ಒಟ್ಟು 30 ಕಡೆಗಳಲ್ಲಿ , 15 ದಾಸರು , 26 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಿಕ್ಕೆಯಿಲ್ಲ ನಮ್ಮ ಕಡೆಗೆ ಸೊಕ್ಕಿ ಬಂದರಾರೆರು ಚಿಕ್ಕ ಮನುಷ ಕೆಂಚೆಗೌಡ ಠಕ್ಕ ಮುನಿಯ ಭಾವಬಿರಿಯ ಬೆಂಕಿಯಂತೆ ತೋರ್ಪನೊಬ್ಬ ಪರಶುರಾಮನು ಪ ಆನೆಯಲ್ಲಿ ತೇಜಿಯಿಲ್ಲ ಸೇನೆ ಬಹಳವಾಗಿಯಿಲ್ಲ ಹೀನಗೆಟ್ಟು ದಂಡು ಬಂದು ಮಾನಗೊಂಡು ಹೆಣ್ಣುಗಳನು ಭಾನು ಮುಟ್ಟಲೆತ್ತಿ ಆಸಿಯ ದೀನ ಬೇಕು ಬೇಡೆಂದೆಂಬರಿಲ್ಲ 1 ಮನೆಗಳನ್ನು ಹೊಕ್ಕು ಚಾರುವರಿದು ಕೊಟ್ಟ ಕಣ್ಣಿಯ ಸೂರೆಮಾಡಿ ಕಟ್ಟಿಕೊಂಡು ತೆರೆದ ಮನೆಯ ಸುಟ್ಟು ದಾರಿದೆಗೆದು ಹೋಗುವಾಗ ಧೀರರಾಗಿ ನಿಲ್ಲಿರೆಂದು ಎಂಬವರೊಬ್ಬರಿಲ್ಲ ವೋ 2 ಯಾವಜನರ ದಂಡು ಗಂಟು ಹಣದಾಸೆಗಾಗಿ ಮಾಡಿ ದಾವ ಕಡೆಗೆ ಬರುವರೆಂದು ಸೋವ ನೋಡು ತಲ್ಲಿತಮ್ಮ ಜೀವ ದೊಳಗೆ ಜೀವ ವಿಲ್ಲದಾಗಿ ಜನರುಬಾಯಬಿಡಲು ಕೋವಿ ಕತ್ತಿ ಎಂಬುದೊಂದು ಶಬ್ದವಿಲ್ಲ ನಮ್ಮ ಕಡೆಗೆ 3 ಬೀಸಿ ಬೀಸಿ ಕತ್ತಿಯನ್ನು ಸಾಸವನ್ನು ತೋರಿರೋರ ದಾಸೆಗಾಗಿ ಕಂಡ ಜನರ ಮೋಸದಿಂದ ಕಡಿದುಕೊಚ್ಚಿ ಲೇಸುಗಾಣದಾಗಿ ಮತ್ತೆ ಭಾಸೆಯಿಂದ ತಮ್ಮ ತಾವೆ ಮಾರ್ಗವಿಡಿಯೆ4 ಕೆಟ್ಟು ಪ್ರಜೆಯು ನಾಶವಾಗಿ ಸುಟ್ಟು ಮನೆಯು ಮಾರುಬಿದ್ದು ನಿಟ್ಟು ಹಾಳುಸುರಿಯೆ ಪ್ರಜೇಯು ಹೊಟ್ಟೆಗಿಲ್ಲ ದಳಲುತಿಹುದು ಸೃಷ್ಟಿ ಗೊಡೆಯನಾದ ಲಕ್ಷ್ಮೀರಮಣ ಬಲ್ಲನೆಲ್ಲವನ್ನು 5
--------------
ಕವಿ ಪರಮದೇವದಾಸರು
(ಬಾಲಕೃಷ್ಣ ವರ್ಣನೆ) ಕಂಸಾರಿ ಕೃಷ್ಣಾ ಕಾಡದಿರೆನ್ನನು ಪ ಹಳ್ಳದ ತಡಿಯಲ್ಲಿ ಮಳಲು ತೋಡಿ ತೋಡಿ ಗೊಲ್ಲಿತೆರೊಡÀನಾಡಿ ಕಲಿತ್ಯೋ ಬೆಡಗಾ ಅಹಿನೇರಿ ಹುಡುಗಾ ಮಾಡಿದಿ ತುಡುಗಾ 1 ನೀರಿಗ್ಹೋಗುವಾಗ ದಾರಿಗಡ್ಡಕಟ್ಟಿ ನಾರಿ ನೀನಾರೆಂದ್ವಿಚಾರಿಸುವೀ ದೂರದಲ್ಲಿರುವಿ ಬದಿಯಲ್ಲಿ ಬರುವಿ ಬೇರೆ ಕರೆವೆ ಈ ಬುದ್ಧಿ ತರವೆ 2 ವರ ಕದರುಂಡಲಗಿ ಹನುಮಯ್ಯನೊಡೆಯನೆ ನಿನಗೆಣೆಯಿಲ್ಲವೊ ವನಜನಾಭಾ ವನಿತೆಯರೆಲ್ಲಾ ಒಲಿಸಿದೆಯಲ್ಲಾ ಮನುಜನಲ್ಲಾ ಮಾಯದ ಗೊಲ್ಲಾ 3
--------------
ಕದರುಂಡಲಗಿ ಹನುಮಯ್ಯ
ಅಧ್ಯಾಯ ಎರಡು ಮೃಗ ಬ್ಯಾಟಯಲಿ ಹೊರಟ್ಹೋಗುವಾ ಯಕ್ಷಾನುಗರಿಂದ ತಾ ಮೃತನಾಗುವಾ ಮಗ ಬಾರಾನೆಂದು ತಾಯಿ ಮಿಡುಕುತಾ ರಾಜ್ಯ ಅಗಲಿ ಹೋಗ್ವಳು ತಾ ಹುಡುಕುತಾ 7 ಅಂತ:ಕರುಣ ತಾಪದಲಿ ಕಾಡಾಕಿಚ್ಚಿ ನಂತದೊಳಗೆ ಬೀಳೋಳು ಗಾಡಾ ಚಿಂತೆಯಾಕೆ ನೃಪಹೋಗಿನ್ನ ನಿ ಶ್ಚಿಂತೆಯಿಂದಲಿ ರಾಜ್ಯ ಮಾಡಿನ್ನ 8 ಎಂದು ಹಸ್ತವ ಶಿರದಲ್ಲಿಟ್ಟು ಆ ನಂದದಿಂದಲಿ ವರಗಳನು ಕೊಟ್ಟು ಮುಂದನಡೆದ ಪಕ್ಷಿವಾಹನನು ಜಗ ದ್ವಂದ್ಯ 'ಶ್ರೀ ಅನಂತದ್ರೀಶ' ನು 9 ಪದ ಆದಿ ಮೂರುತಿ ಶ್ರೀರಮೇಶಾ ತನ್ನ ಧಾಮಕ್ಕ್ಹೋದನು ಮೋದರಹಿತನಾಗಿ ಬಾಲದೀರ್ಘ ಉಸುರಗಳದನು ಪೋದನೆಂದು ದು:ಖದಿಂದ ತಿರುಗಿ ಪುರಕ ನಡದನು ಯಾದವೇಶ ಹಾ ಮುರಾರಿ ಎಂದು ಆಗ ನುಡದನು 1 ಪೂರ್ವ ಪುಣ್ಯದಿಂದ ನಿನ್ನ ರೂಪ ಯನಗ ತೋರಿದಿ ಶರ್ವಮಿತ್ರಯೆನ್ನಾ ವಿಷಯ ಮಡುವಿನೊಳಗ ಹಾಕಿದಿ ಸರ್ವಕಾರ್ಯ ಬಿಟ್ಟು ಕರುಣಾದಿಂದ ಆಗ ನೋಡಿದಿ ಗರ್ವಯುಕ್ತನಾಗಿ ಯನ್ನಬಿಟ್ಟು ಈಗವೋಡಿದಿ 2 ಸಿಕ್ಕಿದಂಥ ದಿವ್ಯಮಾಣಿಕ್ಯ ಕಳದಂತಾಯಿತು ಫಕ್ಕನೆದ್ದು ಕುಳಿತು ಕಂಡಾಕನಸಿನಂತಾಯಿತು ಮಿಕ್ಕ ವಿಷಯ ಭೋಗ ಬೇಡಿ ಜನ್ಮ ವ್ಯರ್ಥವಾಯಿತು ತಕ್ಕ ಮುಕ್ತಿ ಬೇಡಲಿಲ್ಲಾ ಯನ್ನ ಬುದ್ಧಿ ಹೋಯಿತು 3 ಕ್ಲೇಶ ಬಿಟ್ಟು ಈಗ ಬಹಳ ವಿಷ್ಯ ಸೌಖತು” ಏಸು ಜನ್ಮ ಪೂಜೆ ಮಾಡಿದಾರು ದೇವ ದೊರಕನು ಮಾಸ ಪಂಚದಿಂದ ಯನ್ನ ದೃಷ್ಟಿ ವಿಷಯ ನಾದನು 4 ಆಶಿಇಂದ ಆಗ ವಿಷಯ ಸËಖ್ಯವನು ದೈವಕೆ ಮಾಡಿಕೊಂಡು ಹೀಂಗ ಮನಸ್ಸಿನಲ್ಲಿ ಬಂದ ಪಟ್ಟಣಕೆ ಕೊಂಡ ಪುರಸಮೀಪಕೆ 5 ಶ್ಲೋಕ ಆಗ ನೋಡಿದ ಒಬ್ಬ ಧ್ರುವನ್ನಾ ವೇಗ ಪುಟ್ಟಿತು ಮನಸಿಗೆ ತನ್ನ ಬ್ಯಾಗ ಪೇಳಿದ ಅರಿಸಿನ ಮುಂದಾ ಬಾಗಿ ಬಿನ್ನಯಿಸಿ ತಾನಯ ದಿಂದಾ 1 ಪದ ರಾಜಭೂಪಾನೆ ನಿನ ಕಂದ ಬಂದಾ|| ಪೂಜಿಸಿ ದೇವೇಶನ ಛಂದದಿಂದ || ಪರಿಪರಿಯಿಂದಾ ಗುರುಕೃಪೆಯಿಂದಾ | ತಿರುಗಿ ಇಲ್ಲಿಗೆ ಕ್ಷೇಮದಿಂದಲಿಂದಾ 1 ಪುಣ್ಯಗಳಿಂದಾರಣ್ಯದಲಿಂದಾ ಸಣ್ಣಬಾಲನು ಭಾಳನಂದದಿಂದಾ 2 ಅನಂತರದಿಂದಾ ಅನಂತ ಸÉೀವಿಂದಾ 'ನಂತ್ರಾದೀಶನಾ’ ದಯದಿಂದ ಲಿಂದಾ 3 ಆರ್ಯಾ ಕಾಂಬೆನು ಯಂದಾ ಹುಟ್ಟಿತು ಆನಂದಾ1 ಪದ ರಾಗ :ಶಂಕರಾಭರಣ ಆದಿತಾಳ ಸುದ್ದಿ ಹೇಳಿದಾತಾಗೆ ಬೇಕಾದ್ದು ಕೊಟ್ಟು ಹರುಷದಿಂದ ಯದ್ದು ರಥವಾನೇರಿ ತಾ ಸನ್ನದ್ಧ ನಾದನು 1 ಇಬ್ಬರ ಹೆಂಡಿರ ಕೂಡಿ ಒಬ್ಬ ಪುತ್ರನಿಂದ ಕೂಡಿ ಅಬ್ಬರದಿಂದಲಿ ತಾ ಉಬ್ಬುಬ್ಬಿ ನಡದಾನು 2 ಮಂತ್ರಿಗಳು ವಿಪ್ರಾರು(ಗಳು) ಮಂತ್ರಜ್ಞಾರು ಮಾನವಾರು ಸಂತ್ರೋಧಾರ ನಡದಾರು ಬಜಂತ್ರಿ ಘೋಷಾದಿ 3 ಮೃದಂಗ ಘೋಷ ಸಾರಿಸಾರಿ ನುಡದಾವು ಅಬ್ಬಾರದಿಂದಲಿ 4 ತಂಬೂರಿಘೋಷಾ ಜಾಣೆ ರಾಮಂಜುಳಗೀತಾವಾಣಿ ಘೋಷಾವು 5 ಅಂಗಾನೇರು ಕುಂಕುಮಾದಿ ಮಂಗಲ ಭೂಷಾದಿಂದ ಶೃಂಗಾರಿಸಿ ಕೊಂಡಾರು ಕುರಂಗ ನೇತೆÀ್ರರು 6 ಧಟ್ಟಿ ಪೀತಾಂಬರನುಟ್ಟ ಬಟ್ಟಾ ಕುಚದಲ್ಯೊಪ್ಪುವಾ ಕಠ್ಠಾಣಿ ಮೋಹನ ಮಾಲೆನಿಟ್ಟು ಕೊರಳಿಗೆ 7 ರಂಬೇರು ವೀಳ್ಯವ ಮೆದ್ದು ತಾಂಬೂಲಗಲ್ಲಾದಲ್ಯೊತ್ತಿ ತುಂಬಿ ಹರುಷದಿಂದ ಚಂದ್ರ ಬಿಂಬ ಮುಖಿಯರು 8 ಮೀರಿದಾ ಸಂಭ್ರಮದಿ ಶೃಂಗಾರವನು ಮಾಡಿಕೊಂಡು ಥೋರಾಗನ್ನಡಿಲಿ ತಮ್ಮ ಮಾರಿ ನೋಡೋರು 9 ಕುಡಿಗಣ್ಣ ನೋಟಾದವರು ನಡಸಣ್ಣಾದಿ ಬಳಕುವರು ಮಂದ ನಡಗಿ ವಂತರು 10 ಪಟ್ಟಾಣದಿಂದಲಿ ವಳ್ಳೇ ಧಿಟ್ಟನಾರಿಯರು ಕಾಲಾ ಬಟ್ಟಿನಲಿ ಕಾಲುಂಗುರ ಮೆಟ್ಟಿ ನಡದಾರು11 ಪರಿಪರಿ ವಿಲಾಸದಿಂದ ಕರದಲ್ಲಿ ಕರತಳಾನಿಕ್ಕಿ ಕಿರಿನಗಿಯಿಂದಲ್ಲೆ ನಗುತಾ ಬರುವುತೀಹರು 12 ಹಿಂಡುಜನರಾಗಳ ಕೂಡಿಕೊಡು ರಾಜಾಬಂದು ಮಗನಾರಥವಾನಿಳುದು ಅಪ್ಪಿಕೊಂಡಾ ಹರುಷದಿ 13 ಮೂಸಿ ನೋಡಿತನ್ನ ಜಲಜಾ ಲೋಚನಗಳಿಂದ ಜಲವಾಧರಿಸಿದ 14 ಛಂದಾದಿ ಬಾಲಾನು ತನ್ನ ತಂದಿ ಪಾದಾದೊಳು ಯರಗಿ ಪಾದ ಬಂದು ಯರಗಿದ 15 (ತಾಯಿಯರ ಪಾದಗಳಿಗೆ ಪೋರ ಬಂದು ಯರಗಿದ) ಸಾಧುತಂದಿತಾಯಿ ಆಶೀರ್ವಾದ ಯುಕ್ತನಾಗಿ ತನ್ನ ಮೋದ ಬಟ್ಟಾಳು 16 ಏಳಯ್ಯಾ ಎಳಯ್ಯಾಯೆಂದು ಭಾಳಾನಂದಾದಿಂದ ಲ್ಯಪ್ಪಿ ಭಾಳಾಯುಷ್ಯಾವಂತನಾಗೊ ಬಾಲಾಯೆಂದಾಳು 17 ಉತ್ತಮ ಧ್ರುವನು ತಾತಾ ಗುಣೋತ್ತಮ ಇಬ್ಬರು ಕೂಡಿ ಅತ್ಯಂತ ಹರುಷಗೊಂಡಾರಂತ:ಕರುಣದಿ 18 ಇಂದಿಗೆ 'ಅನಂತಾದ್ರೀಶಾ’ ಹೊಂದಿಸಿದಾ ನಮ್ಮಿಬ್ಬರಾ ನೆಂದು ಮಾತನಾಡಿದರು ಕಂದರಿಬ್ಬಾರು 19 ಛಂದ ಹೆತ್ತ ತಾಯಿಗೆ ಚಿತ್ತಸಂಭ್ರಮಾ ಮತ್ತ ಜನರಿಗೆ ಚಿತ್ತ ವಿಭ್ರಮಾ ಪುತ್ರನಷ್ಟಿ ತಾ ಯೆತ್ತಿಕೊಂಡಳು ಸುತ್ತ ಚಿಂತಿಯಾ ಮರ್ತುಬಿಟ್ಟಳು 1 ಸುಂದರಾಂಗಿಯ ಆನಂದ ಬಾಷ್ಪದಾ ಬಿಂದು ಸ್ನಾನವು ಕಂದ ಮಾಡಿದಾ ಮುಂದ ರಥದಲ್ಲಿ ಬಂದು ಕುಳಿತನು ಮುಂದಿರುವ ಬಾಲನ ಒಲಿದು ನೋಡುತಾ ಮೊಲಿಯ ಪಾಲು ಚೆಮ್ಮಿ ತಲಿಯಲಿ ಹರುತಾ ಹಲವು ರಾಜ್ಯಕೆ ಮುಂದ ಸೂಚನಾ2 ಕುದರಿಸೈನ್ಯದಿಂದ ನಡದನು ಭಾಳ ಬಿರುದಿನಾ ಕಾಳಿ ಊದುತಾ ತಾಳ ವಾದ್ಯವು ಭಾಳ ನುಡುವುತಾ ಕೇಳಿಪುರದಲ್ಲಿ ಬಾಲಪುರುಷರು ಮಾಳಿಗಿಯಲಿ ಭಾಳ ನಿಂತರು 3 ಉತ್ತಮಾರ್ಯರು ಮತ್ತ ಸ್ತ್ರೀಯರು ಹತ್ತಿ ಮಾಳಿಗಿ ಸುತ್ತ ನಿಂತರು ಯೆತ್ತ ನೋಡಲು ರತ್ನ ಭೂಷಿತಾ ಉತ್ತುಮಾ ಪುರಿ ಭರ್ತ ಪಾಲಿತಾ 4 ಸಾಲು ಸಾಲಕೆ ವಿಶಾಲ ಮಂಟಪಾ ಸಾಲ ದೀಪದಿ ಭಾಳ ಶೋಭಿಪಾ ಸೆಲ (ಚೆಲ್ವ?) ಮುತ್ತಿನ ಸಾಲಯಳಿಗಳು ಮ್ಯಾಲ ಮಲ್ಲಗಿ ಮಾಲಕಿಗಳು 5 ಆರ್ಯಾ ಮಂದ ಮಾರುತಾನಿಂದ ಭಾಳಮಕರಂದ ಪುಷ್ಟದಾ ವಾಸನವು ಮುಂದ ಪತಾಕಿಗಳಿಂದ ಕಣ್ಣಿಗೆ ಛಂತ ತೋರಿಪಾ ಪಟ್ಟಣ್ಣವು 1 ವೇಗದಿಂದ ರಥ ಸಾಗಿಸಿ ಧ್ರುವ ಛಂ ದಾಗಿ ನಡೆದನು ಪುರದೊಳಗೆ ಬ್ಯಾಗ ಗೋಪುರದ ಬಾಗಿಲದಾಟಿ ಪೋಗಿ ಕುಳಿತನು ಸಭಿಯೊಳಗೆ 2 ಬಾಲನ ಕಂಡು ಭೂಪಾಲನು ಹಿಗ್ಗುತಾ ಭಾಳಪುಟ್ಟಿ ಮನದುದ್ರೇಕಾ ಕಾಲ ಮೂಹೂರ್ತದ ವ್ಯಾಳಯವು ಸಾಧಿಸಿ ಬಾಲಗ ಮಾಡಿದ ನಭಿಷೇಕಾ3 ಕೊಟ್ಟರಾಜ್ಯವನು ಪಟ್ಟಗಟ್ಟಿ ಮುಂ ದಿಟ್ಟ ಶಿಖಾ ಮುದ್ರಿಕಿಯನ್ನು ಅಷ್ಟ ವಿಭೂತಿಗ¼ಷ್ಟು ಕೊಟ್ಟು ಸಂ ತುಷ್ಟನಾದ ಭೂಪತಿ ತಾನು 4 ಛಂದದಿ ದೇವರಿಗೊಂದಿಸಿ ಧ್ರುವ ಆ ನಂದದಿ ಬ್ರಾಹ್ಮರಿಗೆರಗಿದನು ತಂದಿ ತಾಯಿಗಳಿಗೊಂದಿಸಿ ಬಹುತ್ವರ ದಿಂದ ಏರಿದಾ ಪೀಠವನು 5 ಸುಂದರ ಸಭಿಯಲಿ ಬಂದು ಕೂಡಲು ದೇ ವೇಂದ್ರನಂತೆ ಬಹು ಶೋಭಿಸಿದಾ ಬಂಧು ಜನರಿಗ್ಯಾನಂದವ ತೋರುತ ಚಂದ್ರಮನಂತೆ ಶೋಭಿಸಿದ 6 ಝಗಿಝಗಿ ತೋರುವ ಬಗಿಬಗಿ ಕುಪ್ಪುಸ ಬಿಗಿಬಿಗಿ ಇಂದಲಿ ತೊಟ್ಟವರು ಲಗು ಬಗೆಯಿಂದಲಿ ನಗಿನಗಿ ಮಾತಿನ ಸೊಗಸು ಗಾರಿಕೆ ಬಲ್ಲವರು 7 ಥೊರಮುತ್ತು ಜರತಾರ ಮಯದ ಉಡ ಗೊರಿ ತಂದರು ಆ ಜನರು ಸಾರ ಸಿಂಹಾಸನಯೇರಿದ ಧ್ರುವನಿಗೆ ಆರುತಿ ತಂದರು ನಾರಿಯರು 8 ಮುತ್ಹಚ್ಚಿದ ಹೊಸ ನತ್ತುಗಳಿಂದಲಿ ಮತ್ತಿಷ್ಟೊಪ್ಪುವ ಮುಖದವರು ಪುತ್ಥಳಿ ಸರಘುನ ಮುತ್ತಿನ ಸರಗಳು ಉಳ್ಳವರು9 ಹತ್ಹೊರಷುದ ಮ್ಯಾಲ್ಮತ್ತೆರಡೊರ್ಷದ ಉತ್ತಮ ಪ್ರಾಯದ ಬಾಲಿಯರು ಮತ್ತ ಕಾಲುಂಗರ ವತ್ತೊತ್ತಿ ನಡುವುತ ಗತ್ತಿನಿಂದಲೆ ನಡುವುವರು 10 ಪದ ತಂದ್ರು ಆರುತಿ ಚಂದ್ರ ಮುಖಿಯಾರು ತಂದ್ರು ಆರುತಿ ಬಹು ಸುಂದರ ಸುಗುಣೇರು ಪ ಚಂದುಟಿ ಕಚ್ಚುತ ನಿಂದ್ರದ ಮದದ ಗ ಜೇಂದ್ರ ಗಮನಿಯರು ಬಂದ್ರಾಗಲೇ ದೇ ವೇಂದ್ರನ ಸಮರಾಜೇಂದ್ರನÀ ಸುತಗೆ ಅ.ಪ ಬಣ್ಣಗಾರಿಕೆಯಲಿ ಸಣ್ಣಕುಂಕುಮನಿಟ್ಟ ಕಣ್ಣಕುಡಿ ಹುಬ್ಬು ಕುಣಿಕುಣಿಸ್ಯಾಡುತ ಹೆಣ್ಕೋಕಿಲ ಸ್ವರ ಸಣ್ಕಂಠದಿ ನುಡಿ ಸಣ್ಕದಿ ಪಾಡುತ 1 ಕೈ ಬೆರಳಿಗೊಪ್ಪುವ ಹರುಳಿನುಂಗುರ ಇಟ್ಟವರು ಯರಳಿಯಂತೆ ಹೊರಹೊರಳಿ ನೋಡಿ ಮುಂ ಗುರುಳ ಗೂದಲಾ ತೀಡುವರು ಜಾಣಕಾಂತಿಯರು 2 ಮೇಲ್ಮಾಟದ ಬಗಿಯುಲ್ಮಾತಾಡುತ ಬಲ್ಮೋಹದಿ ಬಹು ಮೆಲ್ಲಮೆಲ್ಲನೆ ಹೆಜ್ಜೆ ನೆಲ್ಲ ಮ್ಯಾಲಿಕ್ಕುತ ಸೊಲ್ಮುಡಿನೇವರಿಸಿ ಮ್ಯಾಲ್ಮಲ್ಲಿಗಿ ಸರಗಳ ಮುಡಿಯವರು 3 ಸದ್ರಸ ಕುಂಕುಮ ಮುದ್ರಾಂಕಿತ ಕುಚ ಘದ್ರಿಸುತಲಿ ಬಹು ಉದ್ರೇಕದಿ `ಅನಂತಾದ್ರೀಶನ ' ಮುದ್ರಿಕಿ ಪದಗಳು ಘದ್ರಿಸಿ ನುಡಿವುತಾ ಭದ್ರಾಂಗಿಯರು 4 ಪದ ಮಂಗಳ ಮೂರುತಿ ಬಾಲಾಗೆ ಶ್ರೀ ನೃಪಾಲಾಗೆ ಮಂಗಳ ಗುಣಶೀಲಾಗೆ ಮಂಗಳಮೂರುತಿ ಛಂದಾ ಬಗಿಯಿಂದಾ ಪ ಶುಭದಿಂದಾ ಆನಂದದಿಂದಾ ಅಂಬೂಧಿಯೊಳಗಾಡಿ ಗಂಭೀರಾಗಿರಿಪೊತ್ತಾ ಜಾಂಬುನದಾಕ್ಷಾರಿ ವರ ಪ್ರಿಯಾಗೆ ಗಂಭೀರಾ ನೃಸಿಂಹಾನ ನೆಂಬಿ ರಕ್ಷಿತ ನೀಗೆ ರಂಭೇರು ಕರುಣಾದಿ ನೋಡಿ ಒಡಗೂಡಿ ಕೊಂಡಾಡಿ ತ್ವರಗೂಡಿ ಪಾಡಿ 1
--------------
ಅನಂತಾದ್ರೀಶ - ಕಥನಕಾವ್ಯಗಳು
ಆ ಬಾಲಗೋಪಾಲ ವರ್ಣನೆ ಆಡ ಹೋಗುವಾ ಬಾರೊ ರಂಗಾ ಪ ಆಡ ಹೋಗುವಾ ಬಾರೊ ರಂಗಾ ಕೂಡಿ ಕಾಳಿಂದೀ ತೀರದಲ್ಲಿ ನಾಡ ಗೊಲ್ಲರ ಹೆಂಗಳಿಗೆಲ್ಲ ಬೇಡಿದಿಷ್ಟಾರ್ಥಗಳ ಕೊಡುವಾ ಅ.ಪ. ಆಣಿಕಲ್ಲು ಗೋಲಿ ಗಜ್ಜುಗ ಚಿಣ್ಣಿಕೋಲು ಚಂಡು ಬುಗುರಿ ಕಣ್ಣುಮುಚ್ಚಾಲೆ ಕುಂಟಹಲಿಪೆ ಬಣ್ಣ ಬಣ್ಣದಾಟಗಳನು 1 ಸೋಲುಗೆಲವಿಗೆಲ್ಲ ನೀನೆ ಪಾಲುಗಾರನಾಗಿ ನಮ್ಮ ಮೇಲೆ ಮಮತೆ ಇಟ್ಟು ಸಾನು - ಕೂಲನಾಗಿ ಕೈಯ್ಯ ಪಿಡಿಯೋ2 ಮೆಟ್ಟು ಮೆಟ್ಟು ಕೋಲು ಕೈಲಿ ಕಟ್ಟು ಬುತ್ತಿ ಕೊಳಲು ಕಂಬಳಿ ಧಿಟ್ಟ ಗೋವಳರಾಮ ಶ್ರೀದ - ವಿಠಲಯ್ಯ ಯಾಕೆ ತಡವೋ3
--------------
ಶ್ರೀದವಿಠಲರು
ಇದು ಈಗ ಸಮಯ ಸೀತಾರಾಮ ಪ ಇದು ಈಗ ಸಮಯವು ಪದುಮದಳಾಕ್ಷನೆ ಸದಯದಿ ನಿಂದೆನ್ನ ಒದಗಿ ಕಾಯ್ವ ಶ್ರೀರಾಮ ಅ.ಪ. ಖಾಸವು ತುಂಬೆ ಕಂಠದಿ ಶ್ವಾಸವು ನಿಲ್ಲೆ ಘಾಸಿಯಾಗಲು ಘುರುಘುರುಕೆಂದು ಬÉೂೀರಿಡೆ ಸಾಸಿರ ಚೇಳು ಕಡಿದಂತಾಗುವಾಗ 1 ಕಾಲವು ಸಲ್ಲೆ ಪಂಚೇಂದ್ರಿಯಂಗಳು ಸಡಿಲೆ ಈ ದೇಹದಿ ಲಾಲಾ ಮೂತ್ರವು ಮಲ ಜೋಲಿ ಬೀಳುತಲಿರೆ ಕಾಲನ ದೂತರು ಬಂದು ಬಿಡದೆಳೆಯುತಿರುವಾಗ 2 ನಂದನಾದಿಗಳು ನಿಂದು ಗೋಳಿಡುತಿರೆ ಬಂಧು ಬಳಗಗಳು ಒಂದನು ನೋಡಿದೆ ಕುಂದುತ್ತ ಚಿತ್ತದಿ ನಿಂದಿರಲು ತಂದೆ ಧೇನುಪುರಿನಾಥ ಬಂದೆನ್ನ ಕಾಯೊ ಹೋಗುವಾಗ 3
--------------
ಬೇಟೆರಾಯ ದೀಕ್ಷಿತರು
ಈ ತನುವಿನೊಳಗೆ ಅನುದಿನವಿದ್ದು ಎನಗೊಂದು ಮಾತ ಹೇಳದೆ ಹೋದಿ ಹಂಸ ಪ. ಜಾಳಂಧರಯೆಂಬೊ ಮಾಳಿಗೆ ಮನೆಯಲ್ಲಿ ನೋಳ್ಪರೆ ಒಂಬತ್ತು ಬಾಗಿಲು ಬೇರಿಗೆ ಹೇಳಿ ಹೋಯಿತೆ ಒಂದು ಮಾತ 1 ಏರಿಯು ನೀರನು ತೆಗೆದುಕೊಂಡಿದ್ದೇನೊ ಭೋರೆಂಬೋ ಮಳೆ ಹೊಯ್ದು ಭೋರೆಂಬೊ ಮಳೆ ಹೊಯ್ದು ಬಣವೆದ್ದು ಹೋಗುವಾಗ ಈ ಏರಿಗೆ ಹೇಳಿಹೋಯಿತೆ ಒಂದು ಮಾತ 2 ಗಟ್ಟಿ ಬೆಟ್ಟಗಳಲ್ಲಿ ಅಟ್ಟಡವಿಯಲ್ಲಿ ಇಕ್ಕಿತ್ತು ಇಟ್ಟಿತ್ತು ಜೇನು ತನ್ನ ಸುಖಕಾಗಿ [ಇಟ್ಟ]ತುಪ್ಪವನುಂಡು ನೊಣ ಹಾರಿಹೋಗುವಾಗ ಈ ಬೆಟ್ಟಿಗೆ ಹೇಳಿ ಹೋಯಿತೆ ಒಂದು ಮಾತ 3 ಹೆಸರು ಹೇಳುವೆ ನಾನನುದಿನವು ರಸಭೋಜನವವುಂಡು ಜೋತಿತಾಹೋಗುವಾಗ ಪ್ರಣತಿಗೆ ಹೇಳಿ ಹೋಯಿತೆ ಒಂದು ಮಾತ 4 ಸಪರ್Àಶಯನ ಹಯವದನನಾಡಿದ ಮಾತು ಪಣೆ ಲಕ್ಷ್ಯವ ತೊಡೆದು ಮ್ಯಾಲಿರಲಾಗಿ ಸುಪ್ಪಾಣಿಮುತ್ತು ಬಾಯ್ಬಿಟ್ಟು ಹೋಗುವಾಗ ಈ ಚಿಪ್ಪಿಗೆÀ ಹೇಳಿ ಹೋಯಿತೆ ಒಂದು ಮಾತ 5
--------------
ವಾದಿರಾಜ
ಕೇಳು ಒಳ್ಳೆವರ ಕೂಡಾ ನಿನ್ನ ಹಿತವ ಪ್ರಾಣೀ | ತಾಳಿ ನರದೇಹದಿಂದ ಮಾಡುವರೇ ಹಾನಿ ಪ ಮುತ್ತಿನಂಥಾ ದಿನವಿದು | ಸಿಕ್ಕದಣ್ಣಾ ಮುಂದ | ಚಿತ್ತ ಸ್ಥಿರವಾ ಮಾಡಿ ಹರಿಯ ನೆನೆಯಬೇಕು ಇಂದ 1 ಬಾಲನಾಗಿ ಕೆಲವು | ದಿನದಿಂದ ಯೌವನದಿ | ಮ್ಯಾಲ ಯೆಚ್ಚರವ ಬಿಟ್ಟು | ಹರಿಗೆ ವಿಮುಖನಾದಿ 2 ಜರೆಯು ಬಂದ ಕಾಲದಲ್ಲಿ | ತನುವು ತನ್ನದಲ್ಲಾ | ಸರಕು ಮನೆಯೊಳಿಲ್ಲಾ 3 ಈಗಳವೆ ಯಚ್ಚರಿತು | ಹರಿಯಾ ಬಲಗೊಂಡು | ಹಿಂಡು 4 ಶರಣು ಹೋಗುವಾ | ಭಾವಭಕ್ತಿಯಲ್ಲಿ ದಾವಪ್ರೇಮಿ | ತಾರಿಸುವಾ ಗುರು ಮಹಿಪತಿಸುತ ಸ್ವಾಮಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುಹಿರಿಯರನುಸರಿಸಿ ಹÀರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿರೊ ಪ. ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದಿರಿರಕ್ಕಸಾರಿಯ ಭಕ್ತರೊಳು ಸೇರಿ ಮುಂದೆ ಸೆರೆ-ಯಿಕ್ಕದಂತವನ ಮರೆಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆ ಸುಖವೆಂಬುದಿಲ್ಲವು ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವ-ನುಂಬ ಸಂಭ್ರಮಕೆ ಸರಿಗಾಣೆನು 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಭಿಕ್ಷುಕರು ಬಂದು ಬೈದ್ಹೋಗುವಾಗಇಕ್ಕಿ ಪೊರೆವುದಕೆ ಬಗೆಯಿಲ್ಲದ ದರಿದ್ರಂಗೆಸೌಖ್ಯವೆತ್ತಣದು ಮನುಜರಿಗೆ 3 ತಾಯ ಮಾರಿ ತೊತ್ತಕೊಂಬ ಪಾಮರನಂತೆಹೇಯಕುಜನರ ಚರಣಕೆರಗಿಶ್ರೀಯರಸನಂಘ್ರಿಗಳ ನೆನೆಯಲೊಲ್ಲದ ಮನುಜರಿಗೆಆಯುಷ್ಯ ಬರಿದೆ ಹೋಯಿತಲ್ಲ 4 ಐವರಿತ್ತೊಡವೆಯನು ಅವರವರು ಒಯ್ವರು ಮ-ತ್ತೈವರೆಂಬುವರು ತೊಲಗುವರುಮೈಯ ಹತ್ತರಕೂಟ ಹರಿದು ಹೋಗುವ ಮುನ್ನಕೈಯ ಪಿಡಿದೆತ್ತುವರ ಕಾಣೆ 5 ಕಾಲು ಜವಗುಂದಿದವು ರೋಗರುಜಿನಗಳಿಂದಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖಘಂಟೆಯೊಳಗಿನನಾಲಿಗೆಗೆ ನಾದವೆಲ್ಲಿಹುದೊ 6 ಈಗಲೆ ಹರಿನಾಮನಾದದಿಂದೆಚ್ಚೆತ್ತುನಾಗಶಯನನ ಪುರದ ಪಥವಆಗಮಜ್ಞರ ಕೈಯ ಕೇಳಿಕೊಳ್ಳಿರೊ ನೀವುಈ ಗಾಳಿದೀಪ ಸ್ಥಿರವಲ್ಲ7 ಜರೆ ಬಂದು ಕಡೆಯಲ್ಲಿ ಗುರುಗುರುಟ್ಟುವಾಗಶರೀರಸಂಬಂಧಿಗಳ ಕಾಟತರುಣಿಯರ ಮೇಲಾಸೆ ತಮ್ಮ ಹಿತವರಿಯದೆಬರಿದೆ ಭವದೊಳಗೆ ಬಳಲದಿರಿ 8 ವೇದಶಾಸ್ತ್ರವನೋದಲಿಲ್ಲ ಜಪತಪಸಾಧು ಸತ್ಕರ್ಮಗಳ ಸರಕಿಲ್ಲಮಾಧವನ ಪೂಜೆಯನು ಮಾಡಿದವನಲ್ಲ ಹರಿಪಾದತೀರ್ಥ ವ್ರತಗಳಿಲ್ಲ 9 ಊಧ್ರ್ವಪುಂಢ್ರsÀಗಳೆಲ್ಲಿ ಹರಿಯ ಲಾಂಛನವೆಲ್ಲಿಪದ್ಮಾಕ್ಷಿ ಶ್ರೀತುಲಸಿ ಸರಗಳೆಲ್ಲಿಸದ್ಧರ್ಮಪಥವೆಲ್ಲಿ ವಿಷಯಾಂಧಕೂಪದೊಳುಬಿದ್ದು ಹೋರಳುವ ಮನುಜರೆಲ್ಲಿ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ 11 ಉಕ್ಕಿ ಹರಿಯನೆ ಪೊಗಳಿ ಅವನಂಗಣದಿ ಹೊರಳಿಶುಷ್ಕ ತರ್ಕಗಳ ಮೇಲೆ ಉಗುಳಿಭಕ್ತಿಜ್ಞಾನಗಳಿರಲಿ ಮಿಕ್ಕ ಪಥದಿಂ ಮರಳಿಮುಕ್ತಿಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆಗಡರದ ಮುನ್ನಕಳ್ಳರೈವರ ಕಾಟದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭದಲಿ ಬಚ್ಚಿಡಿರೊ 13 ಮಲಮೂತ್ರರಕ್ತಮಾಂಸದ ರಾಸಿಗಳು ಕೂಡಿಎಲುವಿನ ಬಿಲದಲ್ಲಿ ಗೂಡಮಾಡಿಬೆಳೆಸಿದೀ ತನುವೆಂಬ ನರಕದಾಸೆಯ ಬಿಟ್ಟುಜಲಜನಾಭನ ಸೇರಿಕೊಳ್ಳಿರೊ14 ಒಂಬತ್ತು ಛಿದ್ರವುಳ್ಳ ದೇಹವೆಂಬ ಮಡಕೆಯಲ್ಲಿತುಂಬಿದ ವಾಯು ಸ್ಥಿರವೆಂದುನಂಬಿಕೊಂಡಿರಬೇಡಿ ಹಯವದನ ಹರಿಯ ಪಾ-ದಾಂಬುಜವ ಸೇರಿ ಬದುಕಿರೊ 15
--------------
ವಾದಿರಾಜ
ಚಿತ್ತಜನೈಯನ ಕೂಡ ಅರ್ಥಿಲೆ ಹೋಗುವಾಗ ಹಸ್ತಿನಾವತಿಯ ಕಂಡರು ಜತ್ತಾಗಿ ಜನರು ಪ. ನದ ನದಿಗಳ ದಾಟಿ ಮುದದಿಂದ ಮುಯ್ಯಕ್ಕೆ ಬರಲು ಅದ್ಭುತವಾಗಿ ಬೆಳಗೋದೆಅದ್ಭುತವಾಗಿ ಬೆಳಗೋದೆ ನಗರಿಯುಇದೇ ವೈಕುಂಠ ಹೌದೇನ1 ತರಣಿ ತರಣಿ ಸರೋವರ ಇವ ನೋಡಗಗನಕ್ಕೆ ಸರಳಾಗಿ ಬೆಳೆದ ಮರನೋಡ2 ಆಲ ಅಶ್ವತ್ಥ ಶಾಲ ಶಾಬರವೃಕ್ಷ ಸಾಲು ಮಂಟಪ ನೋಡ ಸಾಲು ಮಂಟಪ ಇವ ನೋಡ ದೇವಾಲಯವು ವಿಶಾಲವಾಗಿದ್ದ ಬಗಿ ನೋಡ3 ಪ್ಯಾಟಿ ಬಾಜಾರ ಸಾಲು ಥಾಟಾಗಿ ತೋರುವುದೆ ಕೋಟಿ ಸೂರ್ಯರ ಬೆಳಕಿಲೆಕೋಟಿ ಸೂರ್ಯರ ಬೆಳಕಿಲೆ ಒಪ್ಪೊ ನಗರಿಯ ಮಾಟ ವರ್ಣಿಸಲು ವಶವಲ್ಲ4 ಹತ್ತಿ ಗೋಪುರ ಕೋಟಿ ಹಚ್ಚಿದೆ ಧ್ವಜ ಕೋಟಿಮತ್ತ ಪತಾಕೆಗೆ ಮಿತಿ ಇಲ್ಲಮತ್ತ ಪತಾಕೆಗೆ ಮಿತಿಯಿಲ್ಲ ಹರಿಣಾಕ್ಷಿಸತ್ಯ ಲೋಕವು ಹೌದೇನ5 ಅಟ್ಟಾಲದ ಮ್ಯಾಲೆ ಧಿಟ್ಟಾದ ಗೊಂಬೆಗಳು ಕೃಷ್ಣಗೆ ಕೈಯ್ಯ ಮುಗಿವಂತೆ ಕೃಷ್ಣಗೆ ಕೈಯ್ಯ ಮುಗಿವಂತೆ ನಿಲ್ಲಿಸಿದ್ದುಎಷ್ಟು ವರ್ಣಿಸಲು ವಶವಲ್ಲ6 ಜತ್ತಾದ ಮನೆಗಳಿಗೆ ರತ್ನದ ಶೋಭೆ ನೋಡಹತ್ತು ದಿಕ್ಕುಗಳ ಬೆಳಗೋವೆÉಹತ್ತು ದಿಕ್ಕುಗಳ ಬೆಳಗೋವೆÉ ಸ್ವರ್ಗವಎತ್ತಿಟ್ಟರೇನ ಐವರು7 ಚಂದದ ಮನೆಗಳಿಗೆ ಮುತ್ತಿನ ಹಂದರ ತೋರಣUಳೆಷ್ಟುಶ್ರೀ ಗಂಧದ ಥಳಿಯ ಸೊಬಗೆಷ್ಟುಶ್ರೀ ಗಂಧದ ಥಳಿಯ ಸೊಬಗೆಷ್ಟ ರಂಗವಾಲಿಅಂದವಾಗಿದ್ದ ಜಗುಲಿ ಎಷ್ಟ 8 ತಾರಕ್ಕಿ ಹೊಳವಂತೆ ತೋರೋದೀವಿಗೆ ಎಷ್ಟನೀರೆ ನಿಲಿಸಿದ್ದ ಕನ್ನಡಿ ಎಷ್ಟನೀರೆ ನಿಲಿಸಿದ್ದ ಕನ್ನಡಿ ಎಷ್ಟ ಉಪ್ಪರಿಗಿಏರಿ ನೋಡುವ ಜನರೆಷ್ಟ 9 ಶ್ರೀಶನ ಮುಖವನೆ ಸೋಸಿಲೆ ನೋಡುತ ಈಜಾಡಿ ಸುಖದ ನದಿಯೊಳು ಈಜಾಡಿ ಸುಖದ ನದಿಯೊಳುಬಹುಜನ್ಮಕ ಲೇಸಾದ ಪುಣ್ಯ ಫಲಿಸಿತು10 ಮೇಲಾದ ಮನೆಗಳ ಮ್ಯಾಲೆ ಸಾಲು ಗೊಂಬಿಗಳ ನೋಡ ಶ್ರೀಲೋಲ ರಾಮೇಶಗೆ ಕೈ ಮುಗಿವಂತೆಶ್ರೀಲೋಲ ರಾಮೇಶಗೆ ಕೈ ಮುಗಿದುಹರಿಣಾಕ್ಷಿ ಕಾಲಿಗೆ ಎರಗುವ ಪರಿಯಂತೆ 11
--------------
ಗಲಗಲಿಅವ್ವನವರು
ಡಿಂಬದಲ್ಲಿ ಇರುವ ಜೀವ ಕಂಬಸೂತ್ರ ಗೊಂಬೆಯಂತೆಎಂದಿಗಿದ್ದರೊಂದು ದಿನ ಸಾವು ತಪ್ಪದು ಪ ಬಟ್ಟೆ ಕಾಣದು1 ಹತ್ತು ಎಂಟು ಲಕ್ಷ ಗಳಿಸಿ ಮತ್ತೆ ಸಾಲದೆಂದು ಪರರಅರ್ಥಕಾಗಿ ಆಸೆಪಟ್ಟು ಸುಳ್ಳು ನ್ಯಾಯ ಮಾಡ್ವರುಬಿತ್ತಿ ಬೆಳೆದು ತನ್ನದೆಂಬ ವ್ಯರ್ಥಚಿಂತೆಯನ್ನು ಮಾಡೆಸತ್ತು ಹೋದ ಮೇಲೆ ಅರ್ಥ ಯಾರಿಗಾಹುದೊ 2 ಹೊನ್ನು ಹೆಣ್ಣು ಮಣ್ಣು ಮೂರು ತನ್ನಲಿದ್ದು ಉಣ್ಣಲಿಲ್ಲಅಣ್ಣತಮ್ಮ ತಾಯಿ ತಂದೆ ಬಯಸಲಾಗದುಅನ್ನ ವಸ್ತ್ರ ಭೋಗಕಾಗಿ ತನ್ನ ಸುಖವ ಕಾಣಲಿಲ್ಲಮಣ್ಣುಪಾಲು ಆದಮೇಲೆ ಯಾರಿಗಾಹುದೊ 3 ಬೆಳ್ಳಿ ಬಂಗರಿಟ್ಟುಕೊಂಡು ಒಳ್ಳೆ ವಸ್ತ್ರ ಹೊದ್ದುಕೊಂಡುಅಳ್ಳಾಚಾರಿ ಗೊಂಬೆಯಂತೆ ಆಡಿ ಹೋಯಿತುಹಳ್ಳ ಹರಿದು ಹೋಗುವಾಗ ಗುಳ್ಳೆ ಬಂದು ಒಡೆಯುವಂತೆಉಳ್ಳೆ ಪೊರೆಯಂತೆ ಕಾಣೊ ಸಂಸಾರದಾಟವು 4 ವಾರ್ತೆ ಕೀರ್ತಿಯೆಂಬುವೆರಡು ಸತ್ತ ಮೇಲೆ ಬಂದವಯ್ಯವಸ್ತು ಪ್ರಾಣನಾಯಕನು ಎಲ್ಲಿ ದೊರಕ್ಯಾನುಕರ್ತೃ ಕಾಗಿನೆಲೆಯಾದಿಕೇಶವನ ಚರಣಕಮಲನಿತ್ಯದಲ್ಲಿ ಭಜಿಸಿ ಸುಖಿಯಾಗಿ ಬಾಳೆಲೊ 5
--------------
ಕನಕದಾಸ
ತಾರೊ ನಿನ್ನಯ ಕರವಾರಿಜವನು ಕೃಷ್ಣ ಸಾರಿ ಬೇಡಿಕೊಂಬೆ ಮುರಾರಿ ದಯಮಾಡಿಪ ಮಾರಮಣನೆ ಸಂಸಾರ ಶರಧಿಯೊಳೀಸ ಲಾರದೆ ಬಳಲುತ ಚೀರೂತಲಿರುವೆ ಅ.ಪ ದಾರಾ ಪುತ್ರರೆನಗೆ ದಾರಿ ತೋರುವರೆಂದು ಮಾರ ಜನಕನೆ ಕೇಳೊ ಮೋರೆ ತೋರದೆ ಅವರು ಜಾರಿಕೊಂಡರಯ್ಯ ಭೂರಿ ಬಳಗದವರ್ಯಾರು ಬಾರರೊ ದೇವ 1 ಧಾರುಣಿ ಧನ ಧಾನ್ಯ ಹೇರಳವಾಗಿದೆ ಜೀವ ಹಾರಿ ಹೋಗುವಾಗ ಯಾರಿಲ್ಲವಯ್ಯ ಕೋರಿ ಭಜಿಪೆ ನಿನ್ನ ಬಾರಿ ಬಾರಿಗೆ ನಾನು ಕ್ಷೀರ ವಾರಿಧಿವಾಸ ವೀರ ಮಾರುತೀಶ 2 ಘೋರಾಂಧಕಾರದಿ ಮೇರೆಯು ಕಾಣದೆ ಮಿತಿ ಮೀರಿದ ಭಯದಿಂದ ಗಾರು ಪಡುತಿಹೆನೊ ಕಾರುಣ್ಯನಿಧಿಯೆ ನೀ ಪಾರು ಮಾಡದಿರೆ ಮತ್ತ್ಯಾರು ಕೇಳುವರೆನ್ನ ಶ್ರೀ ರಂಗೇಶವಿಠಲ 3
--------------
ರಂಗೇಶವಿಠಲದಾಸರು
ನೆನೆದು ನಿಷ್ಕಳಂಕರಾಗಿರೋ ಪಂಕಜಾಕ್ಷನ ಕೂಡ ದ್ವೇಷ ಬಳಿಸುವ ಮಾಯಿ ಪ ಮಲವಿಸರ್ಜನೆಯಾಗುವಾಗ ಮೂತ್ರವನು ಬಿಡುವಾಗ ಹೊಲಗೇರಿಯೊಳಗೆ ಸುಳಿದಾಡುವಾಗ ಹೊಲಿಯಾದವನು ತನ್ನ ಎದುರಿಗೆ ಬರುವಾಗ ಕಲಿಶಿಷ್ಯನಾದ ಮಣಿವಂತನ ನೆನೆಸಿರೊ1 ಶ್ರದ್ಧವನು ಬಿಡುವಾಗ ಸ್ವಪ್ನದೊಳಗೆ ಇಂದ್ರಿಯ ಬಿದ್ದು ಹೋಗುವಾಗ ಉಗುಳುವಾಗ ಗುಹ್ಯ ತೊಳೆಯುವಾಗ ಅಪ್ರ ಬದ್ಧನಾದ ಏಕಲವ್ಯನ ನೆನೆಯಿರೋ 2 ಶುದ್ಧ ಅಶುದ್ಧವನು ತುಳಿದು ನೆಲಕ್ಕೆ ವರಸುವಾಗ ವಮನವಾಗುವಾಗ ಮರಿಯದಲೆ ಅಮಲ ಸುಖ ಮುನಿ ಗುರು ವಿಜಯವಿಠ್ಠಲ ವೈದು ತಮಕೆ ಹಾಕುವ ಶುದ್ಧ ಕುಮತಿಯನು ನೆನೆಯಿರೋ 3
--------------
ವಿಜಯದಾಸ
ಮರುಳು ಮನುಜ ಹರಿಯ ಧ್ಯಾನಿಸೋ ಸ್ಥಿರವಿಲ್ಲವೀದೇಹ ಪ ಬರಿದೆ ಹೊನ್ನು ಮಣ್ಣಿಗಾಗಿ ಇರುಳು ಹಗಲು ವ್ಯರ್ಥವಾಗಿ ಕರೆಕರೆಯನು ಪಡುವೆಯಲ್ಲೊ ಅ.ಪ ತಂದೆ ತಾಯಿ ಸತಿಯು ಸುತರು ಬಂಧು ಬಳಗಗಳಾರಿದ್ದರು ಕರ್ಮ ತಪ್ಪಿಪರಾರು ಸಂದೇಹವಿಲ್ಲೆಂದು ತಿಳಿದು 1 ಜನರು ನಿನ್ನ ಸೇರುತಿಹರು ಕೊನೆಗೆ ಯಾರು ದಿಕ್ಕು ಕಾಣೆ ಮನೆಯಬಿಟ್ಟು ಹೋಗುವಾಗ 2 ಗುರುರಾಮವಿಠಲನಂಘ್ರಿ ಸ್ಮರಿಸಿ ಸ್ಮರಿಸಿ ಹರುಷ ಪೊಂದಿ ಪಾಪಿಯೆನ್ನಿಸಿಕೊಳ್ಳಬೇಡವೊ 3
--------------
ಗುರುರಾಮವಿಠಲ
ಮರೆಯದಿರು ಮರೆಯದಿರು ಹರಿಯನು ಪಾಪಿ ಪ ಮರೆಯದಿರೆ ನೀ ಮೈಕುಂಠಕೆ ಪೋಪಿಅ.ಪ. ಮೂರು ದಿನ ಬಾಳ್ವ ಸಂಸಾರವ ನೋಡಿ ಬಾರಿ ಹರುಷಿಸದಿರು ನೀನೆಲೊ ಖೋಡಿ 1 ಮತಿವಂತನಾದರೆ ಹರಿಪುರಕೆ ಪೋದಿ ಸತಿಸುತರ ನಂಬೆ ನಿನ ಬಾಯಲಿ ಬೂದಿ 2 ಸಿರಿಯ ನಂಬಿದ ದುರ್ಯೋಧನ ಬಿದ್ದ ಹರಿಯ ನಂಬಿದ ಭೀಮಸೇನನು ಗೆದ್ದ 3 ಆನೆ ಕುದುರೆ ರಥ ಭಂಡಾರವು ನಿಂದೆ ಪ್ರಾಣ ಹೋಗುವಾಗವು ಬಾರವು ಹಿಂದೆ 4 ರಂಗೇಶವಿಠಲನ ನಂಬಿದವ ಜಾಣ ಅಂಗನೆಯರ ನಂಬಿದ ಮನುಜನೆ ಕೋಣ 5
--------------
ರಂಗೇಶವಿಠಲದಾಸರು
ಮೊದಲನೇ ಅಧ್ಯಾಯ ಪಾತಿವ್ರತ್ಯ ಮಹಾತ್ಮೆ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ನಿರ್ದೋಷ ಗುಣಪೂರ್ಣ ವಿಷ್ಣು ಸರ್ವೋತ್ತಮ ಸ್ವತಂತ್ರ ಶ್ರೀದ ಶ್ರೀಪತಿ ಜಗಜ್ಜನ್ಮಾದಿಕರ್ತನು ಸಚ್ಛಾಶ್ರ - ದಿಂದಲೇ ವೇದ್ಯನು ಮೂರು ವಿಧ ಜೀವರಿಗೆ ಯೋಗ್ಯ ಸಾಧನಕೆ ಗತಿಯ ಮಾಡುವ ಅವತಾರ ಲೀಲಾ 1 ಸುಪುಷ್ಪಭವ ಬ್ರಹ್ಮದೇವನೋಳ್ ತತ್ ಶಬ್ದವಾಚ್ಯನು ಶ್ರೀ ಪುರುಷೋತ್ತಮನೆ ಪ್ರಜಾಸೃಷ್ಟಿ ಮಾಡಿಸುವನು ತ್ರಿಪುರಾರಿ ಭಸ್ಮಧರ ರುದ್ರನೋಳ್ ತನ್ನಾಮದಲಿ ಶ್ರೀ ಪುರುಷೋತ್ತಮನೇ ಸಂಹಾರ ಮಾಳ್ಪ ಅಂತರ್ಯಾಮಿ 2 ಉರುಜ್ಞಾನ ಸುಖ ಬಲಾದ್ಯಮಿತ ಗುಣಧಾಮನ ಕರ ಚರಣಾದ್ಯವಯವಕ್ಕೂ ಅವಗೂ ಅವನು ಧರೆಯಲ್ಲಿ ಅವತಾರ ಮಾಡುವ ರೂಪಗಳಿಗೂ ಪರಿಪೂರ್ಣವಾಗಿ ಅಭೇದ ಭೇದಲೇಶವೂ ಇಲ್ಲ 3 ದ್ವಿ ಷೋಡಶ ಶುಭಲಕ್ಷಣ ತನುವುಳ್ಳ ಬ್ರಹ್ಮಗೂ ವಿಷಕಂಠ ರುದ್ರಗೂ ಪರಸ್ಪರ ಭೇದ ಅಂತಸ್ಥ ವಿಷ್ಣುಗೂ ಇವರುಗಳಿಗೂ ಭೇದವು, ಅಂತರ್ಯಾಮಿ ವಿಷ್ಣು ಒಬ್ಬನೇ ದ್ವಿರೂಪದಲ್ಲಿ ಇವರಲ್ಲಿಹ 4 ಹತ್ತಾವತಾರ ಮತ್ಸ್ಯಾದಿರೂಪಗಳು ಮಾತ್ರವಲ್ಲ ಅನಂತರೂಪನು ಅನಂತಗುಣ ಕ್ರಿಯಾವಂತನು ಕ್ಷಿತಿಯಲ್ಲಿ ಬಲಕಾರ್ಯಕ್ಕೆ ಕೆಲವು ಅವತಾರ ಹಿತಕರ ಹಲವು ಜ್ಞಾನಬೋಧಕ್ಕೇವೇ ಕೆಲವು 5 ಧ್ಯಾತ್ಮನು ಜ್ಞಾನಕಾರ್ಯಕ್ಕಾಗಿ ಅವತರಿಸುವನು ಶ್ರೀಮಾನ್ ಹಯಗ್ರೀವ ಸನತ್ಕುಮಾರ ದತ್ತ ಕಪಿಲ ಧೀಮಾನ್ ಪರಾಶರ ವಾಸವೀಸೂನು ಐತರೇಯಾದಿ 6 ದ್ವಾಪರದಲ್ಲೇವೆ ಅಲ್ಲಲ್ಲಿ ಕಲಿವಿಷ ಹರಡಿ ತಪೋಧನರು ಗೌತಮರು ಶಪಿಸೆ ಜ್ಞಾನಕುಂದೆ ಶ್ರೀಪ ವೇದವ್ಯಾಸ ಜ್ಞಾನ ತೇಜಃಪುಂಜ ಬಂದು ತೋರಿ ಆ ಪೀಡಿಸುವ ಅಜ್ಞಾನ ತರಿದು ಸಜ್ಞಾನ ಇತ್ತ 7 ಹಿಂದೆ ಬ್ರಹ್ಮದೇವರಾಜÉ್ಞಯಿಂ ಅತ್ರಿಋಷಿವರ್ಯರು ನಿಂತರು ಋಕ್ಷಗಿರಿಯಲ್ಲಿ ಅಪತ್ಯಾಪೇಕ್ಷೆಯಿಂದ ಅದ್ಭುತ ತಪವಚರಿಸಿ ಜಗದೀಶ್ವರ ಸಮ - ಪುತ್ರ ಕೊಡೆ ಚಿಂತಿಸಿ ಹರಿಯಲ್ಲಿ ಶರಣಾದರು 8 ಹರಿ ತಾನು ತನ್ನ ಅಧಿಷ್ಟಾನರಾದ ಬ್ರಹ್ಮೇಶ್ವರ ಕರಕೊಂಡು ಋಷಿ ಮುಂದೆ ನಿಂತು ಯುಕ್ತಮಾತನ್ನಾಡಿ ಮೂರು ಮಂದಿಗಳು ತಾವು ಪುತ್ರರಾಗುವೆವು ಎಂದ ತರುವಾಯ ತಾನಿತ್ತ ವರವ ಒದಗಿಸಿದನು 9 ಭಾಗವತ ಈ ವಿಷಯ ಒಳಗೊಂಡು ಇಹುದು ಪತಿ ವೇದವ್ಯಾಸ ಸಂಕೃತ ಈ ಭೂರಾದಿ ಜಗತ್ತಿನಲ್ಲಿ ಪ್ರಖ್ಯಾತ ಪುರಾಣಂಗಳೊಳ್ ಶ್ರೀ ಭಗವಾನ್ ದತ್ತಾತ್ರಯನ ಅವತಾರವು ವೇದ್ಯ 10 ಗೀರ್ವಾಣ ಛಂದಸ್ಸು ಅಷ್ಟಿಯಲಿ ಬರೆಯುವದೆಂದು ಶ್ರೀವರನ ಹಿತಾಜÉ್ಞಯಿಂ ಪ್ರಸನ್ನ ಶ್ರೀನಿವಾಸೀಯ ಶ್ರೀವಿಷ್ಣು ಸಹಸ್ರನಾಮ ಭಾಷ್ಯ ಕನ್ನಡದಲ್ಲಿ ಅಳವಡಿಸಿದಂತೆ ಅಷ್ಟೀ ಛಂದಸ್ಸಲಿ ಈ ಗ್ರಂಥವ 11 ಈ ಗ್ರಂಥದಲಿ ಶ್ರೀಭಾಗವತವು ಮಾರ್ಕಂಡೇಯವು ಭಾಗವತರಿಗೆ ಉಪಾಸನಾ ಹೇತು ಪಂಚರಾತ್ರ ಆಗಮವು ಒಳಗೊಂಡ ವಿಷಯಗಳು ಇವೆಯು ಕಾಯ ಶುದ್ಧಿಯಿಂ ಪಠಣೀಯವು 12 ಗುರುಮಂತ್ರ ಉಪದೇಶವಿಲ್ಲದಂತಹ ಸ್ತ್ರೀ ಜನ ಶೂದ್ರರು ಬ್ರಹ್ಮಬಂಧುಗಳು ಈ ಗ್ರಂಥ ಪಠಿಸಲು ಹರಿಭಕ್ತ ಸಾಧು ವೈದಿಕ ಬ್ರಾಹ್ಮಣರ ಅಪ್ಪಣೆ ಕೋರಿ ಅವರ ಅಪ್ಪಣೆಯಿಂದ ಓದಬಹುದು 13 ಪ್ರತಿಷ್ಠಾನಪುರದಲ್ಲಿ ಕೌಶಿಕಾಹ್ವಯ ದ್ವಿಜನು ವ್ಯಾಧಿ ಪೀಡಿತನು ಕುಷ್ಠಿ ನಡಮಾಡಲು ಅಶಕ್ತ ಆತನ ಪತ್ನಿಯು ಸಾಧುಗುಣವತಿ ಬಲುಶ್ರೇಷ್ಠ ಪತಿ ಹೇಳಿದಂತೆ ನಡೆಯುವಳು 14 ಒಂದು ದಿನ ಆ ಬ್ರಾಹ್ಮಣನು ನೋಡಿದ ಬಾಗಿಲಾಚೆ ಬೀದಿಯಲಿ ಹೋಗುತ್ತಿದ್ದ ಸುಂದರಿ ವೇಶ್ಯೆಯೋರ್ವಳಲಿ ಸೋತು ಮನ ಅವಳನ್ನು ತಾನು ಹೊಂದಬೇಕೆನ್ನಲು ಸಾಧ್ವಿಸತಿ ಪತಿಯನ್ನು ಎತ್ತಿದಳು ಸೊಂಟದಲಿ 15 ರಾತ್ರಿ ಕತ್ತಲೆಮಾರ್ಗ ತಿಳಿಯದಲೆ ಪತಿಯನ್ನು ಹೊತ್ತುಕೊಂಡು ಹೋಗುವಾಗ ಪತಿಯ ಕಾಲು ತಾಕಿತು ಹಾದಿಯಲ್ಲಿ ಕಬ್ಬಿಣ ಸಲಾಕದಲ್ಲಿ ಚುಚ್ಚಿಸಿ ಇದ್ದ ಕಟಿ ಸಮೀಪ ಹಾಹಾ 16 ಅನ್ಯಾಯದಿ ಆ ರಾಜ್ಯದರಸ ಆ ಮಹಾಮುನಿಯ ಧನಚೋರನೆಂದು ಶೂಲಕ್ಕೆ ಹಾಕಿಸಿದ್ದ ಆ ಶೂಲ ಕಾಣದೇ ಕೌಶಿಕನ ಕಾಲ್ತಗಲಿ ಬಲು ನೋವಾಗಿ ಮುನಿ ಶಾಪವಿತ್ತರು ಸೂರ್ಯೋದಯಲ್ಲೇ ಸಾಯೆಂದು 17 ಹಾಹಾ ಇದು ಏನು ಮುನಿಗಳಿಗೆ ನೋವಾಯಿತಲ್ಲಾ ಮಹಾತ್ಮರ ಶಾಪ ವೀಣಾಗಲಾರದು ಮಾಂಗಲ್ಯವ ಪತಿ ಅಂತಸ್ಥ ಶ್ರೀಹರಿಯ ಸ್ಮರಿಸಿ ಆ ಪತಿವ್ರತೆ ಹೇಳಿದಳು 18 ಸೂರ್ಯೋದಯವಾಗದಿದ್ದರೆ ಶಾಪವು ಫಲಿಸದು ಸೂರ್ಯೋದಯವಾಗಬೇಡಿ ಎಂದು ಹೇಳಿದಳು ಸಾಧ್ವಿ ಆರ್ಯಧರ್ಮ ಲೋಕಕಾರ್ಯ ಸರ್ವವೂ ಸ್ತಬ್ಧವಾದವು ಎಲೆಲ್ಲೂ ಕತ್ತಲೆಯು ಭಾನು ಉದಯಿಸಲಿಲ್ಲ 19 ಇಂದ್ರಾದಿ ದೇವರ್ಗಗಳು ಬ್ರಹ್ಮನಲಿ ಮೊರೆಯಿಡಲು ಪತಿವ್ರತೆ ಮಹಾತ್ಮನೆ ಮತ್ತೊಬ್ಬ ಪತಿವ್ರತೆಯೇ ಪ್ರತಿ ಮಾಡುವಳು ಅತ್ರಿಋಷಿ ಪತ್ನಿ ಅನಸೂಯಾ ಪತಿವ್ರತಾ ರತ್ನಳಾ ಸಹಾಯ ಕೇಳೆಂದರು ವೇಧ 20 ಶಕ್ರಾದಿ ಸುರರುಗಳು ಅನಸೂಯಾದೇವಿಯಲಿ ಕೋರಿಕೆ ಮಾಡಲು ಆಕೆ ದೇವತೆಗಳ ಸಮೇತ ಧೀರ ಪತಿವ್ರತೆಯಾದ ಕೌಶಿಕಾ ಗೃಹಕೆ ಹೋಗಿ ಪರಿಚಯ ಮಾಡಿಕೊಂಡು ಕೊಂಡಾಡಿದಳಾ ಸಾಧ್ವಿಯ 21 ಮಹಾಭಾಗರು ಇಂದ್ರಾದಿಗಳಿಗೂ ಅನಸೂಯಗೂ ವಿಹಿತೋಪಚಾರ ಪೂಜಾದಿಗಳ ಮಾಡಿ ಆ ಸಾಧ್ವಿ ಮಹಾಭಾಗ್ಯ ಆಗಮನ ಎನ್ನುತ್ತ ಕಾರಣವನು ಬಹು ಹಿತದಲಿ ಕೇಳಿದಳು ತನ್ನ ಸ್ಥಿತಿ ಹೇಳಿ 22 ಸೂರ್ಯ ಉದಿಸುವದಕ್ಕೆ ಪತಿ ಬದುಕಿಸಲ್ಪಡುವನು ಎನ್ನುತೆ ಕೌಶಿಕಾ ಸಾಧ್ವಿಯು ಅನುಮೋದನೆ ಕೊಂಡು ಇನ ಉದಿಸಲಿ ಎಂದ ಅಘ್ರ್ಯ ಕೊಟ್ಟಳು ಮುದದಿ 23 ಸೂರ್ಯ ಮುನಿಶಾಪ ಫಲಿಸಿತು ಬಿದ್ದ ಕೆಳಗೆ ಕೌಶಿಕ ತತ್‍ಕ್ಷಣವೇ ಬದುಕಿ ಎದ್ದ ಪತಿವ್ರತಾ ಶಿರೋಮಣಿ ಅನಸೂಯಾ ದೇವಿ ಪ್ರಭಾವ ಪತಿವ್ರತಾ ಮಹಾತ್ಮೆ ಜ್ವಲಿಸಿತು ಲೋಕದಲ್ಲಿ 24 ಕೌಶಿಕನ್ನ ಬದುಕಿಸಿದ್ದು ಮಾತ್ರವಲ್ಲದೇ ಸರ್ವ ಕುಷ್ಠಾದಿ ರೋಗ ಪರಿಹರಿಸಿ ಯುವವಾಗಿ ಮಾಡಿ ಅಯುಷ್ಯ ಬಹುನೂರು ವರ್ಷಗಳ ಅನುಗ್ರಹಿಸಿ ತುಷ್ಠಿ ಸುಖಜೀವನ ಒದಗಿಸಿದಳ್ ಅನಸೂಯಾ 25 ಅನಸೂಯೆಯ ಪಾತಿವ್ರತ್ಯ ಮಹಾತ್ಮೆಯ ಶ್ಲಾಘಿಸಿ ಏನು ವರ ಕೇಳಿದರೂ ಕೊಡುವವೆಂದು ಸುರಪ ಆನಿಮಿಷರು ಹೇಳಲು ಪತಿವ್ರತಾ ಶಿರೋಮಣಿ ವಿಧಿ ಶಿವ ತನ್ನಲ್ಲವತರಿಸಲೆಂದಳು 26 ತಥಾಸ್ತು ಎಂದ ದೇವತೆಗಳ ವರ ಸತ್ಯಮಾಡೆ ಸುತಪಸ್ವಿ ಅತ್ರಿಗೆ ಹಂಸ ವೃಷಾರೂಡರು ಪ್ರತ್ಯಕ್ಷದಿ ಹೇಳಿದಂತೆಯೂ ಅನಸೂಯ ಅತ್ರಿಗೆ ಪುತ್ರರೆಂದುದಿಸಿದರು ಸೋಮಸ್ತ ಬ್ರಹ್ಮೇಶ ವಿಷ್ಣು 27 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಾಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯನಮೋ ಪ್ರಿಯತಾಂ ಶರಣು 28 ಎರಡನೇ ಅಧ್ಯಾಯ ಶ್ರೀ ದತ್ತಾತ್ರಯ ಪ್ರಾದುರ್ಭಾವ ಸಾರ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಭೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಬ್ರಹ್ಮಾವಿಷ್ಟನು ಸೋಮ ಔಷಧಿಗಳ ರಾಜನಾದ ಉನ್ಮಾದ ಚರ್ಯದಿ ಕೋಪ ಪ್ರಕಟಿಸಿ ಮೆರೆವರು ತಮ್ಮ ಶಿಷ್ಯರೊಡಗೂಡಿ ಶಿವಾವತಾರ ದೂರ್ವಾಸ ಸುಮ್ಮನಸ ಸಜ್ಜನ ಹಿತರು ದುಷ್ಟನಿಗ್ರಹರು 1 ತನ್ನನ್ನ ತಾನೇ ಸುತನಾಗಿ ದತ್ತಮಾಡಿಕೊಂಡನು ವಿಷ್ಣು ಅತ್ರಿ ದಂಪತಿಗೆ ಆದ ಕಾರಣ ಪ್ರಖ್ಯಾತೆ ಉನ್ನಾಮ ದತ್ತಾತ್ರಯ ಕ್ಷೋಣಿ ಯೋಗ್ಯಾಧಿಕಾರಿಗಳಿಂ ಘನಭಕ್ತಿಯಿಂ ಶುಚಿಯಿಂ ಜಪ್ಯ ಸ್ಮರಣೀಯಿಂ ಶ್ರೋತವ್ಯ ಜಯತು 2 ಕಲ್ಯಾಣತಮ ಪೂರ್ಣ ಅಮಲ ಗುಣಗಣ ಸಿಂಧು ಮಾಲೋಲ ಶ್ರೀವಕ್ಷ ಶ್ರೀಶನೇ ಪ್ರಾದುರ್ಭವಿಸಿದನು ಚೆಲುವ ಅನುಪಮ ಸೌಂದರ್ಯಸಾರ ಸರ್ವೋತ್ತಮ ಲೀಲಾನಂದಮಯ ಚಿನ್ಮಾತ್ರಗಾತ್ರ ಭಕ್ತೇಷ್ಟದಾತ 3 ಕಮಲಾಸನಾವಿಷ್ಟ ಸೋಮ ರುದ್ರಾವತಾರ ದೂರ್ವಾಸ ತಮ್ಮ ತಮ್ಮ ಉದ್ಯೋಗಸಾಧನಕೆ ಬೇರೆ ಬೇರೆ ಹೋಗೆ ಸುಮನೋಹರ ರೂಪ ಶ್ರೀಮನೋರಮ ದತ್ತಾತ್ರಯ ಸುಮಹಾ ಯೋಗಿಯಾದ ನಿಸ್ಸಂಗ ಯೋಗೇಶ್ವರೇಶ್ವರ 4 ಅತ್ರೇಯರು ಮೂವರು ಹೀಗೆ ಬೇರೆ ಬೇರೆಯಾಗಿಯೇ ತಮ್ಮ ತಮ್ಮ ರೂಪದಲ್ಲೇ ಇದ್ದರು ಒಂದಾಗಿ ಅಲ್ಲ ಸೋಮ ಶಿವ ದತ್ತರಿಗೆ ಬೇರೆ ಬೇರೆ ಮಂತ್ರವುಂಟು ಸೋಮ ಪಂಚ ಶಿವ ಪಂಚ ದತ್ತ ನವಅಕ್ಷರವು 5 ಪ್ರೋದ್ಯ ದಿವಾಕರ ಪೋಲ್ವ ವರ್ಣವುಳ್ಳ ಶುಭಗಾತ್ರ ಆದಿತ್ಯ ಸಹಸ್ರಾಮಿತ ಮಹೋತ್ಕøಷ್ಟ ತೇಜಃಪುಂಜ ವ್ಯಾಪ್ತ ಸರ್ವತ್ರ ಜ್ಞಾನಾಭಯಕರನು ಬ್ರಹ್ಮಾದಿ ತ್ರಿದಿವ ಸುಬೋಧಕನು ಕಪಿಲನು ದತ್ತಾತ್ರಯ 6 ಇಂಥ ಮಹಾಮಹಿಮನು ಕಪಿಲ ದತ್ತಾತ್ರಯನು ಅಧಿಕಾರಿಗಳಿಗೆ ಅಪರೋಕ್ಷಜ್ಞಾನ ಮೋಕ್ಷದಾತ ಶ್ರೋತೃ, ಮಂತ್ರ, ಧ್ಯಾತೃಗಳಿಗೆ ಕಪಿಲ ದತ್ತಾತ್ರಯ ಭಕ್ತಿ ಮೆಚ್ಚಿ ಸದಾ ಸಂರಕ್ಷಿಸಿ ಇಷ್ಟಾರ್ಥ ಕೊಡುವ 7 ಪದ್ಮ ಭವಾದ್ಯಮರರಿಂ ಧ್ಯಾತ ದತ್ತಾತ್ರಯ ಹರಿ ಮೇದಿನಿ ನರರಂತೆ ಅವತಾರ ಲೀಲೆ ಚರಿಸಿ ಅದ್ಭುತ ಯೋಗಾನುಷ್ಠಾನದಿ ಇರುತಿರೆ ಜನರು ಈತನ ಸೌಂದರ್ಯ ಯೋಗಸಾಮಥ್ರ್ಯ ಹೊಗಳಿದರು 8 ಸಹಸ್ರಾರು ಋಷಿಪುತ್ರ ಬ್ರಹ್ಮಚಾರಿಗಳು ಬಂದು ಅಹರ್ನಿಶಿ ಯೋಗೇಶ್ವರೇಶ್ವರ ದತ್ತನಾಶ್ರಮದಿ ಬಹಳುತ್ಸಾಹದಲಿ ಸುತ್ತು ಮುತ್ತು ಗುಂಪುಗೂಡಿ ಮಹಾಯೋಗಾಭ್ಯಾಸಕ್ಕೆ ಚ್ಯುತಿಯ ಕಲ್ಪಿಸಿದರು 9 ಯೋಗ್ಯರು ಸಜ್ಜನರು ಈ ಭಕ್ತ ಋಷಿಕುವರರು ಯೋಗ್ಯಸಾಧನೆ ಅವರವರ ಆಶ್ರಮದಲ್ಲಿಯೇ - ಗೈಯಲಿ ಬೇಕೆಂದು ಅವರುಗಳು ಹೋಗೋ ಉಪಾಯ ನಿಶ್ಚೈಸಿ ಮುಳುಗಿದ ದತ್ತನು ಸರೋವರದೊಳು 10 ಸುರಮಾನದಿ ಸಾವಿರವರ್ಷ ಭಗವಾನ್ ದತ್ತನು ಸರೋವರದೊಳಿದ್ದನು ಹೊರಜನಕ್ಕೆ ಕಾಣದೆ ಆ ಋಷಿಪುತ್ರರು ತೀರದಲಿ ಇಕೋ ಈಗ ನಾಳೆ ಬರುವನು ಮೇಲೆ ಎಂದು ಕಾಯುತ್ತಿದ್ದರು ದೃಢದಿ 11 ಜಲಧಿ ಉಕ್ಕಿ ಹರಿದು ಕ್ಷೋಣಿಯ ಮುಳುಗಿಸದೆ ಜಲಮಧ್ಯ ತಾನಿದ್ದು ಕಾಯುವ ವಡವಾ ಮುಖಾಗ್ನಿ ಜಲಮಧ್ಯದಿ ಈಗ ಹೊಕ್ಕಿರುವ ದತ್ತಾತ್ರಯನು ಮುಳುಗಿರುವುದು ಆಶ್ಚರ್ಯವಲ್ಲ ಈರ್ವರೂ ಏಕ 12 ಬಲುದೀರ್ಘ ದೇವವರ್ಷಗಳು ಸಾಸಿರವಾದರೇನು ಶೀಲತಮ ವರವಾಯುವು ವರುಣನು ಬುಧಾದಿ ಜಲಾಭಿಮಾನಿಗಳು ಕಿಂಕರರಾಗಿ ಇರುತಿಹರು ಜಲಶಾಯಿ ನಾರಾಯಣ ಅವತಾರ ದತ್ತನಿಗೆ 13 ಒಂದು ದಿನ ಕೆರೆನೀರು ಚಲಿಸಲು ಸಂತೋಷದಿ ಬಂದರೂ ಬಂದರೂ ಎಂದು ಕೂಗೆ ಋಷಿಕುವರರು ಇಂದಿರಾಪತಿ ದತ್ತ ಮೇಲೆದ್ದು ಬಂದ ಬದಿಯಲ್ಲಿ ಇಂದಿರಾಂಗಿ ನಾರೀಮಣಿ ಓರ್ವಳ ಆಲಿಂಗಿಸುತ 14 ಯಾರನ್ನೂ ಲೆಕ್ಕಿಸದೆ ಕಾಮವಿಲಾಸ ಕೇಳಿಯ ಆ ಸ್ತ್ರೀಯೊಡನೆ ಮಾಡುತ್ತಿದ್ದುದು ಕಂಡು ಯುವಕರು ಯೋಗಿ ಹೀಗಾದರೆ ಎನ್ನುತ ತ್ವರಿತ ತೆರಳಿದರು ಜುಗುಪ್ಸೆಯಲ್ಲಿ ತ್ಯಜಿಸಿ 15 ಆ ಪುಣ್ಯವಂತ ಋಷಿಪುತ್ರರು ತಿಳಕೊಳ್ಳಲಿಲ್ಲ ಆ ಸ್ಛುರದ್ರೂಪಿಣಿ ನಾರಿ ಸಾಕ್ಷಾತ್ ಲಕ್ಷ್ಮೀದೇವಿಯೆಂದು ವಿಪುಲ ಮನ ಹರುಷ ತೋರಿಸಿ ದತ್ತಾತ್ರಯನು ಕೈಪಿಡಿದು ಲಕ್ಷ್ಮಿಯ ಕರೆದುಹೋದ ಆಶ್ರಮಕೆ 16 ಯಾವ ತನ್ನಾಶ್ರಮದಿ ಸ್ವಾಧ್ಯಾಯ ಪ್ರವಚನಗಳ್ ದಿವ್ಯ ಯೋಗ ಅಭ್ಯಾಸ ಶಿಷ್ಯರ್ಗೆ ಶೀಕ್ಷಾದಿಗಳ್ ಯಾವಾಗಲೂ ಹಿಂದೆ ನಡೆಸುತ್ತಿದ್ದನೋ ಅಲ್ಲಿ ಈಗ ದೇವಿಯೊಡನೆ ಲೀಲಾವಿಲಾಸಗಳ ತೋರಿಸಿದ 17 ಮಂದ ಧೀಗಳು ಈ ವಿಡಂಬನೆ ಕಂಡು ಮೋದದಲಿ ಶ್ರೀದತ್ತ ಈ ರೀತಿ ಆದನಲ್ಲಾ ಎಂದು ಮಾತನಾಡೆ ಸುಧೀಗಳು ಬೃಹಸ್ಪತ್ಯಾದಿಗಳು ದತ್ತಾತ್ರಯನು ಮೋದಚಿನ್ಮಯ ನಿರ್ದೋಷ ಹರಿ ಶ್ರೀಶನೆ ಎಂದರÀು 18 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯ ನಮೋ ಪ್ರಿಯತಾಂ ಶರಣು 19 -ಇತಿ ಎರಡನೇ ಅದ್ಯಾಯ ಸಂಪೂರ್ಣಂ - ಮೂರನೇ ಅದ್ಯಾಯ ಸಂಪತ್‍ಲಕ್ಷ್ಮೀ ವೃತ್ತಾಂತ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೊಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಸುರಪ ಜಂಭಾಸುರನಿಂದ ಅಪಜಯವ ಕೊಂಡು ಸುರಗುರು ಪ್ರೇರಣೆಯಿಂ ದತ್ತಾತ್ರಯನಲಿ ಹೋಗಿ ಶರಣು ಹೊಕ್ಕು ಸೇವಗೈಯಲು ಆಗ ಅವನನ
--------------
ಪ್ರಸನ್ನ ಶ್ರೀನಿವಾಸದಾಸರು