ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನವನೀತ ಚೋರ ಎಲ್ಲರ ಭುಲ್ಲೈಸಿದಿ ನಂದಕುಮಾರ ಧ್ರುವ ಪರಿಪರಿ ಅಡಿಸಿದಿ ನೀ ಪರನಾರಿಜಾರ ಮರುಳು ಮಾಡಿದಿ ನಮ್ಮ ಗೊಲ್ಲತೇರ ಕರಗೂಡುತಲಿ ತಿಂದ್ಯೋ ನೀ ಪಾಲ್ಮೊಸರ ಆರಿಗೆ ಹೇಳಬೇಕು ನಿನ್ನ ದೂರ 1 ಮಾಡದ ಮಾಡಿದಿ ನೀ ಮನಬಂದ್ಹಾಂಗೆ ಪಡೆದು ಲೋಕದಲುಸುರಗುಡದ್ಹಾಂಗೆ ಹಿಡಿದೇನಂದರ ನೀ ಕೈಗೂಡಿ ಬ್ಯಾಗೆ ತುಡುಗತನ ಮಾಡಿದಿ ನಿನಗಕ್ಕು ಹಾಂಗೆ 2 ಬಿಡಲರಿ ಯೆವು ನಿನ್ನ ತಿಳಿಕೊ ವಿಚಾರ ಮಾಡಲಿಕ್ಕಾಗದು ಇದಕೆ ತಾ ಪರಿಹಾರ ಹಿಡಿದೇವು ನಿನ್ನಾಟ ಕಂಡು ಕಣ್ಣಾರ ಮೂಢ ಮಹಿಪತಿಗಾಯಿತು ತಾ ಮನೋಹರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಕ್ತಿಯು ಸುಲಭ ತಾನಲ್ಲ ನಿಜಭಕ್ತಿ ದೊರಕಲವಗಾಗುವುದು ಎಲ್ಲ ಪ ಎಲ್ಲ ಸಂಗವ ಬಿಡಬೇಕು ತಾನುಬಲ್ಲ ಗುರುವ ಸೇವೆ ಮಾಡಬೇಕುಎಲ್ಲಕೆ ತಾನಿರಬೇಕು ಭಕ್ತಿಬಲ್ಲವನಿಂದ ನಿತ್ಯದಿ ಹೆಚ್ಚಬೇಕು 1 ಹೇಳಿದಲ್ಲಿಗೆ ಹೋಗಬೇಕು ಮನಕೇಳದಿರಲು ಬುದ್ಧಿಯ ಹೇಳಬೇಕುಕಾಳರಾತ್ರೆಯೆನ್ನದಿರಬೇಕು ನಿತ್ಯಬಾಲಕನಂತೆ ತೋರುತಲಿರಬೇಕು 2 ಹಸಿವು ತೃಷೆಯ ಬಿಡಬೇಕು ತಾನುಎಸಗಿ ಗುರುಸೇವೆ ಮಾಡಬೇಕುಬಿಸಿಲು ಮಳೆ ಎನ್ನದಿರಬೇಕು ಧೈರ್ಯವೆಸಗಿ ಭಯಕೆ ಬೆಚ್ಚದಲಿರಬೇಕು 3 ಗುರುವಿನನಡೆ ನೋಡಬೇಕು ಆಗುರುವಿನ ನಡೆಯ ಕಂಡಂತಿರಬೇಕುಕರಣ ವಿಷಯ ಹೋಗಬೇಕು ನಿತ್ಯಭರಿತವಾನಂದವಾಗಿರಬೇಕು 4 ಕರವ ನೀಡುವನು ಏ-ನೆಂತು ಪೇಳಲಿ ತನ್ನೊಳೆರಕ ಮಾಡುವನು 5
--------------
ಚಿದಾನಂದ ಅವಧೂತರು