಶ ನಾನೆಂದವನ ಶ್ವಾಸ ಬಿಡಗೊಡದೆ ಯಮ ಸೆಳೆದೊಯಿದು ನರಕದೊಳು ಘಾಸಿಗೊಳಿಸುವನೊ ಬಹುಕಾಲ 26 399 ಮಾತಾ ಪಿತರ ದ್ರೋಹಿ ಬಂಧು ಘಾತಕ ಬ್ರಹ್ಮ ಘಾತಕನು ನೀನು ಪುಸಿಯಲ್ಲ | ಪುಸಿಯಲ್ಲ ಶ್ರೀ ಜಗ ನ್ನಾಥ ವಿಠಲನೆ ನಾನೆಂಬಿ 27
--------------
ಜಗನ್ನಾಥದಾಸರು
3ಕಾಯೇ ಕಮಲಾಲಯೇ ಮಧು ಮಥನ ಸತಿಯೆ ಪ ಕಾಯಜಾತನ ತಾಯೆನಮಿಸುವೆ ಕಾಯೆ ತ್ರಿಜಗಕೆ ತೋಯ ಜಾಂಬಕಿ ಅ.ಪ ತೋಯಜಾಸನ ಮುಖ್ಯ ತ್ರಿದಶ ನಿ ಕಾಯ ಸಂಶೇವಿತಳೆ ಬೇಡುವೆ ಹೇಯ ವಿಷಯವ ಮರಸಿ ಹರಿಪದ ತೋಯಜಕೆ ಮನವೆರಗುವಂದದಿ 1 ಘೋರತರ ಸಂಸಾರ ಶ್ರಮ ಪರಿ ಹಾರ ಮಾಳ್ಪ ಸಮೀರ ಸಮಯದಿ ಸಾರವನು ಸುಜನರಿಗೆ ಬೋಧಿಪ ಸೂರಿಗಳ ಸಹವಾಸ ಪಾಲಿಸಿ 2 ಭಾರ್ಗವಿಯೆ ಕಾಮಾದಿ ಷಡ್ರಿಪು ವರ್ಗವನು ಗೆಲುವದಕೆ ಗುರುಗಳ- ನು ಗ್ರಹಿಸಿ ಸುಜ್ಞಾನ ಭಕುತಿ ವೈ ರಾಗ್ಯ ವೆಂಬುವ ಭಾಗ್ಯ ಒದಗಿಸಿ 3 ರಾಮನರಸಿಯೆ ನಿಮ್ಮ ಶುಭಪದ ತಾಮರಸವನು ಬಿಡದೆ ಪೂಜಿಪ ಕಾಮಿನೀ ಜನ ಸ್ತೋಮಕನುದಿನ ಕಾಮಿತಾರ್ಥಗಳಿತ್ತು ಕರುಣದಿ 4 ಮಂಗಳಪ್ರದ ಕೃಷ್ಣವೇಣಿ ತ- ರಂಗ ಶೋಭಿತ ಕಾರ್ಪರಾಲಯ ವಿಹಂಗ ರಾಜ ತು ರಂಗ ಶ್ರೀ ನರಸಿಂಗ ನರಸಿಯೆ5
--------------
ಕಾರ್ಪರ ನರಹರಿದಾಸರು
ಅತ್ಯಾಸೆಪಡಬೇಡ ಅಸ್ಥಿರ ಸಂಸಾರ ಮತ್ತನಾಗದಿರೆಲವೊ ಪ ವೆತ್ಯಸ್ತ ಸ್ಥಿತಿಯಿಂದಾನಿತ್ಯಾ ಶರೀರವಿದು ಅ.ಪ ಜನರಾಡುವುದು ಕೇಳಿ ಮನಕೆ ಬಂದುದ ಕೋರಿ ಅನುಮಾನ ಚಿತ್ತನಾಗಿ ವನಿತೆಯರ ಬಲೆಯೊಳು ಸಿಲುಕಿ ಮೋಹಭ್ರಾಂತಿ ವಶನಾಗಿ ಧರ್ಮಾಧರ್ಮಗಳ ತಿಳಿಯದೆ 1 ಹೇಯ ಸುಖವ ಬಯಸಿ ಆಯಾಸ ಪಡುತಲಿ ಬಾಯ ಬಿಡುತ ಸತತ ನೋಯುತಾ ನುಡಿಯುತ ಕ್ರೋಧ ಲೋಭದಿ ಮುಳುಗಿ ನಾಯಿಯಂದದಿ ತಿರಿಗಿ ನಾನಾ ವಿಧದಲಿ 2 ದಾನಧರ್ಮಗಳಿಲ್ಲ ಜ್ಞಾನಸತ್ಯಗಳಿಲ್ಲ ಧ್ಯಾನವು ಮೊದಲೇ ಇಲ್ಲ ಮಾನಾಭಿಮಾನ ಅಜ್ಞಾನದಿ ಮುಳುಗಿ 3 ಪರರೊಡೆವೆಯ ತಂದು ಒಡಲ ಹೊರೆಯುತಲ- ನೆರೆಹೊರೆ ನೋಡಿ ಅವರಂತೆ ನಾನಿರಬೇಕೆಂದ 4 ಕರ್ಮ ಭಿನ್ನಇವರಿಗೆಲ್ಲ ಮುನ್ನಿನ ಕರ್ಮದಿ ಫಲ ಬೆನ್ನಬಿಡದು ಎಂದು ಪೇಳುವ ಶಾಸ್ತ್ರಗ- ಳನ್ನು ನಂಬದಲೆ ನಿನ್ನನ್ನೆ ನೀ ಪೊಗಳಿ ಕೊಂಡು 5 ನ್ಯಾಯಾರ್ಜಿತ ದ್ರವ್ಯದಿಂದ ಕಾರ್ಯಗಳವು- ಪಾಯದಂದಲಿ ನಡೆಸಿ ತಾಯಿ ಮಕ್ಕಳ ನೋಡುವಂತೆ ದೀನರಿಗೆ ಸ- ಹಾಯ ಮಾಡುತ ಜ್ಞಾನಿಗಳ ಸೇವಿಸುತಿಹರು 6 ಪೊರೆವೊ ಭಾರಕರ್ತ ಗುರುರಾಮವಿಠಲ ತಾ ಶರಣಾದವರಿಗೆ ಭಯವೇನು ಸ್ವಾಮಿ ಸರ್ವರ ಪಾಲಿಸುವನು ನಿನ್ನನು ಮಾತ್ರ ಬಿಡುವನೆ 7
--------------
ಗುರುರಾಮವಿಠಲ
ಅಹಹ ಮೋಸ ಹೋದೆನಯ್ಯ ಹರಿಯೆ ನಿನ್ನ ನೆನೆಯದೆ ಪ ಇಹದ ಭೋಗ ನಿತ್ಯವೆಂದು ಮೆರೆದೆ ನಿನ್ನ ನೆನೆಯದೆ ಅ ಹೇಯವಾದ ದೇಹವನ್ನು ಶ್ಲಾಘನೀಯವೆಂದು ನಾಲ್ವರೊಡನುಪಾಯದಿಂದ ಹೇಮದಂತೆ ಬಣ್ಣಗಟ್ಟಿಬಾಯ ಬಡಿದು ತಂದು ತಂದುಕಾಯ ಕಳದೆನಲ್ಲದೆ 1 ಚಂಚಲತ್ವ ಬಲವು ಫಲವು ಜಾಲ ಕೋಪ ತಾಪದಿಂದವಂಚನಾರ್ಥ ಹಲವು ಕೆಲವು ಮಿಂಚಿನಂತೆ ಸುಳಿಸುತಸಂಚುಮಾಡಿ ಕಾಲನವರ ವಂಚನೆಗಳ ತಿಳಿಯದ್ಹೋದೆಪಂಚಬಾಣನಯ್ಯ ಕಾಯೊ ಎನ್ನವಗುಣಗಳನೆಣಿಸದೆ2 ದಿಕ್ಕುದೆಸೆಯದಾರೊ ಅಕ್ಕರದಿಂದಾರ ಕರೆವೆಉಕ್ಕಿ ಸವಿದು ಮನುಜರೊಡನೆಸೊಕ್ಕಿ ದಿನವ ಕಳೆದೆನೆನಗೆತಕ್ಕುದಾಯಿತಯ್ಯ ಕೇಳು ಒಡೆಯ ಆದಿಕೇಶವ3
--------------
ಕನಕದಾಸ
ಆರು ಕೊಟ್ಟರು ಕೊಟ್ಟರಾರುಂಡರಾರಿಲ್ಲಿಬೇರೆ ನಾ ನೀ ನಾನೆಂದು ಕೆಡುವುದೀ ಲೋಕ ಪಕಾಲ ಚ್ಟೇಸಿತು ಕರ್ಮವು ಕೊಟ್ಟಿತೀ ಕಿವಿಗಳಾಲಿಸಿತು ಕಂಡಿತಕ್ಷಿಗಳೆಂದಿತಂಘ್ರಿಲೀಲೆಯಲಿ ಕೈಪಿಡಿಯುತಾ ಘ್ರಾಣಿ ಘ್ರಾಣವೀ ಲೋಲ ಚಿತ್ತವನುಸಂಧಾನಗೆಯ್ತು 1ಪ್ರಾಣ ಒಳಕೊಂಡಿತನ್ನವನು ಸಂಕಲ್ಪಿಸಿತುದೀನ ಮನಮತಿಗೆ ನಿಶ್ಚಯವಾುತೂತಾನಿದರೊಳಾರು ಕೊಂಬವನೊ ಕೊಡುವನೊ ದುರಭಿಮಾನದಿಂ ಕೆಡುತಿಹರು ನೀನು ನಾನೆಂದು 2ಭಾನು ಜಲದಲಿ ಪೊಳೆಯಲದರ ಕಂಪಾದಿಗಳುಭಾನುವಿನದೆಂದು ಭ್ರಮಿತರು ಬಗೆವ ತೆರದಿಜ್ಞಾನಮಯ ನಾದಾತ್ಮ ಹಮ್ಮಿನೊಳ್ಪೊಳೆಯಲಜ್ಞಾನದಿಂದೀ ರಾಸಿ ನಾನೆನ್ನುತಿಹರೊ 3ಈಯನಿರ್ವಚನೀಯ ಜೀವತ್ವವೆಂದರಿದುಕಾಯದಲಿ ಕೂಟಸ್ಥ ಸತ್ಯವೆಂದೂಮಾಯದಿಂದ ತೋರಿ ತಾನೀ ವಿಶ್ವಪುಸಿ ಎಂದುಹೇಯ ಭೋಗದಲನಾಸಕ್ತನಾಗಿರದೆ 4ತಾನು ನಿರ್ಲೇಪನೆಂದರಿಯದೆ ಶರೀರಾಭಿಮಾನದಿಂ ಗೋಪಾಲ ಯತಿಯ ಚರಣವನೂಸಾನುರಾಗದಲಿ ಸೇವಿಸದೆ ಮಿಥ್ಯಾವಿಷಯದೀನತೆಯನೈದಿ ರಾಗಾದಿಗಳ ಬಿಡದೆ 5
--------------
ಗೋಪಾಲಾರ್ಯರು
ಇದಕು ಸಮ್ಮತನಾಗೆಲೋ ನೀ ನದಕುನು ಸಮ್ಮತನಾಗೆಲೊ ಪ ಇದು ಅದು ಎಂಬುದರ್ವಿಧವ ತಿಳಿದು ನೀ ನೆದಕುನು ಸಮ್ಮತನಾಗೆಲೊ ಅ.ಪ ಕಡುಸಿರಿಯೆಂಬುದು ಮರವೆಕುಣಿ ಬಡತನವೆಂಬುದು ಅರಿವಿನಮನೆ ಒಡೆತನವೆಂಬುದು ಪಾಪದ ಗೋಣು ದುಡಿತವೆಂಬುವುದು ಜ್ಞಾನದ ಖನಿ ದೃಢದಿಂದರಿದು ಹುಡುಕಾಡಿದರೋ ಳ್ಹಿಡಕೋ ನಿನಗೆ ಹಿತವಾವುದು ನೋಡಿ1 ಕೆಟ್ಟ ಸಂಸಾರ ಹೇಯಮೂತ್ರ ಕುಣಿ ನಿಷ್ಠೆ ಭಕ್ತಿ ಆನಂದಾಮೃತ ಖಣಿ ದುಷ್ಟಜನರ ಸಂಗ ನರಕಕುಣಿ ಶಿಷ್ಟ ಸಜ್ಜನಸಂಗ ಮುಕ್ತಿಮನೆ ನಿಷ್ಠೆಯಿಂದರಿತು ಇಷ್ಟರೊಳಗೆ ನೀ ಇಷ್ಟಕೆ ಬಂದದ್ದು ಹಿಡಕೋ ನೋಡಿ 2 ನರರ ಸೇವೆ ಮಹ ದುರಿತಬೇರು ಶರಣರ ಸೇವೆ ಸ್ಥಿರಸುಖದ ತವರು ಬರಿದೆ ಕೆಡದೆ ಹರಿಚರಣ ಕೋರು ಮರುಳು ಗುಣಗಳೆಲ್ಲ ತರಿದು ತೂರು ಧೀರ ಶ್ರೀರಾಮನ ಚಾರುಚರಣ ಸೇರಿ ಪರಮಪದವಿಯೊಳು ಲೋಲ್ಯಾಡು 3
--------------
ರಾಮದಾಸರು
ಇನ್ನಾರ ಭಜಿಸಲೈಯ್ಯಾ|ಯನ್ನ ಗತಿ ಮುಕುತಿದಾಯಕ ರಂಗ ನೀನಿರಲು ಪ ಸ್ನಾನಪಾನಕಬಪ್ಪ ಸುರನದಿಯನೇ ತ್ಯಜಿಸಿ ಹೀನ ಸರಿತೆಗಳಲ್ಲಿ ಮುಣುಗುವರೇ ಏನ ಬೇಡಿದ ನೀವ ಸುರ ಭೂಜ ಇದಿರಿಡಲು ಕಾನನದ ಶಾಲ್ಮಲಿಯ ಫಲವ ನರಸುವಂತೆ 1 ಕಾಮಧೇನು ಮನಿಗೆ ಬರಲು ಕರೆ ಕೊಳ್ಳದೇ ಆ ಮೊಲದ ಹಾಲವನು ಬಯಸುವಂತೆ ಕಾಮಿತಾರ್ಥವ ನೀವ ಚಿಂತಾ ಮಣಿಯಿರಲು ಪ್ರೇಮದಿಂದಲಿ ಕಾಜು ಮಣಿಯ ನರಸುವಂತೆ2 ತಾಯ ಮಾರಿಯ ತೋತ್ತು ಕೊಂಬಂತೆ ಸಿರಿಯಸುಖ ದಾಯಕ ನಿನ್ನ ಮರದನ್ಯಕೆರಗೀ ಹೇಯ ವೃತ್ತಿಗೆ ಬೆರೆವದುಂಟೇ ನಿನ್ನವನೆನಿಸಿಕಾಯೋ ಭಕುತಿಯ ನಿತ್ತು ಗುರು ಮಹಿಪತಿ ಸ್ವಾಮಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಷ್ಟು ಮಾಡಿ ಕೈ ಬಿಟ್ಟು ಕೂಡ್ರುವದು ಶಿಷ್ಟರ ನಡತೆಲ್ಲೆಲ್ಲೂ ಗುರುವೇ ಬಲು ಕಷ್ಟದೊಳಗೆ ನಾ ಮುಳುಗಿರುವೆ ನೀ ಕೊಟ್ಟ ಅಭಯದಿಂ ಬದುಕಿರುವೆ ಸಿಟ್ಟು ಮಾತ್ರ ನೀನಾಗ ಬೇಡ ಪೊರೆ ಜಿಷ್ಣುಸಾರಥಿಯ ಪ್ರೀಯ ಮಗುವೆ ಬಾ ಬಾ ಗುರುವೆ ಪ ಇತ್ತರು ಸರಿಯಿಲ್ಲ ಈ ಮಾತು ಹೊರಗೆ ಪೇಳುವವಲ್ಲಾ ನಾ ನಿದ್ದೆ ಪೂರ್ವದಲಿ ಅತಿ ಖುಲ್ಲಾ ಶಿಲೆಯನು ಸುಂದರ ಮೂರ್ತಿಗೈದತೆರ ಬಲು ವಿಧದಲಿ ಸಲಹಿದಿಯಲ್ಲ ಹರಿಬಲ್ಲಾ ಜ್ಞಾನವಿತ್ತಿ ಹರಿಪಾದದಲ್ಲಿ ಅಭಿಮಾನವಿತ್ತಿ ಸುಖವೆಲ್ಲಾ ಬಲುಹೇಯವೆಂದು ತಿಳಿಸಿದಿಯಲ್ಲಾ ಮೇಲ್ವರದಿ ರಂಗನೊಲಿಯುವ ಸೊಲ್ಲಾ ಅಸನ ವಸನಗಳು ಕೊಟ್ಟು ಕೊನೆಗೆ ತುಚ್ಛಿಸುವ ನಿನ್ನ ಗುಣ ತಿಳಿಯಲಿಲ್ಲಾ ಇದು ಥsÀರವಲ್ಲಾ ನಿನ್ನ ಪಾದವೇ ಸಡಗರ ಸಿರಿ ಮೇಲೆ ಸುರಪುರಿ ಜ್ಞಾನನಿಧಿ ಥsÉರಿ ಕಾಶಿ ಗಯಾ ಮಧುರಿ ಹರಿ ಓಂ ಓಂ ಓಂ ನಿನ್ನ ನಾಮ ದುರಿತವೆಂಬೊ ಕರಿ ಕುಲಕೆ ಘನ ಹರಿ ಪರಿ ತಿಳಿದೆನೆಲೊಧೊರಿ ಹರಿ ಓಂ ಓಂ ಓಂ ಇನ್ನಾದರು ಕೋಪವತ್ವರಿ ಕರುಣಿ ಕಣ್ತೆರಿ ಸುತಗೆ ಸುಖಗರಿ ತೋರೋ ನಿನ್ನ ಮಾರಿ ಹರಿ ಓಂ ಓಂ ಓಂ ಎನ್ನಯ ಬಿsÀಷ್ಟಗಳನ್ನು ನೀಡದಿರೆ ನಿನ್ನ ವಿಮಲ ಕೀರ್ತಿಗೆ ಗುರುವೆ ಕುಂದನ್ನು ಬಿಡದೆ ತಿಳಿ ನಾ ತರುವೆ ಸಿಟ್ಟು ಮಾತ್ರ ನೀನಾಗ ಬೇಡ ಪೊರೆ ಜಿಷ್ಣು ಸಾರಥಿಯ ಪ್ರಿಯ ಮಗುವೆ ಬಾ ಬಾ ಗುರುವೆ 1 ಪಂಥವೇ ಹೇ ಮಹಾಕಾಂತ ಪ್ರಿಯ ನಿನ್ನ ಸಂತತಿಯೊಳು ಸೂರಿಗಳೊಡೆಯ ನೀನೆಂತು ಪೊಂದಿದೈ ನಿರ್ಭಿಡಿಯಾ ಇದು ಸಂತರು ಕೇಳಿದರಾಶ್ಚರ್ಯ ವಂತರು ಆಗರೆ ಸಾಕು ಮುಂದೆಯನ್ನಂತರಂಗವೇ ತವನಿಲಯ ಆಗಲಿ ಜೀಯಾ ಕಂದನ ಕಾಯುವದಂತು ಸಹಜ ಸಿರಿ ಹಿಂದಕೆ ಪಾಂಡವನೆಂಭಿರಿಯಾ ಆ ಗಂಧರ್ವನ ಮಗನಾದ ಗಯಾ ತಾ ಬಂದು ಹೋಗಲವನನು ಮೊರೆಯ ಸಿಂಧು ಜಪನ ಸಹ ಲಕ್ಷಿಸದಲೆ ತ್ವರ ತಂದು ಕೊಟ್ಟನವನಿಗೆ ವಿಜಯಾ ಮೇಲ್ಹರಿಯದಯಾ ಇದು ಅಲ್ಲದೆ ಬಹು ಭಕ್ತರು ಜ್ಞಾನಯುಕ್ತರು ಸುಧಿಯ ಭೋಕ್ತರು ನೆನೆದವರ ದು:ಖ ಬಿಡಿಸಿದರು ಸುಧೆಯ ಬಡಿಸಿದರು ಹರಿ ಓಂ ಓಂ ಓಂ ಬಲು ಹಿತದಿ ಶುಭವ ಕೋರಿದರು ತಾಪ ಹೀರಿದರು ವಾಕ್ಯ ಸಾರಿದರು ಹರಿಯ ತೋರಿದರು ಹರಿ ಓಂ ಓಂ ಓಂ ನೀನಾದರೂ ಬಹಳರ ಪೊರದಿ ಈ ಹೀನ ಓರ್ವ ನಿನ್ನಗೆಯರವೆ ಮರಿಯಬ್ಯಾಡ ಕರುಣೆ ಕರವ ಮುಗಿವೆ ಸಿಟ್ಟು ಮಾತ್ರ ನೀನಾಗ ಬೇಡ2 ಪರ ಖರೆ ಗುರುವಿಲ್ಲದ ಗತಿಯನ್ನು ಧರೆತ್ರಯದಿ ತೋರು ತುಸು ನೋಡೋಣ ಗಿರಿಧರಿಯ ಬಿಟ್ಟು ನಿಲ್ಲುವುದೇನು ಗುರುವೆ ತ್ರಿಟಿಯ ಬಿಟ್ಟೊರುಷವಾಗುತದೆ ಹಿರಿಯರಿ ಪೇಳ ವದಿನ್ನೇನು ಹೇ | ಸುರಧೇನು ಗುರುವೆ ಸುಖದ ಖಣಿ ಗುರುತನುಮಣಿ ಮಣಿ ತಿಳಿದೆ ನಾ ಮನದಾಗೆ ಪರಕಿಸಿದೆನ್ನನು ಪೊರೆಯೆ ಯನುತ ಬಾ ಯ್ತೆರೆಯುತ ಮಣಿಸುವೆ ಶಿರನಿನಗೆ ಮೂಜಗದಾಗೆ | ನಿನ್ನಿಂದ ಎನಗೆ ಸದ್ಬುದ್ಧಿ ಯೋಗದಾಸಿದ್ಧಿ ಕಾರ್ಯದಾಸಿದ್ಧಿ ಸ್ವರ್ಗದಾಸಿದ್ಧಿ ಹರಿ ಓಂ ಓಂ ಓಂ ನಿನ್ನಿಂದ ಪಡೆದ ವಿಜ್ಞಾನ ಹರಿಯರಾ ಖೂನಾ ಲೋಕದೊಳು ಮಾನ ಮುಕ್ತಿ ಸೋಪಾನ ಹರಿ ಓಂ ಓಂ ಓಂ ನೀನೇವೆ ಯನಗೆ ಆಭರಣ ಝಗಝಗಿಪ ವಸನ ಶ್ರೀಹರಿಯ ಚರಣ ವಿರಜಾನದಿ ಸ್ನಾನ ಹರಿ ಓಂ ಓಂ ಓಂ ನಿನ್ನೊಮ್ಮೆ ನೆನಸೆ ಪವಮಾನ ಕಾಯ್ವ ಪ್ರತಿದಿನ ಇದಕೆ ಅನುಮಾನ ಇಲ್ಲ ಏನೇನ ಹರಿ ಓಂ ಓಂ ಓಂ ಗಡ ಕೇಳ್ವಡೆಯನೆ ಕಡೆ ನುಡಿಯನ್ನದು ಭಿಡೆಯ ಇಡದೆ ನಾನುಡಿವೆ ಎನ್ನ ಮರೆತರೆ ಮಂಗನು ನೀ ನಿಜವೆ 3
--------------
ಅಸ್ಕಿಹಾಳ ಗೋವಿಂದ
ಎಂತು ಗತಿ ಎನಗಾಗುವದೊ ಶ್ರೀ | ಕಾಂತ ನಿನ್ನ ಭಕುತಿಯ ಕಾಣೆ ಪ ಸಂಸಾರ ಎಂಬುದು ಸುಖವೆಂದು ನಾನು | ಹಂಸನಂತೆ ನಲಿಯುತ್ತಲಿದ್ದೆ | ಕಂಸಾರಿ ನಿನ್ನ ನಾಮಸ್ಮರಣೆ ಒಳ್ಳೆ | ವಂಶರ ಕೂಡ ನಲಿಯಲಿಲ್ಲಾ 1 ಪಾತ್ರರ ಕಂಡರ ಪರಿಹಾಸ್ಯ ಕು | ಪಾತ್ರರ ನೋಡಲವರ ಶಿಷ್ಯಾ | ಕ್ಲೇಶ ಎನ್ನ | ಗಾತ್ರಗೋಸುಗ ಪೋಗೆ ಬಲು ತೋಷಾ 2 ವಿರಕ್ತಿ ಕೇಳಲು ತಲೆಶೂಲೆ ವಿ | ಹಾರ ಮಾಡುವಲ್ಲಿ ಅನುಕೂಲೆ | ವಾರಿಜಾಕ್ಷ ನಿನ್ನ ಕಥೆ ಬಿಡುವೆ ಬಹು | ಚಾರುವಾಕರ ಕೂಡ ಸುಖಬಡುವೆ 3 ಕಾಸು ಪ್ರಾಪುತವಾಗಿ ಬಚ್ಚಿಡುವೆ ಅದೆ | ಕಾಸು ಬೇಡಿದರೆ ಪ್ರಾಣವ ಕೊಡುವೆ | ಮೋಸ ಬುರುವದು ಕಾಣೆನಲ್ಲಾ ದು | ರಾಶೆಯಿಂದಲಿ ಬಾಳಿದೆನಲ್ಲಾ 4 ವೈಕುಂಠದಾಸರು ಬರೆ ಕುಗ್ಗುವೆನೊ | ಕುಂಟತನಕೆ ಬಹು ನಲಿದಾಟಾ ಗತಿ | ಉಂಟಾದದಕೆ ಉಚ್ಚಾಟ5 ತಂದೆ ತಾಯಿಗಳಲ್ಲಿ ವಂಚನೆ ಹೀನ | ಮಂದಿಕೂಡಾಪ್ತಾಲೋಚನೆ | ಕುಂದು ನುಡಿದೆ ಸಜ್ಜನರಿಗೆ ಆ | ನಂದ ಬಡಿಸುವೆ ದುರ್ಜನರಿಗೆ 6 ಹೆಂಡತಿ ಮುನಿದರೆ ಬೇಡಿಕೊಂಬೆ ಹರಿ | ಕೊಂಡರು ಮುನಿದರೆ ಪೋಗಲೆಂಬೆ | ಕೊಂಡು ಬಾಹ್ಯನೆ ಪರರವಡಿವೆ | ಪರರ ಕಂಡರೆ ಬೇಡವೆಂದು ನುಡಿವೆ 7 ಮಕ್ಕಳು ಹಸ್ತರೆ ಬಳಲುವೆನೊ ಭೂದೇ | ವಕ್ಕಳು ಹಸ್ತರೆ ನಗುವೆನೊ | ಮುಕ್ತಿಗಾಗುವ ನಾನಾ ಶ್ರವಣ ನೀಚ | ಉಕ್ತಿಗೆ ಮಾಡಿದೆ ಅನುದಿನಾ 8 ಜೀವನಕ್ಕೆ ಬೇಕಾದದೆ ಮಾಣಿದು | ಅಭಾವಾ ಮಾಡೆನು ನೀಚರ ಸೊಲ್ಲು9 ಹರಿ ನಿನ್ನ ಶುಚಿಮಾಡೆ ಹೀನ ನರರ ದೊಂಬಲು ತೆಗಿಯದೆ ಬಿಡೆ | ಅಗ್ರೋದಕ ತಾರೆ ನೀರು | ಹೊರುವೆನೊ ಹಣವೆಂದರೆ ಮಾರೆ 10 ಗಂಡಿಕಿಸಿಲಿ ತೊಳೆಯಲಿ ಮಿಡಿಕಿ ನಾನು | ಅಂಡವಲಿವೆ ಅಶನ ಹುಡುಕಿ | ಅಂಡಜವಾಹನ ನಿನ್ನ ಸೇವೆ ಕೈ | ಕೊಂಡು ಮಾಡದೆ ಪೋದೆ ಹೀಗೆವೆ11 ಗಂಧವ ತೆಗೆ ಎಂದರೆ ಅಳುವೆ | ಬಿದ್ದ | ಮಂದಿರಕೆ ಕದಡುತಳುವೆ | ಒಂದು ತುಲಸಿದಳ ತರಲಾರೆನೆಂದು | ಸಂದಿಗೊಂದಿ ಸುತ್ತಿದೆನೊ ದೊರೆ 12 ಧೂಪಾರತಿ ಏಕಾರುತಿ | ಮೂರ್ತಿ | ಪಾಪಾತಿಶಯದಿಂದಾ ನೋಡಲಿಲ್ಲ ಬಹು | ತಾಪತ್ರಯದಿಂದ ನೊಂದೆನಲ್ಲಾ 13 ಸಿರಿ | ದೇವನಿಗೆ ಯಿತ್ತು ಸುಖಬಟ್ಟು | ಆವಾವ ರುಚಿಗಳ ಭುಂಜಿಸದೆ ನಾನು | ಪಾವನಮತಿಯಾಗದೆ ಪೋದೆ 14 ಎಳೆದುಲಸಿ ನಿರ್ಮಾಲ್ಯವಾಸವಾ || ಬಳಿಯಲ್ಲಿಯಿಟ್ಟು ಕೈವಲ್ಯವಾ | ಘಳಿಸಿಕೊಳ್ಳದೆ ಬಲು ದುರ್ಗಂಧ ಬಂದು | ಭವ ಬಂಧಾ 15 ಹರಿಕಥೆಗೆ ಮೊಗ ತಿರುಹುವೆನೊ | ................................................... ಸ್ಮರಣೆ ಮಾಡುವಲ್ಲಿ ಅತಿ ಹೇಯಾ ದುರಾ | ಚರಿತೆಯ ಮಾಡುವಲ್ಲಿ ಬಲು ನ್ಯಾಯಾ 16 ಹರಿದಾಸರನಪ್ಪಿಕೊಳ್ಳದೆ ಪಾ | ಮರ ಸತಿಯೊಳನಪ್ಪ ತಾ ಪೊಳದೆ | ಧರೆಯೊಳು ನಾನು ನಡಿವಂಥ ಇಂಥಾ | ದುರುಳಾಟಕೇನೆಂಬೆ ಗುಣವಂತಾ 17 ನಿನ್ನಂಘ್ರಿಗೆ ಅಡ್ಡಬೀಳದೆ ತುತ್ತು | ಅನ್ನಕೆ ಎರಗುವೆ ಸೋಲದೆ | ಅನ್ಯಾಯ ಮಾಡುವಲ್ಲಿ ಆನಂದಾ ಸತಿಸ | ತ್ಪುಣ್ಯ ಮಾಡುವಲಿ ನಿಭಂಧಾ 18 ಸಾಧುಗಳೊಡನೆ ತಾಳುವೆ ದ್ವೇಷಾನಿತ್ಯ | ಕ್ರೋಧರ ಕಂಡರೆ ಬಲು ಹರುಷಾ | ಓದನಕೆ ವೇದವನೋದಿ ತಂದು | ವಾದಿಸುವೆನು ಸಭೆಯಲಿ ಕಾದಿ 19 ಸತಿಯಳ ಸಂಬಂಧಿಗಳ ಸಾಕುವೆನೊ ಮಾತಾ | ಪಿತರ ಕಡೆಯವರ ನೂಕುವೆನೊ | ಕರ್ಮ ಮಾಡೋರ ನೋಡಿ ಹೀನ | ವಕ್ರದವರು ಕಂಡು ಬಲು ಪಾಡಿ 20 ಪರಿ ಪರಿ ಹೊಸ | ಕೌತುಕ ಪೇಳೂವೆ ನೋಡಿರಿ | ಶ್ರಾತಾದಿಗಳು ಎಲ್ಲಿ ಧಿಕ್ಕರಿಸಿ ಯಿಂಥ | ಭೌತಿಕ ನೆಚ್ಚಿದೆ ಅನುಕರಿಸಿ 21 ಒಡಿವಿ ಮಾಡಿಸಿ ಮಡದಿಗೆ ಇಡದೆ ಅನ್ಯ | ಮಡದಿಯರಿಗೆ ಧನ ಸೂರೆವಿಡಿದೆ | ಬಡವರ ಕಂಡರೆ ಅಣಕಿಸುವ ಭಾಗ್ಯ | ಪಡದವರಿಗೆ ಬಾಗಿ ನಮಿಸುವೆ 22 ಧರ್ಮಕ್ಕೆ ಅಸೂಯಾ ಬಡುವೆ ಅ | ಧರ್ಮಕೆ ಹಿಗ್ಗಿ ಸುಖವ ಬಡುವೆ | ಷ್ಕರ್ಮಿಗಳ ಕೂಡಾಮಾನತನಾ 23 ವಿಧಿ ನಿಷೇದವನೆಣಿಸದಲೆ ನಾನು | ಉದರ ತುಂಬಿದೆ ಭೀತಿ ಗಣಸದಲೆ | ವದಗಿ ಬೀಳುವ ನರಕದ ಬಾಧೆ ಕೇಳಿ | ಹದುಳಕ್ಕೆ ಮನಮಾಡದೆ ಪೋದೆ 24 ಯಜಮಾನ ನಾನೆಂದು ಪೇಳಿಕೊಂಡು ದೋಷ | ವ್ರಜದಲಿ ಚರಿಸದೆ ದು:ಖವುಂಡು | ಇಂದು | ಸಿಂಧು 25
--------------
ವಿಜಯದಾಸ
ಎಂತು ಬಿನ್ನೈಸಲೊ ಮುರಾರಿ ಸಾರಿಗೆ ಸಾರಿ | ಸಂತ ಜನರ ಆಧಾರಿ ಪ ಶ್ಲೋಕ - ಘನ ಅನವರತÀ ಕಾಯಾ | ಸ್ವಾಮಿ ಲಕ್ಷ್ಮೀ ಸಹಾಯ | ಅನಿಮಿಷ ಮುನಿಗೇಯಾ ಹೇಯ ಧರ್ಮ ವಿಹಾಯ | ನಗರ ನಿಲಯಾ | ಅಮಿತÀ ಆನಂದ ಕಾಯಾ | ನಾಗ ತಲ್ಪೋರು ಗಾಯಾ 1 ಪದ - ಶರಣು ಶರಣು ಶಾರಣ್ಯನೆ | ಗುಣ ಗುಣ್ಯನೆ | ನಮಗಾನನ್ಯನೆ | ನಿರುತರಂತರ ಕಾರುಣ್ಯನೆ ಪ್ರದದಾನ್ಯನೆ | ಅಪ್ರತಿ ಧನ್ಯನೆ | ಪರಮ ಪುರುಷ ಅಸಮಾನ್ಯನೆ | ಮಹ ಪುಣ್ಯನೆ | ಪ್ರಳಯ ಕನ್ಯೆನೆ | ಕರುಣ ಸಾಕ್ಷಿಗನೆ ಲಾವಣ್ಯನೆ | ಅನುಗಣ್ಯನೆ ಪ್ರಾಕೃತ ಶೂನ್ಯನೆ 1 ಶ್ಲೋಕ - ಪರಿಪರಿ ಹೇಯ ಗಾತ್ರಾ ತೆತ್ತನೊ ಇಷ್ಟ ಮಾತ್ರಾ | ಚರಿಸಿದೆ ವಿಷಯ ಯಾತ್ರಾ | ಪಾರಗಾಣೆನೋ ಮಿತ್ರಾ | ಕೊರಳಿಗೆ ಮಮತೆ ಸೂತ್ರಾ | ಉರುಲು ಬಿದ್ದಿದೆ ಚಿತ್ರಾ | ಸುರಕು ಬಡಿಪ ತನುತ್ತಾ | ಕಮಲ ನಿನೇತ್ರಾ | 2 ಪದ - ನರಕ ನರಕ ಉಂಡು ಬೆಂದೆನೊ | ಇಲ್ಲಿ ನಿಂದೆನೊ | ಗತಿಗೆ ಮುಂದೇನೊ | ಕುರುಡ ಕಿವುಡನಾಗಿ ನೊಂದೆನೊ | ಇನ್ನೊಂದೇನೊ | ಉಪಾಯವಂದೆನೊ | ಮರಹು ಸಾಗರದೊಳು ಸಂದೆನೊ | ಅಂದು ಹಿಂದೆನೊ | ಸುಜನರಿಗಂದೇನೊ 2 ಶ್ಲೋಕ - ಸುಲಲಿತ ರುಚಿರಪಾಂಗಾ | ಶುದ್ದ ಸ್ವಭಾವÀ ರಂಗಾ | ಪಲಿಪರಮಾಣು ಸಂಗಾ | ಪಾವನ ಕೋಮಲಾಂಗಾ | ವೊಲಿಸಿದವರ ಭಂಗಾ | ಪರಿಸುವ ಶಿಂಗ ಶಿಂಗಾ | ವರಬಲಗುಣ ತರಂಗಾ | ಸರಸಿಜ ಹೃತ್ಪುಂಗಾ3 ಪದ - ಚಿಂತಿಸುವೆನೊ ನಿನ್ನ ವಿಗ್ರಹಾ | ಮನೋನಿಗ್ರಹಾ | ವಾಗಲಿ ಅನುಗ್ರಹಾ | ಸಂತತ ಎನಗಿದೆ ಸಂಗ್ರಹಾ | ದೇಹವೈಗ್ರಹಾ | ದುರುಳರ ಪ್ರತಿ ಗ್ರಹಾ | ಮುಂತೆ ಕೈಕೊಂಬ ದುರಾಗ್ರಹಾ | ಯೈವ ವಿಗ್ರಹಾ | ಮಾಣಿಸು ಶಿರಿಗ್ರಹಾ | ಸಂತೈಸು ಕರುಣವಾರುಣಗ ಅನಿಗ್ರಹಾ 3 ನವನೀತ ಗೋಪಿ ವಸ್ತ್ರಾಪಹಾರಾ | ಕಾಲ ಧಾರಾ | ಕಂಸದಾನವ ಸಂಹಾರಾ | ಧ್ರುವ ಬಲಿಕರಿ ಉದ್ಧಾರಾ | ನಾನವತಾರ ಧೀರಾ | ಪವನ ಮನಮಂದಿರಾ ಪಾಲಿಸೊ ವಾರಂ ವಾರ4 ಪದ - ವಿಜಯನಗರಾಧೀಶ ಸರ್ವೇಶಾ | ಮಣಿಮಯ ಭೂಷಾ | ಸೂರ್ಯ ಕೋಟಿ ಪ್ರಕಾಶಾ | ತ್ರಿಜಗದೊಳಗೆ ನೀನೆ ನಿರ್ದೋಷಾ | ಶಕ್ತಿ ವಿಶೇಷಾ | ಐಶ್ವರ್ಯ ವಿಲಾಸಾ | ಋಜುಜ್ಞಾನ ಕೊಡುವದೊ ಮನೋತ್ತರಿಸಾ | ಮಂಜುಳ ಭಾಷಾ | ಭೂದಾ ರಜವಾಸಾ | ನಿರ್ಜರ ಕೋಶಾ | ಹೃದಯ ಕಾಶಾ | ನಾಮಕ ಮಹಿದಾಸಾ 4
--------------
ವಿಜಯದಾಸ
ಎದ್ದರಾಳಲ್ಲೆಂದು ಬಿದ್ದಿರುವೆನೊ ನಾನು ಮಧ್ವರಮಣನೆ ದಯದಿ ಉದ್ಧರಿಸೆಲೊ ಪ ಏನು ಮಾಡಿದರೇನು ಮಾಡದಿದ್ದರೆ ಏನು ಕಾಣಲಾರೆನೊ ನೀನೆ ತಿಳಿಸಿ ಪೊರೆಯೊ ಕಾನನದಿ ತಿರುತಿರುಗಿ ತೊಳಲಿ ಬಳಲುತಲಿ ಬಲು ದೀನನಾದೆನೊ ಶಕುತಿಯುಕುತಿ ಹೋಗಿ1 ನುಡಿದೆ ನಾ ನೂರೆಂಟು ಅಡಿಯಿಡಲು ಬಲು ಕುಂಟು ಕಡೆಗಾಲದರಿವಾಗಿ ಬಳಲುತಿಹೆನೊ ಸಡಲಿತೆನ್ನಯ ದೇಹ ಸಿಡಿಯಿತೆನ್ನಯ ಮೋಹ ನಡೆಯಾಟವೆನಗಿನ್ನು ಸಾಧ್ಯವಿಲ್ಲವು ದೇವ 2 ಕೊಟ್ಟರೆ ಹೊಗಳುವರು ಕೊಡದಿರಲು ಬೊಗಳುವರು ಕೊಟ್ಟೆನ್ನ ಕರವೆರಡು ಬೆಂಡಾದವೊ ಸುಟ್ಟಿತೆನ್ನಯ ಕೋಪ ನಿಷ್ಠುರದಿ ಬೇಸತ್ತು ಇಷ್ಟು ಜೀವನ ಸಾಕೊ ಕೃಷ್ಣ ಮೂರುತಿಯೇ3 ಗುಣವಿಲ್ಲ ಧನವಿಲ್ಲ ತನುವಿಲ್ಲ ಮನವಿಲ್ಲ ಹೊಣೆ ಹೊರೆವುದೆಂತೆಂದು ಕೈ ಬಿಡದಿರೊ ತೃಣ ಗಿರಿಯನೊದೆಯುವುದು ಒನಕೆ ತಾ ಚಿಗುರುವುದು ವನಜನಾಭನೆ ನಿನ್ನ ಮನಕೆ ಬರಲು 4 ನಾನೇನು ಬಲ್ಲೆ ನಿನಗೇನು ರುಚಿಯೆಂಬುದನು ನಾನರಿತರೂ ನಿನಗೆ ಕೊಡಬಲ್ಲನೆ ನಾನೇಕೆ ಜನಿಸಿದೆನೋ ನೀ ಬಲ್ಲೆ ನಾನರಿಯೆ ಏನೆಂದು ಕೋರದೆಲೆ ಪೊರೆಯಬೇಕೊ 5 ಸಾಯುವರ ನೋಡಿ ಮನ ನೋಯುವುದು ಮೂರುಕ್ಷಣ ಮಾಯಾಪಾಶವು ಮುಸುರೆ ಮರೆವುದೆಲ್ಲ ಪ್ರಾಯದವನಂತೆ ಬಲು ಹೇಯ ಕೃತ್ಯಗಳಾಸೆ ನಾಯಿಬಾಲದ ಡೊಂಕು ತಿದ್ದಿ ಪೊರೆಯೊ 6 ನಂಬಿದವರೆಲ್ಲ ಬಲು ಸಂಭ್ರಮದಲಿರುವರೊ ಅಂಬಿಗನ ತೆರನಾದೆ ನದಿ ದಾಟಿಸಿ ತುಂಬಿರುವ ಮನದಾಸೆ ಹಂಬಲಿಕೆ ನೀಡಿ ತಿರಿ ದುಂಬುವನ ಕನಸಿನಂತಾದವೆನಗೆÀ7 ಇಂದು ನಾನಿಟ್ಟಿಲ್ಲ ಮುಂದೆ ಎನಗೇನು ಬೇಕೆಂದರಿಯೆನೊ ಹಿಂದಾದುದಂತಿರಲಿ ಇಂದಿರುವದಿರಲಿ ಮನ ಮಂದಿರದ ದಾನವರ್ಪಿಸುವೆ ನಿನಗೆ 8 ಮನೆಗೆ ತಾ ಯಜಮಾನ ಕೆಣಕೆ ಬದುಕುವರುಂಟೆ ಕುಣಿಯುತಿದ್ದರು ಜನರು ನುಡಿದ ತೆರದಿ ತನುಸಡಲಿ ಬೀಳಲದ ಕೊನೆಗಾಲವೆಂದರಿತು ಮನೆ ಹೊರಗೆ ಕಸದಂತೆ ಬಿಸುಡುವುದ ನೋಡಿ9 ತುಂಬು ಸಂಸಾರದಲಿ ಸಂಭ್ರಮವನೇಕಗಳು ಸಂಭ್ರಮದಿ ನಿನ್ನ ಹಂಬಲವೇತಕೆ ಕಂಬ ಸಡಲಿದ ಮನೆಯ ತೆರದಿ ದೇಹವು ಸಡಲೆ ಡೊಂಬನಾಟವನಾಡಿ ಚಂಬು ಪಿಡಿದಂತೆ 10 ಕೆಲಸವಿರುವಾಗ ಬಲು ಹೊಲಸು ನಿದ್ರೆಯ ಮಾಡಿ ಹೊಲಸು ವಿಷಯದಿ ಬಹಳ ಎಚ್ಚೆತ್ತೆನೊ ಕಲಿಯು ಕರೆದೌತಣವನಿತ್ತೆ ನಾ ಬಹುವಿಧದಿ ಬಲಿಕೊಡುವ ಕುರಿಯಂತೆ ಬಳಲುತಿರುವೆನೊ ದೇವ 11 ಮರೆವು ಜನತೆಗೆ ದೊಡ್ಡವರವೆಂದು ನೀ ಕೊಟ್ಟೆ ಗಿರಿಯಂಥ ಕಷ್ಟಗಳ ಮರೆಯಲಾಯ್ತೊ ಅರಿವು ಕೊಡದಂತೆ ನಾ ಮರೆತೆನೆಂಬಪರಾಧ ಸರಿತೂಗುವುದೆ ಇದಕೆ ಗುರಿ ಯಾರೊ ದೇವ 12 ಸಾಧು ಜನರಿರುವರೊ ಮೇಧಾವಿಗಳು ಇಹರೊ ಮಾದರಿಯ ಜೀವನವ ತೋರ್ಪರಿಹರೊ ಸಾಧುವಲ್ಲವೊ ನಾನು ಮೇಧಾವಿಯಲ್ಲ ಹೊಸ ಮಾದರಿಯ ತಿರುಕನೆಂದರಿತು ಪೊರೆಯೊ13 ಅರೆಕ್ಷಣವು ನಿನ್ನನು ಸ್ಮರಿಸಲಾರದ ಜನರು ಅರಮನೆಗಳಲ್ಲಿ ವಾಸಿಸುವುದೇಕೊ ಕರಚರಣವಿಲ್ಲದ ಕಪೋತಿಕ ನಿನ್ನಯ ನಾಮ ಕಿರಿಚುತಿರುವುದ ನೋಡಿ ಹರುಷವದೇಕೊ 14 ಗಿಣಿಯಂತೆ ರಾಮ ರಾಮ ಎಂದರೇನು ಫಲ ಫಣಿಯಂತೆ ಸಾಷ್ಟಾಂಗ ನಮಿಸಲೇನು ಋಣಿಯಂತೆ ಧನಿಕನಲ್ಲಿ ಹಲ್ಲುಗಳ ಕಿರಿದರೇನು ಮನವಿಟ್ಟು ಕೆಲಸ ಮಾಡುವುದರಿಯದೆ 15 ಮನಕೆ ಬಂದುದನೆಲ್ಲ ಮಾಡÀುವವರಿರುವರೊ ಮನಕೆ ಶಾಂತಿಯ ಮಾಡುವವರ ಕಾಣೆ ಕನಕವೆರಿಚಿದರಿಲ್ಲ ವನವ ಸೇರಿದರಿಲ್ಲ ಮನಮಂದಿರದಲಿ ನೀ ಇಣಿಕಿನೋಡುವ ತನಕ 16 ಲಂಚಗಳ ಕೊಟ್ಟು ಫಲಗಳ ಬೇಡುವವನಲ್ಲ ಸಂಚುಮಾಡಲು ಶಕುತಿ ಯುಕುತಿಯಿಲ್ಲ ವಂಚಕರ ಬಹುಮತ ಪ್ರಪಂಚದಲಿ ನೀನೊಬ್ಬ ಹೊಂಚು ಕಾಯುತಲಿರುವ ಎಂಬುದರಿತು 17 ರೈಲು ಬಂಡಿಗಳಲಿ ಐಲುಪೈಲುಗಳನ್ನು ಮೌಲ್ಯವಿಲ್ಲದೆ ಸಾಗಿಸುವುದನರಿತು ಕಾಲು ಕಣ್ಣೆಲ್ಲದ ಕಪೋತಿಯೊ ನಾನೊಂದು ಮೂಲೆಯಲಿ ಕುಳಿತು ಬರಲವಕಾಶವೀಯೊ 18 ನಿನ್ನ ಗುಣಗಳನರಿಯೆ ನಿನ್ನ ವರ್ಣಿಸಲರಿಯೆ ನಿನ್ನ ಸೇರಲು ಎನಗುಪಾಯವಿಲ್ಲ ಕನ್ನ ಕತ್ತರಿಯ ಕಾಣಿಕೆಯೊಂದೆ ಸಾಧ್ಯವೊ ಇನ್ನು ತಲೆ ಎತ್ತಿನೊ ಪ್ರಸನ್ನನಾಗುವ ತನಕ 19
--------------
ವಿದ್ಯಾಪ್ರಸನ್ನತೀರ್ಥರು
ಎನ್ನನು ನೀ ಜರೆವೆ ಜೀವನೆನಿನ್ನನೀ ತಿಳಿದೆನೆಂದೂಮುನ್ನ ಮಾಡಿದ ಪುಣ್ಯಕರ್ಮಂಗಳೆನ್ನಿಂದ ಮನ್ನಿಸದುಪಕಾರವಾ ಜೀವಾ ಪದೇಹವು ಹೇಯವೆಂಬೆ ಮತ್ತೀಗದೇಹದೊಳಿರುತಿರುವೆದೇಹದಾಧಾರದಲ್ಲೀ ಧ್ಯಾನಿಸಿಸೋಹಂ ಭಾವನೆ ಬಂದುದೂಉಹಾಪೋಹಗಳಲ್ಲಿ ಚದುರನು ನಾನೆಂಬೆಓಹೊ ನಾನಿಲ್ಲವೆ ಜೀವಾ 1ಚಿತ್ತೆ ತಾ ಪ್ರಕೃತಿಯಾಗೀ ಭೂತದಮೊತ್ತವೆಂದೆನಿಸಿತಲ್ಲೈಮತ್ತೆ ಭೂತಂಗಳವೂ ನಾಲ್ಕುಳ್ಳತತ್ವವಿಪ್ಪತ್ತಾುತುಹತ್ತಿಂದ್ರಿಯಂಗಳಿಂದ ವಿಕರ್ಮಗಳು ಪುಟ್ಟಿಮುತ್ತೆರನಾುತಲ್ಲೈ ಜೀವಾ 2ಕನಕವೆ ಕುಂಡಲಾದಿ ಭೂಷಣಭಣಿತೆಯ ತಾಳಿರಲುಕನಕವಲ್ಲವೆ ಭೂಷಣ ಯೆಣಿಸಲುಚಿನುಮಯಾತ್ಮಕನಿಂದಲೆಜನಿಸಿ ದೃಶ್ಯತ್ವದಿ ತೋರಿದಡೇನಾುತುತನುವಾತ್ಮನಲ್ಲವೇನೈ ಜೀವಾ 3ಮಾಡಿದ ಉಪಕಾರವ ಮರೆಯುವಮೂಢಗೆ ನರಕವೆಂದುಆಡದೆ ಶೃತಿನಿಕರ ನೀನದನೋಡದೆ ನುಡಿಯುತಿಹೆಕೂಡಿಕೊಂಡೆನ್ನನು ನಿಜದೊಳು ಬೆರೆದರೆಪ್ರೌಢ ನೀನೆನಿಸಿಕೊಂಬೆ ಜೀವಾ 4ಕಾರ್ಯಕಾರಣ ರೂಪವಾ ನೋಡಲುಕಾರ್ಯಕಾರಣವಲ್ಲವೆಸೂರ್ಯನಿಂದಾದುದಕ ಬೆರೆಯದೆಸೂರ್ಯನ ಮರಳಿ ನೋಡೂಧೈರ್ಯಶಾಲಿಯೊಳಿಪ್ಪ ಧೈರ್ಯತ್ವವಾತನವೀರ್ಯವಲ್ಲವೆ ನೋಡಲೂ ಜೀವಾ 5ರೂಪನಾಮಗಳೆರಡೂ ಸತ್ತಾನುವ್ಯಾಪಿಸಿ ಜಗವಾದುದುದೀಪದೊಳಗೆ ಕಾಳಿಕೆ ತೋರ್ಪಂತೆಈ ಪರಿಯಲಿ ಮಾಯೆಯುವ್ಯಾಪಾರಂಗಳನುಪಸಂಹರಿಸಲು ಕಾಯವ್ಯಾಪಕನೊಳು ನಿಂದುದೂ ಜೀವಾ 6ಪೊಳೆದೆನು ನಾ ಮೊದಲೂ ಆಮೇಲೆಪೊಳೆದೆ ನೀ ಪ್ರತಿಫಲಿಸಿಜಲಗತ ಪ್ರತಿಬಿಂಬವೂ ನಿಜವಲ್ಲದಳಿವಂತುಪಾಧಿುಂದಾನಿಲುವುದು ನಿಜಬಿಂಬವಾಭಾಸ ನೀ ಪುಸಿನಿಲುವೆ ನಾ ನಿಜದೊಳಗೆ ಜೀವಾ 7ಬಂಜೆಯ ಮಗ ನಿಜವೊ ಅವನಿಗೆಮುಂಜಿಯೆಂಬುದು ನಿಜವೋಅಂಜಿಕೆದೋರಿಸಿತು ರಜ್ಜುವುರಂಜಿಸಿ ಸರ್ವನಾಗಿವ್ಯಂಜಿಸಿ ಕರಣದಿ ನಿದ್ರೆಯೊಳಭಂಜಿಸಿ ಮಂಜಿನಂದದಿ ಪೋಪೆಯೈ ಜೀವಾ 8ಇರಿಸಲು ಬೇರೆನ್ನನು ತೆರಹಿಲ್ಲಬೆರೆಸಾತ್ಮನೊಳು ಬಿಡದೆಕಿರಣಂಗಳು ರವಿಯ ಬಿಟ್ಟೊಮ್ಮೆಇರಬಲ್ಲವೆ ನೋಡಲುತಿರುಪತಿನಿಲಯ ಶ್ರೀ ವೆಂಕಟರಮಣನಚರಣನಾನಲ್ಲವೇನೈ ಜೀವಾ 9 ಕಂ||ಇಂತೀ ಪರಿಯಲಿ ಜೀವನನಿಂತಿರುವವನಿಲ್ಲದವನ ನುಡಿವದು ಸಹಜವುಎಂತಾದರು ತನ್ನ ತಿಳಿಯದೆಮುಂತೋರದ ನುಡಿುದೇನೆನೆ ಮುಳಿದಂ ಜೀವಂ
--------------
ತಿಮ್ಮಪ್ಪದಾಸರು
ಎಲೆ ಸಖಿಯೆ ಪೋಗು ವಿಠಲನ ಬಳಿಗೆಬೇಗವನ ತಾರೆ ಎನ್ನ ಮನೆಗೆಪ. ಚಂದ್ರ ಉದಿಸುತಲಿ ಬಂದ ರಂಜಿಸುತರ-ವಿಂದಬಾಣ ನಡೆತಂದಮಂದಮಾರುತ ಮುಂದೆ ನಿಂದ ಅವ ಕುಸುಮ-ಗಂಧದಿಂದಲೆನ್ನ ಕೊಂದ1 ಕೀರ ನುಡಿಯುತಿದೆ ಧೀರ ಕೋಕಿಲಿಯಸ್ವರ ಕರ್ಣಕಠೋರಮಾರ ಬೇಗ ಹರಿಬಾರದಿರೆ ಕೆಳದಿಕ್ರೂರ ಎನ್ನ ಕೊಲ್ಲದಿರ 2 ಜೀಯ ಸುಜನರ ಸಹಾಯ ನಿಗಮಕುಲಗೇಯ ನಿರ್ಧೂತ ಹೇಯಪ್ರಿಯ ಹಯವದನರಾಯ ಸಖಿ ಎನ್ನಕಾಯಲಿನ್ನೇನು ಉಪಾಯ 3
--------------
ವಾದಿರಾಜ
ಎಷ್ಟು ಪ್ರೀತಿಯೊ ಮನಕೆ ಎಷ್ಟು ಪ್ರೀತಿಯೊ ಪ ಇಷ್ಟವೆಂದು ತಿಳಿದು ಈ ಕಷ್ಟ ಸಂಸಾರ ಹೊರುವುದು ಅ ಹಸಿವು ತೃಷೆಯು ಶೋಕ ಮೋಹ ಅಸುವಗೊಂಬ ಜನನ ಮರಣವಿಷ ಸಮಾನವಾದ ಬಹಳ ವ್ಯಸನ ಮೆರವಣಿಮುಸುಕಿ ಕವಿವ ವ್ಯಾಘ್ರದಂತೆ ಅಡಗಿ ಮುಪ್ಪುಗೊಂಬ ರೋಗವಿಷಯದೊಳಗೆ ಕ್ಲೇಶಪಟ್ಟು ವಿಷಯದಿಚ್ಛೆ ಬಿಡದ ಮನಕೆ 1 ನೀರಗುಳ್ಳೆ ಎನಿಪ ಕಣ್ಣ ನೀರಜಾಕ್ಷಿ ಎಂದು ಮತ್ತೆಸೋರುವ ಜಘನ ಕರಿಯ ಕುಂಭ ಸುರಿವ ಶ್ಲೇಷ್ಮದಮೋರೆ ಚಂದ್ರಬಿಂಬ, ಮಾಂಸವಿಕಾರವಾದ ಕುಚವ ಕನಕಕಲಶಸಾರವೆಂದು ನರಕರೂಪಿನ ನಾರಿಯರಿಗೆ ಭ್ರಮಿಸಿ ಬಾಳ್ವುದು2 ಕುಸುಮ ಗಂಧಮಾಲೆ ಕಸ್ತೂರಿಯನು ಪೂಸಿಕೊಂಡುವಸ್ತ್ರ ಒಡವೆ ಇಟ್ಟು ಬಹಳ ಶಿಸ್ತು ನರಕಿಯೆನಿಸಿ ಮೆರೆವುದು3 ಕಾಯ ಸೌಖ್ಯದಿಆಯಾಸಪಟ್ಟು ಗಳಿಸಿದರ್ಥ ಹೇಯವೆನದೆ ಭೋಗಿಸುತ್ತಬಾಯ ಸವಿಯನುಂಡು ಕಡೆಗೆ ನಾಯ ಸಾವು ಸಾಯೋ ಬಾಳಿಗೆ 4 ಮನ್ನಿಸಿ ಗುರುಹಿರಿಯರುಕ್ತಿಯನ್ನು ಕೇಳದೆ ಕಿವುಡುಗೆಟ್ಟುಜೊನ್ನೆಯ ತುಪ್ಪ ಅನ್ನ ಒಲ್ಲದೆ ಎಲುವು ಮಾಂಸವನ್ನು ತಿಂಬಕುನ್ನಿಯಾದೆನಯ್ಯ ಕೃಷ್ಣ ನಿನ್ನ ಮಾಯದೊಳು ಸಿಲ್ಕಿದಎನ್ನನುದ್ಧರಿಸೊ ಸುಪ್ರಸನ್ನ ಆದಿಕೇಶವ5
--------------
ಕನಕದಾಸ