ಒಟ್ಟು 275 ಕಡೆಗಳಲ್ಲಿ , 50 ದಾಸರು , 183 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಯಸೋದು _ ಉತ್ತಮ ಸಂಗ - ಬಯಸೋದು ಪ ಬಯಸೂವುದುತ್ತಮ ಸಂಗ | ಭವಭಯ ಪರಿಹರಿಸೂವ ಸಂಗ | ಆಹಭಯ ದೂರಾಭಯಪ್ರದ | ದಯ ಪೂರ್ಣ ಹರಿಯ ಹೃ-ದಯ ವ್ಯಾಪ್ತವಾದಂಥ | ವಿಯದೊಳು ಕಾಂಬಂಧ ಅ.ಪ. ವಿಭವ | ಹೇತು ಇವರೆಂದು ಖ್ಯಾತಿಲಿ ಇರುವ | ಬೊಮ್ಮದಿವಿಜೇಡ್ಯ ವೈಕುಂಠನವ | ಮೃಗ್ಯನವರಿಂದನಾಗುತಲಿರುವ | ಆಹಅವನ ಪದ ಕಮಲದಿ | ಧೃವ ಚಿತ್ತ ಉಳ್ಳವರವರಿಗೆಂಬರು ವೈ | ಷ್ಣವಾಸ್ಯರೆಂದೆನುತಲಿ 1 ತಾಪ ಶಮನ | ಸೇವಿಪರ ಹೃದಯಾಂತಃಕರಣ | ಆಹದಿರುತ ತೋರಿಕೊಳ್ಳೆ | ತಾರೇಶನಂದದಿಪರಿತಾಪವಿನ್ನುಂಟಿ | ಮರಳಿ ಅಂಥವನಿಗೆ 2 ಶುದ್ಧಾಂತಃಕರಣರ ಭಕ್ತಿ | ಪಾಶಬದ್ದನಾಗಿಹ ಹರಿಮೂರ್ತಿ | ಇಂಥಶುದ್ಧರ ವಸ ಹರಿಕೀರ್ತಿ | ಇಂದದಗ್ದ ಪಾಪದ ಮೂಟೆ ಭರ್ತಿ | ಆಹಊಧ್ರ್ವ ಪುಂಡ್ರವು ಶಂಖ | ಮುದ್ರಾದಿ ಚಿನ್ಹಿತಶಬ್ದರಿವರು ಪ್ರ | ಸಿದ್ಧ ಭಾಗ್ವತರೆಂದು 3 ಕಾಮ ಕಾರ್ಮಾಅವಿದ್ಯದಿಂದ | ದೇಹಭೂಮಿಯೊಳುತ್ಪನ್ನದಿಂದ | ಜಾತಿಬ್ರಾಹ್ಮಣಾಹಂಭಾವದಿಂದ | ಶೂನ್ಯಶ್ರೀಮನೋಹರ ಜೀವರಿಂದ | ಆಹಸಾಮಸನ್ನುತ ಭಿನ್ನ | ನೇಮ ತಿಳಿದು ತಾರ-ತಮ್ಯವ ತಿಳಿದವ | ಪ್ರೇಮ ಭಕ್ತನವನು 4 ನೋವು ಸಂತೋಷಗಳೆಂಬ | ದ್ವಯಭಾವಗಳ್ಸಮತೇಲಿ ಉಂಬ | ಜ್ಞಾನಿದೇವ ದೇವಗೆ ಪ್ರಿಯನೆಂಬ | ಬುದ್ಧಿಲೋಪಿ ಅವರ ಭಜಿಸೆ ತುಂಬ | ಆಹಗೋವ ಪಾಲಕ ಗುರು | ಗೋವಿಂದ ವಿಠ್ಠಲಕಾವನು ಬೆಂಬಿಡದೆ | ಈ ವಿಧ ಭಕುತರ 5
--------------
ಗುರುಗೋವಿಂದವಿಠಲರು
ಶ್ರೀ ಗಣಪತಿಯ ಪದಾಬ್ಜಕೆ ನಮಿಸಿರಾಗದಿಂದಲಿ ಶಾರದೆಯ ಸ್ಮರಿಸಿನಾಗಭೂಷಣ ಪದಾಬ್ಜಯುಗಕೆ ತಲೆವಾಗಿ ಬಾಲೆಯರಾಶೀರ್ವಾದದ ಪದಗಳರಾಗದಿ ಪಾಡಿ ಪೊಗಳುವೆ 1 ಸಾಲಿ ಸೀರೆಯನುಟ್ಟು ಸರಮುತ್ತ ಕಟ್ಟುಬಾಲಕಿಯರೊಳು ಕಟ್ಟಾಣಿ ನೀನಾಗುಮೇಲೆನೀ ಅಷ್ಟಪುತ್ರರನು ಪಡೆದು ಸುಖಿಬಾಳು ಸ್ತ್ರೀಯರಿಗೆಲ್ಲಾ ದೊರೆಯಾಗಿರುಶ್ರೀ ಮೈಲಾರಲಿಂಗನ ಕೃಪೆಯಿಂದಾ2 ಪಲ್ಲಕ್ಕಿಯ ಸಾನಂದದೊಳೇರುಹಲ್ಲಣಿಸಿದ ಕರಿತುರಗವನೇರುಎಲ್ಲಾಭರಣವನಿಟ್ಟು ಸುಖದಿ ಪ್ರಾಣದೊಲ್ಲಭಸಹಿತ ಸಂತೋಷದೊಳಿರು ಶ್ರೀಕೊಲ್ಲೂರ ಮೂಕಾಂಬೆಯ ಕೃಪೆಯಿಂದಾ 3 ಚಂದ್ರಕಸ್ತುರಿಯ ತಿಲಕಗಳನಿಟ್ಟುಚಂದದಿ ಕುಂಕುಮ ರೇಖೆಯನಿಟ್ಟುಇಂದೀವರನೇತ್ರಕೆ ಕಪ್ಪಿಟ್ಟು ಆಚಂದ್ರಾರ್ಕವು ಸುಖಬಾಳು ಶೃಂಗೇರಿಯಚಂದ್ರಮೌಳೀಶನ ಕೃಪೆಯಿಂದಾ4 ಅರಿಶಿನ ಚೂರ್ಣವನು ಲೇಪಿಸುತಪರಿಮಳಗಂಧವ ಪಸರಿಸಿಕೊಳುತಕರಿಯಮಣಿಯ ಮುತ್ತಿನ ಸರಗಳನಿಟ್ಟುಪರಮಸಂತೋಷದೊಳಿರು ಶ್ರೀ ಹಂಪೆಯವಿರೂಪಾಕ್ಷನ ಕೃಪೆಯಿಂದ 5 ಪರಿಮಳಿಸುವ ಪುಷ್ಪಸರಗಳ ಮುಡಿದುಗುರುಹಿರಿಯರ ಆಶೀರ್ವಾದವ ಪಡೆದುಹರುಷದಿ ಪುತ್ರಪೌತ್ರರ ಸಲಹುತ ಪತಿಚರಣಸೇವೆಯ ಮಾಡಿ ಸುಖಮಿರು ಕುಕ್ಕೆಯವರ ಸುಬ್ರಹ್ಮಣ್ಯನ ಕೃಪೆಯಿಂದ 6 ಸರಸ್ವತಿಯಂತೆ ವಿದ್ಯಾವಂತೆಯಾಗುಸಿರಿಯಂತೆ ಸೌಭಾಗ್ಯವಂತೆ ನೀನಾಗುಅರುಂಧತಿಯಂತೆ ಪತಿವ್ರತೆಯಾಗುತಪರಮಾನಂದದೊಳಿರು ಶ್ರೀ ಕೆಳದಿಯಪುರದ ರಾಮೇಶನ ಕೃಪೆಯಿಂದ 7
--------------
ಕೆಳದಿ ವೆಂಕಣ್ಣ ಕವಿ
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ 1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ಶ್ರೀಪತಿ
ಹರನಕುಮಾರನ ಚರಣಕಮಲಗಳಿಗೆರಗಿ ಶಾರದೆಗೆ ವಂದಿಸುತ ಶರಧಿಶಯನಗೆ ಸೆರಗೊಡ್ಡಿ ಬೇಡಿಕೊಂಬೆ ಶರಧಿಸುತÉಯ ಕತೆಗ್ವರವ 1 ಸಾಕ್ಷಾತ ಶ್ರೀಹರಿ ವಕ್ಷಸ್ಥಳ ವಾಸಿಯೆ ಇಕ್ಷುಚಾಪದವನ ಪಡೆದ ಮೋಕ್ಷದಾಯಕಳೆ ಮಾಲಕ್ಷುಮಿ ಕರುಣಾಕ- ಟಾಕ್ಷದಿ ನೋಡಬೇಕೆನ್ನ 2 ಶ್ರಾವಣಮಾಸದಿ ಮೊದಲ ಶುಕ್ಕುರುವಾರ ಮಾ- ಧವನರಸಿ ಮಾಲಕ್ಷ್ಮಿ- ದೇವೇರ ಮಹಿಮೆ ಕೊಂಡಾಡುವೋದೀ ಕಥÉ ಕಿವಿಗೊಟ್ಟು ಕೇಳೋದು ಜನರು 3 ಬಡವ ಬ್ರಾಹ್ಮಣನೊಂದು ಪಟ್ಟಣದೊಳಗಿದ್ದ ಮಡದಿ ಮಕ್ಕಳ ಸಹಿತಾಗಿ ಹಿಡಿದು ತಂಬೂರಿ ತಂಬಿಗೆಯ ಗೋಪಾಳಕ್ಕೆ ಬಿಡದೊಂದು ಮನೆಯ ತಿರುಗುತಲಿ 4 ಸೊಸೆಯರು ನಾಲ್ಕು ಮಂದಿಯು ಗಂಡುಮಕ್ಕಳು ಹಸುಗೂಸುಗಳು ಮನೆತುಂಬ ಅಶನ ವಸನವಿಲ್ಲ ಹಸಿದ ಮಕ್ಕಳಿಗ್ಹಾಲು ಮೊಸರು ಅನ್ನವು ಮೊದಲಿಲ್ಲ5 ಅತಿಗುಣವಂತರು ಗತಿಯಿಲ್ಲ ಗ್ರಾಸಕ್ಕೆ ಮಿತಭೋಜನವ ಮಾಡುವರು ವ್ರತ ನೇಮ ನಿಷ್ಠೆ ನಿರುತ ದರಿದ್ರವನು ಶ್ರೀಪತಿ- ಸತಿ ದಯದಿ ನೋಡಿದಳು 6 ಒಂದು ದಿನದಿ ಬಂದ ಮಂದಿ ಮಂದಿರದಲ್ಲಿ ಚೆಂದಾದ ಸುಣ್ಣ ಸಾರಣೆಯು ರಂಗವಲ್ಲಿ ಚಿತ್ರ ಬಣ್ಣಕಾರಣೆ ಮಣಿ- ಮುಂದೆ ತೋರಣ ಕಟ್ಟುತಿರಲು 7 ಮನೆಮನೆಯಲ್ಲಿ ಮಾಲಕ್ಷ್ಮಿದೇವಿಯರ ಚಟ್ಟಿಗೆ ಬರೆವು- ದನು ತಾ ಕಂಡು ಇದು ಏನು ನೋವಿ (ನೋಂಪಿ?) ಎನಗೆ ಹೇಳಬೇಕೆಂದು ಘನ ಭಕ್ತಿಯಿಂದ ಕÉೀಳಿದನು 8 ಕ್ಷೀರಸಾಗರದಲ್ಲಿ ಹುಟ್ಟಿದ ಮಾಲಕ್ಷ್ಮಿದೇವಿ ದೇವರ ಪಟ್ಟದರಸಿ ಶ್ರಾವಣಮಾಸ ಸಂಪತ್ತು ಶುಕ್ಕುರುವಾರ ನಾವು ಪೂಜೆಯ ಮಾಡಬೇಕು9 ಎನಗೊಂದು ಚಟ್ಟಿಗೆ ಬರೆದುಕೊಟ್ಟರೆ ಎನ್ನ ಮನೆಯಲ್ಲಿ ಇಟ್ಟು ಪೂಜೆಪೆನು ವಿನಯದಿಂದ್ಹೇಳಿಕೊಂಡರೆ ಒಂದು ಚಟ್ಟಿಗೆ ಬರೆದÀುಕೊಟ್ಟರು ಬಲಗೈಲಿ 10 ಸಿರಿದೇವಿಚಟ್ಟಿಗೆ ಹಿಡಿದು ಗೋಪಾಳಕ್ಕೆ ಹೋದನು ಮನೆ ಮನೆಯಲ್ಲಿ ಗೂಡೆ ಅಕ್ಕಿ ಬ್ಯಾಳೆ ಬೆಲ್ಲತುಪ್ಪವ ತಂದು ನೀಡೋರು ಹಿಡಿ ಹಿಡಿರೆಂದು 11 ಕುಸುಮ ಮಲ್ಲಿಗೆ ಪತ್ರಫಲಗಳು ಪೂಜಾ ಸಾಧನ ಪದಾರ್ಥಗಳು ಆದಿಲಕ್ಷ್ಮಿದಯ ಆದಕಾರಣದಿಂದ ಆದರದಿಂದ ಕೊಡುವರು 12 ತಂದ ಪದಾರ್ಥ ತನ್ನ್ಹೆಂಡತಿ ಕರೆದು ಮುಂದಿಟ್ಟು ವಾರ್ತೆಗಳ ಹೇಳಿದನು ಇಂದು ಪೂಜೆಯ ಮಾಡು ಆ- ನಂದವ ಕೊಡುವಳು ನಮಗೆ13 ಕಬ್ಬು ಬಿಲ್ಲ್ಹಿಡಿವೋ ಕಾಮನ ಮಾತೆ ಮಾಲಕ್ಷ್ಮಿ ಉರ್ವಿಯೊಳುತ್ತಮಳೀಕೆ ಹಬ್ಬದೂಟಕÉ ಹೇಳಿ ಬಂದೆ ಬ್ರಾಹ್ಮಣಗÉ ಮ- ತ್ತೊಬ್ಬ ಮುತ್ತೈದೆಗ್ಹೇಳೆಂದ14 ಚಿಕ್ಕಸೊಸೆ ಎಣ್ಣೆ ಕುಂಕುಮ ಕೈಯಲ್ಲಿ ತಕ್ಕೊಂಡು ನಡೆದಳ್ಹಾದಿಯಲಿ ಚೊಕ್ಕ ಚಿನ್ನದ ಗೊಂಬೆಯಂಥ ಮುತ್ತೈದೆ ತಾ ಗಕ್ಕನೆ ಬಂದು ಕೇಳಿದಳು 15 ಹುಡುಗಿ ನೀ ಎತ್ತ ಪೋಗುವಿಯೆ ನಿಮ್ಮನೆಯೆಲ್ಲೆ ಅಡಿಗೆಯೇನೇನು ಮಾಡುವರು ಹಿಡಿದೆಣ್ಣೆ ಕುಂಕುಮ ಕೊಡುವೋದಿನ್ನ್ಯಾರಿಗೆ ಕೊಡಬಾರದೇನೆ ನೀಯೆನಗೆ 16 ದಾರಾದರೇನಮ್ಮ ದಾರಿ ನೋಡದ ಮುಂಚೆ ನೀನೇ ಬಾ ನಮ್ಮ ಮಂದಿರಕÉ ಹೇಳಿ ಮುತ್ತೈದೆಗೆ ಹಿಗ್ಗಿಲೆ ಬಂದತ್ತೆ ಮಾವನ ಮುಂದರುಹಿದಳು 17 ಮನೆಯ ಸಾರಿಸಿ ಸುಣ್ಣ ಕಾರಣೆ ರಂಗೋಲಿಯ ಬರೆದು ಬಾಗಿಲಿಗೆ ಬಣ್ಣವನು ಎರೆದು ಕೊಂಡೆಲ್ಲರು ಬ್ಯಾಗ 18 ಕಮಲ ಕ್ಯಾದಿಗೆ ಕಬ್ಬು ಕದÀಳಿ ಕಂಬವು ಬಾಳೆಗೊನೆ ಕಟ್ಟಿ ಚಿತ್ರ ಮಂಟಪವ ನಡುವ್ಯ್ಹಾಕಿ ಪದ್ಮ ಪೀಠಗಳ 19 ಚಟ್ಟಿಗೆಯೊಳಗಕ್ಕಿ ಐದು ಫಲವ ತುಂಬಿ ಮುತ್ತೈದೇರೆಲ್ಲ ನೆರೆದು ಕಟ್ಟಿದರ್ ಕೊರಳ ಮಾಂಗಲ್ಯ ಮಾಲಕ್ಷ್ಮಿ ಪ್ರತಿಷ್ಠೆ ಮಾಡಿದರು ಸಂಭ್ರಮದಿ 20 ಅರಿಷಿಣ ಕುಂಕುಮ ಗಂಧ ಬುಕ್ಕಿ ್ಹಟ್ಟು ಗೆಜ್ಜೆ- ವಸ್ತ್ರವು ಪಾರಿಜಾತ ಸಂಪಿಗೆಯು ಮುಡಿಸಿ ಮಲ್ಲಿಗೆದಂಡೆ ಒಡೆಸೆ ತೆಂಗಿನಕಾಯಿ ಉಡಿ ತುಂಬುತ್ತತ್ತಿ ಫಲಗಳು 21 ಭಕ್ಷ್ಯಶಾವಿಗೆ ಪರಮಾನ್ನ ಚಿತ್ರಾನ್ನ ಸಣ್ಣಕ್ಕಿ ಶಾಲ್ಯಾನ್ನ ಸೂಪಗಳು ಚಕ್ಕುಲಿ ಗಿಲಗಂಜಿ ಚೆಂದ ಚಿರೋಟಿ ಹಪ್ಪಳ ಸಂಡಿಗೆ ಆಂಬೊಡೆಗಳು22 ಘೃತ ಕ್ಷೀರ ಸಕಲ ಪಕ್ವಾನ್ನ ಮಂಡಿಗೆ ಬೀಸೋರಿಗೆ ಗುಳ್ಳೋರಿಗೆಯು ಚಂದ್ರನಂತ್ಹೊಳೆವೊ ಶಾವಿಗೆಯ ಫೇಣಿಯು ದಿವ್ಯ ಬುಂದ್ಯ ಬುರುಬುರಿ ಅನಾರಸವು23 ಬೇಕಾದ ಬೇಸನ್ನು ಬಿಳಿಯದಳಿಯದುಂಡೆ (?) ಮೋತಿಚೂರು ಚೂರ್ಮಲಾಡು
--------------
ಹರಪನಹಳ್ಳಿಭೀಮವ್ವ
ಅಧ್ಯಾಯ ಐದು ಲೋಕ ಮೋಹಕ: ಪಾತು ಮಾಧವ: ಧ್ವನಿ ರಾಗ:ಯರಕಲ ಕಾಂಬೋದಿ ಅಟತಾಳ ತಿರುಗಿ ವೇಂಕಟಗಿರಿ ಏರಲು ಪ ಪದ್ಮನಾಭನ ಸ್ಮರಿಸಿ ಬಿದ್ದಳು ಮೂರ್ಛಿತಳಾಗಿ ಸದ್ದು ಮಾಡಿದರಲ್ಲಿ ಇದ್ದ ಗೆಳತಿಯರೆಲ್ಲ ಮುದ್ದು ಮುಖದವಳೆ ನೀ ಎದ್ದು ಮಾತಾಡೆಂದರು ಪದ್ಮಿನಿಯು ತಾ ಕೇಳಿ ಎದ್ದು ನುಡಿಯದೆ ಇರಲು ಸಿದ್ಧಮಾಡಿ ಬೇಗೊಬ್ಬ ಬುದ್ಧಿವಂತೆಯ ಕಳುಹಿ ಗದ್ದಲಮಾಡದೆ ಅಂದಣವನು ತರಿಸಿ ಪದ್ಮ ಗಂಧಿಯ ಕೊಂಡು ಎದ್ದು ನಡೆದರು ಪುರಕೆ ಸುದ್ದಿ ಹರಡಿತು ಅಲ್ಲಿ ಗದ್ದಲಾಯಿತು ಬಹಳ 1 ಬಂದಳಲ್ಲಿಗೆ ತಾಯಿ ಅಂದಳೀಪರಿ ನೋಡಿ ಇಂದು ಎಲ್ಲಿಗೆ ಚಿಕ್ಕ ಕಂದಮ್ಮ ನೀ ಪೋಗಿದ್ದೆ ಇಂದು ಬಾಡಿಹುದೇಕೆ ಇಂದು ಮೈಯೊಳು ಜ್ವರ ಬಂದಿಹುದೇಕಮ್ಮಯ್ಯ ಮುಂದೆ ಮಾತಾಡದಿರಲು ತಂದೆ ಕೇಳಿದನಾಗ ಸುಂದರಿಯಳೆ ದಾರೇನಂದರಮ್ಮಯ್ಯ ನಿನಗೆ ಅಂದು ಅವರನು ಬಿಡದೆ ಕೊಂದು ಹಾಕುವೆ ಪೇಳು ಅಂದ ಮಾತಿಗೆ ತಾನು ಒಂದು ಮಾತಾಡಲೊಲ್ಲಳು 2 ತಿಳಿಯಲೊಲ್ಲದು ಎಂದು ಬಳಲಿ ಆಕಾಶರಾಜ ಕಳವಳಿಸುತ ಕರೆಕಳಿಸಿ ಬಲ್ಲವರನು ತಿಳಿಯಬಲ್ಲವರೆಲ್ಲ ತಿಳಿದು ಹೇಳಿರಿ ಎಂದ ಕೆಲವರೆಂದರು ಪಿತ್ತ ತಲೆಗೆ ಏರಿಹುದೆಂದು ಕೆಲವರೆಂದರು ಭೂತ ಬಲಿಯ ಚಲ್ಲಿರಿ ಎಂದು ಕೆಲವರೆಂದರು ಗ್ರಹಗಳ ಬಾಧೆ ಇರುವದು ಉಳಿದ ಮಂದಿಗೆ ಮತ್ತೆ ತಿಳಿಯಲಾಗದಾಯಿತು ಚಲುವನಂತಾದ್ರೀಶನ ಚಲುವಿಕೆಯನೆ ಕಂಡು 3 ವಚನ ಬಹುಶೋಕವನು ಮಾಡುತಲಿ ತಾ ಕರಿಸಿ ಕೇಳಿದನು ನಾಕೇಶಗುರು ಹೀಗೆ ತಾ ಕೇಳುತಲಿ ನುಡಿದ ಆಕಾಶನೃಪ ಚಿಂತೆಯಾಕೆ ಬ್ರಾಹ್ಮಣರ ಏಕಾದಶಾವರ್ತಿ ಏಕಚಿತ್ತದಲಿ 1 ಲೇಸಾಗಿ ತಿಳಿಯೆಂದು ಉರ್ವೀಶ ಭಕುತಿಯಂ ಆಸನಾದಿಗಳಿಂದ ಭೂಸುರರಿಗೆ ಅರ್ಪಿಸಿ ಸಂತೋಷವನು ಮಾಡಿರಿ ಎಂದು ಆಶು ಕಳುಹಿದನಗಸ್ತೇಶ್ವರನಾಲಯಕೆ 2 ಧ್ವನಿ ಕೇವಲ ಚಿಂತೆಯಿಂದಲೇ ದೇವಿಬಕುಲಾವತಿ ತಾನು1 ಪರಿವಾಣದಲ್ಲಿಟ್ಟುಕೊಂಡು ಇದ್ದಲ್ಲೆ ಗೋವಿನಂತೆ 2 ಆಲಯದಿ ಜಗತ್ಪಾಲಯ ಮಲಗಿದ್ದು ಕಂಡು ಬಾಲೆ ತಾಮಾತಾಡಿದಳು ಇಂದು 3 ಹೆಚ್ಚಿನ ವರಹ ಅಚ್ಯುತ ವಾಮನ ಏಳೊ 4 ಉದ್ಧರಿಸಿದಾತನೆ ಏಳೊ ಮುದ್ದು ಹಯವದನ ಏಳೋ 5 ಕೊಡದೆ ಸೃಷ್ಟಿಕರ್ತನು ಹರಿವಾಣ ಕೆಳಗಲ್ಲೆ ದಿಟ್ಟನಡೆದಳು ಬದಿಯಲಿ6 ಎನುತ ಮುಸುಕ ಕಂಡು ಅಂತ:ಕರಣದಿ ನುಡಿದಳು7 ಧ್ವನಿ ರಾಗ:ಕಾಪಿ ಅಟತಾಳ ಯಾಕೆ ಮಲಗಿದೆ ನೀ ಏಳೋ ಅಣ್ಣಯ್ಯಾ ವೇಂಕಟ ಯಾಕೆ ಮಲಗಿದೆ ಏಳೋ ಏನು ಚಿಂತೆಯು ಪೇಳೊ ಲೋಕ ಸಾಕುವ ದಯಾಳೋ ಅಣ್ಣಯ್ಯ ವೇಂಕಟಪ ಬಾಳ ಬಳಲಿದಿಯೊ ಹಸಿದು ಮಾತಾಡದಂಥ ಮೂಲ ಕಾರಣವೇನಿದು ಹಾಲುಸಕ್ಕರೆ ತುಪ್ಪಾಯಾಲಕ್ಕಿ ಪರಮಾನ್ನ ಬಾಲಯ್ಯ ನೀನು ಉಣಲೇಳೋ 1 ವಟದೊಳು ಹೆಬ್ಬುಲಿಯ ಕಂಡಂಜಿದಿಯೇನೊ ನೆಲೆಯು ತಿಳಿಯದು ನಿನ್ನ ಪ್ರಳಯ ಕಾಲಕ್ಕೆ ಆಲದೆಳೆಯೊಳು ಮಲಗಿದವನೋ2 ಹಗಲ್ಹೊತ್ತು ಮಲಗಿದ ದವನಲ್ಲೊ ಹೆತ್ತತಾಯಿ ಆಣೆ ಸತ್ಯವಾಣಿ ನೀಪೇಳೋ ಚಿತ್ತ ವ್ಯಾಕುಲವು ಯಾಕೆ3 ಕೊಂಬುವರೋಮುನ್ನ ಇಂದು ಮೋಹಿತನಾಗಿರುವಿ4 ಬಾಹುವದುಕಂಡು ಮರಳು ಮಾಡಿದಳೋ ನಿನ್ನ 5 ತಕ್ಕ ಉಪಾಯಾ ಅಕ್ಕರವಾಗುವದೆನಗೆ 6 ಎನ್ನ ಮುಂದೆ ನೀ ಸಂಶಯ ಬಿಡು ಚನ್ನಿಗನಂತಾದ್ರೀಶನೆ 7 ವಚನ ಕಣ್ಣೀರುವರಸುತಲೆದ್ದು ಕೀರವಾಣಿಯೇಕೇಳು ಘೋರು ದು:ಖವ ತನಗೆ ಆರಿಗುಸರಲಿ ನಾನು ಆರಿ ಹೇಳುವೆ ನಿನಗೆ ಸಾರಾಂಶ ಮಾತು 1 ನೀನೆ ಎನಗ್ಹಿರಿಯಣ್ಣ ನೀನೆಗಜರಾಜೇಂದ್ರ ವರಧ್ರುವರಾಯ ನೀನು ಸರ್ವವು ಅಭಿಮಾನ ರಕ್ಷಕಳು 2 ಎಂಬೋರನ್ಯಾರನು ನಾ ಎನ್ನ ಮನಸ್ಸಿನ ಅರಣ್ಯದೊಳು ರೂಪ ಲಾವಣ್ಯ ಮುಖವು ಹುಣ್ಣಿಮೆಯ ಚಂದ್ರ 3 ಕಣ್ಣಮೂಗಿಲೆ ಸಂಖ್ಯೆ ಜನ್ಮದಲಿ ಮಾಡಿದ್ದು ಅನ್ಯಾಯದಲಿ ಎನ್ನ ಪ್ರಾಣವನು ಬಿಟ್ಟಿತು ಉಳಿದೆ ಮುನ್ನವಳ ಹೊರತು ಮನ ಉಣ್ಣಲೊಲ್ಲದು ನಿದ್ರೆ ಕಣ್ಣಿಗಿನ್ನೆಲ್ಲಿ 4 ನೀನು ಎಂದದು ಮೋಹಿಸುವಂಥ ಜಾಣೆಯನು ಕಳೆದಂಥ ಮಾನಿನಿಯ ಇರಲುನಾನು ಬದುಕುವನಲ್ಲ ಖೂನ ಪೇಳುವೆನು 5 ಯಾನ ಬರುವದು ಹೆಚ್ಚು ಉಂಟು ಕ್ಷೋಣಿಯಲಿ ಕಟ್ಟಿ, ದಾನದೊಳು ಸಾಹಸ್ರದಾನ ಪಾತ್ರರಿಗೆ ತಿಳಿ ಒಂದು ಕಲ್ಯಾಣ ಕಟ್ಟಿದರೆ 6 ಧ್ವನಿ ರಾಗ:ಸಾರಂಗ ಭಿಲಂದಿತಾಳ ಬಕುಲಾದೇವಿ ತಾ ನುಡಿದಳು ಆ ಕಾಲಕ್ಕೆ ಹೀಗೆ ದೇವಾಧೀಶನೆ ನಿನ್ನ ಕೇವಲ ಮರುಳು ಈವತ್ತಿಗೆ ಮಾಡಿದಳು ಯಾವಕೆ ಅವಳು 1 ಪೂರ್ವಜನ್ಮದಲಾಕೆ ಯಾವಕೆ ಬಂದಿಹಳು ಆ ವಾರ್ತೆ ಪೇಳೊ 2 ಇಂಥ ಮಾತನು ಲಕ್ಷ್ಮಿಕಾಂತಾ ಚಿಂತಿಸಿ ನುಡಿದಾ 'ಶ್ರೀಮದನಂತಾದ್ರೀಶ’ 3 ವಚನ ತಾ ವನದರಲಿರುತಿರಲು ದೇವಿಯನು ಅಪಹರಿಸಿ ತಾ ಒಯ್ಯ ಬೇಕೆಂಬೋ ಭಾವದಲಿ ಬಂದಾ ಆ ವೇಳೆಯಲಿ ಅಗ್ನಿದೇವ ಪತ್ನಿಯಲ್ಲಿದ್ದ ಶ್ರೀ ವೇದವತಿಯನ್ನು ದೇವೇಂದ್ರನ ಸಹಿತ ಆವಾಹನ ಮಾಡಿ ತಾ ವಾಸಮಾಡಿದಳು ಕೈಲಾಸದಲ್ಲಿ1 ಮುಂದೆ ರಾಮನು
--------------
ಅನಂತಾದ್ರೀಶ - ಕಥನಕಾವ್ಯಗಳು
(ಈ) ಯತಿವರ್ಯರ ಸ್ತುತಿ ಪಾಲಿಸು ಬ್ರಹ್ಮಣ್ಯ ಗುರುವರಾ ಪಾಲಿಸು ಬ್ರಹ್ಮಣ್ಯ ಪ ಲಾಲಿಸಬೇಕಯ್ಯಾ ಹೇ ಜೀಯಾ ಅ.ಪ. ಮಂದಹಾಸದಿ ತವ ಕಾಪಾಡೊ ದಯಮಾಡೊ 1 ಪುರುಷೋತ್ತಮ ತೀರ್ಥಕರಸಂಜಾತನೆ ಪುರುಷಯೋಜನಜನಹರಿಪಾದಭೃಂಗನೆ ಅಗ್ರಜಾ ಗುರುರಾಜಾ 2 ಪಾದ ಮನದಲಿ ನಿಲ್ಲಿಸೋ ಹನುಮನಯ್ಯನ ದಾಸಾ ಯತೇಶ3
--------------
ಹನುಮೇಶವಿಠಲ
(ಈ) ಯತಿವರ್ಯರು ಶ್ರೀ ವ್ಯಾಸರಾಯರ ಸ್ತುತಿ ಇದಿರ್ಯಾರೊ ಗುರುವೆ ಸರಿಯಾರೊ ಯತಿಗೆ ಸಮರ್ಯಾರೊ ಪ ದುರುಳ ವಾದಿಗಳನ್ನು ಮರುಳು ಮಾಡೋರನ್ನ ತರಿದಟ್ಟಿ ಚಂದ್ರಿಕೆ ಗ್ರಂಥವ ರಚಿಸಿ ಧರಣಿ ಸುರರ ಪರಿವೃಢರ ಸುನಿಕರಕೆ ಪರಿಪರಿಯಲಿ ಉಪದೇಶಿಸುತಿಪ್ಪಗೆ 1 ಕನಕ ಕಶಿಪುತನಯನ ಘನ ಅಂಶದಿ ಫಣಿಗಣ ರಮಣನಾವೇಶದಿ ಪೊಳೆಯುತ ದಿನದಿನದಲಿ ಹರಿಮನ ತಣಿಸುತಲಿಹ ಘನ ಮಹಿಮನೆ ಶ್ರೀ ಯತಿಕುಲತಿಲಕಾ 2 ಉದ್ದಂಡ ವಿತಂಡಕೆ ಗಂಡುಸಿಂಹ ತರ್ಕದೆ ತಾಂಡವ ಯುಕ್ತಿಯ ದಂಡುಗಳನೆ ಕಟ್ಟಿಕೊಂಡು ತಾರ್ಕಿಕರ ಷಂಡಗಳನೆ ಖಂಡಿಸುತಿಹ ಯತಿಯೆ 3 ಬ್ರಹ್ಮಣ್ಯತೀರ್ಥರ ಕರಕಮಲದಿ ಪುಟ್ಟಿ ಬ್ರಹ್ಮಜನಕ ನರಸಿಂಹ ಮೂರುತಿಯ ಹೃ- ದ್ಗಂಹ್ವರದಲಿ ಧ್ಯಾನಿಸುತಿಹ ವ್ಯಾಸರಾ ಹೃದಯಾಂಬುಧಿಯೊಳು ಮೆರೆವಗೆ 4 ದಶದಿಶೆಯಲಿ ದಶರಥಸುತ ಮಹಿಮೆಯ ಕುಶಲದಿಂದಲಿ ಸಭೆಯೊಳಗೆ ಸ್ಥಾಪಿಸುತ ಹೊಸ ಹೊಸ ಬಿರುದು ಸಂದ್ಹೆಸರುವೆತ್ತಿರುವಂಥ ವಸುಧಿಯೊಳಗೆ ಸುಕರ ಸುಚರಿತೆಗೆ 5 ಹೊಳೆಯುತಲಿರುವ ರುಕ್ಮಿಣಿಪತಿ ಕೃಷ್ಣನು ನಲಿಯುತ ಕುಣಿಕುಣಿದಾಡುತಲಿಪ್ಪನು ಥಳಥಳಿಸುವ ರಾಮ ವೇದವ್ಯಾಸರು ನಿಮ- ಗಿಳೆಯೊಳಮೂಲ್ಯ ಪ್ರಸಾದವನೀವರು 6 ಅಡಿಗಡಿಗತಿ ದೃಢತರ ಯುಕ್ತಿಗಳಿಂದ ಸಡಗರದಿಂದಲಿ ಬಿಡದೆ ನುಡಿಯುತ ನಡದದ್ವೈತದಡವಿಯೊಳಗೆ ಪೊಕ್ಕು ಕೆಡಗುತಿಹ ನ್ಯಾಯಾಮೃತಾಚಾರ್ಯರಿಗೆ 7 ಶ್ರೀದವಿಠಲಗತಿ ಪ್ರೀಯರಾದ ಶ್ರೀ- ಪಾದರಾಯರಲಿ ಓದಿ ಗ್ರಂಥಗಳ ವಾದಿರಾಜ ವಿಜಯೀಂದ್ರ ಪ್ರಮುಖರಿಗೆ ಆದರದಲಿ ಪಾಠ ಹೇಳುತಲಿಪ್ಪಗೆ 8
--------------
ಶ್ರೀದವಿಠಲರು
(ಕೊಕ್ರಾಡಿ ಸುಬ್ರಹ್ಮಣ್ಯ) ಕಾಯೊ ಸುಬ್ರಹ್ಮಣ್ಯ ಸಜ್ಜನ- ಪ್ರೀಯ ಸುರವೇಣ್ಯ ಪ. ತೋಯಜಾಕ್ಷ ನಿಖಿಲಾಮರಸೇವಿತ ಶ್ರೇಯಸ್ಕರಫಲದಾಯಕ ಶಂಕರ ಅ.ಪ. ನಿತ್ಯಾನಂದಕರ ನಿಜಾಶ್ರಿತ- ವತ್ಸಲ ರಣಶೂರ ಕೃತ್ತಿವಾಸಸುತ ದೈತ್ಯಾಂತಕ ರಿಪು- ಮತ್ತಗಜೇಂದ್ರಮೃಗೋತ್ತಮ ಸಂತತ 1 ನಿಗಮಾಗಮವಿನುತ ನೀರಜ- ದೃಗಯುಗ ಸಚ್ಚರಿತ ಅಗಜಾಲಿಂಗನ ಅಘಕುಲನಾಶನ ಸುಗುಣಾಂಬುಧಿ ತ್ರೈಜಗದೋದ್ಧಾರಕ 2 ಅಂಬುಧಿಗಂಭೀರ ಧೀರ ತ್ರೀ- ಯಂಬಕ ಸುಕುಮಾರ ತುಂಬುರು ನಾರದಯೋಗಿಸಭಾಂಗಣ- ಸಂಭಾವಿತ ಚರಣಾಂಬುಜಯುಗಳ 3 ಅಂಗಜ ಶತರೂಪ ಸಮರೋ- ತ್ತುಂಗಸುಪ್ರತಾಪ ಗಂಗಾಸುತ ವೇದಾಂಗಪಾರಜ್ಞ ಮಂಗಲಚರಿತ ವಿಹಂಗಾರೂಢಾ 4 ಶಕ್ರಾರಾತಿಹರ ತ್ರಿಜಗ- ಚ್ಚಕ್ರಾನಂದಕರ ಚಕ್ರಾಂಕಿತ ಶ್ರೀಲಕ್ಷ್ಮೀನಾರಾಯಣ- ವಿಕ್ರಮಸಿಂಹ ಕೊಕ್ರಾಡಿ ಪುರೇಶ್ವರ5 ಪಾವಂಜೆಯ ಸುಬ್ರಹ್ಮಣ್ಯ
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಬ್ರಹ್ಮಣ್ಯತೀರ್ಥರು) ಬ್ರಹ್ಮಣ್ಯತೀರ್ಥರ ಚರಣಾಬ್ಜಯುಗ್ಮವ ಸಂಭ್ರಮದಲಿ ಸೇವಿಪೆ ಪ ಅಂಬುಜಬಂಧು ಸನ್ನಿಭಸಾಧುವೆನುತ ಶ್ರೀ ಕುಂಭಿಣಿ ಮುನಿವರ್ಯರಾ ಆರ್ಯರಾ ಅ.ಪ. ತಿದ್ದಿದ ಶ್ರೀಪುಂಡ್ರ ಮುದ್ರೆಗಳಿಂದಲಿ ಸಂ- ಶುದ್ಧಿ ಮಂಗಳಗಾತ್ರರ ರುದ್ರಗಳೊಲಿದು ಸದ್ವಿದ್ಯೆಗಳನಿತ್ತು ಉದ್ಧಾರ ಮಾಡಲೆಂದೂ ನಾ ಬಂದೂ 1 ಶಿಷ್ಯರುಗಳು ತಂದ ಭಿಕ್ಷಾನ್ನಂಗಳನಂದು ಆಕ್ಷಣ ಮಂತ್ರದಿಂದ ತÀಕ್ಷಣ ಕಲ್ಪಸಿದಂತೆ ಗೈದಾ ಧೀರ ರÀಕ್ಷಿಸೆಂದೆರಗುವೆ ನಾ ಬೇಡುವೆ 2 ಕಾಂತೆಯೋರ್ವಳು ತನ್ನ ಕಾಂತ ಸ್ವರ್ಗವನೈದೆ ಚಿಂತಿಸುತತಿ ಶೋಕದಿ ಕಾಂತೆ ವಂದಿಸಲು ಸೌಮಾಂಗಲ್ಯವರವನಿತ್ತು ಕಾಂತನ ರಕ್ಷಿಸಿದ ಕೋವಿದರಾದ 3 ಕುಂದದೆ ಸನ್ಮುನಿವೃಂದದೊಡನೆ ಬಹು ವೃಂದಾವನದಿ ಶೋಭಿಪ ಇಂದಿರೆಯರಸ ನರಸಿಂಹವಿಠ್ಠಲನ ಸನ್ನಿಧಿವರ ಪಾತ್ರರಾ ಪೂತಾತ್ಮರಾ 4
--------------
ನರಸಿಂಹವಿಠಲರು
(ಸುಬ್ರಹ್ಮಣ್ಯ ಸ್ತೋತ್ರ) ಬ್ರಹ್ಮಣ್ಯ ಪುಂಜವನ್ನು ಕಾವಾ ಮೊರೆಯ ಕೋಳೂ ಸು- ಬ್ರಹ್ಮಣ್ಯಕ್ಷೇತ್ರಪಾಲದೇವಾ ಪ. ಶ್ರೀಶನ ಕರುಣ ಪೂರ್ಣಪಾತ್ರ ಷಡ್ವಕ್ತಪಾರ್ವ ತೀಶಸಂಪ್ರೀತಿಕಾರಿಪತ್ರ ಸುರನಿಕರ ಭಯತ್ರ ಸೂಸುತ ದೇಹದಿ ವಾಸವಾಗಿಹ ತ್ವ- ಗ್ದೋಷವ ತರಿವ ಮಹಾಸುರ ದಾರಿ1 ಸಾಂಬಾಸನತ್ಕುಮಾರನೆನಿಸಿ ಸಾಂಖ್ಯಾಯೋಗಗಳ ನಂಬಿದ ಭಕ್ತ ಜನಕೆ ಸಲಿಸಿ ದೈತ್ಯರ ಜವಗೆಡಿಸಿ ಜಾಂಬವತೀವದನಾಂಬುಜ ವಿಕಸನ ಕುಂಬುಜನಾಭ ಕುಟುಂಬಾಭರಣೀ 2 ಶೇಷಾದ್ರಿವಾಸಲಕ್ಷ್ಮೀಪತಿಯ ಪೂರ್ಣಾನುಗ್ರಹದಿ ವಾಸುಕಿಗೊಲಿದು ವಿಪ್ರತತಿಯ ಸಲಹುವ ಭೂಪತಿಯ ದೋಷವಾರಿ ಧಾರಾತೀರದಲಿ ನಿವಾಸಗೊಂಡ ನಿನ್ನಾಶ್ರಯ ಕರುಣಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
ಅಂಜಿಕೆಯಾಗುತಿದೆ ುದನೋಡಿ ಅಂಜಿಕೆಯಾಗುತಿದೆಮಂಜಿನಂದದ ಮಾಯೆ ರಂಜನೆಯಾಗಿ ರಂಜನನರಿಯದಿರೆ ಪಹುಸಿಯೆಂದು ಶ್ರುತಿ ಸಾರ್ದರೂ ತಾನೊಮ್ಮೆ ನಸಿಯದೆ ನಿಜದಂತಿರೆಹೊಸದು ಕಟ್ಟಿದ ಬಲೆ ಹೊದಿಸಿದಂದದಿ ಮತ್ತೂ ಹೊಸಹೊಸತಾಗಿರಲುಹಸಿವು ತೃಷೆಗಳೆಂಬಿವು ದಿನದಿನ ಹಸಗೆಡಿಸುತಲಿರಲುಕುಸುಮಬಾಣನ ಕಾಟ ಕುಸಿಯ ಮೆಟ್ಟಲು ಮನ ಮಸಿಯಾಗಿ ಮುದ್ರಿಸಲು 1 ಪೇಳ್ವದು ಪರತತ್ವವು ಬುದ್ದಿಯ ಬಾಳ್ವಿಕೆ ಬಹು ಬದ್ಧವುಕೋಳ್ವೋದ ಶೂರನ ಕಲಿತನದಂತಿದು ಕೀಳ್ವಾಯಕಿಳೀಯುತಿರೆಕೇಳ್ವರೆ ಮಾರ್ಗವನು ಜ್ಞಾನಿಯು ಕೋಳ್ವಿಡಿಯಲಿ ಬದ್ಧನುಹಾಳ್‍ವಾದದಲಿ ಹೊತ್ತು ಹೋಗುತ ನಿಜವಾಗಿ ಆಳ್ವನನರಿಯದಿರೆ 2 ಯೋಗಿಗಳ್‍ಕಾಣದಿರೆ ಕರ್ಮದ ರಾಗಿಗಳ್ ಕಾಳಾಗಿರೆಭೋಗಿಗಳೆಲ್ಲರು ಭಯದಲ್ಲಿ ಮುಳುಗಿರೆ ರೋಗಗಳ್ ಬಹುವಾಗಿರೆಸಾಗದೆ ಮಾರ್ಗವಿರೆ ಪುನರಪಿ ಪ್ರಾಗನೆ ಪಡೆಯುತಿರೆಹಾಗೆ ವಾಸನೆಯನ್ನು ಹೊದ್ದಿ ಮತ್ತತಿಶಯವಾಗಿಯೆ ವರಕೊಂಡಿರೆ 3ಧರ್ಮವ ಮಾಡದಿರೆ ಮನ ಪಾಪ ಕರ್ಮವ ಕೂಡುತಿರೆದುರ್ಮಾರ್ಗವೆಂದರೆ ದೃಢವಾಗಿ ನಲಿದು ವಿಕರ್ಮಕ್ಕೆ ವೊಡಲಾಗಿರೆಹಮ್ಮನು ನೆಗ್ಗಿದರೆ ಹೋಗದೆ ಬಿಮ್ಮಾಗಿ ಬೆಳೆಯುತಿರೆನೆಮ್ಮುತ ವಿಷಯವ ನೆನೆಯುತಲೀ ಪರಿ ಹೆಮ್ಮೆಯೆ ಹೆಚ್ಚುತಿರೆ 4ಮೊಳೆಯುತ ಮೇಲ್ಮುಟ್ಟಿರೆ ಹಮ್ಮಿದು ಬೆಳೆಯುತ ಬೇರ್ಬಿಟ್ಟಿರೆಕಳಚಿದರ್ಕೆಡದಾಶೆ ಕಾಲ್ಕಟ್ಟಿ ಕೆಡಹಿರೆ ತಳತುದಿ ತೋರದಿರೆಅಳಿಯುವದೆಂದಿಗಿದು ಸುಖ ತಾನು ಹೊಳೆಯುವದೆಂದಿಗದುನಳಿನಾಕ್ಷ ತಿಳುಹಿಸು ನಂಬಿದೆ ತಿರುಪತಿನಿಳಯ ವೆಂಕಟನಾಥನೆ 5ಕಂ||ಎಡೆಬಿಡದನುತಪಿಸುತ ಪದವಿಡಿದೆರಗಿಯೆ ಬಿನ್ನವಿಸಲು ತಿರುಪತಿಯೊಡೆ ಯಂಕಡು ಕರುಣದಿಂದ ಗುರುತನು ವಿಡಿದಭಯವನಿತ್ತ ನುಡಿಯನನುವದಿಸುವೆನಾಂ ಓಂ ಪರಸ್ಮೈಬ್ರಹ್ಮಣೇ ನಮಃ
--------------
ತಿಮ್ಮಪ್ಪದಾಸರು
ಅಂಜಿಸೋದ್ಯಾತಕಯ್ಯಾ ಬ್ರಹ್ಮಣ್ಯ ಗುರು ಪ ಅಂಜಿಸೊದ್ಯಾಕ‌ಘ ಭಂಜಕನೆನಿಸಿ ನೀ ಕಂಜನಾಭನ ಭಕ್ತಿ ಪಂಜರದೊಳಿಡದೇ ಅ.ಪ ಹೊಂದÀದೀ ನರಜನ್ಮವ ಇಂದಿರೇಶನು ಎಲ್ಲ ಹೊಂದೀ ಹೊದರಿಯದ ಮಂದಮತಿಯನು 1 ಬಿಂಬ ಮೂಡಲು ಪ್ರತಿಬಿಂಬ ಮಾಡುವುದೆಂದು ಶಂಬರಾರಿಯ ಪಿತನ ನಂಬದ ಢಂಬಿಯೊಳಂ ಜಿಸೋದ್ಯಾತಕಯ್ಯಾ2 ಶ್ರೀ ನರಹರಿಪಾದ ಧ್ಯಾನವ ಮಾಡದೆ ಬುದ್ಧಿ ಹೀನನಾದವಗೆ ಸುಜ್ಞಾನ ಕೊಡದೆ ಸುಮ್ಮನಂ ಜಿಸೋದ್ಯಾತಕಯ್ಯಾ 3
--------------
ಪ್ರದ್ಯುಮ್ನತೀರ್ಥರು
ಅಧ್ಯಾಯ ಮೂರು ಜನ್ಮನಾಕಾಶನಂದಾ ವಸುಧಾನಾಗ್ರಜಾ ನಿಜಾನ್ ಪದ್ಮಾವತೀ ಪದ್ಮಭವಾ ವನಕ್ರೀಡಾರತ್ಯಾವತಾತ್ ವಚನ ಸಂದರ್ಶನಾದದ್ದು ತಂದೆಯ ಕಥೆಸ್ಮøತಿಗೆ ತಂದು ಅದು ವಿಸ್ತಾರದಿಂದ ಪೇಳುವೆನು ಸುಧರ್ಮನೆಂದು ಇರವನು ಅವಗೆ ಮುಂದೆ ಇಬ್ಬರು ಸುತರು ಚಂದದಲಿ ಆಕಾಶನೆಂದು ತೊಂಡಮಾನಸೆನಿಸುವನು 1 ವ್ಯಾಕುಲದಿ ಹೀಗೆ ಇಲ್ಲೆಂದು ಶೋಕದಲಿ ಕಣ್ಣೀರು ಹಾಕಿ ಸ್ಮರಿಸಿದ ದೇವಲೋಕ ಗುರುವ ಯಾಕೆ ಸ್ಮರಿಸಿದೆ ಎನ್ನನೀಕಾಲದಲಿ ಏನುಬೇಕು ಬೇಡಲೋನೀನು ನಾ ಶೋಕವನು ನುಡಿದಾ2 ಪಾಪಿಷ್ಠ ಏನು ಇದ್ದೇನು ನಾನು ಮಾಡಿದ ಪೇಳೋ ಹೀನಬುದ್ಧಿ ಕೊಲಿಸಿದೆನೇನು ಏನು ಕಾರಣ ಸಂತಾನ ಕಣ್ಣಿಲಿ ಕಾಣೆ ನಾನು ಅಯ್ಯಯ್ಯೊ 3 ಮಕ್ಕಳಾಡಿದರೆ ಬಹಳಕ್ಕರತೆ ಜೀವಕ್ಕೆ ಮಕ್ಕಳಿಲ್ಲದೆ ಮತ್ತೆ ಮಿಕ್ಕರಸ ಮಕ್ಕಳಿÀಂದಲೆ ಹಬ್ಬ ಹುಣ್ಣಿಮೆಯು ಉಲ್ಲಾಸ ಮಕ್ಕಳಿಂದಲೆ ಮುಂಜಿ ಮದುವೆಯ ಧರೆಯೊಳಗಿಲ್ಲ ಮಕ್ಕಳಿಂದಲೆ ಇಹವು ಮಕ್ಕಳಿಂದಲೆ ಪರವು ಮಕ್ಕಳಿಲ್ಲೆನ್ನ ಭಾಗ್ಯಕ್ಕೆ ಅಯ್ಯಯ್ಯ 4 ನೋಡಿಲ್ಲ ಮಕ್ಕಳಾಡಿದ ಮಾತು ನಕ್ಕು ಕೇಳಿಲ್ಲ ನಾ ಮಕ್ಕಳಿಂದಲೆ ಕೂಡಿ ಅಕ್ಕರದಿ ಉಣಲಿಲ್ಲ ಮಕ್ಕಳನು ಎತ್ತಿ ಮುದ್ದಿಕ್ಕಿದವನಲ್ಲ ಮಕ್ಕಳಿಲ್ಲದ ಮನುಜ ಲೆಕ್ಕದಾವದರೊಳಗೆ ಬೆಕ್ಕು ಮೊದಲಾದಂಥ ಮಿಕ್ಕ ಪ್ರಾಣಿಗಳೆಲ್ಲ ಮಕ್ಕಳಾಡಿದ ಬಹಳ ಚಕ್ಕಂದವನು ನೋಡಿ ಸೌಖ್ಯ ಪಡುತಿಹದಯ್ಯ ಧಿಕ್ಕರಿಸು ಎನ ಜನ್ಮ ಅದಕ್ಕಿಂತ ವ್ಯರ್ಥ 5 ಮುನ್ನ ನಮ್ಮೊಳಗಾರು ಉಣ್ಣದಲೆ ಈ ಬದುಕು ಮಣ್ಣು ಪಾಲಾಗುವದು ಘನ್ನ ಈ ಚಿಂತಿಯಲಿ ಬಣ್ಣಗೆಟ್ಟೆನು ಕುದ್ದು ಸುಣ್ಣಾದೆನಯ್ಯ ಉಭಯಕುಲ ತಾರಿಸುವಂಥ ನಾನು ಅಣ್ಣತಮ್ಮರ ಒಳಗೆ ಪುಣ್ಯ ಇಲ್ಲೊಬ್ಬನಲಿ ಪುಣ್ಯಗುರುವೆ 6 ರಾಗ:ಶಂಕರಾಭರಣ ಆದಿತಾಳ ಇಂಥ ಮಾತಿಗೆ ಜೀಯ ಹೀಗಂತ ನುಡಿದನು ಚಿಂತೆ ಮಾಡಬೇಡ ಭೂಕಾಂತ ಎಂದನು 1 ಪುತ್ರ ಕಾಮೇಷ್ಟಿಮಾಡು ಭಕ್ತಿಯಿಂದಲಿ ಪುತ್ರನಾಗುವನು ನಿಮಗೆ ಸತ್ಯ ನೀ ತಿಳಿ 2 ಗುರುವಿನ ಮಾತುಕೇಳಿ ಪರಮ ಹರುಷದಿಂದಲಿ ಅರಸ ಬ್ರಾಹ್ಮಣರನೆಲ್ಲ ಕರೆಸಿದಾಗಲೇ 3 ಮುಂದೆ ಯಜ್ಞ ಮಾಡಬೇಕು ಎಂದÀು ತ್ವರದಲಿ ಒಂದು ಭೂಮಿ ಶೋಧಿಸಿದನು ಚಂದದಲಿ 4 ಚಲುವ ನೇಗಿಲ ಜಗ್ಗಿ ಎಳೆವ ಕಾಲಕೆ ಹೊಳೆವ ಪದ್ಮ ಬಂತು ಅಲ್ಲಿ ಸುಳಿದು ಮೇಲಕೆ 5 ಇರುವಳೊಬ್ಬಳಲ್ಲಿ ಮತ್ತೆ ಪರಮಸುಂದರಿ ಅರಸನೋಡಿ ಬೆರಗಿನಿಂತ ಸ್ಮರಿಸಿ ಪರಿಪರಿ 6 ಕಾಣಿಸಿದಲೆ ಗಗನದಲಿ ವಾಣಿಯಾಯಿತು ಕಾಣದಿದ್ದರೂ ಈಗ ಸಕಲಪ್ರಾಣಿ ಕೇಳಿತೊ 7 ಇನ್ನು ಚಿಂತೆ ಮಾಡಬೇಡ ಧನ್ಯ ಅರಸ ನೀ ನಿನ್ನ ಮಗಳು ಎಂದು ಚೆನ್ನಾಗಿ ತಿಳಿಯೋ ನೀ8 ಕ್ಲೇಶ ಹಿಂದೆ ಬಿಡುವಿಯೊ ಮುಂದೆ ಮುಂದಕಿನ್ನು ಆನಂದ ಬಡವಿಯೊ9 ಗಗನ ವಾಣಿಯನ್ನು ಕೇಳಿ ಅರಸ ಬಗೆಯಲಿ ಮಗಳ ನೆತ್ತಿಕೊಂಡನಾಗ ಮುಗಳು ನಗೆಯಲಿ 10 ತಂದೆ ಮಗಳ ಜನ್ಮ ಪದ್ಮದಿಂದ ತಿಳಿದನು ಮುಂದೆ ಪದ್ಮಾವತಿಯೆಂದು ಕರೆದನು11 ಮಗಳಕಾಲಗುಣದಿ ಮುಂದೆ ಮಗನು ಆದನು ಅವನ ಕರೆದ ವಸುಧಾನನೆಂದು ಗಗನರಾಜನು 12 ತಕ್ಕವಾಗಿ ಅರಸಗ್ಹೀಗೆ ಮಕ್ಕಳಾದರು ಸೌಖ್ಯದಿಂದ ಮುಂದೆ ದಿನದಿನಕ್ಕೆ ಬೆಳೆದರು13 ಬಂತು ಯೌವನವು ಭೂಕಾಂತ ಪುತ್ರಿಗೆ ಬಂತು ಆಗ ಮತ್ತೆ ಬಹಳ ಚಿಂತೆ ಅರಸಗೆ 14 ಇಂಥ ಮಗಳಿಗಿನ್ನು ತಕ್ಕಂಥ ಪುರುಷನು ಪ್ರಾಂತದೊಳಗೆ ಇಲ್ಲದಿವ್ಯ ಕಾಂತಿ ಮಂತನು 15 ಎಂತು ನೋಡಲಿನ್ನು ಹುಡುಕಿ ಶ್ರಾಂತನಾದೆನು ಚಿಂತೆಯೊಳಗೆ ಬಿದ್ದು ಮುಂದೆ ಪ್ರಾಂತಗಾಣೇನು 16 ಅಂತರಂಗದೊಳಗೆ ಹೀಗಂತ ಅನುದಿನ ಚಿಂತಿಸಿದನು ಮರೆತು ಅನಂತಾದ್ರೀಶನ17 ವಚನ ಚಂದಾದ ಕುಸುಮಗಳ ಕೂಡಿ ಮುಂದೆ ಇಂದು ಮುಖಿಯು ನೋಡುತಲೆ ಮುಂದೆ ತೆಗೆದು ತ್ವರದಿಂದ ಆಭರಣಗಳ ಮುಂದೆ ತರಿಸಿದಳು1 ಕೆತ್ತಿಸಿದ ರಾಗುಟಿಯ ಒತ್ತಿ ಮೊದಲ್ಹಾಕಿ ಹತ್ತೊತ್ತಿದಳು ಸಾಲ್ಹಿಡಿದು ಇತ್ತಿತ್ತು ಮತ್ತೆ ತುದಿಗೆ ಅತ್ತಿತ್ತ ಮತ್ತ ಮೇಲರಿಸಿನವ ಚಿತ್ತಗೊಟ್ಟಚ್ಚಿದಳು ಚಿತ್ತಾರ ಬರೆದಂತೆ ಮತ್ತ ಗಜಗಮನೆ 2 ಥಳಥಳನೆ ಜಾತಿಯಿಂದ್ಹೊಳೆವ ಮುತ್ತಿನ ಭವ್ಯ ಎಳೆಯ ಇಮ್ಮಡಿ ಮಾಡಿ ನಳಿನಾಕ್ಷಿ ಬೈತಲಗೆ ಅಳತೆಯಿಂದ್ಹಾಕಿದಳು ತಳಪಿನಲಿ ಎಡಬಲಕೆ ಎಳೆದು ಕಟ್ಟಿದಳ್ಹಿಂದೆ ಹೆರಳಿಗ್ಹಾಕಿ ತೊಳೆದ ಮುತ್ತಿನ ಬುಗಡಿ ಪೊಳೆವ ಮೀನ್ಬಾವಲಿಯು ಝಳಿ ಝಳಿತವಾಗಿರುವ ಗಿಳಿಗಂಟಿ ಚಳತುಂಬುಗಳ ನಿಟ್ಟು ಕರ್ಣದಲಿ ಉಳಿದ ದ್ರಾಕ್ಷಾಲತೆಯ ಎಳೆದು ಬಿಗಿದಳು ಮೇಲೆ ಸುಳಿಗುರಳಿನಲ್ಲಿ 3 ಇದ್ದ ಮುತ್ತುಗಳ್ಹಚ್ಚಿ ತಿದ್ದಿ ಮಾಡಿದ ನತ್ತು ಉದ್ರೇಕದಿಂದಿಡಲು ಮುದ್ದು ಸುರಿವುತ ಮುಂಚೆ ಇದ್ದ ಮುಖ ಮತ್ತೆ ಎದ್ದು ಕಾಣಿಸಿತು ಪ್ರದ್ಯುಮ್ನ ಚಾಪದಂತೆರಡÀು ಹುಬ್ಬುಗಳ ಮಧ್ಯೆ ನೊಸಲಿನ ಮೇಲೆ ಶುದ್ಧ ಕಸ್ತೂರಿಯನ್ನು ತಿದ್ದಿ ತಿಲಕವನಿಟ್ಟು ತಿದ್ದಿದಳು ಕಾಡಿಗೆಯ ಪದ್ಮಲೋಚನಗಳಿಗೆ ಪದ್ಮಜಾತೆ 4 ಚಂದ್ರಗಾವಿಯನ್ನುಟ್ಟು ಚಂದಾದ ಕುಪ್ಪಸವ ಮುಂದೆ ಬಿಗಿ ಬಿಗಿತೊಟ್ಟು ಮುಂದಲೆಗೆ ಶೋಭಿಸುವ ಚಂದ್ರಸೂರ್ಯರನಿಟ್ಟು ಚೆಂದಾಗಿ ಬೈತಲೆಗೆ ಚಂದಿರವ ಸುರಿದಳು ಚಂದ್ರಮುಖಿಯು ಪರಿ ಗೀರು ಗಂಧವನು ಕೈಗ್ಹಚ್ಚಿ ಮುಂದೆ ಕೊರಳಿಗೆ ಒರಿಸಿ ಚಂದ್ರಸರ ಮುಂದೆ ಹಾಕಿದಳು 5 ಮೇಲಿಟ್ಟು ಚಿಂತಾಕವನು ಕಟ್ಟಿ ತಾಯತ ಬಟ್ಟಕುಚಗಳ ಏಕಾವಳಿಯ ಇಟ್ಟು ಪುತ್ಥಳಿ ಸರವು ಅಷ್ಟು ಸರಗಳನೆಲ್ಲ ಮೆಟ್ಟಿ ಮೇಲ್ಮೆರೆವಂಥ ಶ್ರೇಷ್ಠ ಸರಿಗಿಯತರಿಸಿ ಇಟ್ಟಳಾಕೆ6 ಟೊಂಕದಲಿ ಒಡ್ಯಾಣ ಮುಂದಲಂಕರಿಸಿದಳು ಪೊಂಕದಿಂದಿಟ್ಟು ಅಕಳಂಕ ಕೊಂಕವನು ಮಾಡುತಲೆÉ ಕಿಂಕಿಣಿಪೈಜಣ ಇಟ್ಟಳಾಕೆ7 ಪಿಲ್ಲೆ ಮೇಲಾದ ಮುಸುಕಿಕ್ಕಿ ಬಹು ಬಾಲೆಯರು ಕೊಟ್ಟ ಕೂಡಿ ಭಾಳ ಹರುಷದಿ ಹೊರಟಳಾಕಾಲದಲ್ಲಿ. 8 ವಚನ ಪರಿ ಗಜಗಮನದಿಂದಾ ವನ ಮದನ ಸತಿಯಂತಿಪ್ಪ ತರುಣಿರೂಪವ ತಾಳಿ ವನಮಧ್ಯದಲ್ಲಿ ತಾಂ ಬೆಸಗೊಂಡಳು ಯಾರಲೆ ಬಾಲೆ ನೀ ಬಾಲಚಂದ್ರ ಲಲಾಟೆ ಕಾಳಾಹಿ ವೇಣೀ ನೀ ಜಾತೆಯರ ಕೂಡಿ ಬಳಗವು ಕಾಂತನ್ಯಾರು ಪೇಳೆಂದು 1 ಧ್ವನಿ ಕೇಳೆ ಕುಸುಮಕ್ಕೆ ನಾ ಬಂದೆ ತಿಳಿಯೆ ಮಾತಿನರಗಿಳಿಯೆ 1 ಅಸಮ ತೋಂಡಮಾನನೆಂಬುವನು ನಮ್ಮ ಕಕ್ಕನು 2 ನಾ ಖೂನವನು ಪೇಳಿದೆ ಸಾರಿ ಪೇಳಿದೆ &ಟಿ
--------------
ಅನಂತಾದ್ರೀಶ - ಕಥನಕಾವ್ಯಗಳು
ಅನಂತಶಯನ ವಿಠಲಾ | ಕಾಪಾಡೊ ಇವಳಾ ಪ ಸಾರ ಅ.ಪ. ತಾಪತ್ರಯಗಳು ಎಂಬ | ಕೂಪಾರದಲಿ ಬಿದ್ದು ಶಾಪಕೊಳಗಾಗಿ ಹಳ ಕಾಪಾಡಬೇಕೊದ್ರೌಪದಿಯವರದ ಕರು | ಣಾಪಯೋನಿಧಿಹರೆಯೆನೀ ಪೊರೆಯದಿರಲನ್ಯ | ಕಾಪಾಡ್ವರ್ಯಾರೊ 1 ತೈಜಸನೆ ನೀನಾಗಿ | ಸೂಚಿಸಿಹ ಅಂಕಿತವಯೋಜಿಸಿಹೆ ಇವಳೀಗೆ | ಅವ್ಯಾಜ ಕರುಣೀಪ್ರಾಜ್ಯ ಎನ ಸಂಸಾರ | ಗೌಜು ಕಳೆಯಲ್‍ವೆನ್‍ತ್ರ್ಯಜಗದ್ವಾಪನೆ | ವಾಜಿವದನಾಖ್ಯ 2 ಕರ್ಮಾಕರ್ಮಗಳ | ಮರ್ಮಗಳ ತಿಳಿಸುತ್ತಪೇರ್ಮೆಯಲಿ ಪತಿಸೇವೆ | ಕರ್ಮಪ್ರಾಧಾನ್ಯಧರ್ಮವನೆ ತಿಳಿಸುತ್ತ | ಭರ್ಮಗರ್ಭನ ಪಿತನೆಕರ್ಮಬೀಜವ ಕಳೆಯೊ | ಬ್ರಹ್ಮಣ್ಯದೇವಾ3 ಮರುತಾಂತರಾತ್ಮನೆ | ಮೂರೆರಡು ಭೇದಗಳತರತಮಂಗಳನರುಹಿ | ಪೊರೆಯೊ ಇವಳಾಅರುಹುವೆನೊ ಸರ್ವಜ್ಞ | ತರುಳೆಬಹುಭಕ್ತಿಯಂತೆಕರುಣಿಸೆಲೊ ಕೃಪಾಸಾಂದ್ರ | ಕಂಜಜಾನಯ್ಯ 4 ಗಾವಲ್ಗಣೀ ವರದ | ಭಾವದಲಿ ಮೈದೋರಿನೀ ವೊಲಿಯೆ ಬಿನ್ನಪದೆ | ಗೈಯೆ ಶ್ರೀಹರಿಯೆಕೋವಿದೊತ್ತಂಸ ಗುರು | ಗೋವಿಂದ ವಿಠಲನೆಕಾವ ಕರುಣಿ ಎಂದು | ಪ್ರಾರ್ಥಿಸುವೆ ಹರಿಯೆ 5
--------------
ಗುರುಗೋವಿಂದವಿಠಲರು
ಅನುದಿನ ನಿನ್ನ | ಸುಬ್ರಹ್ಮಣ್ಯ ಪ ಮಮ ಅಪರಾಧವ ಕ್ಷಮಿಸು ಪ್ರಸನ್ನ ಅ.ಪ ನೀಲಲೋಹಿತನ ಸುಕುಮಾರಾ ಸದ್ವಿಚಾರ | ಬಾಲಾರ್ಕಭಾಸ ಸುಶೀಲಾ ಅಪಾರಾ 1 ತಾರಕಾದ್ಯ ಸುರಾಳಿನಾಶಾ | ಶ್ರೀವಲ್ಲೀಶ | ಮಾರನಾಕಾರದ ಧೀರ ಗುಹೇಶ 2 ಶ್ರೀಶನ ಸಖ ದಾಸರಕ್ಷ | ಖಳ ಶಿಕ್ಷ | ಸಾಸಿರ ಪೆಸರ ಪಾವಂ | ಜೇಶ ಸುರಪಕ್ಷ 3
--------------
ಬೆಳ್ಳೆ ದಾಸಪ್ಪಯ್ಯ