ಪ್ರಾರಂಭ ಪದದ ಹುಡುಕು

(33) (56) (44) (18) (15) (4) (1) (0) (77) (59) (0) (17) (2) (2) ಅಂ (17) ಅಃ (17) (153) (1) (50) (3) (1) (24) (1) (60) (0) (0) (0) (0) (4) (0) (0) (57) (1) (61) (19) (190) (112) (4) (110) (47) (178) (46) (74) (0) (25) (96) (216) (2) (177) (136) (0)
ನೀ ಸಾಹೆಯಾಗು ಯಮಗನುಗಾಲ |ಶೇಷಾದೇವರೆ ರೋಹಿಣಿ ಬಾಲಾ ಪಮೂರುತಿಯಲ್ಲಿ ಪುಟ್ಟಿ | ನಾರಾಯಣನ್ನ ಕೂಡಿ ||ಚಾರುಬದರಿಯಲ್ಲಿ ತೋರುತಿಹನೆ 1ದಶರಥನ ಮಡದಿ | ಬಸುರೀಲಿ ಜನಿಸೀದಿ ||ಕುಸುಮನಾಭನರ್ಚನೆ ಎಸಗಿದಿಯೋ 2ಪ್ರದ್ಯುಮ್ನಪರಿಯಂಕ| ರುದ್ರಾನಲಂಕಾರ ||ಭದ್ರ ಪ್ರದಾಯಕ ಭಕ್ತ ಪೋಷಾ3ನೀಲಾಂಬರವನುಟ್ಟ | ತಾಳಾಂಕಬಿನ್ನಪ||ಲಾಲೀಸೊ ನಿನ್ನವನೆಂದ ನಿಶಾ4ಪ್ರಾಣೇಶ ವಿಠಲನ | ಧ್ಯಾನದೋಳಿರುವಂತೆ ||ನೀನೊಲಿವದು ದೂರು ನೋಡದಲೇ 5
--------------
ಪ್ರಾಣೇಶದಾಸರು
ನೀ ಹೋಗುತಲಿ ಬಾಗೂ |ಗುರುಕೃಪೆ ಪಡೆಯುತೆಪರಿಭವನೀಗೂಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ನಗಕನಕದಪರಿಈ ಜಗ ಸೋಗೂ |ಜಗದೀಶನ ಸುಖ ಪೊಂದಿ ನೀ ತೂಗೂ1ತತ್ತ್ವಂ ಪದಗಳ ಕಳೆದುಳಿ ವೇಗೂ |ಸಚ್ಚಿತ್ಸುಖ ಅಸಿಜÕಪ್ತಿ ನೀನಾಗು2ಪ್ರೇಮಾಮೃತ ಸವಿಯುತೆ ನೀ ತೇಗೂ |ಕಾಮದಹನ ಶಿವಶಂಕರನಾಗೂ3
--------------
ಜಕ್ಕಪ್ಪಯ್ಯನವರು
ನೀಚ ಮಾನವರಿಗೆಸಿರಿ ಬಂದರೇನು<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಈಚಲ ಮರ ದಟ್ಟ ನೆರಳಾದರೇನು ಪ.ನಾಚಿಕಿಲ್ಲದ ನರರು ಬಾಗಿದರೇನುಹೀಚಿನೊಳಿಹ ಫಲ ಹಣ್ಣಾದರೇನು ಅಪಹೊಲೆಯರೊಳು ಪದುಮಿನಿ ಹೆಣ್ಣು ಹುಟ್ಟಿದÀರೇನುಮೊಲೆಯ ತೊರೆಯದ ನಾಯಿ ಈದರೇನುಕಳಹೀನ ಕಾಮಿನಿಗೆ ಕಾಂತಿ ಹೆಚ್ಚಿದರೇನುಬಿಲದೊಳಗೆ ಸರ್ಪ ಹೆಡೆಯೆತ್ತಿದರೇನು ? 1ಕೋತಿಯ ಮೈಯೊಳುಭಾಂಡ ತುಳಕಲೇನುಹೋತಿನ ಗಡ್ಡವು ಹಿರಿದಾದರೇನುಯಾತಕೂ ಬಾರದ ಬದುಕು ಬಾಳಿದ್ದರೇನುರೀತಿಯಿಲ್ಲದ ನೆರೆಯ ಸ್ನೇಹವಿನ್ನೇನು 2ರಕ್ಷಣೆಯಿಲ್ಲದ ರಾಜ ರಾಜಿಸಲೇನುಭಿಕ್ಷೆ ಹುಟ್ಟದ ಊರು ತುಂಬಿದ್ದರೇನುಲಕ್ಷ್ಯವಿಲ್ಲದವಗೆ ಲಕ್ಷ್ಯ ಬಂದರೇನುಪಕ್ಷಪಾತವಿಲ್ಲದವನ ಅಶ್ರಯವಿನ್ನೇನು 3ಫಣಿಯ ಮಸ್ತಕದ ಮೇಲೆ ಮಣಿಯ ಮಿಂತಲೇನುಉಣಿಸಿ ದಣಿಸದ ಧನಿಯಿದ್ದರೇನುಋಣಗೇಡಿ ಮಕ್ಕಳ ರಟ್ಟೆ ಬಲಿತರೇನುಕ್ಷಣಚಿತ್ತವಿಲ್ಲದವನ ಸ್ಮರಣೆಯು ಇನ್ನೇನು 4ಸಾಕಲಾರದಾತನ ಸತಿಯ ಮೋಹವೇನುಜೊತೆ ಮಾಡದಾ ಹಣ ಗಳಿಸದರೇನುಕಾಕುಮಾನವರ ಸೇವೆ ಮಾಡಿದರೇನುಬೇಕೆಂದು ಭಜಿಸಿರೋ ಪುರಂದರವಿಠಲನ 5
--------------
ಪುರಂದರದಾಸರು
ನೀನಲ್ಲದನ್ಯರೆ ಸಲಹಲು ಕಾಯೊ |ಜಾನಕೀಪತಿ ದೂತ ಹನುಮಂತ ಪಗುರುವೆ ನಿನ್ನಯಪಾದಭಜಿಸುವರನ್ನ |ಧರೆಯೊಳು ಬನ್ನಬಡಿಸುವೋರೆ ||ಗಿರಿಸುತ ನೀ ಗತಿಯೆನಲಾಗ ಬೇಗ |ಪೊರೆದೆಯಾತನ ಜಲಧಿಯೊಳಿಟ್ಟು1ರವಿಜಶಕ್ರಜನಿಂದ ಬಳಲುತ ಬಂದು |ಪವನ ಪಾಲಿಪುದೆನ್ನಲಾಕ್ಷಣ ||ಭುವನೇಶನಿಂದ ವಾಲಿ ಕೊಲ್ಲಿಸಿ ಕಾಳೀ |ಧವಸುಗ್ರೀವನ ಭಯ ಬಿಡಿಸಿದೆ2ತಂದೆ ಪ್ರಾಣೇಶ ವಿಠ್ಠಲನಿಗೆ ನಿನಗಂ |ದುಂಟಿಂದಿಲ್ಲೇ ಈ ಮಹಿಮೆಯು ||ಬಂದದುರಿತನಿವಾರಣ ಮಾಡಿ ದಯ-ದಿಂದ ಪಾಲಿಸೋ ನಿನ್ನ ದಾಸರ 3
--------------
ಪ್ರಾಣೇಶದಾಸರು
ನೀನಲ್ಲದೆನಗಾರಿಲ್ಲ ಗೋವಿಂದನೀನಲ್ಲದೆ ಇಹಪರವಿಲ್ಲ ಪಪರರ ಬೇಡಿ ಪಂಥವಾಡಿ ಹೋಯಿತಲ್ಲನರರ ಕೊಂಡಾಡಿ ನಾಲಗೆ ಬರಡಾಯಿತಲ್ಲ ||ಪರವಿಲ್ಲ ಇಹವಿಲ್ಲ ನರಜನ್ಮ ಸ್ಥಿರವಲ್ಲನರಗೆ ಪಾಮರಗೆ ಪಾತಕದ ಪಂಜರಗೆ 1ತನುವು ತನ್ನದಲ್ಲ ತನ್ನವರು ತನಗಿಲ್ಲಧನಧಾನ್ಯ ಸಂಪತ್ತು ಅವಗಿರದು ||ತನುವು ಹೋಗಿ ಇನ್ನು ಮಣ್ಣು ಕೂಡುವಾಗತನುಮನಕ್ಕೆ - ಇನ್ನಾರಯ್ಯ ಸ್ವಾಮಿ 2ಮಾತಾಪಿತರು ಗೋತ್ರಜರು ಮೊದಲಾಗಿಪ್ರೀತಿಯಿಂದ ಬಹಳ ಸತಿಸುತರು ||ಕೀರ್ತಿಗೆ ಅವರು ಸ್ವಾರ್ಥಕೆ ಇವರು ಸಂಗಾತಿಗಿನ್ನಾರಯ್ಯಪುರಂದರವಿಠಲ3
--------------
ಪುರಂದರದಾಸರು
ನೀನಾರವ ಪೇಳೆನ್ನ ಕಣ್ಣ ಮುಚ್ಚುವೆ |ಮೌನಗೊಂಡರಿಯದಂತಿಪ್ಪ ಮಗುವೆ ಪಅತಿ ಚೆಲುವಿಗೆ ರತಿಪತಿಪಿತನೊ-ನೀ |ಶ್ರುತಿಸಕಲಾನ್ವುಯ ಸನ್ನುತನೊ ||ಚತುರ್ದಶ ಭುವನವನಾಳಿದನೋ-ನೀ |ಶತತಪ್ಪುಗಳನೆಣಿಸಿದವನೊ?1ವರಗೋಕುಲಕೊಪ್ಪವ ದೊರೆಯೊ-ನೀ |ಕರಿವೈರಿಯ ಮದಪರಿಹಾರಿಯೊ ||ಗಿರಿಯನುದ್ಧರಿಸಿದ ನಖರುಚಿಯೊ-ನೀ |ಮುರದೈತ್ಯನ ಮಡುಹಿದ ಸಿರಿಯೊ? 2ಮಂಗಳ ಶೋಭನ ಮಣಿಖಣಿಯೊ-ನೀ |ಹಿಂಗದೆ ಸ್ತುತಿಪರ ಗತಿದಾನಿಯೊ-ಗೋ-||ಪಾಂಗನೆಯರ ಪ್ರಾಣದ ಧನಿಯೊ-ನೀ |ಸಿಂಗರ ಸೊಬಗಿನ ಶ್ರೀಪತಿಯೊ 3ಆಪತ್ತಿಗೆ ನೆನೆವರ ಗೋಚರನೊ-ನೀ |ಪಾಪಸಂಹಾರ ಪುರುಷೋತ್ತಮನೊ ||ಚಾಪದಿಂದಸುರರ ಗೆಲಿದವನೊ-ಸಾಂ-|ದೀಪನ ಮಗನ ತಂದಿತ್ತವನೊ? 4ಬೆಸಗೊಂಡಳುಗೋಪಿನಸುನಗುತ-ಆಗ |ಯಶೋದೆಗೆ ಚತುರ್ಭುಜ ತೋರಿಸುತ ||ಅಸುರಾರಿಯ ಕಂಡು ಮುದ್ದಿಸುತ ನೀ ||ಶಿಶುವಲ್ಲ ಪುರಂದರವಿಠಲೆನುತ 5
--------------
ಪುರಂದರದಾಸರು
ನೀನು ನಾನಾಗಿಹೆ ದೇವರೆನೀನು ನಾನೆ ಎಂದು ಪೂಜಿಸುವೆ ದೇವರೆಪನಿನಗೆ ಸ್ನಾನ ಮಾಡಿಸುತ್ತೇನೊ ದೇವರೆ ನಾನಿನಗೆ ಮೈಯನೊರೆಸುತ್ತೇನೊ ದೇವರೆನಿನಗೆ ವಸ್ತ್ರವುಡಿಸುತ್ತೇನೋ ದೇವರೆನಿನಗೆ ಭಸಿತ ಹಚ್ಚುತ್ತೇನೋ ದೇವರೆ1ನಿನಗೆ ಗಂಧ ಹಚ್ಚುತ್ತೇನೊ ದೇವರೆನಿನಗೆ ಅಕ್ಷತಿಡುತ್ತೇನೊ ದೇವರೆನಿನಗೆ ತುತ್ತುಗಳುಣಿಸುತ್ತೇನೊ ದೇವರೆನಿನಗೆ ನೀರ ಕುಡಿಸುತ್ತೇನೊ ದೇವರೆ2ನಿನಗೆ ಬಾಯ ತೊಳೆಸುತ್ತೇನೊ ದೇವರೆನಿನಗೆ ವೀಳ್ಯ ಮಾಡಿಸುತ್ತೇನೊ ದೇವರೆನಿನಗೆ ಶರಣು ಮಾಡುತ್ತೇನೊ ದೇವರೆ ನಾನಿನಗೆ ಧ್ಯಾನ ಮಾಡುತ್ತೇನೊ ದೇವರೆ3ನಿನಗೆ ಹಾಸಿಗೆ ಮಾಡಿತ್ತೇನೊ ದೇವರೆ ನಾನಿನಗೆ ಮಲಗಿಸುತ್ತೇನೊ ದೇವರೆನಿನಗೆ ಹಾಡಿ ಹೊಗಳುತ್ತೇನೊ ದೇವರೆ ನಾನಿನಗೆ ಎಚ್ಚರಗೊಡುತ್ತೇನೊ ದೇವರೆ4ನಿನ್ನನರಿವರಿಲ್ಲ ದೇವರೆ ಕೇಳುನಿನ್ನನರಿವಗೆ ನೀನೇ ದೇವರೆನಿನ್ನ ಹೆಸರು ಚಿದಾನಂದ ದೇವರೆ ಎನಗೆನಿನ್ನ ಸೇವೆ ನಿತ್ಯವಿರಲೋ ದೇವರೆ5
--------------
ಚಿದಾನಂದ ಅವಧೂತರು
ನೀನೆ ಕರುಣಿ ಗುರುವಾಸದೀನಬಂಧು ಭಕುತಪೋಷ ಪನೆರೆದು ಭಕುತಜನರುಸ್ಮರಿಪ ವರವ ನಡೆಸಿದರುಶನಿತ್ತು ದುರಿತರಾಸಿ ಪರಿಹರಿಸಿಪೊರೆವೆ ಸತತಪರಮಚರಿತ1ಒಪ್ಪಿ ಕಾಸುರುವ್ವಿಬಿಡದೆತಪ್ಪದೆ ಮೂರುಲೋಕದವರಿಂಕಪ್ಪಕೊಳ್ಳುವಿ ಅಸಮಲೀಲಅಪ್ಪ ತಿರುಪತಿತಿಮ್ಮಪ್ಪ2ಮಾರನಯ್ಯ ಮರಣದೂರಮೂರಜಗದ ಸಾರ್ವಭೌಮಧೀರ ಶ್ರೀರಾಮ ನಿಮ್ಮಪಾದವಾರಿಜದಾಸನೆನಿಸು ಎನ್ನ 3
--------------
ರಾಮದಾಸರು
ನೀನೆ ಗತಿಯೆಂದು ನಂಬಿದೆ ಕಾಯಯ್ಯ ಶ್ರೀನಿವಾಸ ಎನ್ನಹೀನಗುಣಗಳೆಣಿಸಲಿ ಬ್ಯಾಡ ದಯಮಾಡೊ ಶ್ರೀನಿವಾಸ 1ನಾನಾ ದುಷ್ಕøತಫಲವ ಉಂಡೆ ಇನ್ನಾರೆ ಶ್ರೀನಿವಾಸಎಂದೂ ದುರ್ವಿಷಯಕೆಮನ ಎರಗದಂತೆ ಮಾಡೊ ಶ್ರೀನಿವಾಸ 2ಸತ್ಕಥಾ ಶ್ರವಣ ಭಾಗ್ಯವ ಕೊಡುಅನುದಿನಶ್ರೀನಿವಾಸ ಎನ್ನಹೃತ್ಕಮಲದಿ ವ್ಯಕ್ತನಾಗಯ್ಯ ಶ್ರೀನಿವಾಸ 3ಪುತ್ರಕಳತ್ರಮಿತ್ರರು ನಿನ್ನ ದಾಸರೊ ಶ್ರೀನಿವಾಸ ತ್ವದ್ಭøತ್ಯಭೃತ್ಯರ ಪರಿಚಾರಕ ನಾನು ಶ್ರೀನಿವಾಸ 4ಅನಂತ ಜನ್ಮದ ಸತ್ಕರ್ಮ ನಿನಗೇವೆ ಶ್ರೀನಿವಾಸನಿತ್ಯದೀನೋದ್ಧಾರÀ ಪ್ರಸನ್ನವೆಂಕಟ ಮುಕುಂದ ಶ್ರೀನಿವಾಸ 5
--------------
ಪ್ರಸನ್ನವೆಂಕಟದಾಸರು
ನೀನೆ ದಯಾಸಂಪನ್ನನೊ - ಕಾವೇರಿ ರಂಗನೀನೆ ಬ್ರಹ್ಮಾದಿವಂದ್ಯನೊ ಪಬಂಧುಗಳೆಲ್ಲರ ಮುಂದಾ ದ್ರುಪದನನಂದನೆಯೆಳತಂದು ಸೀರೆಯ ಸೆಳೆಯಲು ||ನೊಂದು ಕೃಷ್ಣ ಸಲಹೆಂದರೆಅಕ್ಷಯಕುಂದದಲಿತ್ತ ಮುಕುಂದನು ನೀನೇ 1ನಿಂದಿತ ಕರ್ಮಗಳೊಂದು ಬಿಡದೆ ಬೇ-ಕೆಂದು ಮಾಡಿದನಂದಜಮಿಳನು ||ಕಂದಗೆ ನಾರಗನೆಂದರೆ ಮುಕುತಿಯಕುಂದದಲಿತ್ತ ಮುಕುಂದನು ನೀನೇ 2ಮತ್ತಗಜವನೆಗಳೊತ್ತಿ ಪಿಡಿಯೆ ಬಲುಒತ್ತಿ ರಭಸದಿ ಬಿತ್ತರಿಸಲುಗುಣ||ಭೃತ್ಯವರದ ಶ್ರೀ ಪುರಂದರವಿಠಲಹಸ್ತಿಗೊಲಿದ ಪರವಸ್ತುವು ನೀನೇ 3
--------------
ಪುರಂದರದಾಸರು
ನೀನೆ ಪರಬ್ರಹ್ಮಾ ಸತ್ಯವು ನೀನೆ ಪರಬ್ರಹ್ಮಾ | ನೀನೆಪರಶಿವ ನೀನೆ ಪರತರ ನೀನೆಪರಮಪರನಿನ್ನಿಂದ ನೀನೈಪಅನೇಕ ಕೊಡಗಳೊಳುರವಿತಾ | ಅನೇಕನೆನಿಸಿರಲು |ಅನೇಕ ವಾಘಟಉಪಾಧಿಯಳಿಯಲು |ಅನೇಕವೆಲ್ಲವು ಒಬ್ಬನೇ ನೀನೈ1xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಸರ್ವಾಲಂಕಾರಾ ಕರಗಲು ಸರ್ವವು ಬಂಗಾರಾ |ಸರ್ವ ಜಗವೆಲ್ಲವು ನಿನ್ನೊಳಗಿರುವದು |ಸರ್ವ ರಹಿತ ನಿಜ ಶರ್ವನೆ ನೀನೈ2ಮಾಯಾಅವಿದ್ಯೆಯೊಳು ಶಿವ ಜೀವ ಕಾಯವು ಬಂದಿರಲು |ಮಾಯಾಅವಿದ್ಯೆಯ ಪರದೆಯು ಅಳಿಯಲು |ಕೇವಲ ಅತಿ ನಿಜ ಶಂಕರ ನೀನೈ3
--------------
ಜಕ್ಕಪ್ಪಯ್ಯನವರು
ನೀನೆ ಪಾಲಿಸು ಕರುಣಾವಾರಿಧಿದೀನಜನರಾಧಾರ ಹರಿಯೆ ಪನಿನ್ನಾಧೀನವು ತೋರ್ಪುದೆಲ್ಲಮಾನವನ ಸ್ವಾಧೀನವೇನಿದೆನಿನ್ನ ನೆರಳಲಿ ಮೂರು ಜಗವುಭಿನ್ನವಿಲ್ಲದೆ ಬದುಕಿ ಬಾಳ್ವುದು 1ನಿನ್ನ ಸಹಾಯವಿಲ್ಲದೀಭವವನ್ನು ಗೆಲಿಯುವ ಸಾಧ್ಯದಾರಿಗೆನಿನ್ನ ಕೃಪಾಕಟಾಕ್ಷದಿಂದಲೆಮುನ್ನ ಹಿರಿಯರು ಧನ್ಯರಾದರು 2ಮತ್ರ್ಯಲೋಕಕ್ಕೆಳೆದು ತಂದೆನ್ನಮರ್ತುಬಿಡುವುದುಚಿತವೇನಯ್ಯನಿರ್ತಸುಖವಿತ್ತು ರಕ್ಷಿಸಭವಕರ್ತುಶ್ರೀಗುರು ರಾಮ ಪ್ರಭುವೆ3
--------------
ರಾಮದಾಸರು
ನೀನೆ ಭಕುತಾಭಿಮಾನಿ ಕರುಣಿ ಪಮರೆಬಿದ್ದ ಭಕುತರ ಪೊರೆಯಲು ತವಸಮಕರುಣಿ ದೇವರ ಕಾಣೆಧರೆಎರಡೇಳರೊಳ್1ಶಿಲೆಯನು ಪೆಣ್ಣೆನಿಸಿ ಕುಲದೊಳು ಕಲೆಸಿದಿಸಲಹಿದಿ ಗಜನ ಮಹ ವಿಲಸಿತಮಹಿಮ ಪ್ರಭು 2ಮೊರೆಯಿಟ್ಟು ಸ್ಮರಿಸುವ ಚರಣದಾಸನ ಆಸೆಕರುಣದಿಂ ಪೂರೈಸು ಪರತರ ಶ್ರೀರಾಮ 3
--------------
ರಾಮದಾಸರು
ನೀನೆ ರಕ್ಷಿಸೋ ಎನ್ನ ಓ ಶ್ರೀನಿವಾಸದಾನವಾಂತಕ ದೀನಪಾಲ ಲಕ್ಷ್ಮೀಶಾ ಪಮೌನಿ ಹೃದಯಾ ಸುಮವಾಸಾ ಸರ್ವೇಶಾಮೌನದಿಂದಿರಲೇನೋ ಕಾಣೆ ವಿಶೇಷಾಮೌನ ಮಂತ್ರವು ಸ್ನಾನಾ ಧ್ಯಾನಾವನರಿಯೆದೈನ್ಯ ಭಕ್ತಿಯೊಳ್ ಬೇಡಿಕೊಂಬೆ ಶ್ರೀಹರಿಯೆ 1ಲೋಕನಾಥನೆಜವಶೋಕವಿಹಾರಾಏಕರೂಪನೆ ಸರ್ವ ಲೋಕ ಸಂಚಾರಾನಾಕಸುಖವ ನಾನು ಬಯಸುವನಲ್ಲಬೇಕಾದ ಸೌಭಾಗ್ಯವೆನಗಿತ್ತೆ ಎಲ್ಲಾ 2ಮಂದರೋದ್ಧರ ಅರವಿಂದ ಲೋಚನನೇಇಂದಿರೆಯರಸ ಮುಕುಂದ ಮಾಧವನೇವಂದಿಸೂವೆನು ದಂದಶೂಕ ಶಯನನೇಸುಂದರಮೂರ್ತಿ ಗೋವಿಂದದಾಸನನೇ 3
--------------
ಗೋವಿಂದದಾಸ
ನೀನೆ ಸ್ವತಂತ್ರ ಸರ್ವೇಶಧ್ಯಾನಮಾಳ್ಪದಾಸರ ಪ್ರಾಣ ಪಭುವನತ್ರಯದಿ ಬಿಡದೆ ಒಂದೇಸಮದೆ ದೃಢದಿ ವೇದಸ್ಮøತಿಭಯನಿವಾರಣನೆಂಬ ಬಿರುದುಜಯಭೇರಿ ನುಡಿಸುತಿಹ್ಯವು 1ರಂಗ ನಿನ್ನ ದಾಸಜನಕೆಭಂಗವೇನು ಭುವನತ್ರಯದಿಮಂಗಲಮಹಿಮ ಭಕುತಾಂತರಂಗ ಭಜಿಪೆಭಂಗಗೆಲಿಸು2ಮಾಯ ನಾಟಕವಾಡುವ ಮಹಮಾಯಾಮಹಿಮ ಶ್ರೀರಾಮ ತಂದೆಮಾಯಮೋಹಿಗಳಿಂದುಳಿಸಿ ಎನ್ನಕಾಯೊ ಕೈಯ ಪಿಡಿದು ಸತತ 3
--------------
ರಾಮದಾಸರು